Author name: Tejas

ಹುತಾತ್ಮ ಯೋಧ ದಿವಿನ್‌ರಿಗೆ ಅಂತಿಮ ನಮನ ಸಲ್ಲಿಸಿದ ಸದಾನಂದ ಮಾವಜಿ

ಮಡಿಕೇರಿ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ತೀವ್ರ ಗಾಯಗೊಂಡು ಹುತಾತ್ಮರಾದ ಸೈನಿಕ ಪಿ.ಪಿ. ದಿವಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚವಿರಿಸಿ ಅಂತಿಮ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ಸೂದನ ಈರಪ್ಪ, ಸಿಬ್ಬಂದಿ ಜ್ಯೋತಿ ಅವರುಗಳು ಜೊತೆಯಲ್ಲಿದ್ದು ಹುತಾತ್ಮ ದಿವಿನ್ ಅವರಿಗೆ ಅಂತಿಮ ಗೌರವ ಸಲ್ಲಿಸಿದರು. ದಿವಿನ್ ಅವರ ಹುಟ್ಟೂರಾದ ಆಲೂರು ಸಿದ್ದಾಪುರ ಸರ್ಕಾರಿ […]

ಹುತಾತ್ಮ ಯೋಧ ದಿವಿನ್‌ರಿಗೆ ಅಂತಿಮ ನಮನ ಸಲ್ಲಿಸಿದ ಸದಾನಂದ ಮಾವಜಿ Read More »

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕುಂಬಳಚೇರಿ ಶಾಲೆಗೆ ಸ್ಮಾರ್ಟ್ ಟಿ.ವಿ ಹಸ್ತಾಂತರ

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇದರ ಅಡಿಯಲ್ಲಿ ಕರ್ನಾಟಕ ಸಂಭ್ರಮ -50 2024-25 ನೇ ಸಾಲಿನ ಸ್ಮಾರ್ಟ್ ಟಿ.ವಿ.ಯನ್ನು ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯ, ಹಿರಿಯ ರಾಜಕಾರಣಿ, ಊರಿನ ಹಿರಿಯರಾದ ಪ್ರೊ.ರಾಧಾಕೃಷ್ಣ ಕೆ.ಇ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಂಬಳಚೇರಿ ಹಿ.ಪ್ರಾ ಶಾಲೆಗೆ ನೀಡಲಾಯಿತು.ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಇದ್ದರು.

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕುಂಬಳಚೇರಿ ಶಾಲೆಗೆ ಸ್ಮಾರ್ಟ್ ಟಿ.ವಿ ಹಸ್ತಾಂತರ Read More »

ಭಾರತೀಯ ಯೋಧ ಕ್ಯಾಪ್ಟನ್ ವಸಂತ ಪೇರಡ್ಕ ಸೇವೆಯಿಂದ ನಿವೃತ್ತಿ

ಕ್ಯಾಪ್ಟನ್ ವಸಂತ ಪೇರಡ್ಕರವರು ಭಾರತೀಯ ಸೇನೆಯಲ್ಲಿ ಸುದೀರ್ಘ 29 ವರ್ಷಗಳ ಕಾಲ ಸೇವೆ ಸಲ್ಲಿಸಿ ಡಿ.31 ಸೇವೆಯಿಂದ ನಿವೃತ್ತಿಯಾದರು.1996 ಏಪ್ರಿಲ್ 25 ರಂದು ಸೇನೆಗೆ ಸೇರ್ಪಡೆಗೊಂಡ ಇವರು ರಾಜಸ್ತಾನ, ಅಸ್ಸಾಂ, ಜಮ್ಮು ಕಾಶ್ಮೀರ, ಲಡಾಕ್, ಅರುಣಾಚಲ ಪ್ರದೇಶ, ಕೊಯಮತ್ತೂರು, ಆಂಧ್ರ ಪ್ರದೇಶ ದಲ್ಲಿ ಸೇವೆ ಸಲ್ಲಿಸಿದ್ದರು.ಇವರು ಪೇರಡ್ಕದ ಮಡಪ್ಪಾಡಿ ರಾಮಚಂದ್ರ ಮತ್ತು ದೇವಕಿ ದಂಪತಿಯ ಪುತ್ರ. ವಸಂತ ರವರ ಪತ್ನಿ ಮಮತಾ, ಪುತ್ರಿಯರಾದ ತ್ರಿಶಾ ಪಿ.ವಿ., ದಿಶಾ ಪಿ.ವಿ. ರೊಂದಿಗೆ ನೆಲೆಸಿದ್ದಾರೆ.

ಭಾರತೀಯ ಯೋಧ ಕ್ಯಾಪ್ಟನ್ ವಸಂತ ಪೇರಡ್ಕ ಸೇವೆಯಿಂದ ನಿವೃತ್ತಿ Read More »

ಕಡಬ ಠಾಣೆಯಲ್ಲಿ ಹಿಂದು ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ರೌಡಿಶೀಟರ್ ರದ್ದುಗೋಳಿಸಿದ ಹೈಕೋರ್ಟ್

ಕಡಬ ತಾಲೂಕಿನ ಮರ್ಧಾಳ ಹಿಂದೂ ಕಾರ್ಯಕರ್ತರಾದ ವಿನುತ್ ಕೆ ಮತ್ತು ಶ್ರೀಕರ ಕಂಪ ಇವರ ಮೇಲೆ ದಾಖಲಾಗಿದ್ದ ರೌಡಿಶೀಟರ್ ನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ರದ್ದುಗೋಳಿಸಿ ಆದೇಶ ಮಾಡಿದೆ.ಅರ್ಜಿದಾರರ ಪರ ಹೈಕೋರ್ಟ್ ನ್ಯಾಯವಾದಿ ಬಿ ವಿನೋದ್ ಕುಮಾರ್ ವಾದ ಮಂಡಿಸಿದರು.

ಕಡಬ ಠಾಣೆಯಲ್ಲಿ ಹಿಂದು ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ರೌಡಿಶೀಟರ್ ರದ್ದುಗೋಳಿಸಿದ ಹೈಕೋರ್ಟ್ Read More »

ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿ, ಹೆಂಡತಿಯ ಕೊಲೆಗೆ ಯತ್ನಿಸಿದ ಆರೋಪಿಗೆ ಮರಣದಂಡನೆ ವಿಧಿಸಿದ ಮಂಗಳೂರು ನ್ಯಾಯಾಲಯ

ಮೂವರು ಮಕ್ಕಳನ್ನು ಬಾವಿಗೆ ನೂಕಿ ಹಾಕಿ ಕೊಲೆಗೈದು, ಪತ್ನಿಯನ್ನು ಕೊಲೆಗೆ ಯತ್ನಿಸಿದ್ದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ, ಕಿನ್ನಿಗೋಳಿ ಪದ್ಮನೂರು ನಿವಾಸಿ ಹಿತೇಶ್ ಶೆಟ್ಟಿಗಾರ್ ಎಂಬಾತನಿಗೆ ಮಂಗಳೂರು ನ್ಯಾಯಾಲಯವು ಮರಣ ದಂಡನೆ ವಿಧಿಸಿ ಆದೇಶ ಹೊರಡಿಸಿದೆ.ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಸಂಜೆ 5.15ಕ್ಕೆ ಹಿತೇಶ್ ಶೆಟ್ಟಿಗಾರ್ ತನ್ನ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ (11), ದಕ್ಷಿತ್ (5) ಎಂಬವರನ್ನು ಬಾವಿಗೆ ತಳ್ಳಿ ಹಾಕಿ ಕೊಲೆ ಮಾಡಿದ್ದಲ್ಲದೆ, ತನ್ನ ಪತ್ನಿ ಲಕ್ಷ್ಮಿ ಯನ್ನು

ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿ, ಹೆಂಡತಿಯ ಕೊಲೆಗೆ ಯತ್ನಿಸಿದ ಆರೋಪಿಗೆ ಮರಣದಂಡನೆ ವಿಧಿಸಿದ ಮಂಗಳೂರು ನ್ಯಾಯಾಲಯ Read More »

ಕೋಳಿಕಲ್ಲು ಮಲೆ ಮೀಸಲು ಅರಣ್ಯದಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡುತ್ತಿದ್ದ 30 ಜನರು ಅರಣ್ಯ ಇಲಾಖೆಯ ವಶ!

ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆಯಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡುತ್ತಿದ್ದ 40 ಜನರು ಅರಣ್ಯ ಇಲಾಖೆಯ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.ಮೀಸಲು ಅರಣ್ಯದೊಳಗೆ ಅಕ್ರಮ ಪ್ರವೇಶದ ಬಗ್ಗೆ ಬಂಧಿಸಿ ಕೇಸು ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಇದರಲ್ಲಿ ಕಡಬ, ಸುಳ್ಯ ಹಾಗೂ ಪೆರಾಜೆ ಭಾಗದವರು ಇದ್ದರೆಂದು ಹೇಳಲಾಗಿದೆ

ಕೋಳಿಕಲ್ಲು ಮಲೆ ಮೀಸಲು ಅರಣ್ಯದಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡುತ್ತಿದ್ದ 30 ಜನರು ಅರಣ್ಯ ಇಲಾಖೆಯ ವಶ! Read More »

ಯುವ ಸಂಸದ ತೇಜಸ್ವಿಸೂರ್ಯರಿಗೆ ಕೂಡಿ ಬಂತುಕಂಕಣ ಭಾಗ್ಯ , ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಆ ಸ್ಟಾರ್ ಸಿಂಗಾರ್ ಯಾರು ?

ಬೆಂಗಳೂರಿನ ದಕ್ಷಿಣ ಕ್ಷೇತ್ರದ ಸಂಸದ ಸ್ಪುರದ್ರೂಪಿ ಯುವಕ ತೇಜಸ್ವಿ ಸೂರ್ಯ ಅವರು ಜೀವನದ ಪ್ರಮುಖ ಕಾಲಘಟ್ವದ ಹೊಸ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದು ಮದುವೆಗೆ ದಿನ ನಿಗದಿಪಡಿಸಲಾಗಿದೆ. ಯುವ ಸಂಸದರು ಕೈ ಹಿಡಿಯುತ್ತಿರುವ ಆ ಹುಡುಗಿ ಯಾರೆಂದು ಎಲ್ಲರಲ್ಲೂ ಕುತೂಹಲ ಇರಬಹುದು.ತೇಜಸ್ವಿ 2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಗೆಲುವು ಪಡೆದಿದ್ದರು. 2024ರಲ್ಲೂ ಇದೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡನೇ ಬಾರಿ ಗೆಲುವು ಸಾಧಿಸಿ ಸಂಸದರಾಗಿದ್ದಾರೆ. ಅವರ ಹುಡುಗಿ

ಯುವ ಸಂಸದ ತೇಜಸ್ವಿಸೂರ್ಯರಿಗೆ ಕೂಡಿ ಬಂತುಕಂಕಣ ಭಾಗ್ಯ , ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಆ ಸ್ಟಾರ್ ಸಿಂಗಾರ್ ಯಾರು ? Read More »

ಐವರ್ನಾಡು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಎನ್ ಮನ್ಮಥ ಮೂರನೇ ಬಾರಿ ಆಯ್ಕೆ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್‌.ಎನ್.ಮನ್ಮಥ ಮೂರನೇ ಬಾರಿ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ‌ ಮಹೇಶ್‌ ಜಬಳೆ ಆಯ್ಕೆಯಾದರು.ಇಂದು ಸಂಘದ ಸಭಾಭವನದಲ್ಲಿ ಅವಿರೋಧ ಆಯ್ಕೆ ನಡೆಯಿತು.ಡಿ.22 ರಂದು ಚುನಾವಣೆ ನಡೆದು ಎಸ್.ಎನ್.ಮನ್ಮಥರವರ ತಂಡದ 11 ಮಂದಿ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದರು.ಬಿಜೆಪಿ ಬೆಂಬಲಿತ ಅಭ್ಯರ್ಥಿ ಒಬ್ಬರು ನಿರ್ದೇಶಕರಾಗಿ ಆಯ್ಕೆಯಾಗಿದ್ದರು.ಚುನಾವಣಾಧಿಕಾರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್‌ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ರವರು ಉಪಸ್ಥಿತರಿದ್ದು ಶುಭಹಾರೈಸಿದರು.ಸಂಘದ ನಿರ್ದೇಶಕರಾದ ಸತೀಶ್ ಎಡಮಲೆ,ಚಂದ್ರಶೇಖರ ಎಸ್,ರವಿನಾಥ ಮಡ್ತಿಲ,ಮಧುಕರ ನಿಡುಬೆ,ಅನಂತಕುಮಾ‌ರ್

ಐವರ್ನಾಡು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಎನ್ ಮನ್ಮಥ ಮೂರನೇ ಬಾರಿ ಆಯ್ಕೆ Read More »

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಗೆ ಪೊಲೀಸರಿಂದ ಗುಂಡು ಹಾರಾಟ

ಹಳೇಹುಬ್ಬಳ್ಳಿ ಘೋಡ್ಕೆ ಪ್ಲಾಟ್‌ನಲ್ಲಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸೆರೆ ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಓರ್ವನ ಕಾಲಿಗೆ ಪೊಲೀಸರು ಗುಂಡು ಹೊಡೆದು ಆತನನ್ನು ವಶಕ್ಕೆ ಪಡೆದಿದ್ದಾರೆಈತನು ಕ್ಷುಲಕ ವಿಷಯವಾಗಿ ಸೋಮವಾರ ರಾತ್ರಿ ಹಳೇಹುಬ್ಬಳ್ಳಿ ಆನಂದನಗರ ರಸ್ತೆ ಘೋಡ್ಕೆ ಪ್ಲಾಟ್‌ನ ತಬ್ಲಿಕ್ ಮಸೀದಿ ಬಳಿ ಅದೇ ಪ್ರದೇಶದ ಸಮೀರ ಶೇಖ್ (18) ಹಾಗೂ ಈತನ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬುವರಿಗೆ ಚಾಕುವಿನಿಂದ ತಲೆಮರೆಸಿಕೊಂಡಿದ್ದ.ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಗೆ ಪೊಲೀಸರಿಂದ ಗುಂಡು ಹಾರಾಟ Read More »

ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಗೆ ಯತ್ನ

ಶಿಕ್ಷಕರ ಕಿರುಕುಳದಿಂದ ಪುತ್ತೂರಿನ ಹೈಸ್ಕೂಲ್ ಒಂದರ ವಿದ್ಯಾರ್ಥಿಯೊಬ್ಬಳು ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಬೀರವಾಗಿ ಅಸ್ವಸ್ಥಗೊಂಡ ಬಗ್ಗೆ ವರದಿಯಾಗಿದೆ. ಶಾಲಾ ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದಾಗಿ ತಂದೆ ಆರೋಪಿಸಿದ್ದು. ಮಗಳು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ಸದ್ಯ ಪಡೀಲುನಲ್ಲಿದ್ದು ಪುತ್ತೂರು ನಗರದಲ್ಲಿರುವ ಸರಕಾರಿ ಪ್ರೌಢ ಶಾಲೆಯೊಂದರಲ್ಲಿ ಓದುತ್ತಿರುವ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದವಳು.

ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಗೆ ಯತ್ನ Read More »

error: Content is protected !!
Scroll to Top