Author name: Tejas

ಮಾಣಿ-ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ !

ಸುಳ್ಯ: ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ, ಮಾಹಿತಿ ಹಕ್ಕು ಅಧಿನಿಯಮ 2005 ರ ಕಾಯ್ದೆಯಡಿಯಲ್ಲಿ ಮಾಣಿ ಸಂಪಾಜೆ ರಸ್ತೆ ಅಲೈನ್ ಮೆಂಟ್ ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ ಎಂದು ತಿಳಿಸಲಾಗಿದೆ. ಕೆ.ಆರ್.ಎಸ್. ಸುಳ್ಯ ಘಟಕದ ಅಧ್ಯಕ್ಷ ಡಿ. ಎಂ. ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು ಯಥಾಸ್ಥಿತಿಗೆ ತಂದು ಸಾರ್ವಜನಿಕರಿಗೆ ಹಾಗೂ ವಾಹನಸಂಚಾರಕ್ಕೆ […]

ಮಾಣಿ-ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ ! Read More »

ತೊಡಿಕಾನ ದೇವಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೂವಿನ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ವಿಶ್ವ ಪರಿಸರ ದಿನದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಬೆಂಗಳೂರು ಇವರ ವತಿಯಿಂದ ಸುಳ್ಯ ಸೀಮೆ ತೊಡಿಕಾನ ಶ್ರೀ ದೇವಳದಲ್ಲಿ ಹೂವಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು.ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹೂವಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂ,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಕೆ ಬಾಲಕೃಷ್ಣ ಕುಂಟುಕಾಡು,ತಿಮ್ಮಯ್ಯ ಮೆತ್ತಡ್ಕ,ಮಾಲತಿ ಬೋಜಪ್ಪ,ರಾಜರಾಜೇಶ್ವರಿ ದೇವಳದ ಟ್ರಸ್ಟಿ ಚಂಗಪ್ಪ,ದೇವಳದ. ಸಿಬ್ಬಂದಿಗಳು ಈ ಸಂದರ್ಭದಲ್ಲಿ

ತೊಡಿಕಾನ ದೇವಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೂವಿನ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ Read More »

ಮಾಣಿ : ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಸಮೀಪದಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಪ್ರತಿಭಾವಂತೆಯಾಗಿರುವ ಬಾಲಕಿ ನೈರುತಿ ಎಂ ಸುವರ್ಣ(10) ಮೃತಪಟ್ಟ ಘಟನೆ ವರದಿಯಾಗಿದೆ.ಬಾಳ್ತಿಲ ಗ್ರಾಮದ ನಿವಾಸಿ ಹೇಮಂತ್ ಎಂಬವರ ಪುತ್ರಿಯಾಗಿರುವ ನೈರುತಿ ಪ್ರತಿಭಾವಂತೆಯಾಗಿದ್ದಳು,ತಂದೆ ಮತ್ತು ತಾಯಿಯೊಂದಿಗೆ ಬುಧವಾರ ಸಂಜೆ ವೇಳೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಬರುವಾಗ ಸೂರಿಕುಮೇರು ಸಮೀಪಿಸುತ್ತಿರುವಾಗಲೇ ಇನ್ನೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಕಾಂಕ್ರೀಟ್ ರಸ್ತೆಗೆಸೆಯಲ್ಪಟ್ಟ ನೈರುತಿಯ ತಲೆ ಭಾಗಕ್ಕೆ ಗಂಭೀರ ಪೆಟ್ಟು ತಗುಲಿರುವುದರಿಂದ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಸಾವನ್ನಪ್ಪಿದಳು.

ಮಾಣಿ : ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು Read More »

ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು!

ಕೊಡಗು ಜಿಲ್ಲೆಯ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಕಾಡಾನೆ ದಾಳಿಯಿಂದ ಸಾವನ್ಜಪ್ಪಿದ ಘಟನೆ ವರದಿಯಾಗಿದೆ.ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದೆ.ಆನೆ ದಾಳಿಯಿಂದ ಓಡಿ ಹೋಗಿ ಇಬ್ಬರು ಕಾಫಿ ತೋಟದ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ.ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು! Read More »

ಡಿ.ಕೆ.ಶಿ ಸರ್ಕಾರದ ಮೊದಲ ವಿಕೆಟ್ ಪತನ!

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ತಮಗೆ ನಿರೀಕ್ಷಿತ “ಬೆಂಗಳೂರು ನಗರಾಭಿವೃದ್ಧಿ” ಖಾತೆ ಸಿಗದ ಕಾರಣ ಅಚ್ಚರಿಯ ರಾಜೀನಾಮೆ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಖಾತೆ ಸಿಗದ ಕಾರಣ ಸಚಿವ ಸ್ಥಾನದಲ್ಲಿ ಮುಂದುವರಿಯಲು ಇಷ್ಟವಿಲ್ಲದೆ ಈ ನಿರ್ಧಾರ ಕೈಗೊಂಡಿದ್ದೇನೆ,” ಎಂದು ತಮ್ಮ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿ ಸರ್ಕಾರದ ಮೊದಲ ವಿಕೆಟ್ ಪತನ! Read More »

ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ!

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಆಸ್ತಿ ವಿವಾದ ಸಂಬಂಧಿತ ಆರು ಜನರ ಭೀಕರ ಕೊಲೆ ಪ್ರಕರಣದಲ್ಲಿ, ಪೊಲೀಸರು ಪ್ರಮುಖ ಸೂತ್ರಧಾರಿ ಹಾಗೂ ಮುಖ್ಯ ಆರೋಪಿ ಸೇರಿದಂತೆ ಮತ್ತಿಬ್ಬರನ್ನು ಗುರುವಾರ ಬಂಧಿಸಿದ್ದಾರೆ. ಈ ಬಂಧನಗಳೊಂದಿಗೆ ಒಟ್ಟು ಹದಿನೇಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಮೇ 29ರಂದು ನಡೆದಿದ್ದ ಈ ಪ್ರಕರಣದ ತನಿಖೆ

ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ! Read More »

ಅರಂತೋಡು ತೊಡಿಕಾನ ರಸ್ತೆ ಪರ್ನೋಜಿ‌ ಸಮೀಪ ಕುಸಿತ!

ಅರಂತೋಡು ತೊಡಿಕಾನ ದ ಪರ್ನೋಜಿ ಸಮೀಪ ಮುಖ್ಯ ರಸ್ತೆಯ ತಲಭಾಗದಲ್ಲಿ ಭೂಕುಸಿತವಾಗಿದ್ದು ಅಪಾಯ ಎದುರಾಗಿದೆ.ವಾಹನ ಸವಾರರು ಗಮನ ಹರಿಸಬೇಕಾಗಿದೆ.

ಅರಂತೋಡು ತೊಡಿಕಾನ ರಸ್ತೆ ಪರ್ನೋಜಿ‌ ಸಮೀಪ ಕುಸಿತ! Read More »

ಕೃಷಿ ಉಳಿಸಿ, ಅಭಿಯಾನಕ್ಕೆ ಚಾಲನೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ವತಿಯಿಂದ ಆರಂಭಿಸಲಾದ ಖೇತ್ ಬಚಾವೋ (ಕೃಷಿ ಉಳಿಸಿ) ಅಭಿಯಾನವನ್ನು ಬೆಂಗಳೂರಿನ ಐಸಿಎಆರ್-ಆಟಾರಿ ನಿರ್ದೇಶನದಂತೆ ಮಂಗಳೂರಿನ ಐಸಿಎಆ‌ರ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೃಷಿ ಇಲಾಖೆಯ ಸಹಯೋಗದೊದಿಗೆ ಜೂ-1 ರಿಂದ ಜೂನ್ 30ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರಾದ ಡಾ. ಟಿ.ಜೆ.ರಮೇಶ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಖೇತ್ ರೈತರಲ್ಲಿ ಮಣ್ಣಿನ ಆರೋಗ್ಯದ ಮಹತ್ವದ ಕುರಿತು ಅರಿವು

ಕೃಷಿ ಉಳಿಸಿ, ಅಭಿಯಾನಕ್ಕೆ ಚಾಲನೆ Read More »

ಪಂಜ ಸೀಮೆಯ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ವಿಶೇಷ ಪೂಜೆ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾ‌ರ್ ಈ ದಿನ ಅಧಿಕಾರ ಸ್ವೀಕರಿಸುವ ಸಲುವಾಗಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್‌, ಕಾಯಂಬಾಡಿ ಸಂತೋಷ್‌ ಕುಮಾ‌ರ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಎಣ್ಣೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ,ಶ್ರೀಮತಿ ಮಾಲಿನಿ ಕುದ್ವ, ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಸೀಮೆಯ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ವಿಶೇಷ ಪೂಜೆ Read More »

ಮರ್ಕಂಜ : ಪನ್ನೆ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಮೊತ್ತ 45,000 ಸಹಾಯಧನ‌ ಹಸ್ತಾಂತರ

ಸಂಪಾಜೆ ವಲಯದ ಮರ್ಕಂಜ ಗ್ರಾಮದ ಪನ್ನೆ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಮೊತ್ತ 45,000 ಸಹಾಯಧನವನ್ನು ಸುಳ್ಯ ತಾಲೂಕಿನ ಮಾನ್ಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶಾಂತಪ್ಪ ರೈ ಮತ್ತು ಸಮಿತಿಯ ಸದಸ್ಯರುಗಳಾದ ರಾಘವ ಗೌಡ ಕಂಜಿಪಿಲಿ ಗೋವಿಂದ ಅಳವುಪಾರೆ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಕುಂಞಮು ಕಾರ್ಯದರ್ಶಿಯಾದ ರವಿ ಮತ್ತು ಸರ್ವ ಸದಸ್ಯರು ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಆಚಾರ್ಯ

ಮರ್ಕಂಜ : ಪನ್ನೆ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಮೊತ್ತ 45,000 ಸಹಾಯಧನ‌ ಹಸ್ತಾಂತರ Read More »

error: Content is protected !!
Scroll to Top