Author name: Tejas

ಹೆಚ್.ಟಿ ಲೈನ್ ತಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು

ಮರದ ಕೊಂಬೆ ಕಡಿಯುವಾಗ ಹೆಚ್.ಟಿ ಲೈನ್ ತಾಗಿ, ಮರದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಗುರುವಾರ ನಡೆದಿದೆ.ಚನನ ಗೌಡ (69) ಮೃತ ವ್ಯಕ್ತಿ,ಚನನ ಗೌಡ ಅವರು ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ 11ಕೆವಿ ಕುವೆಟ್ಟು ಫೀಡರ್ ನ HT line ಗೆ ಬಿದ್ದು, ವಿದ್ಯುತ್ ಶಾಕ್ ಗೆ ಒಳಗಾಗಿ ಮರದಿಂದ […]

ಹೆಚ್.ಟಿ ಲೈನ್ ತಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು Read More »

ಮುರೂರು ಧ್ವಾರಕಾನಗರ ಶ್ರೀಕೃಷ್ಣ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದೂವರೆ ಲಕ್ಷ ಅನುಧಾನ ಮಂಜೂರು

ಮಂಡೆಕೋಲು ಗ್ರಾಮದ ಮುರೂರು ಧ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾದವ ಗೌಡರವರು ವಿತರಿಸಿದರು.ಈ ಸಾಮದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ ಕ್ಷೇತ್ರದಲ್ಲಿ ಅನ್ನದಾನ, ವಿಧ್ಯಾದಾನ, ಅಭಯದಾನಗಳ ಮೂಲಕ ರಾಜ್ಯದಾಧ್ಯಂತ ಮಠ ಮಂದಿರ, ದೇವಸ್ಥಾನಗಳು, ಶಾಲೆ‌, ಅಂಗನವಾಡಿ, ಹಾಲುತ್ಪಾಧಕರ ಸಹಕಾರ‌ ಸಂಘ, ಹಿಂದೂರುದ್ರಭೂಮಿ ಮೊದಲಾಗಿ

ಮುರೂರು ಧ್ವಾರಕಾನಗರ ಶ್ರೀಕೃಷ್ಣ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದೂವರೆ ಲಕ್ಷ ಅನುಧಾನ ಮಂಜೂರು Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೌಕ್ರಾಡಿ ಗ್ರಾಮದಲ್ಲಿ ಏ.2ರಂದು ಸಂಜೆ ನಡೆದಿದೆ. ಆಲಂಪಾಡಿ ನಿವಾಸಿ ಅಶ್ರಫ್(30) ಮೃತ ಯುವಕ. ಅಶ್ರಫ್ ಅಮಲು ಪದಾರ್ಥ ಸೇವನೆ ಮಾಡಿ ಮನೆಯವರೊಂದಿಗೆ ಪದೇ ಪದೇ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮನೆ ಮಂದಿ ಪ್ರತ್ಯೇಕವಾಗಿ ವಾಸವಾಗಿದ್ದರು. ಕಳೆದ ಕೆಲ ಸಮಯಗಳಿಂದ ಈ ಯುವಕ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಇದರಿಂದ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎನ್ನಲಾಗಿದೆ.ಏ.2ರಂದು ಸಂಜೆ ಮನೆಯ ಸಿಟೌಟ್‌ನಲ್ಲಿದ್ದ ಕಬ್ಬಿಣದ ಪೈಪುಗೆ ಅಂಗಿಯ ಒಂದು ಬದಿಯನ್ನು ಕಟ್ಟಿ ಅದರ

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಬೆಳ್ತಂಗಡಿ : ಕಾಡಿನಲ್ಲಿ ಬಿಟ್ಟು ಹೋಗಿದ್ದ ಮಗುವಿನ ತಂದೆ ತಾಯಿ ಪತ್ತೆ!

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡೋಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಇಬ್ಬರು ಕೂಡ ಸ್ವ ಇಚ್ಛೆಯಿಂದ ಮದುವೆಯಾಗುವುದಾಗಿ ಪೋಲಿಸರ ಮುಂದೆ ರಂಜಿತ್ ಗೌಡ ಒಪ್ಪಿದ್ದಾರೆ ಎನ್ನಲಾಗಿದೆ. ಆ ಮೂಲಕ ಪ್ರಕರಣ ಸುಖಾಂತ್ಯವಾಗಿದೆ.ಅಪರಿಚಿತ ಹೆಣ್ಣು ಮಗು ಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ

ಬೆಳ್ತಂಗಡಿ : ಕಾಡಿನಲ್ಲಿ ಬಿಟ್ಟು ಹೋಗಿದ್ದ ಮಗುವಿನ ತಂದೆ ತಾಯಿ ಪತ್ತೆ! Read More »

ಮಂಗಳೂರು : ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರಿಗೆ ಬ್ರೋಕರ್ ಗಳಿಂದ ವಾಮಾಚಾರದ ಬೆದರಿಕೆ!

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರು ಬ್ರೋಕರ್‌ ವಿರುದ್ದ ಕಠಿಣ ಕ್ರಮ ಕೈಗೊಂಡಿದ್ದು ಬ್ರೋಕರ್ ಗಳು ಸೇರಿ ಆಯುಕ್ತರ ವಿರುದ್ದವೇ ವಾಮಾಚಾರದ ಬೆದರಿಕೆಯೊಡ್ಡಿದ ಘಟನೆ ವರದಿಯಾಗಿದೆ.ಬ್ರೋಕರ್‌ಗಳ ಅಟ್ಟಹಾಸದಿಂದ ಕಂಗಾಲಾದ ಮುಡಾ ಆಯುಕ್ತ ನೂರ್ ಝಹರಾ ಖಾನ್ ಪೊಲೀಸರಿಗೆ ದೂರು ನೀಡಿದ್ದಾರೆ.ಮುಡಾ ಕಚೇರಿಗೆ ದಲ್ಲಾಳಿಗಳನ್ನು ನಿರ್ಬಂಧಿಸಿದ್ದಕ್ಕೆ ಕಮಿಷನ‌ರ್ ಮೇಲೆ ವಾಮಾಚಾರ ಪ್ರಯೋಗದ ಬೆದರಿಕೆಯೊಡ್ಡಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆಯೆಂದು ದೂರಲಾಗಿದೆ. ಈ ಬಗ್ಗೆ ಅವರು ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದುದೂರಿನ ಆಧಾರದಲ್ಲಿ ಇಬ್ಬರು ದಲ್ಲಾಳಿಗಳಾದ

ಮಂಗಳೂರು : ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರಿಗೆ ಬ್ರೋಕರ್ ಗಳಿಂದ ವಾಮಾಚಾರದ ಬೆದರಿಕೆ! Read More »

ಪ್ರತಿಪಕ್ಷಗಳ ಭಾರೀ ಆಕ್ಷೇಪ,ಗದ್ದಲದ ನಡುವೆಯೂ, ವಕ್ಸ್ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ : ಪ್ರತಿಪಕ್ಷಗಳ ಆಕ್ಷೇಪದನಡುವೆಯೂ ಏ.02ರಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ವಕ್ಸ್ ತಿದ್ದುಪಡಿ ಮಸೂದೆ(2024)ಯನ್ನು ಮಂಡಿಸಿದ್ದಾರೆ.ಲೋಕಸಭೆ ಕಲಾಪದ ಪ್ರಶೋತ್ತರ ವೇಳೆಯಲ್ಲಿ ಸಚಿವ ರಿಜಿಜು ಅವರು ವಕ್ಸ್ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಮಾತನಾಡಿ ಜಗತ್ತಿನ ಅತೀ ಹೆಚ್ಚು ವಕ್ಸ್ ಆಸ್ತಿ ಭಾರತದಲ್ಲಿದೆ. ಆದರೂ ಭಾರತದ ಮುಸ್ಲಿಮರು ಬಡವರಾಗಿದ್ದಾರೆ. ಆ ನಿಟ್ಟಿನಲ್ಲಿ ಆರ್ಥಿಕವಾಗಿ ಶ್ರೀಮಂತವಾಗಿರುವ ವಕ್ಸ್ ಮಂಡಳಿಯನ್ನು ಬಡ ಮುಸ್ಲಿಮರ ಏಳಿಗೆಗಾಗಿ ಬಳಸಲಾಗುವುದು ಎಂದು ತಿಳಿಸಿದ್ದಾರೆ.ವಕ್ಸ್ ಕಾಯ್ದೆ ಸ್ವಾತಂತ್ರ್ಯಕ್ಕಿಂತಲೂ ಪೂರ್ವದಲ್ಲೇ ಚಾಲ್ತಿಯಲ್ಲಿತ್ತು. ವಕ್ಸ್ ಮಸೂದೆ

ಪ್ರತಿಪಕ್ಷಗಳ ಭಾರೀ ಆಕ್ಷೇಪ,ಗದ್ದಲದ ನಡುವೆಯೂ, ವಕ್ಸ್ ತಿದ್ದುಪಡಿ ಮಸೂದೆ ಮಂಡನೆ Read More »

ಡಾ. ಲೀಲಾಧರ್ ಡಿ. ವಿ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಯ ನೂತನ ಚೇರ್ ಮೆನ್ ಆಗಿ ನೇಮಕ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಭಗವಾನ್ ಬಿ ಸಿ ಅವರ ಅನುಮೋದನೆಯ ಮೇರೆಗೆ ವಿಶ್ವವಿದ್ಯಾಲಯದ ಕುಲ ಸಚಿವರಾದ ಶ್ರೀ. ಶಿವಪ್ರಸಾದ್ ಪಿ. ಆರ್. ರವರು ದಿನಾಂಕ 27.03.2025 ರಂದು ಬೆಂಗಳೂರಿನ

ಡಾ. ಲೀಲಾಧರ್ ಡಿ. ವಿ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಯ ನೂತನ ಚೇರ್ ಮೆನ್ ಆಗಿ ನೇಮಕ Read More »

ಸುಳ್ಯದ ಹಿರಿಯ ಆಯುರ್ವೇದ ಪಂಡಿತ ಕುಂಞಿರಾಮನ್ ವೈದ್ಯರ್ ನಿಧನ

ಸುಳ್ಯ: ಆಯುರ್ವೇದ ಔಷದಿ ವೃತ್ತಿಯಲ್ಲಿ ಭಾರೀ ಪರಿಣತಿ ಹೊಂದಿದ ಸುಳ್ಯಕ್ಕೆ 60 ವರ್ಷಗಳಿಂದ ಕೋಟೆಕಲ್ಲು ಔಷದಿಗಳ ಹಂಚಿಕೆ ದಾರರಾಗಿದ್ದು. ಸುಳ್ಯ ದಲ್ಲಿ ಆಯುರ್ವೇದ ಪಂಡಿತರಾಗಿ ಪ್ರಸಿದ್ಧ ರಾಗಿದ್ದ ಹಿರಿಯ ಆಯುರ್ವೇದ ಪಂಡಿತ ಕುಂಞಿರಾಮನ್ ವೈದ್ಯರ್ ಏ.1ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ಇವರ ವೈದ್ಯ ವೃತ್ತಿ ಜೀವನದಲ್ಲಿ ಸಾವಿರಾರು ವಿವಿಧ ತರದ ರೋಗಿಗಳನ್ನು ತನ್ನ ಆಯುರ್ವೇದ ಔಷದಿಗಳಿಂದ ಗುಣಪಡಿಸಿ ನಿಷ್ಠಾವಂತ ವೈದ್ಯರು ಎಂದು ಹೆಸರುವಾಸಿಯಾಗಿದ್ದರು.ತನ್ನ ವೈದ್ಯ ವೃತ್ತಿ ಯೊಂದಿಗೆ ವಾಲಿಬಾಲ್ ಕ್ರೀಡೆಯನ್ನು

ಸುಳ್ಯದ ಹಿರಿಯ ಆಯುರ್ವೇದ ಪಂಡಿತ ಕುಂಞಿರಾಮನ್ ವೈದ್ಯರ್ ನಿಧನ Read More »

ಪತ್ನಿ ಮೇಲಿನ ಸಿಟ್ಟಿನಿಂದ ಮಗಳು,ನಾದಿನಿ,ಅತ್ತೆಯನ್ನು ಗುಂಡಿಕ್ಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪಾಪಿ ಪತಿ!

ಚಿಕ್ಕಮಗಳೂರು; ತನ್ನ ಹೆಂಡತಿ ಮೇಲಿನ ಕೋಪಕ್ಕೆ ಮಗಳು, ಅತ್ತೆ, ನಾದಿನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಿಂದ ವರದಿಯಾಗಿದೆ.ಮಗಳು ಮೌಲ್ಯ. (7) ಅತ್ತೆ ಜ್ಯೋತಿ(55), ನಾದಿನಿ ಸಿಂಧು(24) ಕೊಲೆಯಾದವರು. ರತ್ನಕಾರ್ ಮೂವರನ್ನು ಗುಂಡಿ ಹಾರಿಸಿ ಕೊಲೆ ಮಾಡಿ ತಾನೂ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ. ನಾದಿನಿಯ ಗಂಡನ ಕಾಲಿಗೂ ಗುಂಡು ತಗುಲಿದ್ದು ಅಪಾಯದಿಂದ ಪಾರಾಗಿದ್ದಾರೆ.ರತ್ನಾಕರ್ ಸ್ವಾತಿ ಎಂಬುವರನ್ನ 8 ವರ್ಷದ ಹಿಂದೆ ಮದುವೆಯಾಗಿದ್ದ. ಎರಡು ವರ್ಷದಿಂದ ಅವರು ರತ್ನಾಕರ್ ನಿಂದ ದೂರವಾಗಿದ್ದರು.

ಪತ್ನಿ ಮೇಲಿನ ಸಿಟ್ಟಿನಿಂದ ಮಗಳು,ನಾದಿನಿ,ಅತ್ತೆಯನ್ನು ಗುಂಡಿಕ್ಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪಾಪಿ ಪತಿ! Read More »

ರಾಜ್ಯದ ಜನತೆಗೆ ಮತ್ತೆ ಗಾಯದ ಮೇಲೆ ಬರೆ ಎಳೆದ ರಾಜ್ಯ ಸರಕಾರ, ಡಿಸೇಲ್ ಬೆಲೆ ಮತ್ತೆ ಏರಿಕೆ

ಬೆಂಗಳೂರು: ವಿದ್ಯುತ್ ಹಾಗೂ ಹಾಲಿನ ದರ ಏರಿಕೆ ಮತ್ತು ಮುದ್ರಾಂಕ ಶುಲ್ಕಗಳ ಹೆಚ್ಚಳದ ಬೆನ್ನಲ್ಲೇ ಡೀಸೆಲ್ ಬೆಲೆಯೂ ಹೆಚ್ಚಾಗಿದ್ದು ಏಪ್ರಿಲ್ 1ರ ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಏರುಗತಿಯಲ್ಲಿ ಸಾಗಿರುವ ತೆರಿಗೆ ಹೇರಿಕೆಯ ಭಾರ ಇದೀಗ ಡೀಸೆಲ್ ಮಾರಾಟದ ಮೇಲೂ ಬಿದ್ದಿದ್ದು ಶೇ.18.44ರಷ್ಟಿದ್ದ ಮಾರಾಟ ತೆರಿಗೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಶೇ.21.17ಕ್ಕೆ ಏರಿಸಿದೆ. ತತ್ಪರಿಣಾಮ ಡೀಸೆಲ್ ದರ ಸರಾಸರಿ 2 ರೂ. ಹೆಚ್ಚಳವಾಗಿದೆ. ಪ್ರಸ್ತುತ 88.99 ರೂ. ಇರುವ ಪ್ರತಿ ಲೀಟ‌ರ್

ರಾಜ್ಯದ ಜನತೆಗೆ ಮತ್ತೆ ಗಾಯದ ಮೇಲೆ ಬರೆ ಎಳೆದ ರಾಜ್ಯ ಸರಕಾರ, ಡಿಸೇಲ್ ಬೆಲೆ ಮತ್ತೆ ಏರಿಕೆ Read More »

error: Content is protected !!
Scroll to Top