Author name: Tejas

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ

ಕಡಬ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ ಶಂಕರ್ ರವರಿಗೆ ಮನವಿ ನೀಡಲಾಯಿತು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಲ್ಪಡುವ ಅಕ್ಕಿಯಲ್ಲಿ ಸಂಪೂರ್ಣವಾಗಿ ಕುಚ್ಚಲಕ್ಕಿ ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಪ್ರತಿ ಕುಟುಂಬಕ್ಕೂ ನಿಗದಿಯಾದ ಅಕ್ಕಿಯ ಪ್ರಮಾಣದಲ್ಲಿ ಅರ್ಧದಷ್ಟು ಬೆಳ್ತಿಗೆ ಅಕ್ಕಿ ನೀಡಲು ಬೇಕಾಗಿ […]

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ Read More »

ಮೊಸರು ಕುಡಿಕೆ ಉತ್ಸವ

ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಹತ್ಯೆಯ ಸಂದರ್ಭ ಬಿಜೆಪಿ ಸರಕಾರ ಇದ್ದರೂ ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳ ಎನ್ ಕೌಟಂರ್ ಆಗಿಲ್ಕಶ್ರೀಕೃಷ್ಣನ ಪ್ರೇರಣೆಯಲ್ಲಿ ಹಿಂದೂ ಹೃದಯದಲ್ಲಿ ಜಾಗೃತಿ ಯನ್ನು ಮೂಡಿಸಿ, ಹಿಂದೂ ಸಮಾಜವನ್ನು ಒಟ್ಟಾಗಿಸುವ ಮತ್ತು ರಕ್ಷಣೆ ಮಾಡುವ ಕೆಲಸ ವಿಶ್ವ ಹಿಂದೂ ಪರಿಷತ್ ಮಾಡುತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಘಟನೆಯು ಮೈಸೂರಿನಲ್ಲಿಯೂ ಪಕ್ಷ ಸಂಘಟನೆ ಮಾಡಲು ಪ್ರೇರಣೆಯಾಗಿದೆ. ಹಿಂದೂಗಳ ಸಂರಕ್ಷಣೆಗೆ ಪಣ ತೊಟ್ಟಿರುವ ವಿಶ್ವ ಹಿಂದೂ ಪರಿಷತ್‌ ಭಜರಂಗದಳವು

ಮೊಸರು ಕುಡಿಕೆ ಉತ್ಸವ Read More »

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ

ಸುಳ್ಯ: ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು.ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಜಿಲ್ಲಾ ಉಸ್ತುವಾರಿ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ,

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ Read More »

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಸುಳ್ಯ: ಸುಳ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದರು.ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿಗೆ ವಿಫುಲ‌ ಅವಕಾಶಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಡಿಸುವುದು. ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವುದು ನಮ್ಮ ಗುರಿ ಮತ್ತು ಆಶಯ ಎಂದರು.ಈ ಹಿಂದೆ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ ಪ್ರತಿನಿಧಿಗಳು ಜಿಲ್ಲೆಯಲ್ಲಿ ರೈಲ್ವೇ, ವಿಮಾನ ನಿಲ್ದಾಣ, ಎಂಆರ್‌ಪಿಎಲ್, ಎಂಸಿಎಫ್ ಸೇರಿದಂತೆ

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ Read More »

ಎ..7 ಕ್ಕೆ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 202ನೇ ಕ್ರತಿ ‘ಯಜ್ಞ ಕರ್ಮ ‘ ಬಿಡುಗಡೆ

ಅಜ್ಜಾವರ ಚೈತನ್ಯ ಸೇವಾ ಟ್ರಸ್ಟ್ (ರಿ.) ಇದರಶ್ರೀ ದೇವಿ ಭಗವತಿ ಮಂದಿರದ 26ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಕ್ರತಿ ಬಿಡುಗಡೆಏ.7 ರಂದು ಆಶ್ರಮದಲ್ಲಿ ನಡೆಯಲಿದೆ ಎಂದು ಇಲ್ಲಿಯ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬೆಳಿಗ್ಗೆ ಗಂಟೆ 9-00ಕ್ಕೆ ಗಣಪತಿ ಪೂಜೆ,ಗಂಟೆ 10-00ಕ್ಕೆ : ಸತ್ಯನಾರಾಯಣ ದೇವರ ಪೂಜೆ,ಗಂಟೆ 11-00ಕ್ಕೆ ಭಜನಾ ಸತ್ಸಂಗ ಅಡೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ಬಾಲ ಪ್ರತಿಭೆಗಳಿಂದ ನಡೆಯಲಿದೆ.ಗಂಟೆ 12-00ಕ್ಕೆ ಮಂಗಳಾರತಿ ನಡೆಯಲಿರುವುದು.ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಕೆ.ವಿ.ಜಿ.

ಎ..7 ಕ್ಕೆ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 202ನೇ ಕ್ರತಿ ‘ಯಜ್ಞ ಕರ್ಮ ‘ ಬಿಡುಗಡೆ Read More »

ಇಂದಿನಿಂದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಮಾರ್ಚ್ ೫, ೬ ಮತ್ತು ೭ರಂದು ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಶ್ರದ್ದಾ ಭಕ್ತಿಯಿಂದ ನಡೆಯಲಿದೆ.ಕಾರ್ಯಕ್ರಮ ಯಶಸ್ಸಿಗಾಗಿ ಸಿದ್ಧತೆಗಳು ಪೂರ್ಣಗೊಂಡಿದ್ದು ಪರಿಸರ ಕೇಸರಿ ಬಂಟಿಂಗ್ಸ್ ತೋರಣ ಬ್ಯಾನರ್ ಗಳಿಂದ ಕಂಗೊಳಿಸುತ್ತಿದೆ.ಮಾ.೫ರಂದು ಬೆಳಗ್ಗೆ ಸುಳ್ಯ ಮತ್ತು ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್ ಬಳಿಯಿಂದಾಗಿ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಅಜ್ಜಾವರ ಮಹಿಷಮರ್ಧಿನಿ ದೇವಸ್ಥಾನದಲ್ಲಿ

ಇಂದಿನಿಂದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ Read More »

ಆ್ಯಸಿಡ್ ಎರಚಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಜಗನ್ನಾಥ ಜಯನಗರ ಒತ್ತಾಯ

ಸುಳ್ಯ : ಕಡಬ ಕಾಲೇಜು ವಿದ್ಯರ್ಥಿನಿಯರಿಗೆ ಆಸೀಡ್ ಎರಚಿದ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ಗೆ ಒಳಪಡಿಸುವಂತೆ ಬಿಜೆಪಿ ಎಸ್ ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಜಿ. ಜಗನ್ನಾಥ ಜಯನಗರ ಒತ್ತಯಾ. ಶಾಲಾ ಶಿಕ್ಷಣ ಇಲಾಖೆ ಕೂಡ ಮಕ್ಕಳ ಚಲನವನದಲ್ಲಿ ನಿಗ ವಹಿಸಬೇಕು. ತರಗತಿಗೆ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರುವಂತೆ ಪಾಲಿಸಬೇಕುಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಗಳಿಗೆ ಆಸಿಡ್ ಎರಚಿರುವ ಪ್ರಕಾರಣ ನದ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಆ್ಯಸಿಡ್ ಎರಚಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಜಗನ್ನಾಥ ಜಯನಗರ ಒತ್ತಾಯ Read More »

ವೈಭವದಿಂದ ನಡೆದ ಪಂಜ ಪಂಚಲಿಂಗೇಶ್ಬರ ದೇವರ ರಥೋತ್ಸವ

ಪಂಜ : ಇತಿಹಾಸ ಪ್ರಸಿದ್ದ ಪಂಜ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಮಂಗಳವಾರ ರಾತ್ರಿ ಶ್ರದ್ದಾ ಭಕ್ತಿಯಿಂದ ಬ್ರಹ್ಮ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರು ರಥೋತ್ಸವವನ್ನು ಕಣ್ಣುಂಬ್ತಿಕೊಂಡರು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳ ಬಳಿಕ ಬ್ರಹ್ಮ ರಥೋತ್ಸವ ನಡೆಯಿತು.ಶ್ರೀ ಕಾಡು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ಐವತ್ತೊಕು ಪಟೇಲ್ ಮನೆಯವರನ್ನು

ವೈಭವದಿಂದ ನಡೆದ ಪಂಜ ಪಂಚಲಿಂಗೇಶ್ಬರ ದೇವರ ರಥೋತ್ಸವ Read More »

ಐವರ್ನಾಡು: ಶ್ರೀ ದೇವರ ಬಲಿ ಉತ್ಸವ

ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನಗೊಂಡಿತು.ಗುರುವಾರ ವಿವಿಧ ಧಾರ್ಮಿಕ, ಸಾಂಸ್ಕöತಿಕ ಕಾರ್ಯಕ್ರಮಗಳೊಂದಿಗೆ ಪ್ರತಿಷ್ಠಾ ವಾರ್ಷಿಕೋತ್ಸವ ಆರಂಭಗೊಂಡು ಶನಿವಾರದ ವರೆಗೆ ವಿಜೃಂಭಣೆಯಿAದ ನಡೆಯಿತು. ಶನಿವಾರ ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಬಂಡಾರ ಆಗಮನದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಜರುಗಿತು. ಬಳಿಕ ಶುದ್ಧಿ ಕಲಶ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.ರಾತ್ರಿ ದೈವಗಳ ನಡಾವಳಿ ನಡೆಯಿತು. ಶನಿವಾರ ಬೆಳಿಗ್ಗೆ ಶ್ರೀಧರ ಖಂಡಿಗೆಮೂಲೆ ತಂಡದವರಿAದ ಭಕ್ತಿಗಾನ

ಐವರ್ನಾಡು: ಶ್ರೀ ದೇವರ ಬಲಿ ಉತ್ಸವ Read More »

ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ

ಸುಳ್ಯ : ತಾಲೂಕಿನ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಅದ್ದೂರಿಯಾಗಿ ಸಮಾಪನಗೊಂಡಿತು. 7 ದಿನಗಳ ಕಾಲ ನಡೆದ ಉರೂಸ್‌ನ 7ನೇ ದಿನವಾದ ಜ.27 ರಂದು ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಅಸ್ಸಯ್ಯದ್ ಮೈನುಲ್ ಅಬಿದೀನ್ ತಂಜಳ್ ದುಗ್ಗಲಡ್ಕ ದುವಾ ನೆರವೇರಿಸಿದರು. ದಾರಿ ತಪ್ಪುತ್ತಿರುವ ಯುವ ಸಮೂಹ ಎಂಬ ವಿಷಯದಲ್ಲಿ ಆಶಿಕ್ ದಾರಿಮಿ ಆಲಪ್ಪುಝ ಧಾರ್ಮಿಕ ಉಪನ್ಯಾಸನೀಡಿದರು. ಉರೂಸ್ ಸ್ವಾಗತ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಹಸನ್

ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ Read More »

error: Content is protected !!
Scroll to Top