Author name: Tejas

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ನಡೆಯುವ ಅರೆಭಾಷೆ ಗಡಿನಾಡ ಉತ್ಸವದ ಮೊದಲ ಕಾರ್ಯಕ್ರಮ ಅ.27 ರಂದು ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆಯಿತು.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ದೀಪ ಬೆಳಗಿಸಿ, ಹಿಂಗಾರ ಅರಳಿಸಿ ಉದ್ಘಾಟಿಸಿದರು. ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕುತ್ತಿಕೋಲು ಗ್ರಾ.ಪಂ.ಅಧ್ಯಕ್ಷ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್ […]

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ Read More »

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ.

2024- 25ರ ದಕ್ಷಿಣ ವಲಯ ಮಟ್ಟದ ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಚೆನ್ನೈ ಯಲ್ಲಿ ನಡೆಯಲಿದ್ದು ಅರಂತೋಡಿನ ಪ್ರಪುಲ್ ಯು. ಎಸ್. ಆಯ್ಕೆಯಾಗಿದ್ದಾರೆ.ಈತ ಕುಕ್ಕೆ ಸುಬ್ರಹ್ಮಣ್ಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿದ್ದ ಅರಂತೋಡಿನ ಉಳುವಾರು ದಿ. ಯು.ಡಿ. ಶೇಖರ್ ಹಾಗೂ ಉಪ್ಪಿನಂಗಡಿ ಗ್ರಾ.ಪಂ. ಕಾರ್ಯದರ್ಶಿ ಗೀತಾ ಶೇಖರ್ ದಂಪತಿಯ ಪುತ್ರ. ಪುತ್ತೂರಿನ ವಿವೇಕಾನಂದ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ವಿವೇಕಾನಂದ ಕಾಲೇಜನ್ನು ಪ್ರತಿನಿಧಿಸಲಿದ್ದಾರೆ.

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ. Read More »

ಅರೆಭಾಷೆ ಗಡಿನಾಡ ಉತ್ಸವ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು . ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ – 2024 ನಡೆಯಲಿದ್ದು, ಅ.27ರಂದು ಮೊದಲ ಗಡಿನಾಡ ಉತ್ಸವ ಬಂದಡ್ಕದಲ್ಲಿ ನಡೆಯಲಿದೆ. ಇದರ ಆಮಂತ್ರಣ ಬಿಡುಗಡೆ ಸಮಾರಂಭ ಅ.18ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು.ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡರು

ಅರೆಭಾಷೆ ಗಡಿನಾಡ ಉತ್ಸವ 2024 ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳನ್ನು ಮತ್ತೆ ಸೆರೆ ಹಿಡಿದ ಪೊಲೀಸರು

: ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಮತ್ತೆ ಸೆರೆ ಹಿಡಿದಿದ್ದಾರೆ.ಕೆಲ ದಿನಗಳ ಹಿಂದೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ ತಮಿಳುನಾಡು ಕಡೆಗೆ ತೆರಳಿದ್ದ ಸಂಶಯ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಆತನನ್ನು ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ ಪಡೆದು ಸುಳ್ಯಕ್ಕೆ ಕರೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳನ್ನು ಮತ್ತೆ ಸೆರೆ ಹಿಡಿದ ಪೊಲೀಸರು Read More »

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಮೊದಲ ಗಡಿನಾಡ ಉತ್ಸವ ಅ.27ರಂದು ಬಂದಡ್ಕದಲ್ಲಿ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರ ಬಂದಡ್ಕ ಬಳಿಯಿಂದ ಅದ್ದೂರಿ ಮೆರವಣಿಗೆ ನಡೆಯಲಿದೆ. ಮುಂಜಾನೆಯಿಂದ ಸಂಜೆವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುವುದು.

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ Read More »

ಜಾಂಡೀಸ್ ಗೆ ಯುವಕ ಬಲಿ

ಸುಳ್ಯ ನಗರದ ಹಳೆಗೇಟು ಹೊಸಗದ್ದೆ ನಿವಾಸಿ ಭವಾನಿಯವರ ಪುತ್ರ ರೋಷನ್ ರವರು ಜಾಂಡಿಸ್ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಎರಡು ವಾರಗಳ ಹಿಂದೆ ಜಾಂಡಿಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುರುವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಜಾಂಡೀಸ್ ಗೆ ಯುವಕ ಬಲಿ Read More »

ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಅ.24 ರಂದು ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಯವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋಹನ್.ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಸದಸ್ಯರಾದ ಮಾಧವ ಚಾಂತಾಳ, ಮೋಹಿನಿ ಕಟ್ಟ ಹಾಗೂ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು ಮತ್ತು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ

ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ Read More »

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ

ದೇಶಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲು ತಯಾರಿ ನಡೆಯುತ್ತಿದೆ.ಎಲ್ಲೆಲ್ಲೂ ಸಂಭ್ರಮ ಮನೆಮಾಡಿದೆ. ಹಿಂದುಗಳ ಅತಿದೊಡ್ಡ ಹಬ್ಬಕ್ಕೆ ಎಲ್ಲ ರೀತಿಯ ತಯಾರಿಗಳು ನಡೆಯುತ್ತಿವೆ. ದೇಶದೆಲ್ಲಡೆ ಬೆಳಕಿನ ಹಬ್ಬವನ್ನು ಬಹು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಗಳಿಗೆ ದೀಪಾವಳಿ ಹಬ್ಬದ ರಜೆಯನ್ನು ನೀಡಲಾಗಿದೆ. ನವೆಂಬ‌ರ್ ೧ ಶುಕ್ರವಾರ, ನವೆಂಬರ್ ೨ ಶನಿವಾರ, ಸೇರಿದಂತೆ ಒಟ್ಟು ಎರಡು ದಿನಗಳ ರಜೆಯನ್ನು ನೀಡಲಾಗಿದೆ. ನ.೩ ಭಾನುವಾರ ಆದ್ದರಿಂದ ೩ ದಿನಗಳ ರಜೆ ಲಭ್ಯವಾಗಲಿದೆ.

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ Read More »

ತೊಡಿಕಾನ : ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ನಷ್ಟ

ತೊಡಿಕಾನ ಸಮೀಪದ ಬಂಗಾರಕೋಡಿ ಎಂಬಲ್ಲಿ‌ ಇಲ್ಲಿಯ ತೋಟವೊಂದಕ್ಕೆ ಕಾಡಾನೆಗಳು ದಾಳಿ ನಡೆಸಿ ಅಪಾರ ಕ್ರಷಿ ಬೆಳೆಗಳನ್ನು ನಾಶ ಪಡಿಸಿದ ಘಟನೆ ವರದಿಯಾಗಿದೆ.ಇಲ್ಲಿಯ ವಿದ್ಯಾ ಅವರ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು 10 ಅಡಿಕೆ,ಎರಡು ಬಾಳೆ ಮರ,ಒಂದು ಜೀಕುಜ್ಜೆ ಮರಗಳನ್ನು ಮುರಿದು ಹಾಕಿವೆ.ಅಲ್ಲದೆ ಒಂದು‌ ತೆಂಗಿನ ಮರಕ್ಕೆ ಹಾನಿ ಮಾಡಿವೆ ಎಂದು ತಿಳಿದು ಬಂದಿದೆ.ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಒದಗಿಸಿ ಕೊಡುವ ಭರವಸೆ ನೀಡಿದ್ದಾರೆ.

ತೊಡಿಕಾನ : ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ನಷ್ಟ Read More »

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು

ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.ಕಿಶೋರ್ ಕುಮಾರ್ ರಿಗೆ 3654 ಮತಗಳು, ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1957 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್ (ಪಕ್ಷೇತರ)-9 ಮತ, ಅಸಿಂಧು-87 ಮತ ಎಂದು ತಿಳಿದುಬಂದಿದೆ. ಬಿ.ಜೆ.ಪಿ.ಯ ಕಿಶೋರ್ ಕುಮಾರ್ 1697 ಮತಗಳ ಲೀಡ್ ಪಡೆದು ವಿಜಯಶಾಲಿಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು Read More »

error: Content is protected !!
Scroll to Top