Author name: Tejas

ಹಿರಿಯ ಪತ್ರಕರ್ತ ಭುವನೇಂದ್ರ ಪುದುಬೆಟ್ಟು ನಿಧನ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನ.19ರಂದು ನಿಧನರಾಗಿದ್ದಾರೆ. ಅವರಿಗೆ 42ವರ್ಷ ಪ್ರಾಯವಾಗಿತ್ತು.ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.ಭುವನೇಂದ್ರ ಅವರು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.

ಹಿರಿಯ ಪತ್ರಕರ್ತ ಭುವನೇಂದ್ರ ಪುದುಬೆಟ್ಟು ನಿಧನ Read More »

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ

ದ ಕ ಸಂಪಾಜೆ ಪ್ರಾಥಮಿ ಕ್ರಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗಿದೆ.ಮುಂದಿನ ಡಿ.23ಕ್ಕೆ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿದೆ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಯಿತು. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಹಕಾರಿ ಅಭಿವೃದ್ಧಿ ರಂಗ’ದ ಅಡಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ಸೋಮಶೇಖರ ಕೊಯಿಂಗಾಜೆ, ಮಹಮ್ಮದ್ ಕುಂಞ ಗೂನಡ್ಕ ಯಮುನಾ ಬಿ ಎಸ್, ಉಷಾ ರಾಮ್

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ Read More »

ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಗೆ ಬಲಿ

ಕಾರ್ಕಳ: ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.

ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಗೆ ಬಲಿ Read More »

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ

ಸುಳ್ಯ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಕಛೇರಿ ಸಭಾಂಗಣದಲ್ಲಿ ನ.18ರಂದು ನಡೆಯಿತು.ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ನ್ಯಾಯಕ್ಕಾಗಿ ಕನಕದಾಸರು ತಮ್ಮ ಕೃತಿಗಳಲ್ಲಿ ಆದ್ಯತೆ ನೀಡಿರುವುದು ಅವರ ಕೃತಿಗಳಲ್ಲಿ ನಾವು ಕಾಣಬಹುದಾಗಿದೆ ಎಂದ ಅವರು ಕನಕದಾಸರ ಸಂದೇಶಗಳು ನಮಗೆಲ್ಲ ಮಾರ್ಗದರ್ಶಿ ಎಂದರು.ಅಂಚೆ ಕಛೇರಿ ನಿವೃತ್ತ ಅಧಿಕ್ಷಕ ವಿದ್ವಾನ್ ಹರಿಹರ ಬಾಯಡಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಸುಳ್ಯ

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ Read More »

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಕೆ ಗೋಕುಲ್ ದಾಸ್ ಸುಳ್ಯ ಪ್ರಸ್ತಾವಿಕವಾಗಿ ಮಾತನಾಡಿದರು.ಚೋಕ್ಕಾಡಿ ವಿದ್ಯಾಸಂಸ್ಥೆ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಪಿ ಎಸ್ ಗಂಗಾಧರ್, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರ್ ಮತ್ತು ಅಂಗನವಾಡಿ ಪುಟಾಣಿ ವಿದ್ಯಾರ್ಥಿ ಮಾ. ಅಚಿಂತ್ಯ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ Read More »

ಪೇರಾಲು : ಕ್ರೀಡಾಕೂಟ ಉದ್ಘಾಟನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಂಡೆಕೋಲು ಗ್ರಾಮ ಗೌಡ ಸಮಿತಿ ಆಶ್ರಯದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಡಿ.1ರಂದು ಮಂಡೆಕೋಲಿನಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕ್ರೀಡಾಕೂಟವು ಪೇರಾಲು ಶಾಲೆಯಲ್ಲಿ ನಡೆಯಿತು.ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರದ ಅಧ್ಯಕ್ಷತೆಯನ್ನು ಮಂಡೆಕೋಲು ಗ್ರಾಮ ಗೌಡ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ವಹಿಸಿದ್ದರು.ಮ್ಯಾರಥಾನ್ ಓಟಗಾರರಾದ ವಿನಯ್ ನಾರಾಲು ಉದ್ಘಾಟನೆ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಹಿರಿಯ ಕ್ರೀಡಾಪಟು ದೇವದಾಸ್ ಕುಕ್ಕುಡೇಲು, ಗ್ರಾಮ ಪಂಚಾಯತ್ ಸದಸ್ಯರುಗಳಾದ ನಾರಾಯಣ ಕೆಲ್ಕಾರ್,

ಪೇರಾಲು : ಕ್ರೀಡಾಕೂಟ ಉದ್ಘಾಟನೆ Read More »

ಶಾಸಕರಿಂದ ಶಾಲಾ ನೂತನ‌ ಕೊಠಡಿಗೆ ಗುದ್ದಲಿ ಪೂಜೆ

ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ಕಂದ್ರಪ್ಪಾಡಿ ಇದರ ನೂತನ ಶಾಲಾ ಕೊಠಡಿಯ ಗುದ್ದಲಿ ಪೂಜೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನ.18ರಂದು ನೆರವೇರಿಸಿದರು. ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಂಬೆ, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ನಾಯಕರು,ಕಾರ್ಯಕರ್ತರು, ಶಾಲಾಮಕ್ಕಳು ಉಪಸ್ಥಿತರಿದ್ದರು ‌

ಶಾಸಕರಿಂದ ಶಾಲಾ ನೂತನ‌ ಕೊಠಡಿಗೆ ಗುದ್ದಲಿ ಪೂಜೆ Read More »

ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ

ವಿಟ್ಲ: ಸಮಾನಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ: ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನ ತೀರ್ಥರಾಮಗೌಡ ಪಾಂಬಾರು ಅವರಿಗೆ ಮನೆನಿರ್ಮಾಣಕ್ಕೆ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ ಮತ್ತು ನೂತನ ದ.ಕ.ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್ ಲೋಕಾರ್ಪಣೆ ಸಮಾರಂಭದಲ್ಲಿ

ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ Read More »

ಪರಿವಾರಕಾನದಲ್ಲಿ ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭ : ಭರ್ಜರಿ ವ್ಯಾಪಾರ

ಸುಳ್ಯ: ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೊಟೇಲ್ ಸಮೀಪ ‘ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭಗೊಂಡಿದ್ದು ಭಾರೀ ವ್ಯಾಪಾರ ನಡೆಯುತ್ತಿದೆ. ಸಯ್ಯದ್ ಝನುಲ್ ಅಬಿದಿನ್ ತಂಜಳ್ ಜಯನಗರ ದುವಾ ನೆರವೇರಿಸಿದರು. ಸುಳ್ಯ ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್, ಮೊಗರ್ಪಣೆ ಜುಮಾ ಮಸ್ಟಿದ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್, ಫಿಶ್ ಮಾರ್ಕೇಟ್‌ನ ಮಾಲಕರಾದ ಹಮೀದ್‌, ಶಾಕಿಫ್‌ ಉಪಸ್ಥಿತರಿದ್ದರು.ಮೀನು ಮಾರುಕಟ್ಟೆಯಲ್ಲಿ ಅಂಜಲ್,ಭೂತಾಯಿ,ಬಂಗುಡೆ,ಬೆರ್ಕೆ,ಮದ್ಮಲ್,ಮಾಸಿ,ಸೀಡಿ,ಎಟ್ಟಿ ಸೇರಿದಂತೆ ಉತ್ತಮವಾದ ಎಲ್ಲ ಬಗೆಯ ಮೀನುಗಳು ಅತೀ ಕಡಿಮೆ ದರದಲ್ಲಿ ದೊರೆಯುತ್ತಿದೆ.ಮೀನು ಪ್ರಿಯರಿಗೆ ಇದೊಂದು ಸಿಹಿ ಸುದ್ದಿಯಾಗಿದೆ.ಸುಮಾರು 25

ಪರಿವಾರಕಾನದಲ್ಲಿ ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭ : ಭರ್ಜರಿ ವ್ಯಾಪಾರ Read More »

ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾವೋ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು

ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top