Author name: Tejas

ಮನೆಯ ಬಾಗಿಲ ಬೀಗ ಮುರಿದು ರೂ.12 ಲಕ್ಷ 28 ಪವನ್ ಚಿನ್ನ ಕಳವು

ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರ ಮನೆಯಿಂದ ರೂ. 12 ಲಕ್ಷ ಮತ್ತು ಅಂದಾಜು 28 ಪವನ್ ಚಿನ್ನ ಕಳ್ಳತನವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಅಕ್ಕೇಣಿ ಸುಂದರ ಗೌಡರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆ ಪೆರಿಗೇರಿಗೆ ಹೋಗಿದ್ದರು. ಇಂದು ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ನೋಡಿದಾಗ ರೂ. 12 […]

ಮನೆಯ ಬಾಗಿಲ ಬೀಗ ಮುರಿದು ರೂ.12 ಲಕ್ಷ 28 ಪವನ್ ಚಿನ್ನ ಕಳವು Read More »

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ

ಕುಕ್ಕೆ ಸುಬ್ರಹ್ಮಣ್ಯದ ಪರಿಸರದಲ್ಲಿ ಭಾನುವಾರ ಭಾರೀ ಸುರಿದಿರುವ ಬಗ್ಗೆ ವರದಿಯಾಗಿದೆ.ಮಳೆ ನೀರು ತುಂಬಿ ಹರಿದಿದ ಪರಿಣಾಮ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಹೊರ ಭಾಗಕ್ಕೆ ನೀರು ಆವರಿಸಿದೆ. ಆದಿ ಸುಬ್ರಹ್ಮಣ್ಯ ದ ಕೆಲ ಅಂಗಡಿಗೆ ನೀರು ನುಗ್ಗಿರುವುದಾಗಿ ತಿಳಿದು ಬಂದಿದೆ. ಸುತ್ತಮುತ್ತಲಿನ ತೋಟಕ್ಕೂ ನೀರು ನುಗ್ಗಿ ಹಾನಿ ಉಂಟಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ Read More »

ಅರಂತೋಡು : ಅರಮನೆಗಯ ಶಿಥಿಲಗೊಂಡು ಬಿದ್ದಿರು‌ವ ತೂಗುಸೇತುವೆ ತಕ್ಷಣ ದುರಸ್ತಿ ಮಾಡಿ,ಬಳಿಕ ಶಾಶ್ವತ ಸೇತುವೆ ನಿರ್ಮಾಣ ಮಾಡಲು ಮನವಿ

ಅರಂತೋಡು, ಅ.19 : ಅರಂತೋಡು ಗ್ರಾಮ ಪ೦ಚಾಯತ್ ವ್ಯಾಪ್ತಿಯ ಬಲ್ನಾಡ್ ಹೊಳೆಯ ಅರಮನೆಗಯ ಎಂಬಲ್ಲಿ ಶಿಥಿಲಗೊಂಡ ಸೇತುವೆ ಸಹಿತ ಮೂವರು ಹೊಳೆಗೆ ಬಿದ್ದು ಗಾಯಗೊಂಡಿದ್ದು ಈ ಹೊಳೆಗೆ ಶಾಶ್ವತ ಸೇತುವೆ ನಿರ್ಮಿಸಿ ಕೊಡಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಸುಳ್ಯ ತಹಶೀಲ್ದಾರ ಮುಖಾಂತರ ಮನವಿ ಸಲ್ಲಿಸಲಾಗಿದೆ.ಅರಂತೋಡು ಗ್ರಾಮದ ಅರಮನೆಗಯ ಎಂಬಲ್ಲಿ ‘ಹಲವು ವರ್ಷಗಳಿಂದ ಇದ್ದಂತ ತೂಗುಸೇತುವೆ ಈ ಮೊದಲು 30 ವರುಷಗಳಿಂದ ಸಂಬಂಧಪಟ್ಟ ಶಾಸಕರಿಗೆ ಮತ್ತು ಸಂಬಂಧಪಟ್ಟ ಎಲ್ಲಾ ಅಧಿಕಾರಿ ವರ್ಗದವರಿಗೂ ಶಾಶ್ವತವಾಗಿ ಇಲ್ಲಿಗೆ ಹೊಸ ಸೇತುವೆ

ಅರಂತೋಡು : ಅರಮನೆಗಯ ಶಿಥಿಲಗೊಂಡು ಬಿದ್ದಿರು‌ವ ತೂಗುಸೇತುವೆ ತಕ್ಷಣ ದುರಸ್ತಿ ಮಾಡಿ,ಬಳಿಕ ಶಾಶ್ವತ ಸೇತುವೆ ನಿರ್ಮಾಣ ಮಾಡಲು ಮನವಿ Read More »

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಕೊಡಗು ಸಂಪಾಜೆ ಗ್ರಾಮದ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಇಂದು ಘೋಷಿಸಿ ಆದೇಶ ಹೊರಡಿಸಿದೆ.ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿಸಿ ಬಳಿಕ ಹೊಡೆದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ಕು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು

ಪೆರಾಜೆ : ಪೆರಾಜೆಯ ಬಂಗಾರ ಕೋಡಿಯಿಂದ ಮಡಿಕೇರಿಗೆ ಸಂಚರಿಸುತ್ತಿದ್ದ ಖಾಸಗಿ ಅಟೋ ರಿಕ್ಷಾಕ್ಕೆ ಜೋಡುಪಾಲದಲ್ಲಿ ವಿರುದ್ದ ದಿಕ್ಕಿನಲ್ಲಿ ಬಂದ ಲಾರಿಯೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಕುಟುಂಬ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಬಂಗಾರಕೋಡಿಯ ಲೋಹಿತ್ ಅವರುಕುಟುಂಬ ಸಮೇತರಾಗಿ ಮಡಿಕೇರಿಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಲೋಹಿತ್ ಅವರಿಗೆ ಮತ್ತು ಅವರ ಪತ್ನಿಗೆ ಗಾಯವಾಗಿದ್ದು ಮಡಿಕೇರಿ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮಕ್ಕಳು ಚಿಕ್ಕ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು

ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ಕು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು Read More »

ಮಗನ ಹುಟ್ಟು ಹಬ್ಬಕ್ಕೆ ಕಡೆವೆ ಬೇಟೆ : ಪ್ರಕರಣ ದಾಖಲು

: ಉಪ್ಪಿನಂಗಡಿ : ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಮನೆಯ ಪ್ರಿಝರ್ ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿನ ನಿವಾಸಿ ಸುರೇಶ್ ಮತ್ತವರ ಸಹವರ್ತಿ ಜೊತೆಗೂಡಿ ಸರಕಾರಿ ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಹಾಗೂ ಮಗನ ಹುಟ್ಟು ಹಬ್ಬದ ಔತಣಕೂಟಕ್ಕೆಂದು ಕಡವೆ ಮಾಂಸವನ್ನು ಮನೆಯ ಪ್ರೀಝರ್ ನಲ್ಲಿರಿಸಲಾಗಿತ್ತು. ಈ ಬಗ್ಗೆ ಮಾಹಿತಿ

ಮಗನ ಹುಟ್ಟು ಹಬ್ಬಕ್ಕೆ ಕಡೆವೆ ಬೇಟೆ : ಪ್ರಕರಣ ದಾಖಲು Read More »

ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ

ಕಡಬ : ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಹೊಟ್ಟೆನೋವಿನಿಂದ ಬಳುತ್ತಿದ್ದ ವ್ಯಕ್ತಿಯೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಐತ್ತೂರು ಗ್ರಾಮದ ಬೆತ್ತೋಡಿ ನಿವಾಸಿ ಪರಮಶಿವಂ (65) ಮೃತಪಟ್ಟವರು.ಕೃಷಿ ಕೆಲಸ ಮಾಡಿಕೊಂಡಿದ್ದ ಇವರು ಇತ್ತೀಚೆಗೆ ಹೊಟ್ಟೆನೋವಿನಿಂದ ಬಳಲುತ್ತಿದ್ದು ಮಾನಸಿಕವಾಗಿ ನೊಂದು ಅ.12ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು.ಮನೆ ಮಂದಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದರು. ಬಳಿಕ ವೆಸ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ

ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ Read More »

ಇಂದು ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ

ಸುಳ್ಯ :ಇಂದು (ಶನಿವಾರ) ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, =ಬಳೆ, ಡಿಪ್ರೊ, ತೋಡಿಕಾನ, ಕೊಲ್ದಾರ್, ದೇವರಗುಂಡ, ಅಜ್ಞಾವಾರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.

ಇಂದು ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ Read More »

(ಕವನ) ಮನ ಬಯಸಿದೆ…..?!!

ಮನ ಬಯಸುತ್ತಿದೆ ಮತ್ತದೇ ಮಗುವಾಗಲುಎಲ್ಲ ನೋವುಗಳ ಮೀರಿ ಮನಬಿಚ್ಚಿ ನಗಲುಮತ್ತೊಮ್ಮೆ ನಾ ತೊದಲು ನುಡಿಯಲುಮಗದೊಮ್ಮೆ ನಾ ಬಿದ್ದು ಎದ್ದು ನಡೆಯಲು ಮನ ಬಯಸಿದೆ ಮತ್ತದೇ ಮಡಿಲನಿಂದುಸಂಬಂಧ ಸುಳಿಗಳಿಂದ ದೂರ ಸರಿದುತನ್ನದೇ ಲೋಕದಲ್ಲಿ ಮುಳುಗಿ ಬಂದುನಗುವಿನ ಮೋಹಕತೆಯ ಮೇಲೆ ಮಿಂದೇಳಲು ಮನ ಸಾರಿ ಸಾರಿ ಹೇಳುತ್ತಿದೆ ಕಂದಮ್ಮನಾಗಲುನೋವು ನಲಿವಿನ ವ್ಯತ್ಯಾಸ ತಿಳಿಯದೆಹಾವ-ಭಾವಗಳ ನಡುವೆ ವಿಚಲಿತನಾಗದೆಮೂಕ ಜೀವಿಗಳ ಹಾಗೆ ಮುಗ್ಧತೆಯಲಿ ಮುಳುಗಲು ಮತ್ತೆ ಮನ ಬಯಸಿದೆ ಪುಟಾಣಿಯಾಗಲುಸ್ನೇಹ ಭಾವಗಳ ಅರಿವಿಲ್ಲದೆ ಬದುಕಲುಯಾವುದರ ಚಿಂತೆಯಿಲ್ಲದೆ ಸುಖವಾಗಿರಲುತೊಟ್ಟಿಲಿನ ನಡುವಲ್ಲಿ ಅಮ್ಮನ ಕಂಗಳ ನೋಡುತ

(ಕವನ) ಮನ ಬಯಸಿದೆ…..?!! Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಸಾವು

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರಿಗೆ 49 ವರ್ಷ ಪ್ರಾಯವಾಗಿತ್ತು. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕ‌ರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಶುಕ್ರವಾರ ಬೆಳಗ್ಗೆ ನಿಧನರಾದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಸಾವು Read More »

error: Content is protected !!
Scroll to Top