Author name: Tejas

ಕೇರಳ ಸಿ.ಎಂ.ಕಾರು ಸಹಿತ ವಾಹನಗಳ ಸರಣಿ ಅಪಘಾತ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ […]

ಕೇರಳ ಸಿ.ಎಂ.ಕಾರು ಸಹಿತ ವಾಹನಗಳ ಸರಣಿ ಅಪಘಾತ Read More »

ಕೋಟಿ ಕೋಟಿ ಆಸ್ತಿಗಾಗಿ ತನ್ನ ಮೂರನೇ ಪತಿಯನ್ನು ಕೊಂದು ಸುಟ್ಟು ಹಾಕಿದ ಪತ್ನಿ

ಹಣದ ವ್ಯಾಮೋಹಕ್ಕೆ ಒಳಗಾಗಿ ಪ್ರಿಯಕರನ ಜೊತೆ ಸೇರಿ ತನ್ನ ಮೂರನೇ ಪತಿಯನ್ನು ಭೀಕರವಾಗಿ ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ರಾಜ್ಯದಲ್ಲಿ ನಡೆದಿದೆ. ಹೈದರಾಬಾದಿನಲ್ಲಿ ಆತನನ್ನು ಕೊಂದು ಶವವನ್ನು ಕರ್ನಾಟಕದ ಕೊಡುಗು ಜಿಲ್ಲೆಯ ಸುಂಟಿಕೊಪ್ಪ ಪ್ರದೇಶಕ್ಕೆ ಕೊಂಡೊಯ್ದು ಅಲ್ಲಿನ ಕಾಫಿ ತೋಟದಲ್ಲಿ ಮೃತದೇಹವನ್ನು ಕತ್ತರಿಸಿ ಸುಟ್ಟು ಹಾಕಿದ್ದಾರೆ. ಮೃತನನ್ನು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ಕುಮಾರ್ ಹೆಸರಿನಲ್ಲಿದ್ದ 8 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸುವುದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿಗಳು ತನಿಖೆ ವೇಳೆ ಒಪ್ಪಿಕೊಂಡಿದ್ದಾರೆ. ಆರೋಪಿಯನ್ನು ನಿಹಾರಿಕಾ ಎಂದು

ಕೋಟಿ ಕೋಟಿ ಆಸ್ತಿಗಾಗಿ ತನ್ನ ಮೂರನೇ ಪತಿಯನ್ನು ಕೊಂದು ಸುಟ್ಟು ಹಾಕಿದ ಪತ್ನಿ Read More »

ನಾಳೆ ಪವರ್ ಕಟ್,ವಾರದಲ್ಲಿ ಎರಡು ದಿನ ಪವರ್ ಕಟ್ ಗೆ ವಿದ್ಯುತ್ ಬಳಕೆದಾರರ ಆಕ್ರೋಶ

ಸುಳ್ಯ:33 ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ಅ.29 ರಂದು ನಡೆಸುವುದರಿಂದ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:00 ಗಂಟೆವರೆಗೆ 33/11 ಕೆ.ವಿ ಕಾವು ಹಾಗೂಸುಳ್ಯ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದೀಗ ಕಳೆದ ಕೆಲವು ವಾರಗಳಲ್ಲಿ ವಾರದಲ್ಲಿ ಎರಡು ದಿನ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಇದರಿಂದ ಈ ಭಾಗದ ವಿದ್ಯುತ್ ಬಳಕೆದಾರರು ಆಕ್ರೋಶ

ನಾಳೆ ಪವರ್ ಕಟ್,ವಾರದಲ್ಲಿ ಎರಡು ದಿನ ಪವರ್ ಕಟ್ ಗೆ ವಿದ್ಯುತ್ ಬಳಕೆದಾರರ ಆಕ್ರೋಶ Read More »

ಅ.31ಕ್ಕೆ ಅರಂತೋಡು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸರಸ್ವತಿ ಅಡ್ತಲೆ ಸೇವಾ ನಿವೃತ್ತಿ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಕ್ರಿಯಾಶೀಲಾ ದೈಹಿಕ ಶಿಕ್ಷಣ ಶಿಕ್ಷಕಿ, ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಸರಸ್ವತಿ ಅಡ್ತಲೆ ಅವರು ತಮ್ಮ ಸುದೀರ್ಘ 39 ವರ್ಷ ನಾಲ್ಕು ತಿಂಗಳ ಶಿಕ್ಷಕ ವೃತ್ತಿ ಜೀವನದಿಂದ ಅ.31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಜಾಲ್ಲೂರು ಗ್ರಾಮದ ಕುತ್ಯಾಳ ದಿ. ಕೂಸಪ್ಪ ಗೌಡ ಹಾಗೂ ದಿ. ಶಾಂತಮ್ಮ ದಂಪತಿಯ ಪುತ್ರಿಯಾದ ಸರಸ್ವತಿ ಅವರು ತಮ್ಮ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಜಾಲ್ಲೂರು ಗ್ರಾಮದ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ

ಅ.31ಕ್ಕೆ ಅರಂತೋಡು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸರಸ್ವತಿ ಅಡ್ತಲೆ ಸೇವಾ ನಿವೃತ್ತಿ Read More »

ಕಾರಿನ ಟೈ‌ರ್ ಸಿಡಿದು ; 6 ಜನ ಸ್ಥಳದಲ್ಲೇ ಸಾವು

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಶಿಂಗನಮಲ ಮಂಡಲ ನಾಯನಪಲ್ಲಿ ಕ್ರಾಸ್‌ ಬಳಿ ಕಾರಿನ ಟೈರ್ ಸಿಡಿದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಭೀಕರ ಅಪಘಾತ ಸಂಭವಿಸಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್‌, ಷಣ್ಮುಖ, ವೆಂಕನ್ನ, ಶ್ರೀಧರ್, ಪ್ರಸನ್ನ ಹಾಗೂ ವೆಂಕಿ ಮೃತ ದುರ್ದೈವಿಗಳು. ಏಕಾಏಕಿ ಕಾರಿನ ಟೈರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ. ಮೃತರು ಅನಂತಪುರದ ಇಸ್ಕಾನ್ ಸಂಸ್ಥೆಗೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿನ ಟೈ‌ರ್ ಸಿಡಿದು ; 6 ಜನ ಸ್ಥಳದಲ್ಲೇ ಸಾವು Read More »

ಹೊತ್ತಿ ಉರಿದ ಪಟಾಕಿ ಅಂಗಡಿ,ಮಹಿಳೆ ಗಂಭೀರ

ದೀಪಾವಳಿ ಇನ್ನು ಕೆಲವೇ ದಿನಗಳಲ್ಲಿ ಆಗಮಿಸಲಿದೆ.ಎಲ್ಲೆಲ್ಲೂ ಈಗ ಪಟಾಕಿ ಅಂಗಡಿಗಳು ಸದ್ದು ಮಾಡುತ್ತಿವೆ.ಹೈದರಾಬಾದ್ ಸುಲ್ತಾನ್ ಬಜಾರ್‌ನ ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಪಟಾಕಿ ಬಾಂಬುಗಳಂತೆ ಸಿಡಿದಿದ್ದು, ಅಂಗಡಿಯೊಳಗಿದ್ದ 25ಕ್ಕೂ ಹೆಚ್ಚು ಮಂದಿ ಒಬ್ಬರ ಮೇಲೊಬ್ಬರು ಹತ್ತಿ ಹೊರಗೋಡಿ ಬಂದಿದ್ದಾರೆ. ಪಟಾಕಿ ಅಂಗಡಿಯ ಪಕ್ಕದಲ್ಲೇ ಇದ್ದ ಹೋಟೆಲ್ ಸಹ ಧಗಧಗಿಸಿದ್ದು, ಗ್ರಾಹಕರು ಹೊರಗೋಡಿ ಜೀವ ರಕ್ಷಸಿಕೊಂಡಿದ್ದಾರೆ. 8 ಕಾರುಗಳು, 10ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿವೆ. ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಅದೃಷ್ಟವಷಾತ್ ಪ್ರಾಣಾಪಾಯ ಸಂಭವಿಸಿಲ್ಲ.

ಹೊತ್ತಿ ಉರಿದ ಪಟಾಕಿ ಅಂಗಡಿ,ಮಹಿಳೆ ಗಂಭೀರ Read More »

ಅ.31ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವರ ಬಲಿ ಹೊರಡುವ ಕಾರ್ಯಕ್ರಮ

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ದೀಪಾವಳಿ ಅಮವಾಸ್ಯೆ ಪ್ರಯುಕ್ತ ದೇವರ ಬಲಿ ಹೊರಡುವ ಕಾರ್ಯಕ್ರಮ ಅ.31ರಂದು ನಡೆಯಲಿದೆ. ದೀಪಾವಳಿ ಅಮವಾಸ್ಯೆ ಪ್ರಯುಕ್ತ ರಾತ್ರಿ ಶ್ರೀ ದೇವರ ಬಲಿ ಹೊರಡಲಿದೆ ಎಂದು ದೇವಸ್ಥಾನದ ಕಚೇರಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಅ.31ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವರ ಬಲಿ ಹೊರಡುವ ಕಾರ್ಯಕ್ರಮ Read More »

ಸಾರ್ವಜನಿಕರ ಭೇಟಿಗೆ ನಾಳೆ ಶಾಸಕರು ಲಭ್ಯ

ಸುಳ್ಯ: ವಿಧಾನ ಪರಿಷತ್‌ ಉಪಚುನಾವಣೆಯ ನೀತಿಸಂಹಿತೆಯಿಂದ ಕೆಲವು ಸಮಯದಿಂದ ಸಾರ್ವಜನಿಕ ಭೇಟಿಗೆ ಲಭ್ಯರಿಲ್ಲದ ಶಾಸಕಿ ಭಾಗೀರಥಿ ಮುರುಳ್ಯ ಅವರು ಅ.28ರಿಂದ ಕಚೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುತ್ತಾರೆ. ಶಾಸಕರು ಪ್ರತಿ ಸೋಮವಾರ ಸುಳ್ಯ ತಾಲೂಕು ಪಂಚಾಯತ್ ಕಛೇರಿಯಲ್ಲಿ ಮತ್ತು ಪ್ರತಿ ಮಂಗಳವಾರ ಕಡಬ bತಾಲ್ಲೂಕು ಕಛೇರಿಯಲ್ಲಿ 10.30ರಿಂದ 2.30ರ ತನಕ ಲಭ್ಯರಿದ್ದಾರೆ ಎಂದು ಶಾಸಕರ ಕಛೇರಿಯ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕರ ಭೇಟಿಗೆ ನಾಳೆ ಶಾಸಕರು ಲಭ್ಯ Read More »

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ನಡೆಯುವ ಅರೆಭಾಷೆ ಗಡಿನಾಡ ಉತ್ಸವದ ಮೊದಲ ಕಾರ್ಯಕ್ರಮ ಅ.27 ರಂದು ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆಯಿತು.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ದೀಪ ಬೆಳಗಿಸಿ, ಹಿಂಗಾರ ಅರಳಿಸಿ ಉದ್ಘಾಟಿಸಿದರು. ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕುತ್ತಿಕೋಲು ಗ್ರಾ.ಪಂ.ಅಧ್ಯಕ್ಷ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ Read More »

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ.

2024- 25ರ ದಕ್ಷಿಣ ವಲಯ ಮಟ್ಟದ ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಚೆನ್ನೈ ಯಲ್ಲಿ ನಡೆಯಲಿದ್ದು ಅರಂತೋಡಿನ ಪ್ರಪುಲ್ ಯು. ಎಸ್. ಆಯ್ಕೆಯಾಗಿದ್ದಾರೆ.ಈತ ಕುಕ್ಕೆ ಸುಬ್ರಹ್ಮಣ್ಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿದ್ದ ಅರಂತೋಡಿನ ಉಳುವಾರು ದಿ. ಯು.ಡಿ. ಶೇಖರ್ ಹಾಗೂ ಉಪ್ಪಿನಂಗಡಿ ಗ್ರಾ.ಪಂ. ಕಾರ್ಯದರ್ಶಿ ಗೀತಾ ಶೇಖರ್ ದಂಪತಿಯ ಪುತ್ರ. ಪುತ್ತೂರಿನ ವಿವೇಕಾನಂದ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ವಿವೇಕಾನಂದ ಕಾಲೇಜನ್ನು ಪ್ರತಿನಿಧಿಸಲಿದ್ದಾರೆ.

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ. Read More »

error: Content is protected !!
Scroll to Top