Author name: Tejas

ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧಾರ

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ (KGMOA) ಕೇಂದ್ರ ಸಮಿತಿಯು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧರಿಸಿದೆ.ಇಂದು ಸರ್ಕಾರದ ಪರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್. ಸಿ.ಮಹದೇವಪ್ಪ ನೇತೃತ್ವ ಕೆ.ಜಿ.ಎಂ.ಒ.ಎ ಮುಖಂಡರ ಜೊತೆ ಸಭೆ ನಡೆಯಿತು.ಸುದೀರ್ಘ ಚರ್ಚೆಯ ನಂತರ,ಪ್ರಮುಖ 14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಮ್ಮತಿಸಿದೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ಹಿಂಪಡೆಯಲಾಗಿದೆ.ಒಪ್ಪಿಕೊಂಡಿರುವ 13 ಬೇಡಿಕೆಗಳನ್ನು ನಿಗದಿತ ಕಾಲಮಿತಿಯೊಳಗೆ ಜಾರಿಗೊಳಿಸುವುದಾಗಿ ಸರ್ಕಾರ ಭರವಸೆ ನೀಡಿದೆ.ತಾಂತ್ರಿಕ […]

ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧಾರ Read More »

ಮಾ.14 : ಅರಂತೋಡು ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ದೈವದ ಹರಕೆ ಕೋಲ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 14-03-2026 ರ ಮೀನಾ ಸಂಕ್ರಮಣದಂದು ಸ್ವಾಮಿ ಕೊರಗಜ್ಜ ದೈವದ ಹರಕೆಯ ನೇಮೋತ್ಸವ ಹಾಗೂ ದಿನಾಂಕ 15-03-2026 ರ ಬೆಳಿಗ್ಗೆ ಗಂಟೆ 6:00 ಕ್ಕೆ ಅಗೇಲು ಸೇವೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಮಾ.14 : ಅರಂತೋಡು ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ದೈವದ ಹರಕೆ ಕೋಲ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸ.ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ

ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ.ಕ. ಇದರ ವಾರ್ಷಿಕ ವಿಶೇಷ ಶಿಬಿರ ಕಲರವ 2026 ರಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ನಡೆದ ಎರಡು ದಿನಗಳ ಸಾಧನೆ ಸಂಕಲ್ಪ ಯುವ ಸ್ಪೂರ್ತಿ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಜೇಸಿಐ ಸುಳ್ಯ ಪಯಸ್ವಿನಿ ಇದರ ಪೂರ್ವಾಧ್ಯಕ್ಷರು, ರಾಷ್ಟ್ರೀಯ ತರಬೇತುದಾರರಾದ ಜೇಸಿ. ಹೆಚ್.ಜಿ.ಎಫ್ ಸೀತಾರಾಮ ಕೇವಳ ಇವರು ಪರಿಣಾಮಕಾರಿ ಸಂವಹನ ಎಂಬ ವಿಷಯದ ಬಗ್ಗೆ, ಜೇಸಿಐ ವಲಯ 24 ಇದರ ವಲಯ ತರಬೇತುದಾರರಾಗಿದ್ದು ಪ್ರಸ್ತುತ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸ.ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ Read More »

ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳ OPD ಬಂದ್‌ ಸಾಧ್ಯತೆ?

ಕರ್ನಾಟಕದಾದ್ಯಂತ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಿಂದ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಮೊದಲ ಹಂತವಾಗಿ ಕಪ್ಪುಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ವೇತನ ಪರಿಷ್ಕರಣೆ, ಭತ್ಯೆಗಳ ಹೆಚ್ಚಳ, ಖಾಲಿ ಇರುವ ವೈದ್ಯಕೀಯ ಹುದ್ದೆಗಳ ಭರ್ತಿ, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ ಮತ್ತು ವೈದ್ಯರ ಸುರಕ್ಷತೆಗೆ ಕಠಿಣ ಕಾನೂನು ಜಾರಿಗೊಳಿಸುವುದು ಪ್ರಮುಖ ಬೇಡಿಕೆಗಳಾಗಿವೆ.ಪ್ರತಿಭಟನೆಯ ಪರಿಣಾಮ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ

ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳ OPD ಬಂದ್‌ ಸಾಧ್ಯತೆ? Read More »

ಬೈಕ್‌ಗೆ ಕಾರು ಡಿಕ್ಕಿ; ಸವಾರ ಚಿದಾನಂದ ಗೌಡ ಸಾವು

ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಭಾನುವಾರ ನಡೆದಿದೆ. ಬಂದಾರು ಗ್ರಾಮದ ಕುರಾಯ ನಿವಾಸಿ, ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಮೃತ ಬೈಕ್ ಸವಾರ. ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅಲ್ಲಿ ಅವರು ಚಿಕಿತ್ಸೆಗೆ

ಬೈಕ್‌ಗೆ ಕಾರು ಡಿಕ್ಕಿ; ಸವಾರ ಚಿದಾನಂದ ಗೌಡ ಸಾವು Read More »

ಕೆಪಿಸಿಸಿ ಸದಸ್ಯ, ಉದ್ಯಮಿ ಹೆಚ್ ಎಂ ನಂದಕುಮಾರ್ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ

ಕೆಪಿಸಿಸಿ ಸದಸ್ಯ, ಉದ್ಯಮಿ ಹೆಚ್ ಎಂ ನಂದಕುಮಾರ್ ಇಂದು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅಡ್ಯಡ್ಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಬೇಡಿಕೆ ಅಹವಾಲುಗಳ ಬಗ್ಗೆ ಚರ್ಚಿಸಿ ಮಾತನಾಡಿ ಸುಳ್ಯದ ಜನತೆ ಪ್ರೀತಿ ನೀಡಿದ್ದಾರೆ. ತಮ್ಮ ಅಭಿಮಾನ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ತಮ್ಮ ಸಮಸ್ಯೆ ಅಹವಾಲುಗಳಿಗೆ ಬ್ಲಾಕ್ ಅಧ್ಯಕ್ಷರು ಮತ್ತು ಪಕ್ಷದ ನಾಯಕರೊಂದಿಗೆ ಸ್ಪಂದಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಕೆಪಿಸಿಸಿ ಸದಸ್ಯ, ಉದ್ಯಮಿ ಹೆಚ್ ಎಂ ನಂದಕುಮಾರ್ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ Read More »

ಸುಳ್ಯ : ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ

ಸುಳ್ಯದ ಶ್ರೀ ಕಲ್ಕುಡ ದೈವಸ್ಥಾನದ ನೂತನ ಶಿಲಾಮಯ ಗುಡಿಯ ನಿರ್ಮಾಣದ ಪೂರ್ವ ಭಾವಿಯಾಗಿ ಶ್ರೀ ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಮಾ. 9 ರಂದು ಜರುಗಿತು.ದೇಲಂಪಾಡಿ ಬ್ರಹ್ಮಶ್ರೀ ವೇದಮೂರ್ತಿ ಗಣೇಶ್ ತಂತ್ರಿ ಯವರ ಮಾರ್ಗದರ್ಶನದಲ್ಲಿ ಪೂರ್ವಾಹ್ನ ಸಾನಿಧ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆದು 10.47 ರ ಮುಹೂರ್ತದಲ್ಲಿ ಪ್ರಾರ್ಥನೆ ನೆರವೇರಿಸಿ ಮೂಲಸ್ಥಾನದ ಗುಡಿಯಿಂದ ಶ್ರೀ ಕಲ್ಕುಡ ಮತ್ತು ಸಹಪರಿವಾರ ದೈವಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಅಭಿಷೇಕವಾಗಿ ಮಹಾಪೂಜೆಯಾಗಿ ಪ್ರಸಾದವಿತರಣೆಯಾಯಿತು. ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ

ಸುಳ್ಯ : ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ Read More »

ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು : ಮಾಣಿಲಶ್ರೀ

ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.ಸೋಣಂಗೇರಿ ಶ್ರೀ ಕೃಷ್ಣ ಭಜನಾ ಜೀರ್ಣೊದ್ದಾರಗೊಳ್ಳುತ್ತಿದ್ದು ಇದರ ವೀಕ್ಷಣೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾ.9 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.ಜಾತಿ ಭೇದ ಭಾವ ಮೇಲು ಕೀಳು ಎಂಬುದು ಹಿಂದು ಧರ್ಮಕ್ಕೆ ಇರುವ ಹಿನ್ನಡೆ.ಹಾಗೆಯೇ ಜಾತಿ ಬೇದ ಭಾವ, ಮೇಳು-ಕೀಳು, ಮದ-ಮತ್ಸರವನ್ನು ಬಿಟ್ಟು ಇನ್ನೊಬ್ಬರ ಏಳಿಗೆ ಮತ್ತು ಸಂತೋಷದಲ್ಲಿ

ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು : ಮಾಣಿಲಶ್ರೀ Read More »

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ 2026 ಖರ್ಚು ವೆಚ್ಚಗಳ ಸಭೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ 2026 ಖರ್ಚು ವೆಚ್ಚಗಳ ಸಭೆ ಮಾ.9ರಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್ ಇವರ ಅಧ್ಯಕ್ಷತೆಯಲ್ಲಿ ದೇಗುಲದಲ್ಲಿ ಜರುಗಿತು ವೇದಿಕೆಯಲ್ಲಿ ವ್ಯವಸ್ತಾಪನ ಸಮಿತಿಯ ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ, ಪರಮೇಶ್ವರ ಗೌಡ ಬಿಳಿಮಲೆ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಫಲತಡ್ಕ ಮೈಲಪ್ಪ ಗೌಡ ಎಣ್ಮೂರು ಪಟ್ಟೆ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕಡ, ಮಾಲಿನಿ ಕುದ್ವ, ಪವಿತ್ರ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ 2026 ಖರ್ಚು ವೆಚ್ಚಗಳ ಸಭೆ Read More »

ಪುತ್ತೂರು : ಭಾ.ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಭಾ. ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಇಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಮತ್ತು ಲೀಲಾವತಿ ಟಿ ಅಡ್ವೊಕೇಟ್ ಪುತ್ತೂರು ಇವರನ್ನು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ದಿನಕರ್ ಅಡಿಗ ಹಾಗೂ ಡಾ. ಕೆ.ವನಿತಾ ವಿಜ್ಞಾನಿಗಳು ಸನ್ಮಾನಿಸಿ ಗೌರವಿಸಿದರು. ಸುಳ್ಯ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ)ಅವರು ICAR–DCR ಪುತ್ತೂರು ವತಿಯಿಂದ ಆಯೋಜಿಸಲಾದ ತರಬೇತಿಗಳಲ್ಲಿ ಸಕ್ರಿಯವಾಗಿ

ಪುತ್ತೂರು : ಭಾ.ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಹಿಳಾ ದಿನಾಚರಣೆ Read More »

error: Content is protected !!
Scroll to Top