Author name: Tejas

ಕಾಡು ಹಂದಿಗೆ ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು,ರಸ್ತೆಯಲ್ಲಿ ಬಿದ್ದಿವೆ ಕಾಡು ಹಂದಿಯ ಹೆಪ್ಪು ಕಟ್ಟಿದ ರಕ್ತ

ಕಾಡು ಹಂದಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ನ.27ರಂದು ಮುಂಜಾನೆ ಸ್ಥಳೀಯರೊಬ್ಬರು ವಾಕಿಂಗ್ ಹೋಗುವ ಸಂದರ್ಭದಲ್ಲಿ ರಸ್ತೆಯಲ್ಲಿ ರಕ್ತದ ಗುರುತು ನೋಡಿ, ರಸ್ತೆ ಬದಿಯ ಚರಂಡಿಯಲ್ಲಿ ನೋಡಿದಾಗ ಹಂದಿ ಸತ್ತು ಬಿದ್ದಿರುವುದನ್ನು ಕಂಡಿದೆ. ಕೂಡಲೇ ಅವರು ಸಂಪಾಜೆ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದು, ಅರಣ್ಯ ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಬಂದಿರುವುದಾಗಿ ತಿಳಿದುಬಂದಿದೆ.

ಕಾಡು ಹಂದಿಗೆ ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು,ರಸ್ತೆಯಲ್ಲಿ ಬಿದ್ದಿವೆ ಕಾಡು ಹಂದಿಯ ಹೆಪ್ಪು ಕಟ್ಟಿದ ರಕ್ತ Read More »

ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಶ್ಯಾಮ್ ಭಟ್ ಅವರ ಅತ್ತೆ ನಿಧನ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ದಿ. ಡಾ. ಕೀಲಾರು ಗೋಪಾಲಕೃಷ್ಣಯ್ಯ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ಅವರು ಅಸೌಖ್ಯದಿಂದಾಗಿ ನ.26ರಂದು ಸಂಜೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಪುತ್ರ ರಾಜಾರಾಮ ಕೀಲಾರು, ಪುತ್ರಿ ಸುಮನ, ಅಳಿಯ ಡಾ. ಶ್ಯಾಮ್ ಭಟ್, ಸೊಸೆ ಮಮತ, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಶ್ಯಾಮ್ ಭಟ್ ಅವರ ಅತ್ತೆ ನಿಧನ Read More »

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುನಲ್ಲಿ ಸಂವಿಧಾನ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸಂವಿಧಾನ ದಿನಾಚರಣೆಯ ಮಹತ್ವ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಕೊಡುಗೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಎಲ್ಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಸಾಮೂಹಿಕವಾಗಿ ಓದಿದರು.

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುನಲ್ಲಿ ಸಂವಿಧಾನ ದಿನಾಚರಣೆ Read More »

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ ತೆಗೆಯುವ ಕಾರ್ಯಕ್ರಮ

ದ.ಕ ಜಿಲ್ಲೆಯ ಪ್ರಸಿದ್ದ ತೀರ್ಥ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ನ್ನು ಇಂದು ತೆಗೆಯಲಾಯಿತು.ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ ತೆಗೆಯುವ ಕಾರ್ಯಕ್ರಮ Read More »

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ,ಬಿಜೆಪಿ ಅಭ್ಯರ್ಥಿಗೆ ಭಾರೀ ಅಂತರದ ಗೆಲುವು

ತೆರವಾಗಿದ್ದ ಮಂಡೆಕೋಲು ಗ್ರಾಮ ಪಂಚಾಯತ್‌ನ 2ನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು ಜಯ ಗಳಿಸಿದ್ದಾರೆ. ನವೀನ್ 301 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.849 ಒಟ್ಡು ಮತದಾನವಾಗಿತ್ತು. ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು ಅವರಿಗೆ 568 ಮತ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೃಷ್ಣ ಮಣಿಯಾಣಿ ಅವರಿಗೆ 267 ಮತ ಲಭಿಸಿದೆ. 14 ಮತಗಳು ತಿರಸ್ಕೃತಗೊಂಡವು.ನ.23 ರಂದು ಉಪಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ನಡೆಸಲಾಯಿತು.

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ,ಬಿಜೆಪಿ ಅಭ್ಯರ್ಥಿಗೆ ಭಾರೀ ಅಂತರದ ಗೆಲುವು Read More »

ಹೊಟೇಲ್ ಹಾಗೂ ಅಂಗಡಿಯ ಬೀಗ ಮುರಿದು ಭಾರೀ ಮೊತ್ತದ ನಗದು ಕಳವು

ಅಂಗಡಿ ಮತ್ತು ಹೋಟೆಲ್ ನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ವರದಿಯಾಗಿದೆ.ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ ಹಿಂಬದಿಯಲ್ಲಿರುವ ಮೋಹನ ಅವರ ಮಾಲಕತ್ವದ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ .ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಘಟನೆ ಬೆಳಕಿಗೆ ಬಂದಿದೆ.ಕನಕಮಜಲ್ಲಿ ಕಳೆದ ಕೆಲವು ತಿಂಗಳಿನಿಂದ ಕಳ್ಳತ ಹಾವಳಿ ಜಾಸ್ತಿಯಾಗಿದ್ದು ಅವರನ್ನು ಮಟ್ಟ ಹಾಕಲು

ಹೊಟೇಲ್ ಹಾಗೂ ಅಂಗಡಿಯ ಬೀಗ ಮುರಿದು ಭಾರೀ ಮೊತ್ತದ ನಗದು ಕಳವು Read More »

ಅರೆಭಾಷೆ ಉಳಿಸಲು ಅಕಾಡೆಮಿಯಿಂದ ನಿರಂತರ ಕಾರ್ಯಕ್ರಮ : ಸದಾನಂದ ಮಾವಜಿ

ದಕ್ಷಿಣ ಕನ್ನಡ ಜಿಲ್ಲಾ ಗೌಡ ಸಂಘ ಮೈಸೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ದೀಪಾವಳಿ ಸಾಂಕೇತಿಕ ಆಚರಣೆ ಕಾರ್ಯಕ್ರಮ ನ. 24ರಂದು ಮೈಸೂರಿನ ಕುವೆಂಪು ನಗರದಲ್ಲಿರುವ ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘದಲ್ಲಿ ನಡೆಯಿತು.ದ.ಕ.ಜಿಲ್ಲಾ ಗೌಡ ಸಂಘ ಮೈಸೂರು ಇದರ ಅಧ್ಯಕ್ಷ ವಿಶ್ವನಾಥ ದೇವಸ್ಯ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಭಾಗವಹಿಸಿ ಮಾತನಾಡಿ, “ಭಾಷೆ ಉಳಿಸುವ ನಿಟ್ಟಿನಲ್ಲಿ ಅರೆಭಾಷೆ ಅಕಾಡೆಮಿ ಕೆಲಸ ಮಾಡುತ್ತಿದ್ದು, ಮುಂದಿನ

ಅರೆಭಾಷೆ ಉಳಿಸಲು ಅಕಾಡೆಮಿಯಿಂದ ನಿರಂತರ ಕಾರ್ಯಕ್ರಮ : ಸದಾನಂದ ಮಾವಜಿ Read More »

ನಿಂತಿಕಲ್ಲು: ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಮಾಸ್‌ನಿಂದ ಅಡಿಕೆ ಬೆಳೆಗಾರರ ಸಂಕಷ್ಟ ದೂರವಾಗಲಿ; ಭಾಗೀರಥಿ ಮುರುಳ್ಯಸುಳ್ಯ, ನ.೨೫: ಅಡಿಕೆ ಬೆಳೆಗಾರರು ಅಡಿಕೆಯಲ್ಲಿನ ವಿವಿಧ ರೀತಿಯ ರೋಗ ಬಾಧೆಗಳ ಜೊತೆಗೆ ವಿವಿಧ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅಡಿಕೆ ಹಾಗೂ ಇನ್ನಿತರ ಕೃಷಿ ಬೆಳೆಗಳಿಗೆ ಉತ್ತಮ ಬೆಲೆ ಸಿಕ್ಕಾಗ ಅವರ ಬದುಕು ಹಸನಾಗುತ್ತದೆ. ಮಾಸ್ ಸಂಸ್ಥೆಯಿAದ ಅಡಿಕೆಗೆ ಉತ್ತಮ ಧಾರಣೆ ನೀಡಿ ಅಡಿಕೆ ಖರೀದಿ ಮಾಡುವ ಮೂಲಕ ಅಡಿಕೆ ಬೆಳೆಗಾರರ ಸಂಕಷ್ಟ ದೂರ ಮಾಡುವ ಕೆಲಸ ಆಗಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಮಂಗಳೂರು ಕೃಷಿಕರ ಸಹಕಾರಿ

ನಿಂತಿಕಲ್ಲು: ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ನ.25ಕ್ಕೆ ನಿಂತಿಕಲ್ಲಿನಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಸುಳ್ಯ:ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ಮಂಗಳೂರು( ಮಾಸ್ ಲಿಮಿಟೆಡ್ಡ್ ವತಿಯಿಂದ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ನಿಂತಿಕಲ್ಲು ಇದರ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ನ.25ರಂದು ಸೋಮವಾರ ಪೂ.10.30ಕ್ಕೆ ನಿಂತಿಕಲ್ಲು ‘ಸಾಧನಾ ಸಹಕಾರಿ ಸೌಧ’ದಲ್ಲಿ ನಡೆಯಲಿದೆ ಎಂದು ಮಾಸ್ ಲಿಮಿಟೆಡ್‌ನ ಅಧ್ಯಕ್ಷರಾದ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ನ.25ಕ್ಕೆ ನಿಂತಿಕಲ್ಲಿನಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ಮಿನಿ ವಿಧಾನ ಸೌಧ ಸುಳ್ಯ- ದಲ್ಲಿ ಲಿಫ್ಟ್ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ಸಾಮಾಜಿಕ ಕಾರ್ಯಕರ್ತ ಡಿ ಎಂ ಶಾರಿಕ್ ರವರು ಪುತ್ತೂರು ಎ.ಸಿ ಗೆ ಮನವಿ

ಸುಳ್ಯ ತಾಲೂಕು ಕಛೇರಿ, ಉಪನೋಂದಣಾಧಿಕಾರಿಗಳ ಕಛೇರಿ ಮತ್ತು ಭೂ ಮಾಪನಾ ಇಲಾಖೆಯ ಕಚೇರಿಗಳು ಸುಳ್ಯ ಮಿನಿ ವಿಧಾನ ಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎರಡು ಮಹಡಿಗಳನ್ನು ಹೊಂದಿರುತ್ತದೆ. ಇದರಲ್ಲಿ ಲಿಫ್ಟ್ ಸೌಲಭ್ಯವಿಲ್ಲದ್ದರಿಂದ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ತುಂಬಾ ತೊಂದರೆಯಾಗಿರುತ್ತದೆ. ಆದುದರಿಂದ ಸದ್ದಿ ‘ಮಿನಿ ವಿಧಾನ ಸೌಧ ಸುಳ್ಯ- ದಲ್ಲಿ ಲಿಫ್ಟ್ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ಸಾಮಾಜಿಕ ಕಾರ್ಯಕರ್ತ ಡಿ ಎಂ ಶಾರಿಕ್ ರವರು ಪುತ್ತೂರು ಎ ಸಿ ರವರಿಗೆ ಮನವಿ ನೀಡಿದ್ದಾರೆ.

ಮಿನಿ ವಿಧಾನ ಸೌಧ ಸುಳ್ಯ- ದಲ್ಲಿ ಲಿಫ್ಟ್ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ಸಾಮಾಜಿಕ ಕಾರ್ಯಕರ್ತ ಡಿ ಎಂ ಶಾರಿಕ್ ರವರು ಪುತ್ತೂರು ಎ.ಸಿ ಗೆ ಮನವಿ Read More »

error: Content is protected !!
Scroll to Top