Author name: Tejas

ವಿದ್ಯುತ್ ಕಂಬಕ್ಕೆ ಸ್ಕೋರ್ಪಿಯೊ ಡಿಕ್ಕಿ,ತಪ್ಪಿದ ಭಾರೀ ದುರಂತ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ವಾಹನ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.ಮಂಗಳೂರಿಗೆ ತೆರಳುತ್ತಿದ್ದ ಸ್ಕೊರ್ಪಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.

ವಿದ್ಯುತ್ ಕಂಬಕ್ಕೆ ಸ್ಕೋರ್ಪಿಯೊ ಡಿಕ್ಕಿ,ತಪ್ಪಿದ ಭಾರೀ ದುರಂತ Read More »

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ

33 ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.5 ಮಂಗಳವಾರ ನಡೆಸುವುದರಿಂದ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:00 ಗಂಟೆವರೆಗೆ 33 ಕೆ.ವಿ ಕಾವು-ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕಾವು ಹಾಗೂ ಸುಳ್ಯ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ Read More »

ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ

ಕಡಬ: ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳದಲ್ಲಿಯೇ ಇದೆ.ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ ಎಡಮಂಗಲದತ್ತ ಹೋಗುತ್ತಿದ್ದ ವೇಳೆ ನ. 2

ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ Read More »

ಹೊಸೋಳಿಕೆ ಕಟ್ಟೆಮನೆಯಲ್ಲಿ ದೀಪಾವಳಿ ಆಚರಣೆತೀರ್ಥರಾಮ ಎಚ್. ಬಿ ಯವರಿಗೆ ಗೌರವ ಸಮರ್ಪಣೆ

ಗುತ್ತಿಗಾರುವಿನ ಹೊಸೋಳಿಕೆ ಕಟ್ಟೆಮನೆಯಲ್ಲಿ ದೀಪಾವಳಿ ಆಚರಣೆ ಹಾಗೂ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ನಿವೃತ್ತ ಸಿಬ್ಬಂದಿ, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ತೀರ್ಥರಾಮ ಎಚ್. ಬಿ ಹೊಸೋಳಿಕೆಯವರು ಸರಳ, ಸಜ್ಜನ, ದಕ್ಷ, ಭ್ರಷ್ಟಾಚಾರ ರಹಿತ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತಿ ಹೊಂದಿದ್ದರು ಹೊಸೋಳಿಕೆ ಕಟ್ಟೆಮನೆ ಕುಟುಂಬದ ಮುಖ್ಯಸ್ಥರಾಗಿರುವ ಇವರನ್ನು ಕುಟುಂಬಸ್ಥರು ದೀಪಾವಳಿ ಹಬ್ಬದಲ್ಲಿ ಕುಟುಂಬಸ್ಥರ ಸಮಾಗಮದಲ್ಲಿ ಗೌರವಿಸಿದರುಕುಟುಂಬದ ಹಿರಿಯರಾದ ವಿಶ್ವನಾಥ ಹೊಸೋಳಿಕೆ ಯವರು ಅಧ್ಯಕ್ಷತೆ ವಹಿಸಿದರು, ರಾಧಾಕೃಷ್ಣ ಹೊಸೋಳಿಕೆ, ಕುಟುಂಬದ ಅಧ್ಯಕ್ಷರಾದ ಎಚ್.

ಹೊಸೋಳಿಕೆ ಕಟ್ಟೆಮನೆಯಲ್ಲಿ ದೀಪಾವಳಿ ಆಚರಣೆತೀರ್ಥರಾಮ ಎಚ್. ಬಿ ಯವರಿಗೆ ಗೌರವ ಸಮರ್ಪಣೆ Read More »

ಅಜ್ಜಾವರ : ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಶಿವಾಜಿ ಶಾಖೆ ಅಜ್ಜಾವರ ಇದರ ನೇತೃತ್ವದಲ್ಲಿ ಶ್ರೀ ಶಾರದ ರಾಮ ಸೇವಾ ಪ್ರತಿಷ್ಠಾನ ಬಯಂಬು ಇಲ್ಲಿ ಬಾಲಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು. ಅಜ್ಜಾವರದ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಧರ್ಮದರ್ಶಿಗಳಾದ ಭಾಸ್ಕರ್ ರಾವ್ ಬಯಂಬು ದೀಪ ಪ್ರಜ್ವಲಿಸುವ ಮೂಲಕ ಬಾಲ ಸಂಸ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಅಟಲ್ ಜೀ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿಯಾದ ಸುಭೋದ್ ಶೆಟ್ಟಿ ಮೇನಾಲ ಇವರು ಬಾಲ ಸಂಸ್ಕಾರದ ಮಹತ್ವದ ಬಗ್ಗೆ ಬೌದ್ಧಿಕ ನಡೆಸಿದರು. ವಿಶ್ವ ಹಿಂದೂ ಪರಿಷತ್ತು

ಅಜ್ಜಾವರ : ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ Read More »

ಮರಬಿದ್ದು ಸ್ಕೂಟಿ ಸವಾರ ಸಾವನ್ನಪ್ಪಿದ ಹಿನ್ನಲೆ,ಸಾರ್ವಜನಿಕರಿಂದ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ

ಎಡಮಂಗಲ : ಸ್ಕೂಟಿ ಸವಾರನ ಮೇಲೆ ಪುಳಿಕುಕ್ಕು ಸಮೀಪ ದೂಪದ ಮರ ಬಿದ್ದು ಸವಾರ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಸ್ತೆ ಪಕ್ಕದ ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಗ್ರಹಿಸಿ ನ.2ರ ಶನಿವಾರ ಸಾರ್ವಜನಿಕರು ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದ ಸಾರ್ವಜನಿಕರು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಲು ಅವಕಾಶ ನೀಡಲಿಲ್ಲ. ಅದರಿಂದಾಗಿ ಕಡಬ -ಪಂಜ ರಸ್ತೆಯಲ್ಲಿ ಸುಮಾರು

ಮರಬಿದ್ದು ಸ್ಕೂಟಿ ಸವಾರ ಸಾವನ್ನಪ್ಪಿದ ಹಿನ್ನಲೆ,ಸಾರ್ವಜನಿಕರಿಂದ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ Read More »

ಸ್ಕೂಟಿ ಮೇಲೆ ಮರ ಬಿದ್ದು‌ ಸ್ಕೂಟಿ ಸವಾರ ಸಾವು

ಕಡಬ ತಾಲೂಕಿನ ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಪುಳಿಕುಕ್ಕು ಸಮೀಪ ನಡೆದಿದೆ.ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಹಲವಾರು ವರ್ಷಗಳಿಂದ ಪಿಗ್ನಿ ಸಂಗ್ರಹಕರಾಗಿ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಕೂಟಿ ಮೇಲೆ ಮರ ಬಿದ್ದು‌ ಸ್ಕೂಟಿ ಸವಾರ ಸಾವು Read More »

(ಕವನ) ನವರಾಗ ನುಡಿಸು

ಅಂತರಂಗದ ಭಾವ     ವಿರಹದುರಿಯ ಬಂಧನದಿ ಸಿಲುಕಿ     ಮಿಡಿಯುತಿತ್ತು     ಬೇಗೆಯ  ಸೀಳಲು     ಎದೆಯ ಕತ್ತಲನಳಿಸಲು     ನಿನಗಾಗಿ  ತುಡಿಯುತಿತ್ತು .       ಹುಡುಕುತಿತ್ತು ಮನ      ದೀಪ ಹಚ್ಚುವ ಕೈಗಳ     ಮುಡಿ ಹರಡಿ ಮುನಿಸಿದೆ     ಅಮಾವಾಸ್ಯೆ ಕಡುಗತ್ತಲು      ಎದೆ ಸೀಳಿ ಬಗೆದರು      ಸ್ಫುರಣ  ಕಾಣಲೊಲ್ಲವು.       ಎತ್ತ ಸಾಗುತ್ತಿದೆ  ನನ್ನ  ಭವಿಷ್ಯ?     ಹಸುರು ಸೀರೆ ಮಾಸುತ್ತಿದೆ     ನಾರುವ ವಾಸನೆ     ಮುಗಿಲ ಮುಟ್ಟುತ್ತಿದೆ     ಒಮ್ಮೆ ನೀ ಬಂದು     ಬೆಳಕ ಸ್ಫುರಿಸು       ಎಲ್ಲಿ ಮರೆಯಾದೆ      ವರ್ಷದ ಬೆಳಕ ಹೊತ್ತು ?       ನೀ ಬರುವೆ

(ಕವನ) ನವರಾಗ ನುಡಿಸು Read More »

ಮಹಿಳೆಯರಿಗೆ ಮೆಸೆಜ್ ಮಾಡಿದ ಆರೋಪ : ಯುವಕನಿಗೆ ತಂಡದಿಂದ ಹಲ್ಲೆ

ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ತಂಡವೊಂದು ನಯಾಜ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.ಹಲ್ಲೆಗೊಳಗಾದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.ಸ್ಥಳೀಯ ನಿವಾಸಿ ರಜತ್ ಎಂಬಾತ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹಲ್ಲೆ ಮಾಡಿ , ಮಹಿಳೆಯರಿಗೆ ಮೆಸೇಜ್ ಮಾಡುವುದೇಕೆಂದು ತನ್ನನ್ನು ಪ್ರಶ್ನಿಸಿದ‌. ತಾನು ಮಹಿಳೆಯರಿಗೆ ಮೆಸೇಜ್ ಮಾಡಿಲ್ಲವೆಂದು ಹೇಳಿದರೂ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾಗಿಯೂ ನಯಾಜ್ ಆರೋಪಿಸಿದ್ದಾರೆ.

ಮಹಿಳೆಯರಿಗೆ ಮೆಸೆಜ್ ಮಾಡಿದ ಆರೋಪ : ಯುವಕನಿಗೆ ತಂಡದಿಂದ ಹಲ್ಲೆ Read More »

ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದುಗಳಾಗಿರಬೇಕು

ಹೈದರಾಬಾದ್: ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು, ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ವಿಆರ್‌ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು

ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದುಗಳಾಗಿರಬೇಕು Read More »

error: Content is protected !!
Scroll to Top