Author name: Tejas

ಅಡ್ಕಾರು : ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಬಗ್ಗೆ ನಿಧಿ ಸಂಕಲ್ಪ ಸಭೆ

ಜಾಲ್ಲೂರು : ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಬಗ್ಗೆ ನಿಧಿ ಸಂಕಲ್ಪ ಸಭೆಯು ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ಕುಂಟರು ರವೀಶ ತಂತ್ರಿಗಳ ಉಪಸ್ಥಿತಿಯಲ್ಲಿ ಜರುಗಿತು.ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ ಅವರು ಅಧ್ಯಕ್ಷತೆ ವಹಿಸಿದ್ದರು.ದೇವಸ್ಥಾನದ ಪರಿವಾರ ಸಾನಿಧ್ಯಗಳಾದ ಕಳರಿ ಶ್ರೀ ಧೂಮಾವತಿ ದೈವಸ್ಥಾನ ಮತ್ತು ಶ್ರೀ ವಯನಾಟ್ ಕುಲವನ್ ಮಹಾವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಬಾಕಿ ಉಳಿದಿದ್ದು, ಮುಂದಿನ ಒಂದು ವರ್ಷದೊಳಗೆ ಪೂರ್ತಿಗೊಳಿಸುವುದೆಂದು ತೀರ್ಮಾನ ಕೈಗೊಳ್ಳಲಾಯಿತು.ಈ ಸಂದರ್ಭದಲ್ಲಿ ಜೀರ್ಣೋದ್ದಾರ […]

ಅಡ್ಕಾರು : ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಬಗ್ಗೆ ನಿಧಿ ಸಂಕಲ್ಪ ಸಭೆ Read More »

ಕಲಾವಿದ ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ ಪ್ರದಾನ

ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಪೆರ್ಲoಪಾಡಿಯಲ್ಲಿ ಶ್ರೀಗಣೇಶೋತ್ಸವದ ಆಚರಣೆಯಲ್ಲಿ ಜರುಗಿದ ಅದ್ದೂರಿ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಸುಳ್ಯದ ಸಾಹಿತಿ, ಜ್ಯೋತಿಷಿ, ಕಲಾವಿದರಾದ ಶ್ರೀ ಎಚ್. ಭೀಮರಾವ್ ವಾಷ್ಠರ್ ಇವರ ವಿವಿಧ ಸಾಧನೆಗಳನ್ನು ಪರಿಗಣಿಸಿ 2024 ನೇ ಸಾಲಿನ ಕಲಾ ರತ್ನ ಪ್ರಶಸ್ತಿ ನೀಡಿ ಸಮ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಸಂಗೀತ ರಸಮಂಜರಿಯಲ್ಲಿ ಭೀಮರಾವ್ ವಾಷ್ಠರ್ ಸುಳ್ಯ ಅವರು ಅನೇಕ ಗೀತೆಗಳನ್ನು ಹಾಡಿ ಮನರಂಜಿಸಿದ್ದಾರೆ. ವೇದಿಕೆಯಲ್ಲಿ ಆರ್ ಪಿ ಕಲಾ ಸೇವಾ

ಕಲಾವಿದ ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ ಪ್ರದಾನ Read More »

ಸಂಸ್ಕೃತಿಯುತ,ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ: ಡಾ. ಅನುರಾಧ ಕುರುಂಜಿ

ಜಾಲ್ಸೂರು : ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸಂಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ

ಸಂಸ್ಕೃತಿಯುತ,ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ: ಡಾ. ಅನುರಾಧ ಕುರುಂಜಿ Read More »

ಕಾಣಿಕೆ ಡಬ್ಬಿಯಿಂದ ಹಣ ಕಳವು

ಕಾಣಿಯೂರು : ಇಲ್ಲಿಯ ಶ್ರೀ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯಿಂದ ನಗದು ಕದ್ದೊಯ್ದ ಘಟನೆ ಸೆ 21ರ ರಾತ್ರಿ ನಡೆದಿದೆ. ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಬದಿಯಲ್ಲಿರುವ ಕ್ಷೇತ್ರದ ಹೊರಾಂಗಣದಲ್ಲಿರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ಳಾರೆ ಠಾಣಾಧಿಕಾರಿ ಡಿ.ಎನ್‌. ಈರಯ್ಯ ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಈ ಹಿಂದೆ ಕಾಣಿಯೂರಿನಲ್ಲಿ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನವಾಗಿತ್ತು. ತೆಂಗಿನಕಾಯಿ ಮಾರಾಟ ಅಂಗಡಿ ಯಿಂದ ಹಾಡಹಗಲೇ ಹಣ ಕಳ್ಳತನ ಸೇರಿದಂತೆ ಹಲವಾರು ಕಳ್ಳತನ ಪ್ರಕರಣ ನಡೆದರೂ, ಈವರೆಗೂ

ಕಾಣಿಕೆ ಡಬ್ಬಿಯಿಂದ ಹಣ ಕಳವು Read More »

ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ,ಗೋಮಾಂಸ ವಶ,ಆರೋಪಿಗಳು ಪರಾರಿ

ಉಪ್ಪಿನಂಗಡಿ: ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿಂದ ವರದಿಯಾಗಿದೆ.ಇಲ್ಲಿಯ ಖತೀಜಮ್ಮ ಎಂಬವರ ಅಡಿಕೆ ತೋಟಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿ ಅಂದಾಜು ರೂ 24,000/-ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು,

ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ,ಗೋಮಾಂಸ ವಶ,ಆರೋಪಿಗಳು ಪರಾರಿ Read More »

ಉದ್ಯಮಿಯ ಬರ್ಬರ ಕೊಲೆ,ಪತ್ನಿಯನ್ನು ಗಂಭೀರ ಗಾಯಗೊಳಿಸಿದ ದುಷ್ಕರ್ಮಿಗಳು

ಕಾರವಾರ : ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ಅವರ ಪತ್ನಿಯನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ(52) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.ಅವರ ಪತ್ನಿ ವೈಶಾಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದು. ಅವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದರು ಎಂದು ತಿಳಿದು ಬಂದಿದೆ.ಚಿತಾಕುಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉದ್ಯಮಿಯ ಬರ್ಬರ ಕೊಲೆ,ಪತ್ನಿಯನ್ನು ಗಂಭೀರ ಗಾಯಗೊಳಿಸಿದ ದುಷ್ಕರ್ಮಿಗಳು Read More »

ಯುವಕ ಅಸೌಖ್ಯದಿಂದ ನಿಧನ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ದೇವರಾಜ ಪೂಜಾರಿಮನೆಯವರ ಪುತ್ರ ವಿನೋದ್‌ರವರು ಇಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು.ಅವಿವಾಹಿತರಾಗಿದ್ದ ಇವರು ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಯುವಕ ಅಸೌಖ್ಯದಿಂದ ನಿಧನ Read More »

ಕಾರು ಸ್ಕೂಟರ್ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು

ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಸೆ.21 ರಂದು ರಾತ್ರಿ ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸ್ಕೂಟರ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯಗೊಂಡರು.ಗಂಭೀರ ಗಾಯಗೊಂಡಿರುವ ಸ್ಕೂಟರ್ ಸವಾರ ಹೋಳಿಗೆ ವ್ಯಾಪಾರಿ, ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಗಣೇಶ್‌ ಪ್ರಭು ಅವರನ್ನು ಪುತ್ತೂರು ಸರ್ಕಾರಿ

ಕಾರು ಸ್ಕೂಟರ್ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು Read More »

ಯುವತಿಯನ್ನ ಪೀಸ್ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಪಾಪಿ!

ಯುವತಿಯೋರ್ವಳನ್ನು ಭೀಕರವಾಗಿ ಕೊಂದು ಮೃತದೇಹ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪೈಪ್‌ಲೈನ್‌ ರಸ್ತೆಯ ಬಳಿಯ ಮನೆಯೊಂದರಲ್ಲಿ ಈ ಕೃತ್ಯ ನಡೆದಿದ್ದು, ಮೃತ ಯುವತಿಯನ್ನು ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. 10 ರಿಂದ 15 ದಿನಗಳ ಹಿಂದೆಯೇ ಈ ಕೊಲೆ ನಡೆದಿದೆ ಎಂದು ಅಂದಾಜಿಸಲಾಗಿದೆ. 30 ಕ್ಕೂ ಹೆಚ್ಚು ಪೀಸ್ ಮಾಡಿ 160 ಲೀಟರ್‌ನ ಫ್ರಿಡ್ಜ್‌ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯುವತಿಯನ್ನ ಪೀಸ್ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಪಾಪಿ! Read More »

ಬಾಲಕನ ಮಾರ್ಮಾಂಗವನ್ನು ಎಳೆದು ಗಾಯಗೊಳಿಸಿದ ವಿದ್ಯಾರ್ಥಿಗಳು

ಸಂಪಾಜೆ : ವಸತಿ ನಿಲಯದಿಂದ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗ ಊದಿಕೊಂಡು ಬಾಲಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ವರದಿಯಾಗಿದೆ.ದ.ಕ. ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕಳೆದ ಕೆಲ ಸಮಯಗಳಿಂದ ಕೊಡಗು ಸಂಪಾಜೆಯ ವಸತಿ ನಿಲಯದಲ್ಲಿ ಶಾಲೆಗೆ ಹೋಗುತ್ತಿದ್ದುಸೆ.14ರಂದು ರಾತ್ರಿ ವಸತಿ ನಿಲಯದಲ್ಲಿ ಇಬ್ಬರು ಸಹಪಾಠಿವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು.ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನಗೆ ಬಂದಿದ್ದನೆನ್ನಲಾಗಿದೆ.ಬಾಲಕ ಮರ್ಮಾಂಗ ಊದಿಕೊಂಡಿದ್ದರಿಂದತಾಯಿಯೊಡನೆ

ಬಾಲಕನ ಮಾರ್ಮಾಂಗವನ್ನು ಎಳೆದು ಗಾಯಗೊಳಿಸಿದ ವಿದ್ಯಾರ್ಥಿಗಳು Read More »

error: Content is protected !!
Scroll to Top