Author name: Tejas

ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳನ್ನು ಮತ್ತೆ ಸೆರೆ ಹಿಡಿದ ಪೊಲೀಸರು

: ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಮತ್ತೆ ಸೆರೆ ಹಿಡಿದಿದ್ದಾರೆ.ಕೆಲ ದಿನಗಳ ಹಿಂದೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ ತಮಿಳುನಾಡು ಕಡೆಗೆ ತೆರಳಿದ್ದ ಸಂಶಯ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಆತನನ್ನು ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ ಪಡೆದು ಸುಳ್ಯಕ್ಕೆ ಕರೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳನ್ನು ಮತ್ತೆ ಸೆರೆ ಹಿಡಿದ ಪೊಲೀಸರು Read More »

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಮೊದಲ ಗಡಿನಾಡ ಉತ್ಸವ ಅ.27ರಂದು ಬಂದಡ್ಕದಲ್ಲಿ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರ ಬಂದಡ್ಕ ಬಳಿಯಿಂದ ಅದ್ದೂರಿ ಮೆರವಣಿಗೆ ನಡೆಯಲಿದೆ. ಮುಂಜಾನೆಯಿಂದ ಸಂಜೆವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುವುದು.

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ Read More »

ಜಾಂಡೀಸ್ ಗೆ ಯುವಕ ಬಲಿ

ಸುಳ್ಯ ನಗರದ ಹಳೆಗೇಟು ಹೊಸಗದ್ದೆ ನಿವಾಸಿ ಭವಾನಿಯವರ ಪುತ್ರ ರೋಷನ್ ರವರು ಜಾಂಡಿಸ್ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಎರಡು ವಾರಗಳ ಹಿಂದೆ ಜಾಂಡಿಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುರುವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಜಾಂಡೀಸ್ ಗೆ ಯುವಕ ಬಲಿ Read More »

ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಅ.24 ರಂದು ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಯವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋಹನ್.ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಸದಸ್ಯರಾದ ಮಾಧವ ಚಾಂತಾಳ, ಮೋಹಿನಿ ಕಟ್ಟ ಹಾಗೂ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು ಮತ್ತು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ

ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ Read More »

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ

ದೇಶಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲು ತಯಾರಿ ನಡೆಯುತ್ತಿದೆ.ಎಲ್ಲೆಲ್ಲೂ ಸಂಭ್ರಮ ಮನೆಮಾಡಿದೆ. ಹಿಂದುಗಳ ಅತಿದೊಡ್ಡ ಹಬ್ಬಕ್ಕೆ ಎಲ್ಲ ರೀತಿಯ ತಯಾರಿಗಳು ನಡೆಯುತ್ತಿವೆ. ದೇಶದೆಲ್ಲಡೆ ಬೆಳಕಿನ ಹಬ್ಬವನ್ನು ಬಹು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಗಳಿಗೆ ದೀಪಾವಳಿ ಹಬ್ಬದ ರಜೆಯನ್ನು ನೀಡಲಾಗಿದೆ. ನವೆಂಬ‌ರ್ ೧ ಶುಕ್ರವಾರ, ನವೆಂಬರ್ ೨ ಶನಿವಾರ, ಸೇರಿದಂತೆ ಒಟ್ಟು ಎರಡು ದಿನಗಳ ರಜೆಯನ್ನು ನೀಡಲಾಗಿದೆ. ನ.೩ ಭಾನುವಾರ ಆದ್ದರಿಂದ ೩ ದಿನಗಳ ರಜೆ ಲಭ್ಯವಾಗಲಿದೆ.

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ Read More »

ತೊಡಿಕಾನ : ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ನಷ್ಟ

ತೊಡಿಕಾನ ಸಮೀಪದ ಬಂಗಾರಕೋಡಿ ಎಂಬಲ್ಲಿ‌ ಇಲ್ಲಿಯ ತೋಟವೊಂದಕ್ಕೆ ಕಾಡಾನೆಗಳು ದಾಳಿ ನಡೆಸಿ ಅಪಾರ ಕ್ರಷಿ ಬೆಳೆಗಳನ್ನು ನಾಶ ಪಡಿಸಿದ ಘಟನೆ ವರದಿಯಾಗಿದೆ.ಇಲ್ಲಿಯ ವಿದ್ಯಾ ಅವರ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು 10 ಅಡಿಕೆ,ಎರಡು ಬಾಳೆ ಮರ,ಒಂದು ಜೀಕುಜ್ಜೆ ಮರಗಳನ್ನು ಮುರಿದು ಹಾಕಿವೆ.ಅಲ್ಲದೆ ಒಂದು‌ ತೆಂಗಿನ ಮರಕ್ಕೆ ಹಾನಿ ಮಾಡಿವೆ ಎಂದು ತಿಳಿದು ಬಂದಿದೆ.ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಒದಗಿಸಿ ಕೊಡುವ ಭರವಸೆ ನೀಡಿದ್ದಾರೆ.

ತೊಡಿಕಾನ : ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ನಷ್ಟ Read More »

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು

ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.ಕಿಶೋರ್ ಕುಮಾರ್ ರಿಗೆ 3654 ಮತಗಳು, ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1957 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್ (ಪಕ್ಷೇತರ)-9 ಮತ, ಅಸಿಂಧು-87 ಮತ ಎಂದು ತಿಳಿದುಬಂದಿದೆ. ಬಿ.ಜೆ.ಪಿ.ಯ ಕಿಶೋರ್ ಕುಮಾರ್ 1697 ಮತಗಳ ಲೀಡ್ ಪಡೆದು ವಿಜಯಶಾಲಿಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು Read More »

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ತನ್ನ ಸ್ಕೂಟಿಯಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್

ಮಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಘಟನೆ ವರದಿಯಾಗಿದೆ.ಬುಧವಾರದಂದು ಮುಂಜಾನೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನ‌ರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್‌ ಕಾನ್ಸೆಬಲ್ ಮನ್ಶಿದಾ ಬಾನು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ತನ್ನ ಸ್ಕೂಟಿಯಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ Read More »

ಉಪಚುನಾವಣೆ: ಚನ್ನಪಟ್ಟಣ, ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಮುಂದಿನ ನವೆಂಬರ್ 13ರಂದು ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನ ಘೋಷಿಸಿದೆ. ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್ ಅವರಿಗೆ ಕಾಂಗ್ರೆಸ್‌ ಚನ್ನಪಟ್ಟಣದಿಂದ ಸ್ಪರ್ಧಿಸಲು ಟಿಕೆಟ್ ನೀಡಿದೆ. ಸಂಡೂರು ವಿಧಾನಸಭಾ ಉಪಚುನಾವಣೆಗೆ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಗೊಂದಲ ಬಗೆಹರಿದಿಲ್ಲ.ಈ ಕಾರಣದಿಂದ ಈ ಕ್ಷೇತ್ರಕ್ಕೆ ಇನ್ನಷ್ಟೆ ಅಭ್ಯರ್ಥಿಗಳನ್ನು ಘೋಷಿಸಬೇಕಾಗಿದೆ.

ಉಪಚುನಾವಣೆ: ಚನ್ನಪಟ್ಟಣ, ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ Read More »

ಸುಳ್ಯದ 108 ಆಂಬ್ಯುಲೆನ್ಸ್ ವಾಹನ ನಿಲ್ಲಿಸಲು ಸ್ಥಳವಾಕಾಶದ ಕೊರತೆ : ಆರೋಗ್ಯ ಸಚಿವರಿಗೆ ಮನವಿ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ವಾಹನ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತಿದ್ದಾರೆಂದು 108 ವಾಹನ ಸಿಬ್ಬಂದಿಗಳು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಅಂಬುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಆದರೆ ಕಳೆದ ಕೆಲವು ವರ್ಷಗಳಿಂದ ಈ 108 ಆಂಬುಲೆನ್ಸ್ ನಿಲುಗಡೆಗೆ ತಾತ್ಕಾಲಿಕ ಶೆಡ್ ಒಂದನ್ನು ನಿರ್ಮಾಣ ಮಾಡಲಾಗಿದೆ. ಅದರಲ್ಲಿಯೂ ಆಗಾಗ ಅಂಬುಲೆನ್ಸ್ ಅನ್ನು ಆ ಶೆಡ್ ನಲ್ಲಿ ನಿಲ್ಲಿಸಬಾರದೆಂದು ಆಸ್ಪತ್ರೆಯ

ಸುಳ್ಯದ 108 ಆಂಬ್ಯುಲೆನ್ಸ್ ವಾಹನ ನಿಲ್ಲಿಸಲು ಸ್ಥಳವಾಕಾಶದ ಕೊರತೆ : ಆರೋಗ್ಯ ಸಚಿವರಿಗೆ ಮನವಿ Read More »

error: Content is protected !!
Scroll to Top