Author name: Tejas

ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ

ಭಾಷೆಯಲ್ಲಿ ಸಂಸ್ಕೃತಿ,ವ್ಯಕ್ತಿತ್ವ ಇದೆ.ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕೆಂದು ಲಯನ್ಸ್ ಮಾಜಿ ರಾಜ್ಯಪಾಲ ಎಂ.ಬಿ ಸದಾಶಿವ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ನಡೆದ ಅರೆಭಾಷೆ ಗಡಿನಾಡ ಉತ್ಸವ ಸಮಾಪನ ಕಾರ್ಯಕ್ರಮದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. […]

ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ Read More »

ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ

ಶತಮಾನೋತ್ಸವದ ಹೊಸ್ತಿಲಲ್ಲಿರುವ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ ಮತ್ತು ಲಕ್ಕಿ ಕೂಪನ್ ಬಿಡುಗಡೆ ಕಾರ್ಯಕ್ರಮವು ದೇವಚಳ್ಳ ಶಾಲೆಯಲ್ಲಿ ನಡೆಯಿತು.ಎಸ್‌ ಡಿ ಯಂ ಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ ಅಧ್ಯಕ್ಷತೆ ವಹಿಸಿದ್ದರು.ಹಿರಿಯರಾದ ನಿವೃತ್ತ ಶಿಕ್ಷಕ ಕೇಪಳಕಜೆ ಪುರುಷೋತ್ತಮ ಗೌಡ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಶಾಲೆಯ ಯಶಸ್ಸು ವಿದ್ಯಾರ್ಜನೆ ಜ್ಞಾನಾರ್ಜನೆ ಇನ್ನಷ್ಟು ವಿಸ್ತರಿಸಲಿ ಎಂಬುದಾಗಿ ಶುಭಾಶಯ ಕೋರಿದರು. ಶತಮಾನೋತ್ಸವದ ಲೋಗೋ ವನ್ನು ದೇವಚಳ್ಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೀಲಾವತಿ ಸೇವಾಜೆ

ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ Read More »

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ,ಕಾರಣ ನಿಗೂಡ!

ಗುಜರಾತ್‌ನ ಸೂರತ್‌ನ ಅಲ್ತಾನಾ ವಾರ್ಡ್ ನಂ.30ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ‌.ದೀಪಿಕಾ ತಮ್ಮ ನಿವಾಸದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ದೀಪಿಕಾ ಅವರ ಸಂಬಂಧಿಕರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸಂಬಂಧಿಕರು ಒತ್ತಾಯಿಸಿದ್ದಾರೆ. ದೀಪಿಕಾ ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತೆಯಾಗಿ ಸಕ್ರಿಯರಾಗಿದ್ದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ,ಕಾರಣ ನಿಗೂಡ! Read More »

ಅರೆಭಾಷೆಯನ್ನು ಮಕ್ಕಳಿಗೆ ಕಲಿಸಿ ಅರೆಭಾಷೆ ಉಳಿಸಿ ಬೆಳೆಸಿ : ಜಾ.ಕೆ ಸದಾನಂದ

ಅರೆಭಾಷೆ ನಮ್ಮ ಮನೆಭಾಷೆ.ಅರೆಭಾಷೆಯನ್ನು ನಮ್ಮ ಮಕ್ಕಳಿಗೆ ಕಲಿಸುವ ಮೂಲಕ ಅದನ್ನು ಉಳಿಸಿ ಬೆಳೆಸಬೇಕೆಂದು ಸುಳ್ಯ ಗೌಡರ ಯುವ ಸೇವಾ ಸಂಘದ ಮಾಜಿ ಅಧ್ಯಕ್ಷ ಜಾ.ಕೆ ಸದಾನಂದ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಹಮ್ಮಿಕೊಂಡ ಅರೆಭಾಷೆ ಗಡಿನಾಡ ಉತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಅರೆಭಾಷೆಯನ್ನು ಮಕ್ಕಳಿಗೆ ಕಲಿಸಿ ಅರೆಭಾಷೆ ಉಳಿಸಿ ಬೆಳೆಸಿ : ಜಾ.ಕೆ ಸದಾನಂದ Read More »

ಮಂಡೆಕೋಲಿನಲ್ಲಿ ಆಕರ್ಷಕ ಮೆರವಣಿಗೆಯೊಂದಿಗೆ ಅರೆಭಾಷೆ ಗಡಿನಾಡ ಉತ್ಸವಕ್ಕೆ ಚಾಲನೆ

ಕರ್ನಾಟ ಅರೆಬಾಷೆ ಸಂಸ್ಕ್ರತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿಯಾಗಿ ಚಾಲನೆಗೊಂಡಿದೆ. ಅರಂಭದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು. ‘ಫಾರೆಸ್ಟ್ ಬಂಗಲೆ ಬಳಿಯಿಂದ ಆರಂಭಗೊಂಡಿತು. ಮೆರವಣಿಗೆಯನ್ನು ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ

ಮಂಡೆಕೋಲಿನಲ್ಲಿ ಆಕರ್ಷಕ ಮೆರವಣಿಗೆಯೊಂದಿಗೆ ಅರೆಭಾಷೆ ಗಡಿನಾಡ ಉತ್ಸವಕ್ಕೆ ಚಾಲನೆ Read More »

ಗಾಂಜಾ ಸೇವೆನೆ ಮತ್ತು ಮಾರಾಟ ಪ್ರಕರಣ ನಾಲ್ವರ ಬಂಧನ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಜಯನಗರದಲ್ಲಿ ನಿಷೇಧಿತ ಅಮಲು ಪದಾರ್ಥ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸ್‌ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಒರ್ವನನ್ನು ಗಾಂಜಾ ಸೇವೆನೆ ಮಾಡಿದ ಮೂವರನ್ನು ಕರೆತಂದಿದ್ದು ಆರೋಗ್ಯ ತಪಾಸಣೆ ನಡೆಸಲಾಗಿದೆ. ಎಂದು ತಿಳಿದುಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಗಾಂಜಾ ಸೇವೆನೆ ಮತ್ತು ಮಾರಾಟ ಪ್ರಕರಣ ನಾಲ್ವರ ಬಂಧನ Read More »

ಡಿ.7ಕ್ಕೆ ಸುಳ್ಯದಲ್ಲಿ ಮಾಜಿ ಸಚಿವ ಎಸ್‌.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಶುಭಾರಂಭ

ಮಾಜಿ ಸಚಿವ ಎಸ್‌.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಡಿ.7ರಂದು ಸುಳ್ಯದ ಟಿ.ಎ.ಪಿ.ಸಿ.ಎಂ.ಎಸ್‌. ಬಿಲ್ಡಿಂಗ್ ಇದರ 2 ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.ಅಂಗಾರ ಅವರು ನೂತನ ಸಹಕಾರ ಸಂಘ ಆರಂಭದ ಕುರಿತು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಕರೆದು ಮಾಹಿತಿ ನೀಡಿದರು.ನೂತನ ಸಹಕಾರ ಸಂಘವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೀಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್‌ ಸದಸ್ಯರುಗಳಾದ ಕಿಶೋರ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸಂಸದ ನಳಿನ್

ಡಿ.7ಕ್ಕೆ ಸುಳ್ಯದಲ್ಲಿ ಮಾಜಿ ಸಚಿವ ಎಸ್‌.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಶುಭಾರಂಭ Read More »

ಚಿಕ್ಕಿ ತಿಂದ 46 ವಿದ್ಯಾರ್ಥಿಗಳು ಅಸ್ವಸ್ಥ..!

‘ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಎಂಬಲ್ಲಿ ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು ಸುಮಾರು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ ಬಿಸಿ ಊಟದ ವೇಳೆ ಚಿಕ್ಕಿ ನೀಡಲಾಗಿತ್ತು.ಪರಿಣಾಮವಾಗಿ 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಈ ವಿದ್ಯಾರ್ಥಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾ‌ರ್ ವರದರಾಜು, ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಿ ತಿಂದ 46 ವಿದ್ಯಾರ್ಥಿಗಳು ಅಸ್ವಸ್ಥ..! Read More »

ಸಂಪಾಜೆ : ತಂಬಾಕು ಕಾರ್ಯಾಚರಣೆ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯ ಅಂಗಡಿಗಳಲ್ಲಿ ನ.29ರಂದು ತಂಬಾಕು ಕಾರ್ಯಾಚರಣೆ ನಡೆಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಢಾ.ನಂದಕುಮಾರ್, ಸುಳ್ಯ ಫೋಲಿಸ್ ಠಾಣೆಯ ಉಪನೀರಿಕ್ಷಕರಾದ ಸಂತೋಷ್, ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸರಿತ ಓಲ್ಗಾ ಡಿಸೋಜ, ಕಲ್ಲುಗುಂಡಿ ಹೊರಠಾಣೆಯ ಸಹಾಯಕ ಉಪನೀರಿಕ್ಷರಾದ ತಾರನಾಥ್, ಬೀಟ್ ಪೋಲಿಸ್ ರಾಜು ಆರೋಗ್ಯ ಇಲಾಖೆಯ ಆಶಿಕ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ರಾಜಶೇಖರ್ ತಾಲೂಕು ಲೇಖಪತ್ರ ವ್ಯವಸ್ಥಾಪಕ ಹಾಗೂ ಚಂದ್ರಪ್ಪ ಆರೋಗ್ಯ ನಿರೀಕ್ಷಣಾಧಿಕಾರಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

ಸಂಪಾಜೆ : ತಂಬಾಕು ಕಾರ್ಯಾಚರಣೆ Read More »

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು

ಪುತ್ತೂರು : ಪುತ್ತೂರಿನ ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.ಮೊಟೆತ್ತಡ್ಕ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಹಿಮಾನ್ ಜೈಲು ಶಿಕ್ಷೆಗೆ ಒಳಗಾದ ಆರೋಪಿ2016ರ ನ. 18ರಂದು ಕೆಮ್ಮಿಂಜೆ ಗ್ರಾಮದ ಮೊಟ್ಟೆತಡ್ಕದಲ್ಲಿ ಅಬ್ದುಲ್ ರಹಿಮಾನ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಬಾಲಕಿ ದೂರು ನೀಡಿದ್ದು, ಪುತ್ತೂರು ನಗರ ಪೊಲೀಸ್‌

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು Read More »

error: Content is protected !!
Scroll to Top