Author name: Tejas

ಸುಳ್ಯ : ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷರಾದ ಸರಸ್ವತಿಯವರಿಗೆ ವರ್ಗಾವಣೆ

ಸುಳ್ಯ ಪೊಲೀಸ್‌ ಠಾಣೆಯ ತನಿಖಾ ವಿಭಾಗದ ಉಪ ನಿರೀಕ್ಷಕರಾದ ಸರಸ್ವತಿ ಬಿ.ಟಿ. ಅವರಿಗೆ ವರ್ಗಾವಣೆಯಾಗಿದೆ. ಬೆಂಗಳೂರಿನ ಅರಣ್ಯ ಸಂಚಾರಿ ಘಟಕಕ್ಕೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಪ್ರೊಬೇಷನರಿ ಅವಧಿ ಸೇರಿದಂತೆ ಸುಮಾರು ನಾಲ್ಕು ವರ್ಷಗಳ ಕಾಲ ಅವರು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಅವರು ಸೇವೆ ಸಲ್ಲಿಸಿದ್ದರು.

ಸುಳ್ಯ : ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷರಾದ ಸರಸ್ವತಿಯವರಿಗೆ ವರ್ಗಾವಣೆ Read More »

ಸುಳ್ಯ : ಕುಸಿದು ಬಿದ್ದು ಉಪನ್ಯಾಸಕ ಸಾವು

ಸುಳ್ಯ:ಸುಳ್ಯ ತಾಲೂಕಿನ ಕೊಡಿಯಾಲಬೈಲ್ ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕರೊಬ್ಬರು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಾ.12ರಂದು ನಡೆದಿದೆ. ಮೃತರನ್ನು ಮಂಜು(42) ಎಂದು ತಿಳಿದು ಬಂದಿದೆ. ಕನ್ನಡ ಅವರು ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕಾಲೇಜಿನಲ್ಲಿ ನನಗೆ ಆರೋಗ್ಯ ಸರಿ ಇಲ್ಲ ಎಂದು ಹೇಳಿಕೊಂಡು ವಿಶ್ರಾಂತಿಗಾಗಿ ಮನೆಗೆ ತೆರಳಿದ್ದರು. ಅಲ್ಲಿಂದ ಬಳಿಕ ಅವರು ಔಷಧಿಗಾಗಿ ಸುಳ್ಯದ ಶ್ರೀ ರಾಮಪೇಟೆಯಲ್ಲಿರುವ ಮೆಡಿಕಲ್ ಶಾಪ್ ಒಂದಕ್ಕೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಶ್ರೀರಾಂ ಪೇಟೆಯ ಬಳಿ ಕುಸಿದು ಬಿದ್ದಿದ್ದಾರೆ.

ಸುಳ್ಯ : ಕುಸಿದು ಬಿದ್ದು ಉಪನ್ಯಾಸಕ ಸಾವು Read More »

ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವ ಮುನ್ನ ಎಚ್ಚರ ಅಗತ್ಯ!

ಭಾರತೀಯ ಸಂಪ್ರದಾಯದಂತೆ ಮಕ್ಕಳ ಅಂದ ಹೆಚ್ಚಿಸಲು ಮತ್ತು ದೃಷ್ಟಿ ತಗಲಬಾರದೆಂದು ಕಣ್ಣಿಗೆ ಕಾಡಿಗೆ ಹಚ್ಚುವುದು ಸಾಮಾನ್ಯ. ಆದರೆ, ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಕಾಡಿಗೆಗಳಲ್ಲಿ ಸೀಸ, ಕಾರ್ಬನ್ ಮತ್ತು ವಿಷಕಾರಿ ರಾಸಾಯನಿಕಗಳಿದ್ದು, ಇದು ಮಕ್ಕಳ ಆರೋಗ್ಯಕ್ಕೆ ಮಾರಕವಾಗಬಹುದು ಎಂದು ವೈದ್ಯಕೀಯ ವಿಜ್ಞಾನ ತಿಳಿಸಿದೆ. ಈ ಕಾಡಿಗೆಯ ಕಣಗಳು ಕಣ್ಣೀರಿನ ನಾಳಗಳನ್ನು ಮುಚ್ಚಿ, ಕಣ್ಣು ಸೋಂಕು, ಊತ, ರೆಪ್ಪೆಗಳ ಮೇಲೆ ಗುಳ್ಳೆಗಳು ಮತ್ತು ದೀರ್ಘಕಾಲದಲ್ಲಿ ದೃಷ್ಟಿ ದೋಷಕ್ಕೆ ಕಾರಣವಾಗಬಹುದು. ಆದ್ದರಿಂದ, ಕಾಡಿಗೆ ಬಳಸುವ ಮುನ್ನ ಎಚ್‌ಚರಿಕೆ ವಹಿಸುವುದು ಅತ್ಯಗತ್ಯ.

ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವ ಮುನ್ನ ಎಚ್ಚರ ಅಗತ್ಯ! Read More »

ಮಾ.13 ಅರಂತೋಡಿನಲ್ಲಿ ತೆಕ್ಕಿಲ್ ಸೌಹಾರ್ಧ ಇಪ್ತಾರ್ ಕೂಟ

ಅರಂತೋಡು: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ 21 ನೇ ವರ್ಷದ ಬೃಹತ್ ಸೌಹಾರ್ದ ಇಫ್ತಾರ್ ಕೂಟವು ಟಿ.ಎಂ ಶಹೀದ್ ತೆಕ್ಕಿಲ್ ರವರ ಅಧ್ಯಕ್ಷತೆಯಲ್ಲಿ ಮಾರ್ಚ್ 13 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಗಮದಲ್ಲಿ ಗೂನಡ್ಕ-ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿ ಖತೀಬರಾದ ನಯೀಮ್ ಫೈಝಿ ಅಲ್ ಮಹಬರಿ, ಶ್ರೀ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ ಚೈತನ್ಯ ಸೇವಾಶ್ರಮ ಅಜ್ಜಾವರ, ಗುತ್ತಿಗಾರು ಚರ್ಚ್ ನ ಧರ್ಮ ಗುರುಗಳಾದ ರೆ| ಪ| ಆದರ್ಶ್ ಜೋಸೆಫ್ ಇವರು

ಮಾ.13 ಅರಂತೋಡಿನಲ್ಲಿ ತೆಕ್ಕಿಲ್ ಸೌಹಾರ್ಧ ಇಪ್ತಾರ್ ಕೂಟ Read More »

ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ !

ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಹೆಚ್ಚಳವಾಗಲಿದೆ IMD ಎಚ್ಚರಿಕೆ ನೀಡಿದೆ.ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿಮಾಡಿದ್ದು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈ ಸರಳ ಕ್ರಮ ಪಾಲಿಸಿ:ಬಿಸಿಲಿನ ವೇಳೆ ಮನೆಯಲ್ಲೇ ಇರಬೇಕು.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲು ಹೆಚ್ಚು ಇರುವುದರಿಂದ ಈ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ.ಧಾರಾಳವಾಗಿ ನೀರು ಕುಡಿಯಿರಿ. ಬಾಯಾರಿಕೆ ಇಲ್ಲದಿದ್ದರೂ ಆಗಾಗ್ಗೆ ನೀರು ಕುಡಿಯಿರಿ. ಹೊರಗೆ ಹೋಗುವಾಗ ನೀರಿನ ಬಾಟಲಿ ಜೊತೆಗಿರಲಿ.ಸಾಧ್ಯವಾದಷ್ಟು ಕಾಟನ್ ಬಟ್ಟೆ ಧರಿಸಿ: ಹಗುರವಾದ, ಸಡಿಲವಾದ

ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ ! Read More »

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ

ಹೆಣ್ಣು ಮಗಳು ಶಿಕ್ಷಣ ಪಡೆದರೆ ಕುಟುಂಬ ಮಾತ್ರವಲ್ಲ, ಸಮಾಜವೂ ಪ್ರಗತಿ ಸಾಧಿಸುತ್ತದೆ. ಶಿಕ್ಷಣವು ಹೆಣ್ಣುಮಕ್ಕಳಿಗೆ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಉತ್ತಮ ಭವಿಷ್ಯವನ್ನು ನೀಡುತ್ತದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರೂ ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥರು ಆದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು. ಅವರು ಮಹಿಳಾ ದಿನಾಚರಣೆಯಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯನಗರ ಕಾರ್ಯಕ್ಷೇತ್ರದ ಬಾಂಧವ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂಪನ್ಮೂಲ

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ Read More »

ಕುಡಿದ ಮತ್ತಿನಲ್ಲಿ ಅಣ್ಣ ತಂಗಿಯ ಕಡಿದು ಭೀಕರ ಕೊಲೆ!

ಕುಡಿದ ಮತ್ತಿನಲ್ಲಿ ಅಣ್ಣ ತಂಗಿಯ ಕಡಿದು ಕೊಲೆ ಮಾಡಿರುವ ಘಟನೆ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ಮಾ.11ರಂದು ನಡೆದಿದೆ. ಅಡಿಯರ ಯಶೋಧ (45), ಕುಂಜಿರಾಮ (47) ಮೃತರು ಚಂದು (65) ಎಂಬಾತನಿಂದ ಕೊಲೆಯಾಗಿದ್ದಾರೆ. ಕುಡಿದ ಮತ್ತಿನಲ್ಲಿ ಅಣ್ಣ ತಂಗಿಯನ್ನು ಚಂದು ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಕೊಡಗು ಎಸ್ಪಿ ಬಿಂದುಮಣಿ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕುಡಿದ ಮತ್ತಿನಲ್ಲಿ ಅಣ್ಣ ತಂಗಿಯ ಕಡಿದು ಭೀಕರ ಕೊಲೆ! Read More »

ಆನೆ-ಮಾನವ ಸಂಘರ್ಷ ತಡೆಗಟ್ಟಲು ಸರಕಾರದಿಂದ ಕ್ರಮ: ಸಚಿವ ಈಶ್ವರ ಖಂಡ್ರೆ

ಆನೆ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವನ್ಯ ಜೀವಿ ಮಾನ ಸಂಘರ್ಷ ತಡೆಗಟ್ಟಲು ಸರಕಾರ ಕ್ರಮಕ್ಕೆ ಮುಂದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಅವರು ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದರು.2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು.ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು

ಆನೆ-ಮಾನವ ಸಂಘರ್ಷ ತಡೆಗಟ್ಟಲು ಸರಕಾರದಿಂದ ಕ್ರಮ: ಸಚಿವ ಈಶ್ವರ ಖಂಡ್ರೆ Read More »

ಜಂಪ್ ರೋಪ್ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟಮಟ್ಟಕ್ಕೆ-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ

ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಟ್ಟ ರಾಜ್ಯಮಟ್ಟದ ಗುಂಪು ಆಟ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ 24 ವಿದ್ಯಾರ್ಥಿಗಳು ಭಾಗವಹಿಸಿ, 4 ಮಂದಿ ವಿದ್ಯಾರ್ಥಿಗಳು ಪ್ರಥಮ, 8 ಮಂದಿ ವಿದ್ಯಾರ್ಥಿಗಳು ದ್ವಿತೀಯ, 4 ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಅಭಿನಂದನಾ ಸಮಾರಂಭ: ಸೋಮವಾರ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಆಶ್ರಯದಲ್ಲಿ ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ

ಜಂಪ್ ರೋಪ್ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟಮಟ್ಟಕ್ಕೆ-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ Read More »

ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ಚಿನ್ನರ ಕಲರವ ಸಮ್ಮರ್ ಕ್ಯಾಂಪ್,ಇಂದೇ ಹೆಸರು ನೊಂದಾಯಿಸಿಕೊಳ್ಳಿ

🎨 ಚಿಣ್ಣರ ಕಲರವ – Summer Camp 🎨ಮಕ್ಕಳ ಸೃಜನಶೀಲತೆ, ಆಟ, ಕಲೆ ಮತ್ತು ಕಲಿಕೆಯ ಸಂತಸದ ಕ್ಷಣಗಳಿಗೆ ನಮ್ಮ ಚಿಣ್ಣರ ಕಲರವ Summer Campಗೆ ನಿಮ್ಮ ಮಕ್ಕಳನ್ನು ಸೇರಿಸಿ.ಕಥೆ ಹೇಳಿಕೆ, ಕ್ರೀಡೆ, ಕಲೆ, ಹಾಡು-ನೃತ್ಯ, ಸೃಜನಾತ್ಮಕ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಅರಳಿಸುವ ವಿಶೇಷ ಶಿಬಿರ.🌟 School Admission Open – 2026–27 🌟ಮಕ್ಕಳ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಲು Anjali Montessori Schoolನಲ್ಲಿ ಪ್ರವೇಶಗಳು ಆರಂಭವಾಗಿವೆ.Montessori ವಿಧಾನದಲ್ಲಿ ಕಲಿಕೆ, ಅನುಭವಾತ್ಮಕ ಶಿಕ್ಷಣ ಮತ್ತು ಮಕ್ಕಳ

ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ಚಿನ್ನರ ಕಲರವ ಸಮ್ಮರ್ ಕ್ಯಾಂಪ್,ಇಂದೇ ಹೆಸರು ನೊಂದಾಯಿಸಿಕೊಳ್ಳಿ Read More »

error: Content is protected !!
Scroll to Top