Author name: Tejas

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ

ರಾಜ್ಯದ ಮಾಜಿ ಸ್ಪೀಕರ್, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರಾಗಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಎಸ್.ಎಂ ಕೃಷ್ಣರವರ ನಿಧನವು ಅತೀವ ದುಃಖವನ್ನುಂಟು ಮಾಡಿದೆ. ಅವರ ನಿಧನದಿಂದ ಓರ್ವ ರಾಜಕೀಯ ಮತ್ಸದ್ಧಿಯನ್ನು ಕಳೆದುಕೊಂಡಿದೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿರುತ್ತಾರೆ.1994 ರಲ್ಲಿ ರಾಜ್ಯ ಸಭಾ ಸದಸ್ಯರಾಗಿದ್ದಾಗ ಎಸ್.ಎಂ ಕೃಷ್ಣರವರ ಪರಿಚಯವಾಗಿ ಅವರೊಂದಿಗಿನ ಸಂಬಂಧ ಕೊನೆ ತನಕ ಇತ್ತು. ನನ್ನನ್ನು ಮಗನಂತೆ ನೋಡಿಕೊಂಡಿದ್ದರು ಮತ್ತು ರಾಜಕೀಯವಾಗಿ ಬೆಳೆಸಿದ್ದರು. ಕರ್ನಾಟಕ ಸರಕಾರದ […]

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ Read More »

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿವಿಧ ಬೇಡಿಕೆಗಳನ್ನು ಚರ್ಚಿಸಲು ಕೆ.ಎಸ್‌.ಆರ್.ಟಿ.ಸಿ ನೌಕರರಿಂದ ಶಾಸಕಿ ಭಾಗೀರಥಿಗೆ ಮನವಿ

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಸುಳ್ಯದ ಡಿಪೋದಲ್ಲಿ ಸಿಬ್ಬಂದಿ ನೇಮಕಾತಿ ಮತ್ತು ಸರಕಾರಿ ನೌಕರರ ಸಮಾನ ವೇತನ ಆಯೋಗ ಹಾಗೂ 38 ತಿಂಗಳ ಅರಿಯರ್ಸ್ ಗಾಗಿ ಚರ್ಚಿಸಲು ಕೆ.ಎಸ್‌.ಆರ್.ಟಿ.ಸಿ ನೌಕರರ ಪರವಾಗಿ ತಮ್ಮ ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿವಿಧ ಬೇಡಿಕೆಗಳನ್ನು ಚರ್ಚಿಸಲು ಕೆ.ಎಸ್‌.ಆರ್.ಟಿ.ಸಿ ನೌಕರರಿಂದ ಶಾಸಕಿ ಭಾಗೀರಥಿಗೆ ಮನವಿ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಕುಕ್ಕುಜಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸುಳ್ಯ ತಾಲ್ಲೂಕು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಟ್ಯೂಷನ್ ಕ್ಲಾಸ್ ನ್ನು ಡಿಸೇಂಬರ್ 9 ರಂದು ಪೈಲಾರ್ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರು ಹಾಗೂ ಪೈಲಾರ್ ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷರಾದ ಶ್ರೀ ನಾರಾಯಣ ಕೊಡ್ತುಗುಳಿ ಉದ್ಘಾಟನೆ ಮಾಡಿ ಶುಭಹಾರೈಸಿದರು:ದೊಡ್ಡತೋಟ ವಲಯ ಜನಜಾಗೃತಿ ವಲಯಧಕ್ಷರಾದ ಶ್ರೀ ಬಾಲಕೃಷ್ಣ ಬೋಳ್ಳೂರು ಮಾತನಾಡಿ ಪ್ರಕೃತಿ ನಾಶಕ್ಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ಕ್ಲಾಸ್ ಉದ್ಘಾಟನೆ Read More »

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮ ಹತ್ಯೆ

ಸುಳ್ಯ ಜೂನಿಯ‌ರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನಲ್ಲಿ ರಿಕ್ಷಾ ಪಾರ್ಕಿಂಗ್ ಮಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಮೂಲತ ತೊಡಿಕಾನ ಗ್ರಾಮದ ಕೋಣಗುಂಡಿ ನಿವಾಸಿ ಜಗನ್ನಾಥ ಎಂಬವರು ಸುಳ್ಯದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು.ಸುಳ್ಯ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮ ಹತ್ಯೆ Read More »

ಅಕ್ಷತಾ ನಾಗನಕಜೆಯವರಿಂದ ದಾಖಲೆ ಬರಹ

“ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್” ಕವಿಗಳಿಂದ ಸ್ಥಳದಲ್ಲಿಯೇ ದಾಖಲೆ ಬರಹ ಕಾರ್ಯಕ್ರಮದಲ್ಲಿ ಅಕ್ಷತಾ ನಾಗನಕಜೆ ಅವರು ಜಾನಪದ ಕಲೆಯಾದ ಯಕ್ಷಗಾನ ಶೀರ್ಷಿಕೆ ಯಡಿಯಲ್ಲಿ 10 ನಿಮಿಷ 20 ಸೆಕೆಂಡ್ ನಲ್ಲಿ ಬರೆದು ರೆಕಾರ್ಡ್ ದಾಖಲೆ ಬರೆದಿದ್ದಾರೆ. ರಾಜ್ಯ ಕರುನಾಡ ಹಣತೆ ಕವಿ ಬಳಗ(ರಿ) ಇವರು ಆಯೋಜಿಸಿರುವ ಪ್ರಥಮ ಜಾನಪದ ವಾರ್ಷಿಕೋತ್ಸವ ಕಾರ್ಯಕ್ರಮ 2024 ಚಿತ್ರದುರ್ಗ ದಲ್ಲಿ ಕರ್ನಾಟಕ ಅಚಿವರ್ಸ್ ಬುಕ್ ಆಪ್ ರೆಕಾರ್ಡ್ ಸಂಸ್ಥೆಯವರು ಭಾಗವಹಿಸಿ ದಾಖಲೆ ಬರೆದ ಇವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿರುತ್ತಾರೆ.

ಅಕ್ಷತಾ ನಾಗನಕಜೆಯವರಿಂದ ದಾಖಲೆ ಬರಹ Read More »

ಅರಮನೆಕಟ್ಟ ರಸ್ತೆ ಅಭಿವೃದ್ಧಿ ಗೆ ಶಾಸಕರಿಂದ ಗುದ್ದಲಿ ಪೂಜೆ

ಶಾಸಕರ ವಿಶೇಷ ಅನುದಾನದಿಂದ ಬಿಡುಗಡೆಯಾದ 30ಲಕ್ಷ ರೂ ಗಳಲ್ಲಿ ನಿರ್ಮಾಣವಾಗಲಿರುವ ಪಂಬೆತ್ತಾಡಿ‌ಗ್ರಾಮದ ಅರಮನೆಕಟ್ಟ ರಸ್ತೆಯ ಕಾಮಗಾರಿಗೆ ಸೋಮವಾರ ಶಾಸಕರು ಗುದ್ದಲಿಪೂಜೆಯನ್ನು ನೆರವೆರಿಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷಕರು, ಸದಸ್ಯರು ಭಾ.ಜ.ಪ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಅರಮನೆಕಟ್ಟ ರಸ್ತೆ ಅಭಿವೃದ್ಧಿ ಗೆ ಶಾಸಕರಿಂದ ಗುದ್ದಲಿ ಪೂಜೆ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ವಾರ್ಷಿಕ ಕ್ರೀಡಾಕೂಟ, ಅಖಾಡ 2024. ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ವಾರ್ಷಿಕ ಕ್ರೀಡಾಕೂಟ ‘ಅಖಾಡ -2024’ ದಿನಾಂಕ 6.12.2024 ರಿಂದ 10.12.2024 ರ ವರೆಗೆ ನಡೆಯಲ್ಲಿದ್ದು, ಕ್ರೀಡಾಕೂಟದ ಉದ್ಘಾಟನೆಯನ್ನು ದಿನಾಂಕ 09.12.2014ರಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಡಾ. ಲೀಲಾಧರ್ ಡಿ ವಿ , ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ವಾರ್ಷಿಕ ಕ್ರೀಡಾಕೂಟ, ಅಖಾಡ 2024. ಉದ್ಘಾಟನೆ Read More »

ತಂಬುರಾಟಿ ಭಗವತಿ ಪ್ರಾದೇಶಿಕ ಸೇವಾ ಸಮಿತಿ ಸಭೆ,ನೂತನ ಪದಾಧಿಕಾರಿಗಳ ಅಯ್ಕೆ

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡುಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆಯು ದಿನಾಂಕ 08 ರಂದು ಸಮಿತಿಯ ಅಧ್ಯಕ್ಷ ರಾದ ಶ್ರೀಜಿತ್ ಅರಂತೋಡು ರವರ ಅಧ್ಯಕ್ಷತೆ ಯಲ್ಲಿ ರಬ್ಬರ್ ಉತ್ಪಾದಕರ ಸಂಘ ದ ಸಭಾಭವನ ಅರಂತೋಡಿನಲ್ಲಿ ನಡೆಯಿತು ಹಿರಿಯ ರಾದ ಜನಾರ್ಧನ. ಎ. ಎಂ, ಗೋವಿಂದ ಎ. ಕೆ ಮತ್ತು ಅಮ್ಮಣಿ ಚಿಟ್ಟನ್ನೂರು ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ನಂತರ ಕಳೆದ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರವನ್ನು ಕಾರ್ಯದರ್ಶಿ

ತಂಬುರಾಟಿ ಭಗವತಿ ಪ್ರಾದೇಶಿಕ ಸೇವಾ ಸಮಿತಿ ಸಭೆ,ನೂತನ ಪದಾಧಿಕಾರಿಗಳ ಅಯ್ಕೆ Read More »

ಕರ್ಲಪ್ಪಾಡಿ : ಶಾಸ್ತಾವೇಶ್ವರ ದೇವರ ಜಾತ್ರೆಗೆ ಗೊನೆ ಮುಹೂರ್ತ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ಜಾತ್ರೋತ್ಸವವು ಡಿ.14ರಿಂದ ಆರಂಭಗೊಳ್ಳಲಿದ್ದು, ಗೊನೆ ಮುಹೂರ್ತ ಡಿ.8ರಂದು ಮುಂಜಾನೆ ನಡೆಯಿತು.ದೇವಸ್ಥಾನದ ಅರ್ಚಕರಾದ ಈಶ್ವರ ಭಟ್ ರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು, ಗೊನೆ ತರಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಸೇವಾ ಸಮಿತಿ ಅಧ್ಯಕ್ಷರು, ಸದಸ್ಯರು ವಿವಿಧ ಸಮಿತಿಯವರು ಉಪಸ್ಥಿತರಿದ್ದರು.

ಕರ್ಲಪ್ಪಾಡಿ : ಶಾಸ್ತಾವೇಶ್ವರ ದೇವರ ಜಾತ್ರೆಗೆ ಗೊನೆ ಮುಹೂರ್ತ Read More »

ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ

ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರನಗರದ ಸಮೀಪ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಹತ್ಯೆಗೈದ ಘಟನೆ ನಡೆದಿದೆ.ಹತ್ಯೆಯಾದವನನ್ನು ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ನಾಯಕ ಎಂದು ತಿಳಿದುಬಂದಿದೆ.ಘಟನೆ ಗುರುವಾರ ರಾತ್ರಿ ಆಗಿರುವ ಸಾಧ್ಯತೆ ಇದ್ದು. ಶುಕ್ರವಾರ ಬೆಳಗ್ಗೆ ವಾಯುವಿಹಾರಕ್ಕೆ ಹೋದಾಗ ಸ್ಥಳೀಯರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕುಮಾರ್, ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜ್, ಮಂಜುನಾಥ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ Read More »

error: Content is protected !!
Scroll to Top