Author name: Tejas

ಕಾನೂನು ವಿದ್ಯಾರ್ಥಿ ನೇಣು ಬಿಗಿದು ಆತ್ಮ ಹತ್ಯ

ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಕಾನೂನು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ವರದಿಯಾಗಿದೆಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಮನೆಯವರು ಸುಳ್ಯಕ್ಕೆ ಮದುವೆಗೆಂದು ಬಂದಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪೋಲಿಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕೊಂಡೊಯ್ದಿದ್ದಾರೆ.ಯುವಕ ಸುಳ್ಯದ ಕಾನೂನು ಮಹಾವಿದ್ಯಾಲಯದ […]

ಕಾನೂನು ವಿದ್ಯಾರ್ಥಿ ನೇಣು ಬಿಗಿದು ಆತ್ಮ ಹತ್ಯ Read More »

ಕೋಲ್ಚಾರು ಶಾಲೆಯಲ್ಲಿ ಭೀಮರಾವ್ ವಾಷ್ಠರ್ ತಂಡದಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವ – ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ವೇದಿಕೆ ವತಿಯಿಂದ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಶಾಲೆಯ ಸಭಾಂಗಣದಲ್ಲಿ ಸುಳ್ಯದ ಖ್ಯಾತ ಗಾಯಕ, ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್. ಭೀಮರಾವ್ ವಾಷ್ಠರ್ ಮತ್ತು ತಂಡದ ವತಿಯಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ ಜರುಗಿತು. ಗೀತ ಗಾಯನ ಕಾರ್ಯಕ್ರಮದಲ್ಲಿ ಕನ್ನಡ

ಕೋಲ್ಚಾರು ಶಾಲೆಯಲ್ಲಿ ಭೀಮರಾವ್ ವಾಷ್ಠರ್ ತಂಡದಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ Read More »

ಮಾಜಿ ಸಚಿವ ಅಂಗಾರರು ಬೇಡಿಕೆ ಇಟ್ಟಿದ ರಸ್ತೆಗಳ ಅಭಿವೃದ್ಧಿ ಗೆ ಅನುದಾನ ಮಂಜೂರು

ಎಸ್‌.ಅಂಗಾರರು ಸಚಿವರಾಗಿದ್ದ 2022-23ನೇ ಸಾಲಿನಲ್ಲಿ ಸುರಿದ ಬಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ದುರಸ್ತಿಗಾಗಿ ಮಳೆ ಪರಿಹಾರ ಕಾರ್ಯಕ್ರಮದಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದ 3 ಕೋಟಿ ರೂ.ಗಳ ಕಾಮಗಾರಿಗಳ ಪಟ್ಟಿಗೆ ಆಗಿನ ಸರಕಾರ ಮಂಜೂರಾತಿ ನೀಡಿತ್ತು. ಆ ಪಟ್ಟಿಯಲ್ಲಿದ್ದ. ಈ ಕೆಳಗೆ ಉಲ್ಲೇಖಿಸಲಾದ ರಸ್ತೆಗಳ ಅಭಿವೃದ್ಧಿಗೆ ಈಗಿನ ಸರಕಾರ ಅನುದಾನ ಬಿಡುಗಡೆಗೊಳಿಸಿ ಆದೇಶ ಮಾಡಿರುವುದಾಗಿ ತಿಳಿದುಬಂದಿದೆ.ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕಲ್ಲೋಣಿ- ಕುಳ್ಳಂಪಾಡಿ ರಸ್ತೆ ಅಭಿವೃದ್ಧಿಗೆ ರೂ.

ಮಾಜಿ ಸಚಿವ ಅಂಗಾರರು ಬೇಡಿಕೆ ಇಟ್ಟಿದ ರಸ್ತೆಗಳ ಅಭಿವೃದ್ಧಿ ಗೆ ಅನುದಾನ ಮಂಜೂರು Read More »

ಅಜ್ಜಾವರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದೇವಕಿ ಆಯ್ಕೆ

ಸುಳ್ಯ: ಅಜ್ಜಾವರ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ದೇವಕಿ ಕಾಟಿಪಳ್ಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಜ್ಜಾವರ ಗ್ರಾ.ಪಂ. ಅಧ್ಯಕ್ಷರಾಗಿದ್ದ ಬೇಬಿ ಅವರು ರಾಜಿನಾಮೆ ನೀಡಿದ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನ.7 ರಂದು ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಅಜ್ಜಾವರ ಗ್ರಾ.ಪಂ. ನ ಅಧ್ಯಕ್ಷತೆ ಎಸ್ಸಿ ಮಹಿಳೆಗೆ ಮೀಸಲಾಗಿತ್ತು. ಕಳೆದ ಬಾರಿ ಅಧ್ಯಕ್ಷತೆ ಆಯ್ಕೆ ಸಂದರ್ಭ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಬೇಬಿ ಮತ್ತು ದೇವಕಿ ಆಕಾಂಕ್ಷಿಗಳಾಗಿದ್ದರು. ಬಳಿಕ ಮಾತುಕತೆ ನಡೆದು ಒಂದೂಕಾಲು ವರ್ಷದಂತೆ ಇಬ್ಬರಿಗೂ ಅಧ್ಯಕ್ಷತೆ ಹಂಚಿಕೊಡಲು ಪಕ್ಷ

ಅಜ್ಜಾವರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದೇವಕಿ ಆಯ್ಕೆ Read More »

ಮುಸ್ಲಿಂ ಸಮುದಾಯದ ಸಭೆ ನಡೆಸಿದ ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ಪ್ರಮುಖರನ್ನು ಭೇಟಿಯಾಗಿ ಮಗನನ್ನು ಬೆಂಬಲಿಸಬೇಕೆಂದು ಕೇಳಿಕೊಳ್ಳುತ್ತಿದ್ದಾರೆ.ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಅವರು ಬಂಕಾಪುರ ಪಟ್ಟಣದಲ್ಲಿ ಸಭೆ ನಡೆಸಿದರು.ಬಂಕಾಪುರದ ಪ್ರಮುಖ ಮುಸ್ಲಿಂ ಮುಖಂಡರ ಮನೆಗೆ ಮಂಗಳವಾರ ರಾತ್ರಿ ಭೇಟಿ ನೀಡಿದ ಬೊಮ್ಮಾಯಿ, “ನಾನು ಯಾವಾಗಲೂ ನಿಮ್ಮೊಂದಿಗೆ ನಿಂತಿದ್ದೇನೆ. ನಿಮ್ಮ ವ್ಯಾಪಾರ, ಉದ್ಯಮವನ್ನು ಬೆಳೆಸುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ನೀವು ಬೆಳೆಯಬೇಕು ಎಂದು ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು.

ಮುಸ್ಲಿಂ ಸಮುದಾಯದ ಸಭೆ ನಡೆಸಿದ ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ Read More »

ಬಸ್ ಸಂಚಾರದಲ್ಲಿವಾಗಲೇ ಚಾಲಕ ಹೃದಯಾಘಾತದಿಂದ ಸಾವು

ಬೆಂಗಳೂರು: ಬೆಂಗಳೂರು ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಸಂಚಾರದಲ್ಲಿರುವಾಗಲೇ ಬಸ್ ಚಾಲಕ ಕಿರಣ್ ಕುಮಾರ್ (40 ವರ್ಷ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ವೇಳೆ ಬಸ್‌ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಬಸ್ ಬೆಳಗ್ಗೆ ನೆಲಮಂಗಲ ನಗರದ ಬಿನ್ನ ಮಂಗಲದ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಬಸ್ ಸಂಚಾರದಲ್ಲಿವಾಗಲೇ ಚಾಲಕ ಹೃದಯಾಘಾತದಿಂದ ಸಾವು Read More »

(ಕವನ) ಪ್ರೀತಿಯ ಪುತ್ರ

ಅನುದಿನವೂ ನಾನು ನಿನಗೆವಿಶೇಷವಾಗಿ ಪ್ರಾರ್ಥಿಸುವೆನುನನ್ನ ಭರವಸೆಯನ್ನು ಪುನರುಜ್ಜೀವನಗೊಳಿಸಿದನನ್ನ ಪ್ರೀತಿಯ ಮಗ ನೀನು. ನಿನ್ನ ಕಣ್ಣುಗಳಲ್ಲಿನ ಒಂದುನೋಟವು ನನ್ನ ಆಲೋಚನೆಯಅನುಭವದ ಕನ್ನಡಿ , ಮಾತೃತ್ವವು ನಿನ್ನಿಂದನನಗೊದಗಿದ ಪೂರ್ವಜನುಮದ ಪುಣ್ಯವುಸಹಿಸುವೆನು ನಿನಗಾಗಿಬದುಕಿನ ಎಲ್ಲ ಏಳು ಬೀಳನು ಪ್ರತಿ ದಿನವೂ ನನಗೆ ನಿನ್ನ ಜನ್ಮದಿನ…ನಾನು ನಿನ್ನನ್ನು ಹೆತ್ತ ಪ್ರತಿ ಕ್ಷಣಕ್ಕೂ!ಯಾವುದೇ ಮಿತಿಯಿಲ್ಲದ ಸಂತೋಷದಅನುಭವ ನೀಡಿದವನು ನನ್ನ ಮಗನು . ಆ ವಿಶೇಷ ಪ್ರೀತಿ ನನ್ನಹೃದಯಕ್ಕೆ ಮಾತ್ರ ತಿಳಿದಿದೆವಿಶೇಷವು ನನ್ನ ಮಗನ ಪ್ರೀತಿಯುಅದು ನನ್ನ ಹೃದಯಕ್ಕೆ ಮಾತ್ರ ತಿಳಿದಿದೆ. ✍️ ಪ್ರಿಯಾ ಸುಳ್ಯ

(ಕವನ) ಪ್ರೀತಿಯ ಪುತ್ರ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ.6ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ- ರೆಂಜಾಳದ ಶ್ರೀ. ವಿನಾಯಕ ಸಭಾಭವನದಲ್ಲಿ ನಡೆಯಿತು.ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಯವರು ನೆರವೇರಿಸಿದರು. ಶಿಬಿರದ ಉದ್ಘಾಟನೆಯನ್ನು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ Read More »

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಅವ್ಯವಸ್ಥೆ,ಮಾರ್ದನಿಯಲ್ಲಿ ವರದಿ ಪ್ರಕಟ ಹಿನ್ನಲೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಭಾಗೀರಥಿ ಮುರಳ್ಯ,ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಿದಲ್ಲಿ ಪ್ರತಿಭಟನೆ

ಸುಳ್ಯದ ಕೆ.ಎಸ್‌.ಆರ್.ಟಿ.ಸಿ ಬಸ್ಸು ನಿಲ್ದಾಣ ಅವ್ಯವಸ್ಥೆಯ ಬಗ್ಗೆ ಮಾರ್ದನಿ ನ್ಯೂಸ್ ನಲ್ಲಿ ವರದಿ ಪ್ರಕಟವಾದ ಹಿನ್ನಲೆಯಲ್ಲಿ ಬುಧವಾರ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಬಸ್ಸು ನಿಲ್ದಾಣಕ್ಕೆ ದಿಡೀರ್ ಭೇಟಿ ನೀಡಿ ಸಮಸ್ಯೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಲ್ಲಿ ನಾನೇ ಬಸ್ಸು ನಿಲ್ದಾಣದಲ್ಲಿ ಕಳಿತುಕೊಂಡು ಪ್ರತಿಭಟನೆ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿ ಅಧಿಕಾರಿಗಳನ್ನು‌ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.ಮಂಗಳವಾರ ಬಸ್ಸು ನಿಲ್ದಾಣದಲ್ಲಿ ಮಹಿಳೆಯೊಬ್ಬರು ಮುರಿದ ಚೇಯರ್ ನಿಂದ ಬಿದ್ದು ಗಾಯಗೊಂಡಿದ್ದರು. ಈ ವರದಿ ಮಾರ್ದನಿ

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಅವ್ಯವಸ್ಥೆ,ಮಾರ್ದನಿಯಲ್ಲಿ ವರದಿ ಪ್ರಕಟ ಹಿನ್ನಲೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಭಾಗೀರಥಿ ಮುರಳ್ಯ,ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಿದಲ್ಲಿ ಪ್ರತಿಭಟನೆ Read More »

ಕುಕ್ಕೆ ಸುಬ್ರಹ್ಮಣ್ಯ ದೇವಳದಿಂದ ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಡ ಹೆಂಡತಿಯ ದುರ್ಮರಣ,ಮಕ್ಕಳು ಗಂಭೀರ

ನರಗುಂದ : ಭೈರನಹಟ್ಟಿ ಗ್ರಾಮದ ಬಳಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂದುರುಗುತ್ತಿದ್ದಾಗ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು. ಅವರಿಬ್ಬರ ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.ಮೃತರನ್ನು ಬಾಗಲಕೋಟೆ ಮೂಲದ ಸಿದ್ದರಾಮ ಮತ್ತು ಹೇಮಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನ ಅವರನ್ನು ತಕ್ಷಣ ನರಗುಂದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿ ಮನೆಗೆ ಹಿಂದುರುವಾಗ ಬರುವಾಗ

ಕುಕ್ಕೆ ಸುಬ್ರಹ್ಮಣ್ಯ ದೇವಳದಿಂದ ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಡ ಹೆಂಡತಿಯ ದುರ್ಮರಣ,ಮಕ್ಕಳು ಗಂಭೀರ Read More »

error: Content is protected !!
Scroll to Top