Author name: Tejas

ನಡುಮನೆ ವೆಂಕಪ್ಪ ಗೌಡ ‌ನಿಧನ

ಸುಳ್ಯ ಕಾಯರತೋಡಿ ನಿವಾಸಿ ನಡುಮನೆ ವೆಂಕಪ್ಪ ಗೌಡ(74) ಅಸೌಖ್ಯದಿಂದ ನ.28ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು.ಮ್ರತರು ಪತ್ನಿ, ಇಬ್ಬರು ಹೆಣ್ಷು ಮಕ್ಕಳನ್ನು ಒರ್ವ ಪುತ,ಮೊಮ್ಮಕ್ಕಳನ್ನು,ಕುಟುಂಬಸ್ಥರನ್ನು ,ಬಂದುಳನ್ನು ಅಗಲಿದ್ದಾರೆ‌.

ನಡುಮನೆ ವೆಂಕಪ್ಪ ಗೌಡ ‌ನಿಧನ Read More »

ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ತಿಂದರೆ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಗೊತ್ತಾ?

ನೆಲ್ಲಿಕಾಯಿಯಲ್ಲಿ ಸಾಕಾಷ್ಟು ಪ್ರಮಾಣದ ವಿಟಮಿನ್ ಇದೆ.ನೆಲ್ಲಿಕಾಯಿ ವಿಟಮಿನ್ ಸಿ ಪ್ರಮಾಣ ಹೊಂದಿದೆ.ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜೊತೆಗೆ ಸ್ವಲ್ಪ ಬೆಲ್ಲ ಸೇವನೆ ಮಾಡುವುದರಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ನಾರಿನ ಅಂಶ ಹೆಚ್ಚಾಗಿರುವ ನೆಲ್ಲಿಕಾಯಿ ನಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿ ಕೆಲಸ ಮಾಡುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಇದರಿಂದ ಪ್ರತಿದಿನ ಆಹಾರ ಪದ್ಧತಿಯಲ್ಲಿ ಸೇರಿಸಿ ಸೇವಿಸುವುದರಿಂದ ಚರ್ಮದ ಆರೋಗ್ಯ ವೃದ್ಧಿಸುತ್ತದೆ.

ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ತಿಂದರೆ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಗೊತ್ತಾ? Read More »

ನದಿಗೆ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರಿನ ಸೆಳೆತಕೆ ಸಿಲುಕಿ‌ ದುರ್ಮರಣ

ಬೆಳ್ತಂಗಡಿ ಸಮೀಪದ ವೇಣೂರು ಬರ್ಕಜೆ ಡ್ಯಾಂ ಬಳಿ ನದಿಗೆ ಈಜಲು ತೆರಳಿದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಬುಧವಾರ ವರದಿಯಾಗಿದೆ.ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮವೊಂದರ ಹಿನ್ನೆಲೆ ಬಂದಿದ್ದ ಮೂಡುಬಿದಿರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್, ಬಂಟ್ವಾಳ ಗ್ರಾಮದ ವಗ್ಗದ ಜೈಸನ್, ಎಂಬವರು ನ.27 ರಂದು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ನದಿಗೆ ಈಜಲು ತೆರಳಿದ್ದರು.ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು

ನದಿಗೆ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರಿನ ಸೆಳೆತಕೆ ಸಿಲುಕಿ‌ ದುರ್ಮರಣ Read More »

ಪಿ.ಯು.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ೦ದ ವರದಿಯಾಗಿದೆ.ಕೋಡಿ ನಿವಾಸಿ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪಿ.ಯು.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ Read More »

ಸಂಪಾಜೆ : ಸಂವಿಧಾನ ದಿನ ಆಚರಣೆ

ಸಂಪಾಜೆ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು‌. ಸಂವಿದಾನವನ್ನು ಅಂಗೀಕರಿಸಿದ 75 ನೇ ವರ್ಷವನ್ನು ಸಂವಿಧಾನದ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಉಪಾಧ್ಯಕ್ಷರಾದ ಎಸ್. ಕೆ ಹನೀಫ್ ಪಂಚಾಯತ ಅಬಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಅಬೂಬಕ್ಕರ್.ಎಂ. ಸಿ. ಗ್ರಂಥಾಲಯ ಮೇಲ್ವಿಚಾರಕಿ ನಸೀಮಾ ಸವೇರಪುರ ಪ್ರೌಡ ಶಾಲೆ ವಿದ್ಯಾರ್ಥಿಗಳು ಶಿಕ್ಷಕರು ಉಪಸ್ಥಿತರಿದ್ದರು. ನಸೀಮಾ

ಸಂಪಾಜೆ : ಸಂವಿಧಾನ ದಿನ ಆಚರಣೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವಕ್ಕೆ ಚಾಲನೆ

ದ.ಕ ಜಿಲ್ಲೆಯ ಪ್ರಸಿದ್ದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು (ನ.27) ಕೊಪ್ಪರಿಗೆ ಏರುವುದರೊಂದಿಗೆ ಷಷ್ಠಿ ಮಹೋತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.ಇಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವನಡೆಯಲಿದೆ. ನ.30- ಲಕ್ಷದೀಪೋತ್ಸವ,ಡಿ.01- ಶೇಷವಾಹನೋತ್ಸವ,ಡಿ.02- ಅಶ್ವವಾಹನೋತ್ಸವ, ಡಿ.03- ಮಯೂರ ವಾಹನೋತ್ಸವ, ಡಿ.04- ಶೇಷವಾಹನೋತ್ಸವ,, ಡಿ.05- ಹೂವಿನ ತೇರಿನ ಉತ್ಸವ, ಡಿ.06- ಪಂಚಮಿ ರಥೋತ್ಸವ,, ಡಿ.07- ಪ್ರಾತಃ ಕಾಲ ಚಂಪಾಷಷ್ಠಿ ಮಹಾರಥೋತ್ಸವ,ಡಿ.08- ರಂದು ಅವಭ್ರತೋತ್ಸವ, ನೌಕಾವಿಹಾರ, ನಡೆದು ಡಿ.12- ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ನಡೆಯಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವಕ್ಕೆ ಚಾಲನೆ Read More »

ತಾಲೂಕು ಕಚೇರಿಯಲ್ಲಿ ವ್ಯಕ್ತಿ ಕುಸಿದು ಬಿದ್ದು ಸಾವು

ಸುಳ್ಯ ತಾಲೂಕು ಕಚೇರಿಗೆ ವ್ಯದ್ಯಾಪ್ಯವೇತನಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ಅಡ್ಕಾರಿನ ವ್ಯಕ್ತಿಯೊಬ್ಬರು ಸುಳ್ಯ ತಾಲೂಕು ಕಚೇರಿಯ ಪಡಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಗಿದೆ.ಅಡ್ಕಾರಿನ ರಾಘವ ಆಚಾರ್ಯ (65 ವರ್ಷ) ಎಂಬವರು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಇಂದು ಸುಳ್ಯ ತಾಲೂಕು ಕಚೇರಿಗೆ ಬಂದಿದ್ದರು. ಅರ್ಜಿ ಸ್ವೀಕರಿಸಿದ ಅಲ್ಲಿನ ಸಿಬ್ಬಂದಿ ಒಟಿಪಿ ಬರುವವರೆಗೆ ಕುಳಿತುಕೊಳ್ಳಿ ಎಂದು ಹೇಳೆದ ಮೇರೆಗೆ ಪಡಶಾಲೆಯ ಆವರಣದಲ್ಲಿ ಅವರು ಕುಳಿತಿದ್ದರು. ಸ್ವಲ್ಪ ಹೊತ್ತಲ್ಲಿ ಒಟಿಪಿ ಬಂದಾಗ ರಾಘವ ಆಚಾರ್ಯರನ್ನು ಸಿಬ್ಬಂದಿ ಕೌಂಟರ್ ಬಳಿಗೆ

ತಾಲೂಕು ಕಚೇರಿಯಲ್ಲಿ ವ್ಯಕ್ತಿ ಕುಸಿದು ಬಿದ್ದು ಸಾವು Read More »

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಪಶ್ಟಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತವುಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಪರಿಣಾಮ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.ತಮಿಳುನಾಡು, ಪುದುಚೆರಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ Read More »

ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆಗೆ ಚಾಲನೆ

ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದ್ದು ಸಂಪಾಜೆ ಗೇಟ್ ಬಳಿಯಿಂದ ಬುಧವಾರ ಚಾಲನೆ ನೀಡಲಾಯಿತು.ಸುಳ್ಯ ತಹಶೀಲ್ದಾರ್ ಮಂಜುಳಾ ಎಮ್. ರಾಷ್ಟ್ರ ಧ್ವಜಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿ ಶುಭಹಾರೈಸಿದರು.ಪಿ.ಸಿ ಜಯರಾಮ, ಸಂಪಾಜೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಅಶೋಕ್‌ಎಡಮಲೆ, ಭವಾನಿ ಶಂಕರ್ ಕಲ್ಮಡ್ಕ, ಭರತ್ ಕುಕ್ಕುಜಡ್ಕ, ರೈತ ಸಂಘ ಜಿಲ್ಲಾ ಪದಾಧಿಕಾರಿ ದಿವಾಕರ ಪೈ, ಅಶ್ರಫ್, ಕರ್ನಾಟಕ ಸರಕಾರ ಕಟ್ಟಡ

ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆಗೆ ಚಾಲನೆ Read More »

ಅಜ್ಜಾವರ : ಆದರ್ಶ ಮಹಿಳೆಯಾಗು ಕ್ರತಿ ಬಿಡುಗಡೆ

ಅಜ್ಜಾವರದ ಚೈತನ್ಯ ಸೇವಾಶ್ರಮಕ್ಕೆ ಅರಂಬೂರಿನ ವೇದಪಾಠಶಾಲೆಯ ಮುಖ್ಯಸ್ಥರಾದ ದಿನೇಶ್ ಭಾರದ್ವಾಜ ಹಾಗೂ ಅಮೇರಿಕದಲ್ಲಿರುವ ಖ್ಯಾತ ವೈದ್ಯೆ ಅಜ್ಜಾವರದ ಚೈತನ್ಯ ಆಶ್ರಮದ ಅಭಿಮಾನಿ ಡಾ.ಜ್ಯೋತಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಚೈತನ್ಯ ಸೇವಾಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 212 ಕ್ರತಿ ಮಾಲೆ ಆದರ್ಶ ಮಹಿಳೆಯಾಗು ವನ್ನು ಡಾ.ಜ್ಯೋತಿ ಬಿಡುಗಡೆಗೊಳಿಸಿದರು. ಡಾ.ಜ್ಯೋತಿಯವರು ಮಾಡುವ ಧರ್ಮಜಾಗೃತಿ ಕಾರ್ಯವನ್ನು ಮೆಚ್ಚಿದ ಸ್ವಾಮೀಜಿಯವರು ಅವರನ್ನು ಸನ್ಮಾನಿಸಿದರು. ವೇದ ಪಾಠ ಶಾಲೆಯ ಪ್ರಾಚಾರ್ಯರಾದ ವೆಂಕಟೇಶ ಶಾಸ್ತ್ರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅಜ್ಜಾವರ : ಆದರ್ಶ ಮಹಿಳೆಯಾಗು ಕ್ರತಿ ಬಿಡುಗಡೆ Read More »

error: Content is protected !!
Scroll to Top