Author name: Tejas

ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು!

ಕೊಡಗು ಜಿಲ್ಲೆಯ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಕಾಡಾನೆ ದಾಳಿಯಿಂದ ಸಾವನ್ಜಪ್ಪಿದ ಘಟನೆ ವರದಿಯಾಗಿದೆ.ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದೆ.ಆನೆ ದಾಳಿಯಿಂದ ಓಡಿ ಹೋಗಿ ಇಬ್ಬರು ಕಾಫಿ ತೋಟದ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ.ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು! Read More »

ಡಿ.ಕೆ.ಶಿ ಸರ್ಕಾರದ ಮೊದಲ ವಿಕೆಟ್ ಪತನ!

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ತಮಗೆ ನಿರೀಕ್ಷಿತ “ಬೆಂಗಳೂರು ನಗರಾಭಿವೃದ್ಧಿ” ಖಾತೆ ಸಿಗದ ಕಾರಣ ಅಚ್ಚರಿಯ ರಾಜೀನಾಮೆ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಖಾತೆ ಸಿಗದ ಕಾರಣ ಸಚಿವ ಸ್ಥಾನದಲ್ಲಿ ಮುಂದುವರಿಯಲು ಇಷ್ಟವಿಲ್ಲದೆ ಈ ನಿರ್ಧಾರ ಕೈಗೊಂಡಿದ್ದೇನೆ,” ಎಂದು ತಮ್ಮ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿ ಸರ್ಕಾರದ ಮೊದಲ ವಿಕೆಟ್ ಪತನ! Read More »

ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ!

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಆಸ್ತಿ ವಿವಾದ ಸಂಬಂಧಿತ ಆರು ಜನರ ಭೀಕರ ಕೊಲೆ ಪ್ರಕರಣದಲ್ಲಿ, ಪೊಲೀಸರು ಪ್ರಮುಖ ಸೂತ್ರಧಾರಿ ಹಾಗೂ ಮುಖ್ಯ ಆರೋಪಿ ಸೇರಿದಂತೆ ಮತ್ತಿಬ್ಬರನ್ನು ಗುರುವಾರ ಬಂಧಿಸಿದ್ದಾರೆ. ಈ ಬಂಧನಗಳೊಂದಿಗೆ ಒಟ್ಟು ಹದಿನೇಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಮೇ 29ರಂದು ನಡೆದಿದ್ದ ಈ ಪ್ರಕರಣದ ತನಿಖೆ

ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ! Read More »

ಅರಂತೋಡು ತೊಡಿಕಾನ ರಸ್ತೆ ಪರ್ನೋಜಿ‌ ಸಮೀಪ ಕುಸಿತ!

ಅರಂತೋಡು ತೊಡಿಕಾನ ದ ಪರ್ನೋಜಿ ಸಮೀಪ ಮುಖ್ಯ ರಸ್ತೆಯ ತಲಭಾಗದಲ್ಲಿ ಭೂಕುಸಿತವಾಗಿದ್ದು ಅಪಾಯ ಎದುರಾಗಿದೆ.ವಾಹನ ಸವಾರರು ಗಮನ ಹರಿಸಬೇಕಾಗಿದೆ.

ಅರಂತೋಡು ತೊಡಿಕಾನ ರಸ್ತೆ ಪರ್ನೋಜಿ‌ ಸಮೀಪ ಕುಸಿತ! Read More »

ಕೃಷಿ ಉಳಿಸಿ, ಅಭಿಯಾನಕ್ಕೆ ಚಾಲನೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ವತಿಯಿಂದ ಆರಂಭಿಸಲಾದ ಖೇತ್ ಬಚಾವೋ (ಕೃಷಿ ಉಳಿಸಿ) ಅಭಿಯಾನವನ್ನು ಬೆಂಗಳೂರಿನ ಐಸಿಎಆರ್-ಆಟಾರಿ ನಿರ್ದೇಶನದಂತೆ ಮಂಗಳೂರಿನ ಐಸಿಎಆ‌ರ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೃಷಿ ಇಲಾಖೆಯ ಸಹಯೋಗದೊದಿಗೆ ಜೂ-1 ರಿಂದ ಜೂನ್ 30ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರಾದ ಡಾ. ಟಿ.ಜೆ.ರಮೇಶ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಖೇತ್ ರೈತರಲ್ಲಿ ಮಣ್ಣಿನ ಆರೋಗ್ಯದ ಮಹತ್ವದ ಕುರಿತು ಅರಿವು

ಕೃಷಿ ಉಳಿಸಿ, ಅಭಿಯಾನಕ್ಕೆ ಚಾಲನೆ Read More »

ಪಂಜ ಸೀಮೆಯ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ವಿಶೇಷ ಪೂಜೆ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾ‌ರ್ ಈ ದಿನ ಅಧಿಕಾರ ಸ್ವೀಕರಿಸುವ ಸಲುವಾಗಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್‌, ಕಾಯಂಬಾಡಿ ಸಂತೋಷ್‌ ಕುಮಾ‌ರ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಎಣ್ಣೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ,ಶ್ರೀಮತಿ ಮಾಲಿನಿ ಕುದ್ವ, ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಸೀಮೆಯ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ವಿಶೇಷ ಪೂಜೆ Read More »

ಮರ್ಕಂಜ : ಪನ್ನೆ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಮೊತ್ತ 45,000 ಸಹಾಯಧನ‌ ಹಸ್ತಾಂತರ

ಸಂಪಾಜೆ ವಲಯದ ಮರ್ಕಂಜ ಗ್ರಾಮದ ಪನ್ನೆ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಮೊತ್ತ 45,000 ಸಹಾಯಧನವನ್ನು ಸುಳ್ಯ ತಾಲೂಕಿನ ಮಾನ್ಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶಾಂತಪ್ಪ ರೈ ಮತ್ತು ಸಮಿತಿಯ ಸದಸ್ಯರುಗಳಾದ ರಾಘವ ಗೌಡ ಕಂಜಿಪಿಲಿ ಗೋವಿಂದ ಅಳವುಪಾರೆ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಕುಂಞಮು ಕಾರ್ಯದರ್ಶಿಯಾದ ರವಿ ಮತ್ತು ಸರ್ವ ಸದಸ್ಯರು ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಆಚಾರ್ಯ

ಮರ್ಕಂಜ : ಪನ್ನೆ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಮೊತ್ತ 45,000 ಸಹಾಯಧನ‌ ಹಸ್ತಾಂತರ Read More »

ಜೂ. 12 ರಿಂದ 14ರ ತನಕ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮತ್ತು ಮಾವು ಮೇಳ

ಟೀಮ್ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪೆನಿ ನಿ. ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ. ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮತ್ತು ಮಾವು ಮೇಳ ಜೂನ್ ೧೨ ರಿಂದ ೧೪ ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ

ಜೂ. 12 ರಿಂದ 14ರ ತನಕ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮತ್ತು ಮಾವು ಮೇಳ Read More »

ಜೂ.15ರಿಂದ ಜೂ.18ರ ತನಕ ನಾವೂರು ಶ್ರೀ ಕಲ್ಕುಡ ದೈವಸ್ಥಾನದ ನವೀಕೃತ ಶಿಲಾಮಯ ಗುಡಿಯಲ್ಲಿ ಶ್ರೀ ಕಲ್ಕುಡ – ಕಲ್ಲುರ್ಟಿ ಹಾಗೂ ಗುಳಿಗ ದೈವದ ಕಟ್ಟೆಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯದ ನಾವೂರು ಶ್ರೀ ಕಲ್ಕುಡ ದೈವಸ್ಥಾನದ ನವೀಕೃತ ಶಿಲಾಮಯ ಗುಡಿಯಲ್ಲಿ ಶ್ರೀ ಕಲ್ಕುಡ – ಕಲ್ಲುರ್ಟಿ ಹಾಗೂ ಗುಳಿಗ ದೈವದ ಕಟ್ಟೆಯಲ್ಲಿ ಜೂನ್ 15ರಿಂದ ಜೂ.18ರ ತನಕ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಕಾಮತ್,ಧರ್ಮದರ್ಶಿ ಉಮೇಶ್ ಪಿ.ಕೆ,ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ತಿಳಿಸಿದ್ದಾರೆ.ಅವರು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇತ್ತೀಚೆಗೆ ಸ್ಥಳದ ಮತ್ತು ದೈವಗಳ ಬಗ್ಗೆ ಪ್ರಶ್ನಾಚಿಂತನೆ ಇಟ್ಟಾಗ ದೈವಗಳಿಗೆ ನೂತನ ಶಿಲಾಮಯ ಗುಡಿ ನಿರ್ಮಿಸಬೇಕೆಂಬ ಚಿಂತನೆ ಮೂಡಿ ಬಂದು ಆ

ಜೂ.15ರಿಂದ ಜೂ.18ರ ತನಕ ನಾವೂರು ಶ್ರೀ ಕಲ್ಕುಡ ದೈವಸ್ಥಾನದ ನವೀಕೃತ ಶಿಲಾಮಯ ಗುಡಿಯಲ್ಲಿ ಶ್ರೀ ಕಲ್ಕುಡ – ಕಲ್ಲುರ್ಟಿ ಹಾಗೂ ಗುಳಿಗ ದೈವದ ಕಟ್ಟೆಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವಿಕಾರಿಸುವ ಹಿನ್ನಲೆ ತೊಡಿಕಾನ ದೇವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ‌ ದೇವಳದಲ್ಲಿ ಡಿ ಕೆ ಶಿವಕುಮಾ‌ರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸುವ ಹಿನ್ನಲೆಯಲ್ಲಿ ದೇವರಿಗೆ ಸೇವೆ ಸಲ್ಲಿಸಿ ಮುಂದಿನ ರಾಜಕೀಯ ಜೀವನ ಹಾಗೂ ಸಿಎಂ ಆಗಿ ಅವರ ಅವಧಿಯಲ್ಲಿ ರಾಜ್ಯಕ್ಕೆ ಮಳೆ ಬೆಳೆ ಸಮೃದ್ಧಿಯಾಗಿ , ಯಾವುದೇ ವಿರೋಧ ವ್ಯಕ್ತವಾಗದೇ ಸುಬಿಕ್ಷೆಯಿಂದ ಆಡಳಿತ ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ,ಸದಸ್ಯರಾದ ಬಾಲಕೃಷ್ಣ ಕೆ.ಕೆ,ತಿಮ್ಮಯ್ಯ ಮೆತ್ತೆಡ್ಕ ಇತರ ಸದಸ್ಯರು ಉಪಸ್ಥಿತರಿದ್ದು ಪ್ರಾರ್ಥಿಸಲಾಯಿತು.

ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವಿಕಾರಿಸುವ ಹಿನ್ನಲೆ ತೊಡಿಕಾನ ದೇವಸ್ಥಾನದಲ್ಲಿ ಪ್ರಾರ್ಥನೆ Read More »

error: Content is protected !!
Scroll to Top