Author name: Tejas

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಾರ್ಷಿಕೋತ್ಸವ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು.ಈ ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಈಜಿ ಆಯುರ್ವೇದ ಹಾಸ್ಪಿಟಲ್ ಮಂಗಳೂರು ಇದರ ಮುಖ್ಯ ವೈದ್ಯಕೀಯ ಅಧಿಕಾರಿಯಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.ಕಾರ್ಯಕ್ರಮದ ವೇದಿಕೆಯಲ್ಲಿ ಎ ಒ ಎಲ್ ಇ (ರಿ.) ಇದರ ಕಾರ್ಯದರ್ಶಿಗಳಾದ ಶ್ರೀ. ಹೇಮನಾಥ ಕೆ ವಿ, ಕೌನ್ಸಿಲ್ […]

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಾರ್ಷಿಕೋತ್ಸವ ಸಮಾರಂಭ Read More »

ಪತಿಯಿಂದ ಪತ್ನಿಯ ಕೊಲೆ

ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ಎಸಿ ರಿಪೇರಿ ವೃತ್ತಿ ಮಾಡುವ ಯೂಸುಫ್ s/o ಅಬ್ದುಲ್ ರವೂಫ್, ಎನ್ನುವ ವ್ಯಕ್ತಿ ತನ್ನ ಹೆಂಡತಿ ರುಕ್ಸಾನಾ ಎಂಬಾಕೆಯನ್ನು ತನ್ನ ಮನೆಯಲ್ಲಿ ಕೊಲೆ ಮಾಡಿದ್ದು ಈ ಪ್ರಕರಣದಲ್ಲಿ ವೈಯಕ್ತಿಕ ಜಗಳ ಅನೈತಿಕ ಸಂಬಂಧದ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು ತುಂಗಾನಗರ ಪೊಲೀಸರ ವಶದಲ್ಲಿರುವ ಆರೋಪಿಯ ವಿಚಾರಣೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ.

ಪತಿಯಿಂದ ಪತ್ನಿಯ ಕೊಲೆ Read More »

ಬಜಪ್ಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಬಜಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೇರಾಲ್ ಬಜಪ್ಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಬಜಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಶ್ರದ್ದಾ ಭಕ್ತಿಯಿಂದ ಡಿ.೨೨ರಂದು ಬೆಳಗ್ಗೆ 10-23 ರ ಕುಂಭ ಲಗ್ನ ಸುಮೂಹೂರ್ತದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಬಜಪ್ಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಬಜಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ Read More »

ಸಂಪಾಜೆ : ಪ್ರಯಾಣಿಕ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

ಪುತ್ತೂರು ತಾಲೂಕಿನ ಮುಂಡೂರು ನಿವಾಸಿ ಮೋಹನ್ ನಾಯ್ಕ (51) ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು.ಮೋಹನ್ ನಾಯ್ಕ ರವರು ಮನೆಯವರೊಂದಿಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಸಂಪಾಜೆ ಘಾಟ್ ಬಳಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ಮೃತರು ಪತ್ನಿ ಕೊಡಿನೀರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಪುಷ್ಪ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸಂಪಾಜೆ : ಪ್ರಯಾಣಿಕ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ Read More »

ಕುಕ್ಕೇಟಿ ಜತ್ತಪ್ಪ ಗೌಡ ನಿಧನ

ಎಂ. ಚೆಂಬು ಗ್ರಾಮದ ಕುಕ್ಕೇಟಿ ಜತ್ತಪ್ಪ (68) ಅವರು ಡಿ. 22ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಪತ್ನಿ ಪುಷ್ಪಾವತಿ ಮಕ್ಕಳಾದ ವನಿತಾ, ಪ್ರಸಾದ್‌, ಕಿಶೋ‌ರ್, ಭವಾನಿ ಶಂಕ‌ರ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ

ಕುಕ್ಕೇಟಿ ಜತ್ತಪ್ಪ ಗೌಡ ನಿಧನ Read More »

ಸಂಪಾಜೆ ಮದುವೆ ಮನೆಯಲ್ಲಿ ಮಾದರಿ ಕಾರ್ಯ, ಕೆರೆಮೂಲೆ ಕುಟುಂಬದ ರಾಜ್ಯಮಟ್ಟದ ಪ್ರತಿಭೆ ಶಮ್ಮಾಸ್ ಗೆ ಸನ್ಮಾನ

ಸಂಪಾಜೆಯಲ್ಲಿ ನಡೆದ ಅನಸ್ ಹಸೈನಾರ್ ರವರ ಮದುವೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕಲೋತ್ಸವದಲ್ಲಿ ಇಂಗ್ಲೀಷ್ ಮತ್ತು ಮಲಯಾಳಂ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕೆರೆಮೂಲೆ ಹನೀಫ್ ರವರ ಸುಪುತ್ರ ಸುಳ್ಯ ಅನ್ಸಾರಿಯ ಎಜ್ಯುಕೇಶನ್ ಸೆಂಟರ್ ನ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಸ್ ರವರನ್ನು ಕೆರೆಮೂಲೆ ಕುಟುಂಬಸ್ಥರ ಪರವಾಗಿ ಹಿರಿಯರಾದ ಹಾಜಿ ಅಬ್ದುಲ್ ಖಾದರ್ ಕೆರೆಮೂಲೆ ಶಾಲು ಹೊದಿಸಿ ಸನ್ಮಾಸಿದರು.ಈ ಸಂದರ್ಭದಲ್ಲಿ ಮೀಫ್ ಉಪಾಧ್ಯಕ್ಷ ಕೆ ಎಂ ಮುಸ್ತಾಫ ಮಾತನಾಡಿ ಕುಟುಂಬದ ಸಮ್ಮುಖದಲ್ಲಿ ಪ್ರತಿಭೆಯನ್ನು ಗುರುತಿಸಿದಾಗ ಇತರ

ಸಂಪಾಜೆ ಮದುವೆ ಮನೆಯಲ್ಲಿ ಮಾದರಿ ಕಾರ್ಯ, ಕೆರೆಮೂಲೆ ಕುಟುಂಬದ ರಾಜ್ಯಮಟ್ಟದ ಪ್ರತಿಭೆ ಶಮ್ಮಾಸ್ ಗೆ ಸನ್ಮಾನ Read More »

ಕೊಬ್ಬರಿ ಬೆಲೆಯಲ್ಲಿ ಹೆಚ್ಚಳ..!ಕೇಂದ್ರ ಸರಕಾರದಿಂದ ಗುಡ್ ನ್ಯೂಸ್

ತೆಂಗಿನ ಕಾಯಿ ಧಾರಣೆಯಲ್ಲಿ ಈಗ ಸ್ವಲ್ಪ ಮಟ್ಟಿಗೆ ಹೆಚ್ಚಳವಾಗಿದೆ.ಇದರಿಂದ ತೆಂಗು ಬೆಳಗಾರರು ನಿಟ್ಟುಸಿರು ಬಿಟ್ಟಿದ್ದಾರೆ.ಕೇಂದ್ರ ಸರ್ಕಾರ ತೆಂಗು ಬೆಳೆಗಾರರಿಗೆ ದೊಡ್ಡ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಕೊಬ್ಬರಿಯ ಕನಿಷ್ಠ ಬೆಲೆಯನ್ನು ಹೆಚ್ಚಿಸಲು ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಸಭೆಯ ಬಳಿಕ ಈ ಸಂಬಂಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ ಗೆ 100 ರೂಪಾಯಿ ಹಾಗೂ ಹೋಳಾದ ಕೊಬ್ಬರಿಗೆ 422 ರೂಪಾಯಿ ಹೆಚ್ಚಿಸಲಾಗಿದೆ. ಕೊಬ್ಬರಿಗೆ ಬೆಂಬಲ ಬೆಲೆ

ಕೊಬ್ಬರಿ ಬೆಲೆಯಲ್ಲಿ ಹೆಚ್ಚಳ..!ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ Read More »

ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿಯೇ ಅತಿ ಹೆಚ್ಚು ಸಾವು ಸಂಭವಿಸುವುದು ಹೌದ?

ಪ್ರತಿ ವರ್ಷ ಡಿಸೆಂಬರ್ನಲ್ಲಿಯೇ ಅತೀಹೆಚ್ಚು ಸಾವು ನೋವುಗಳು ಸಂಭವಿಸುತ್ತವೆಯಂತೆ… ಹೌದ ?ವಿಶೇಷವಾಗಿ ವರ್ಷದ ಕೊನೆಯ 3-4 ದಿನಗಳಲ್ಲಿ ರಾಷ್ಟ್ರದ/ರಾಜ್ಯದ ನಾಯಕರ ಹೆಚ್ಚು ನಿಧನಗಳನ್ನು ನೋಡುತ್ತೇವೆಯಂತೆ. ಈಗಾಗಲೇ ಅನೇಕ ಗಣ್ಯರು, ಎಸ್.ಎಂ.ಕೃಷ್ಣ, ಜಾಕೀರ್ ಹುಸೇನ್, ಪದ್ಮಶ್ರೀ ತುಳಸಿಗೌಡ, ನಟಿ ಶೋಭಿತಾ, ಐಪಿಎಸ್ ಅಧಿಕಾರಿ ಹರ್ಷವರ್ಧನ ಮುಂತಾದವರ ನಿಧನವಾಗಿದೆ. ಡಿಸೆಂಬರ್ ತಿಂಗಳಲ್ಲಿ ಅತೀಹೆಚ್ಚು ಚಳಿ ಇರುವುದರಿಂದ ಅತೀ ಹಿರಿಯರಿಗೆ ಮತ್ತು ಅತೀ ಕಿರಿಯ ಜೀವಗಳಿಗೆ ದೈಹಿಕ ತೊಂದರೆ ಮತ್ತು ಹೃದಯಾಘಾತ ಹೆಚ್ಚು. ಅತೀ ಹೆಚ್ಚು ಪ್ರವಾಸ ಕೈಗೊಳ್ಳುವ ತಿಂಗಳಾಗಿದೆ. ಈ

ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿಯೇ ಅತಿ ಹೆಚ್ಚು ಸಾವು ಸಂಭವಿಸುವುದು ಹೌದ? Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕ್ರೀಡಾಕೂಟಕ್ಕೆ ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ.ಎಂ.ಸಿ ಅಧ್ಯಕ್ಷ ಸಿ ಹೆಚ್ ಅಬ್ದುಲ್ ಖಾದರ್ ವಹಿಸಿದರು.ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ಇದ್ದರು. ಕ್ರೀಡಾ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಬೋಧಿಸಿದರು. ಶಿಕ್ಷಕ ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಶಿಕ್ಷಕಿ ಸವಿತಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಮೀನ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ Read More »

ಅಂಗವಾಡಿ ಕಾರ್ಯಕರ್ತೆ ಹರಿಣಿ ನಿಧನ

ಪೆರಾಜೆ ಗ್ರಾಮದ ಅಮೆಚೂರು ಅಂಗನವಾಡಿ ಕಾರ್ಯಕರ್ತೆಹರಿಣಿ ಶನಿವಾರ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 46 ವರ್ಷ ಪ್ರಾಯವಾಗಿತ್ತು.ಕಳೆದ 12 ವರ್ಷಗಳಿಂದ ಅಮೆಚೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಅವರು ಸೇವೆ ಸಲ್ಲಿಸಿದ್ದರು. ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು.ಮೃತರು ಪತಿ,ಪುತ್ರ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

ಅಂಗವಾಡಿ ಕಾರ್ಯಕರ್ತೆ ಹರಿಣಿ ನಿಧನ Read More »

error: Content is protected !!
Scroll to Top