Author name: Tejas

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಭಾಗೀರಥಿ ಮುರುಳ್ಯ

ಸುಳ್ಯ: ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆ.ವಿದ್ಯಾರ್ಥಿಗಳು ಪ್ರತಿಭೆಯನ್ನು ತೋರ್ಪಡಿಸುವ ಮೂಲಕ ವೇದಿಯನ್ನು ಸದುಪಯೋಗಪಡಿಸಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೂಬನಗರ ಇದರ ಸಹಭಾಗಿತ್ವದಲ್ಲಿ ವಿನೂಬನಗರ ವಿದ್ಯಾಸಂಸ್ಥೆಯಲ್ಲಿ ಎರಡು ದಿನಗಳ ಕಾಲ ನಡೆಯುವ ತಾಲೂಕು ಮಟ್ಟದಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನ.13ರಂದು ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ […]

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಭಾಗೀರಥಿ ಮುರುಳ್ಯ Read More »

ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-11-2024ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು ವಹಿಸಿ ಶಿಬಿರಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ, ಸಮಯ ಪ್ರಜ್ಞೆ ಹಾಗೂ ಸೇವಾ

ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ Read More »

ಕಸಾಪ ಸಾಹಿತ್ಯ ಸಂಭ್ರಮ ಸಮಾರೋಪ ಮತ್ತು ಸನ್ಮಾನ ಸಮಾರಂಭ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಕನ್ನಡ ರಾಜ್ಯೊತ್ಸವ- ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಸನ್ಮಾನ ಸಮಾರಂಭ ನ.12 ರಂದು ಸುಳ್ಯದ ಹಳೆಗೇಟಿನ ಶಿವಕೃಪಾ ನಿಲಯದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ಮಾತನಾಡಿದರು.ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಸಾಧಕರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ

ಕಸಾಪ ಸಾಹಿತ್ಯ ಸಂಭ್ರಮ ಸಮಾರೋಪ ಮತ್ತು ಸನ್ಮಾನ ಸಮಾರಂಭ Read More »

ಕಲ್ಲುಗುಂಡಿ : ಸಂಪತ್ ಕೊಲೆ ಪ್ರಕರಣದ ಎರಡನೇ ಆರೋಪಿಗೆ ಜಾಮೀನು ಮಂಜೂರು

ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಎರಡನೇ ಆರೋಪಿಗೆ ನ್ಯಾಯಾಲಯದ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದುಬಂದಿದೆ.2020 ರ ಅಕ್ಟೋಬರ್ 8ರಂದು ಕಲ್ಲುಗುಂಡಿಯ ಸಂಪತ್ ಎಂಬವರನ್ನು ಸುಳ್ಯದ ಶಾಂತಿನಗರ ಅವರ ಬಾಡಿಗೆ ಮನೆಯ ಸಮೀಪ 8 ಮಂದಿಯ ತಂಡ ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿತ್ತು. ಬಳಿಕ ಪೋಲೀಸರು ಎಲ್ಲ 8 ಮಂದಿ ಆರೋಪಿಗಳನ್ನು ಬಂದಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.ಬಳಿಕ ಆರೋಪಿಗಳು ಜೈಲಿನಲ್ಲಿದ್ದರು.ಅವರಲ್ಲಿ ಎರಡನೇ ಆರೋಪಿಯಾಗಿರುವ ಬಿಪಿನ್ ಎಂಬವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ

ಕಲ್ಲುಗುಂಡಿ : ಸಂಪತ್ ಕೊಲೆ ಪ್ರಕರಣದ ಎರಡನೇ ಆರೋಪಿಗೆ ಜಾಮೀನು ಮಂಜೂರು Read More »

ಕಲ್ಲುಗುಂಡಿ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯ

ಕಲ್ದುಗುಂಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಕಲ್ಲುಗುಂಡಿಯ ಕೂಲಿಶೆಡ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಕಳೆದ ತಡರಾತ್ರಿ ನಡೆದಿದೆಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಮತ್ತಿಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಲ್ಲುಗುಂಡಿ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯ Read More »

ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಕುಲದಾಸ್ ರವರಿಗೆ ಸಾರ್ವಜನಿಕ ಸನ್ಮಾಕ್ಕೆ ನಿರ್ಧಾರ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುಳ್ಯ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಸಂಘಟಕ ಗೋಕುಲದಾಸ್ ರವರಿಗೆ ಸಾರ್ವಜನಕ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲುವಾಗಿ ಗೋಕುಲದಾಸ್ ಅಭಿಮಾನಿಗಳ ಸಭೆ ನ.12 ರಂದು ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.ಎನ್.ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪಿ.ಸಿ.ಜಯರಾಮ್, ದಿನೇಶ್ ಮಡಪ್ಪಾಡಿ, ರಾಧಾಕೃಷ್ಣ ಬೊಳ್ಳೂರು, ಪಿ.ಎಸ್.ಗಂಗಾಧರ್, ಕೆ.ಎಂ.ಮುಸ್ತಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭವಾನಿಶಂಕರ ಕಲ್ಮಡ್ಕ ಪ್ರಸ್ತಾವಿಕವಾಗಿ ಮಾತನಾಡಿದರುಸಭೆಯಲ್ಲಿ ಮಾತನಾಡಿದ ಪ್ರಮುಖರು ಗೋಕುಲದಾಸ್‌ ಅವರಿಗೆ ಅರ್ಹವಾಗಿಯೇ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.ಅವರಿಗೆ ಸಾರ್ವಜನಿಕ ಸನ್ಮಾನ ಮಾಡಬೇಕಾಗಿರುವುದು ನಮ್ಮಲ್ಲರ

ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಕುಲದಾಸ್ ರವರಿಗೆ ಸಾರ್ವಜನಿಕ ಸನ್ಮಾಕ್ಕೆ ನಿರ್ಧಾರ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಿಶೋರ್ ಶಿರಾಡಿ ಮನವಿ

ನ.15ನೇ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಗುಂಡ್ಯದಲ್ಲಿ ನಡೆಯುವ ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನಡೆಯುವ ಪ್ರತಿಭಟನೆ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಭಾದಿತ ಗ್ರಾಮದ ಅಂಗಡಿ ಹೋಟೆಲ್ ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಈ ಕಾರ್ಯಕ್ರಮದಲ್ಲಿ ರೈತರ ಪರವಾಗಿ ಭಾಗವಹಿಸಬೇಕಾಗಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಮಾದ್ಯಮ ಹೇಳಿಕೆಯ ಮೂಲಕ‌ ವಿನಂತಿಸಿಕೊಂಡಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಿಶೋರ್ ಶಿರಾಡಿ ಮನವಿ Read More »

ವಿಷ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿದ ಯುವಕ ಸಾವು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ.12 ರಂದು ಮೃತ ಪಟ್ಟಿರುವುದಾಗಿ ವರದಿಯಾಗಿದೆ.ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಅಭಿಲಾಷ್ ಮೃತ ಪಟ್ಟ ಯುವಕ. ಸುಳ್ಯದ ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಮ್ಯಾನೇಜರ್ ಕಮ್ ಅಕೌಂಟ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಭಿಲಾಷ್ ರವರನ್ನು ಚಿಕಿತ್ಸೆ ಗಾಗಿಮಂಗಳೂರಿನ ಖಾಸಗಿ ಆಸ್ಪತ್ರೆಗೆ ನ.5 ರಂದು ದಾಖಲಿಸಲಾಗಿತ್ತು.

ವಿಷ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿದ ಯುವಕ ಸಾವು Read More »

ಅರಂತೋಡು-ಎಲಿಮಲೆ ಲೋಕೋಪಯೋಗಿ ರಸ್ತೆಯ ಆಯ್ದ ಭಾಗವನ್ನು ತಕ್ಷಣ ಅಭಿವೃದ್ಧಿ ಪಡಿಸಿ : ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಶಾಸಕರಿಗೆ ಮನವಿ

ಅರಂತೋಡು, ನ.12 : ಅರಂತೋಡು-ಎಲಿಮಲೆ ಲೋಕೋಪಯೋಗಿ ರಸ್ತೆಯ ಆಯ್ದ ಭಾಗವನ್ನು ತಕ್ಷಣ ಅಭಿವೃದ್ಧಿ ಪಡಿಸಿ ತಪ್ಪಿದಲ್ಲಿ ಮುಂದಿನ ಚುನಾವಣೆಯ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಅರಂತೋಡು ಗ್ರಾಮದ ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಸುಳ್ಯ ವಿಧಾನ ಸಭಾ ಕ್ಷೇತ್ರರ ಶಾಸಕಿ ಭಾಗೀರಥಿ ಮುರಳ್ಯರಿ ಮನವಿ ಸಲ್ಲಿಸಿದೆ.ಮೈಸೂರು, ಕೊಡಗು ಜಿಲ್ಲಾ ಯಾತ್ರಿಕರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಸಂಪರ್ಕಿಸುವರೇ ಅತೀ ಹತ್ತಿರದ ರಸ್ತೆ ಅರಂತೋಡು-ಎಲಿಮಲೆ ಜಿಲ್ಲಾ ಮುಖ್ಯ ರಸ್ತೆ ಆಗಿದೆ ಎಂಬುದು ತಮಗೆ

ಅರಂತೋಡು-ಎಲಿಮಲೆ ಲೋಕೋಪಯೋಗಿ ರಸ್ತೆಯ ಆಯ್ದ ಭಾಗವನ್ನು ತಕ್ಷಣ ಅಭಿವೃದ್ಧಿ ಪಡಿಸಿ : ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಶಾಸಕರಿಗೆ ಮನವಿ Read More »

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ನಾಮಪತ್ರ ಸಲ್ಲಿಕೆ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲದ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ಯವರು ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡೆಕೋಲು ಗ್ರಾಮ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು/ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಶ್ರೀ ಸದಾನಂದ ಮಾವಜಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಧನುಶ್ ಕುಕ್ಕೆಟ್ಟಿ ಮತ್ತು ಶೇಖರ್ ಮಣಿಯಾಣಿ ಕಣೆಮರಡ್ಕ, ಮಂಡೆಕೋಲು ಗ್ರಾಮ ಪಂಚಾಯತ್ ಹಾಲಿ ಸದಸ್ಯೆ ಗೀತಾ ಮೈಲೆಟ್ಟಿಪಾರೆ, ಪೂರ್ಣಚಂದ್ರ ಕಣೆಮರಡ್ಕ, ಅಬೂಬಕ್ಕರ್

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ನಾಮಪತ್ರ ಸಲ್ಲಿಕೆ Read More »

error: Content is protected !!
Scroll to Top