Author name: Tejas

ನ.23ಕ್ಕೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದ್ದು ಶತಮಾನೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ. ಬೆಳಿಗ್ಗೆ 10ಕ್ಕೆ ಶತಮಾನೋತ್ಸವ ಸಂಭ್ರಮವನ್ನು ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ‘ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿಶಾಸಕಿ ಭಾಗೀರಥಿ ಮುರುಳ್ಯ ವಿಧಾನ ಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಎಸ್. ಅಂಗಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕರುಗಳಾದ ಶಶಿಕುಮಾ‌ರ್ ರೈ ಬಾಲೊಟ್ಟು, […]

ನ.23ಕ್ಕೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ Read More »

ಮದುವೆ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮ ಹತ್ಯೆ

ಮದುವೆ ನಿಶ್ವಯವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಿಂದ ವರದಿಯಾಗಿದೆ.ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.ಮೃತ ಯುವತಿ ಕೀರ್ತನಾವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಮದುವೆ ನಿಶ್ಚಯ ಮಾಡಿ, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವನ್ನು ಮಾಡಿದ್ದರು. ಮುಂದಿನ ಕೆಲವು ದಿನಗಳಲ್ಲಿ ಯುವತಿಗೆ ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರುಆದರೆ ಯುವತಿ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ

ಮದುವೆ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮ ಹತ್ಯೆ Read More »

ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಚಿರತೆಯೊಂದು ಕಾಡಿನಿಂದ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ . ಅರಣ್ಯ ಇಲಾಖೆಗೆ ಸ್ಥಳೀಯರು ತಿಳಿಸಿದ್ದಾರೆ.ಅರಣ್ಯ ಇಲಾಖೆಯವರು ಬೇಟಿ ನೀಡಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ವಾಹನ ಡಿಕ್ಕಿ ಹೊಡೆದು ಚಿರತೆ ಸಾವು Read More »

ಸುಳ್ಯ ಗಾಂಧಿನಗರದಲ್ಲಿ ಬೈಕಲ್ಲಿ ಬಂದು ತಲವಾರು ತೋರಿಸಿ ಗಲಾಟೆ

ಗಾಂಧಿನಗರ ವೈನ್ ಶಾಪ್ ಒಂದರ ಬಳಿ ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರು ತೋರಿಸಿ ಕೆಲವು ಹೊತ್ತು ಆತಂಕ ಸೃಷ್ಟಿಸಿ ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ.ದ್ವಿ ಚಕ್ರ ವಾಹನದಲ್ಲಿ ಬಂದ ಇಬ್ಬರು ಚೀಲದಿಂದ ಉದ್ದದ ತಲವಾರು ಮಾದರಿಯ ಕತ್ತಿಯನ್ನು ಹೊರಗೆ ತೆಗೆದು ಮತ್ತೆ ಚೀಲದಲ್ಲಿ ಇರಿಸುವ ದೃಶ್ಯ ಕಂಡು ಬಂತು.ಅಲ್ಲಿ ನಿಂತಿರುವ ಓರ್ವರಲ್ಲಿ ಜಗಳ ಮಾಡಿಕೊಂಡು ಅವರಿಗೆ ಥಳಿಸುವ ದೃಶ್ಯ ವಿಡಿಯೋ ವೈರಲ್ ಆಗಿದೆ.ಜನರು ಜಮಾಯಿಸುತ್ತಿದ್ದಂತೆ ಅವರು ಅಲ್ಲಿಂದ ಪರಾರಿಯಾಗಿದ್ದಾರೆ.

ಸುಳ್ಯ ಗಾಂಧಿನಗರದಲ್ಲಿ ಬೈಕಲ್ಲಿ ಬಂದು ತಲವಾರು ತೋರಿಸಿ ಗಲಾಟೆ Read More »

ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ಹೊಡೆದು ಏಳು ಮಂದಿ ಗಂಭೀರ

ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುಗಳು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ ಚಾಲಕನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಸಿ ಸಮೀಪದ ನಡೆದಿದೆ.ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದರೆನ್ನಲಾಗಿದ್ದು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್

ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ಹೊಡೆದು ಏಳು ಮಂದಿ ಗಂಭೀರ Read More »

ಗಾಂಧಿನಗರದಲ್ಲಿ ಕುಸಿದು ಬಿದ್ದ ಯುವತಿ ಆಸ್ಪತ್ರೆಗೆ ದಾಖಲು

ಸುಳ್ಯ ಗಾಂಧಿನಗರದ ಪಿಕಪ್ ಪಾರ್ಕಿಂಗ್ ಎದುರಿನ ರಸ್ತೆಯ ಬದಿಯಲ್ಲಿ ಹಠಾತ್ ಕುಸಿದು ಬಿದ್ದ ಯುವತಿಯೊಬ್ಬಳನ್ನು ಪಿಕಪ್ ಚಾಲಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ನ.20ರಂದು ವರದಿಯಾಗಿದೆ.ಈ ಯುವತಿ ಕಾಣಿಯೂರುನವಳಾಗಿದ್ದು ವೈದ್ಯರು ವಿಚಾರಿಸಿದ್ದಾಗ ವಿಷ ಸೇವಿಸಿದ್ದೇನೆ ಎಂದು ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಗಾಂಧಿನಗರದಲ್ಲಿ ಕುಸಿದು ಬಿದ್ದ ಯುವತಿ ಆಸ್ಪತ್ರೆಗೆ ದಾಖಲು Read More »

ಕಾಡು ಹಂದಿ ತಿವಿದು ಮಹಿಳೆ ಗಂಭೀರ

ಕಾಡು ಹಂದಿ ತಿವಿದು ಮಹಿಳೆ ಗಾಯಗೊಂಡ ಘಟನೆ ದುಗ್ಗಲಡ್ಕ ದಲ್ಲಿ ಮಂಗಳವಾರ ಮುಂಜಾನೆ ಬೆಳಿಗ್ಗೆ ನಡೆದಿದೆ.ಕೂಟೇಲು ಸಿಆರ್ ಸಿ ಯ ರಾಮಚಂದ್ರನ್ ಎಂಬವರ ಪತ್ನಿ ಅಂಬಿಕಾ ಎಂಬವರು ದುಗ್ಗಲಡ್ಕ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ನಡೆಸುತ್ತಿದ್ದರು. ಆಗ ಪೊದೆಗಳ ಮಧ್ಯೆಯಿದ್ದ ಕಾಡುಹಂದಿಯೊಂದು ಬಂದು ಮಹಿಳೆಗೆ ತಿವಿಯಿತು.ಇದರಿಂದ ಮಹಿಳೆಯ ಕಾಲಿಗೆ ಗಾಯವಾಗಿದ್ದು,ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತೆಂದು ತಿಳಿದುಬಂದಿದೆ.

ಕಾಡು ಹಂದಿ ತಿವಿದು ಮಹಿಳೆ ಗಂಭೀರ Read More »

ಮನೆಯಿಂದ ನಗ ನಗದು ಕಳವು

ಮನೆಯಿಂದ ಕಳ್ಳರು ಅಪಾರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಕುಡ್ತಮುಗೇರ್ ಸಮೀಪ ಮಂಕುಡೆ ಎಂಬಲ್ಲಿ ನಡೆದಿದೆ.ಕೆಲ ದಿನಗಳ ಹಿಂದೆ ಅಳಕೆಮಜಲಿನಲ್ಲಿ 2 ಮನೆಗಳಿಂದ ಇದೇ ಮಾದರಿಯಲ್ಲಿ ಕಳ್ಳತನ ನಡೆದಿತ್ತು.ಮನೆಯ ಯಜಮಾನ ಗಣೇಶ್ ರೈ ಕೆಲಸಕ್ಕೆ ಹೋಗಿದ್ದು, ಮನೆಯ ಯಜಮಾನಿ ವಿಟ್ಲ ಸಂತೆಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 12 ಗಂಟೆಯಿಂದ ಒಂದೂವರೆ ಗಂಟೆಯ ಒಳಗೆ ಈ ಕೃತ್ಯ ನಡೆದಿದೆ ಎಂದು ಅಂದಾಜಿಸಲಾಗಿದೆ.ಮನೆಯ ಹಿಂದಿನ ಬಾಗಿಲನ್ನು ಮುರಿದು ಕಳ್ಳರು ಒಳ ನುಗ್ಗಿದ್ದಾರೆ.ಸ್ಥಳಕ್ಕೆ ವಿಟ್ಲ

ಮನೆಯಿಂದ ನಗ ನಗದು ಕಳವು Read More »

ಕುಕ್ಕೆ ದೇವಳಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕುಟುಂಬ ಭೇಟಿ

ದ.ಕ. ಜಿಲ್ಲೆಯ ಪ್ರಸಿದ್ಧ ತೀರ್ಥ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ಮಂಗಳವಾರ ಭೇಟಿ ನೀಡಿದರು.ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ‌ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ ದೇವರ ದರ್ಶನ ಪಡೆದು ಮಹಾಭಿಷೇಷ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸೂರ್ಯಕುಮಾರ್ ಯಾದವ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಮತ್ತಿತರರು ಉಪಸ್ಥಿತರಿದ್ದರು.

ಕುಕ್ಕೆ ದೇವಳಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕುಟುಂಬ ಭೇಟಿ Read More »

ಸುಳ್ಯ: ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ

ಸುಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಉಕ್ಕಿನಮಹಿಳೆ ದಿl ಇಂದಿರಾ ಗಾಂಧೀಯವರ 107ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ, ಸಹಕಾರಿ ಧುರೀಣ ಪಿ ಸಿ ಜಯರಾಮ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಇಂದಿರಾ ಗಾಂಧೀಜಿಯವರು ಮಾಜಿ ಪ್ರಧಾನಿಯಾಗಿ ದೇಶದ ಅಭಿವೃದ್ಧಿ ಮತ್ತು ಬಡತನ ನಿರ್ಮೂಲನೆಗೆ ಕ್ರಾಂತಿಕಾರಿ ಯೋಜನೆಗಳನ್ನು ತಂದವರು. ಇಂದಿರಾ ಗಾಂಧಿಯವರ ಹೆಸರನ್ನು ಸ್ಮರಣೆ ಮಾಡಬೇಕಿರುವುದು ದೇಶದ ಪ್ರಜೆಗಳಾದ ನಮ್ಮ ಕರ್ತವ್ಯ, ರಾಜ್ಯಸರಕಾರ ಇಂದಿರಾ

ಸುಳ್ಯ: ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ Read More »

error: Content is protected !!
Scroll to Top