Author name: Tejas

ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿನಿ ಸಾವು

ಬಂಟ್ವಾಳ ತಾಲೂಕಿನ ತುಂಬೆ ಸಮೀಪ ನಡೆದ ಭೀಕರ ರಸ್ತೆ ಅಪಘಾತಕ್ಕೆ ಮಂಗಳೂರು ಅಲೋಶಿಯಸ್ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ(19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂಶಮೀಮಾ ದಂಪತಿ ಪುತ್ರಿ ಹನಾ ಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿಬಿಬಿಎಂ ವಿದ್ಯಾರ್ಥಿನಿ.ಪುತ್ತೂರಿನಿಂದ ಮಂಗಳೂರು ಕಡೆಗೆ ಐ20ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.

ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿನಿ ಸಾವು Read More »

ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಗೂನಡ್ಕ : ಶಾಲಾ ವಠಾರದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಗುರುವಾರ ವರದಿಯಾಗಿದೆ. ಸಂಪಾಜೆ ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದೆ. ಒಟ್ಟು 3 ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಶೌರ್ಯ ವಿಪತ್ತು ತಂಡದವರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿದರು.

ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ Read More »

ಭಾರೀ ಮಳೆಯಿಂದ ಚೆಲ್ಯಡ್ಕ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ

ದ.ಕ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಭಾರೀಮಳೆ ಸುರಿಯುತ್ತಿದ್ದು ಪುತ್ತೂರು ತಾಲೂಕಿನ‌ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ.ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.ಇನ್ನು ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ಸುತ್ತು

ಭಾರೀ ಮಳೆಯಿಂದ ಚೆಲ್ಯಡ್ಕ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ Read More »

ಮರ ಬಿದ್ದು ಮನೆಗೆ ಹಾನಿ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು ಎಂಬಲ್ಲಿ ನಿರ್ಮಾಣ ಹಂತದ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದು ಮನೆ ಸಂಪೂರ್ಣ ಜಖಂಗೊಂಡು ಮತ್ತು ಮನೆ ಮಾಲಕ ಓಡಿ ಪ್ರಾಣಾಪಯದಿಂದ ಪಾರಾದ ಘಟನೆ ಬುಧವಾರ ವರದಿಯಾಗಿದೆಬೊಳುಗಲ್ಲು ಬಾಲಚಂದ್ರ ಎಂಬವರು ನೂತನ ಮನೆ ನಿರ್ಮಿಸುತ್ತಿದ್ದು ಮನೆ ಪಕ್ಕದಲ್ಲಿದ್ದ ಮರವೊಂದು ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮರ ಬೀಳುತ್ತಿದ್ದಂತೆ ಮನೆ ಮಾಲಕ ಹಿಂದಿನ ಬಾಗಿಲ ಮೂಲಕ ಓಡಿ ಪ್ರಾಣಾಪಯದಿಂದ ಪಾರಾಗಿದ್ದಾರೆ. ಎರಡು ವರ್ಷದ ಹಿಂದೆ

ಮರ ಬಿದ್ದು ಮನೆಗೆ ಹಾನಿ Read More »

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ಸುರತ್ಕಲ್ ಸಮೀಪ ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಭಾರಿ ಸುಂಟರಗಾಳಿಗೆ ಕುಲಾಯಿ ಪ್ರದೇಶದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು Read More »

ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್

ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ – ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳು ತಿಳಿಸಿದ್ದಾರೆ.ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು – ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಅಲ್ಲದೇ ಕೆಎ-19-ಸಿ-0329

ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್ Read More »

ಪೆರಾಜೆ‌ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಕ್ಕೆ ದಾಳಿ: ಅಪಾರ ಪ್ರಮಾಣದ ಕೃಷಿ ನಾಶ

ಪೆರಾಜೆ ಗ್ರಾಮದ ನಿಡ್ಯಮಲೆ – ಹಾಲೆಕಾಡು ಪ್ರದೇಶದಲ್ಲಿ ಕೃಷಿ ತೋಟಕ್ಕೆ ಹಿಂಡು ಆನೆಗಳು ದಾಳಿ ಮಾಡಿ ಅಪಾರ ಪ್ರಮಾಣದ ಕೃಷಿ ನಾಶಪಡಿಸಿದ ಘಟನೆ ವರದಿಯಾಗಿದೆ.ಕಳೆದ ಎರಡು ದಿನಗಳಿಂದ ಈ ಭಾಗದ ಕೃಷಿಕರಾದ ಬೆಳ್ಳಿಪ್ಪಾಡಿ ತಿಮ್ಮಪ್ಪ, ಕುಡಿಯರ ಸುಂದರ, ಚಾಮಕಜೆ ಲಿಂಗಯ್ಯ, ಚಾಮಕಜೆ ದುಗ್ಗಪ್ಪ, ಚಾಮಕಜೆ ನಾರಾಯಣ, ಹೊದ್ದೆಟ್ಟಿ ಗೋಪಾಲಕೃಷ್ಣ, ಕುತ್ಯಾಳ‌ ಜನಾರ್ದನ ಎಂಬವರ ತೋಟಕ್ಕೆ ಕಾಡಾನೆಗಳ ಹಿಂಡು ಬಂದು ಕೃಷಿ ನಾಶ ಪಡಿಸಿವೆ.ಪಕ್ಕದಲ್ಲೇ ಇರುವ ಕೋಳಿಕ್ಕಮಲೆ ಬೆಟ್ಟದ ಕೆಳ ಭಾಗದ ಕಾಡಿನಿಂದ ಕಾಡಾನೆಗಳು ಆನೆಗಳು ರಾತ್ರಿ ವೇಳೆ

ಪೆರಾಜೆ‌ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಕ್ಕೆ ದಾಳಿ: ಅಪಾರ ಪ್ರಮಾಣದ ಕೃಷಿ ನಾಶ Read More »

ಜೇನು ಕೃಷಿಯೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಂಡ ಯುವತಿ

ಕಡಬ : ತಂದೆ ತಾಯಿ ದುಡಿದ ಹಣದಲ್ಲಿ ಮಕ್ಕಳು ಶಿಕ್ಷಣ ಪಡೆಯುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಸ್ವಾವಲಂಬನೆಯ ಕನಸಿನೊಂದಿಗೆ ನರ್ಸಿಂಗ್ ಶಿಕ್ಷಣದ ಜತೆಗೆ ಜೇನು ಕೃಷಿಯಲ್ಲಿ ತೊಡಗಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.ಕಡಬ ತಾಲೂಕಿನ ರಂಜಿಲಾಡಿ ಗ್ರಾಮದ ಎಳುವಾಳೆ ದಿ| ಚಂದ್ರಶೇಖರ ಗೌಡ ಹಾಗೂ ಪ್ರೇಮಾ ದಂಪತಿಯ ಪುತ್ರಿ ದೀಕ್ಷಿತಾ ಜೇನು ಕೃಷಿಯಲ್ಲಿ ಖುಷಿಯನ್ನು ಕಂಡಿರುವ ಯುವತಿ. ಪುತ್ತೂರಿನ ಸಂಸ್ಥೆಯೊಂದರಲ್ಲಿ ದೀಕ್ಷಿತಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಪದವಿ ತರಗತಿಯಲ್ಲಿದ್ದಾಗ ಕೊರೊನಾ ಹಿನ್ನೆಲೆಯಲ್ಲಿ ಕಾಲೇಜಿಗೆ ಸಾಕಷ್ಟು ರಜೆ ಸಿಕ್ಕಿದ

ಜೇನು ಕೃಷಿಯೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಂಡ ಯುವತಿ Read More »

ಜಮೀನಿನ ಬೇಲಿ ಕಿತ್ತು ಹಾಕಿ ಕೃಷಿ ನಾಶ: ಪ್ರಕರಣ ದಾಖಲು

ಇಚ್ಲಂಪಾಡಿ: ಮಾರಕಾಯುಧದೊಂದಿಗೆ ಜಮೀನಿಗೆ ಒಳಗೆ ಅಕ್ರಮ ಪ್ರವೇಶ ಮಾಡಿ ಬೇಲಿ ತೆಗೆದು ಎಸೆದು ಹಾಕಿ ನಾಶಗೊಳಿಸಿದ್ದಾರೆ ಎಂದು ಆರೋಪಿಸಿ ಇಚ್ಲಂಪಾಡಿ ಗ್ರಾಮದ ಅಲಂಗ ಮೇಪರತ್ ನಿವಾಸಿ ಎಂ.ಎಂ.ತೋಮಸ್ ಎಂಬವರು ನೀಡಿದ ದೂರಿನಂತೆ ಅಲೆಕ್ಸ್ ವರ್ಗೀಸ್, ಪಿ.ಜೆ.ಜೋಸೆಫ್ ಹಾಗೂ ರೋಸಮ್ಮ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಸರ್ವೆ ನಂಬ್ರ: 128-2ರಲ್ಲಿ 0.85ಎಕ್ರೆ ಜಮೀನು ಹೊಂದಿದ್ದು, ಈ ಜಮೀನಿಗೆ ಜು.3ರಂದು ಬೆಳಿಗ್ಗೆ ಅಲೆಕ್ಸ್ ವರ್ಗೀಸ್, ಪಿ.ಜೆ. ಜೋಸೆಪ್, ರೋಸಮ್ಮ ಎಂಬವರು ಕೈಯಲ್ಲಿ

ಜಮೀನಿನ ಬೇಲಿ ಕಿತ್ತು ಹಾಕಿ ಕೃಷಿ ನಾಶ: ಪ್ರಕರಣ ದಾಖಲು Read More »

ಗುರುಪೂರ್ಣಿಮೆ ಆಚರಣೆ:ಹಿಂದೆ ಗುರುವಿರಬೇಕು ಮುಂದೆ ಗುರಿ ಇರಬೇಕು

ಅಜ್ಜಾವರ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮವನ್ನು ಆಚರಿಸಲಾಯಿತು.ಗುರುಗಳ ಆಶೀರ್ವಾದದಿಂದ ಜೀವನದಲ್ಲಿ ಸಾಧನೆ ಮಾಡಬಹುದು,ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು. ಗುರುವಿನ ಮೂಲಕ ಪಡೆದ ಶಿಕ್ಷಣ ಶ್ರೇಷ್ಠ ಎಂದು ಆಶ್ರಮದ ಸ್ವಾಮೀಜಿ ಶ್ರೀ ಯೋಶ್ವರಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು. ಅವರು ಗುರುಪೂರ್ಣಿಮಾ ಅಂಗವಾಗಿ ಆಶ್ರಮದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರುಆಶ್ರಮದ ಟ್ರಸ್ಟಿ ಸಾಯಿಗೀತಾ ಅಧ್ಯಕ್ಷತೆ ವಹಿಸಿದ್ದರು. ಡಾ.ನಿತೀನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಆಶ್ರಮದ ಟ್ರಸ್ಟಿ ಪ್ರಣವಿ

ಗುರುಪೂರ್ಣಿಮೆ ಆಚರಣೆ:ಹಿಂದೆ ಗುರುವಿರಬೇಕು ಮುಂದೆ ಗುರಿ ಇರಬೇಕು Read More »

error: Content is protected !!
Scroll to Top