Author name: Tejas

ಪಂಜ : ಶ್ರೀ ಪಂಚಲಿಂಗೇಶ್ಬರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪಂಜ : ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವಕ್ಕೆ ಧ್ವಜಾರೋಹಣ ಫೆ.1ರಂದು ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳು ನಡೆದು ಧ್ವಜಾರೋಹಣ ನಡೆಯಿತು.ದೇವಳಕ್ಕೆ ಆಗಮಿಸಿದ ತಂತ್ರಿ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಧ್ವಜಾರೋಹಣ ನಡೆದು ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು ದೇವಳದ ಆಡಳಿತಾಧಿಕಾರಿ, ತಹಶೀಲ್ದಾರ್ ಜಿ.ಮಂಜುನಾಥ, ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ಉಪತಹಶೀಲ್ದಾ‌ರ್ ಚಂದ್ರಕಾಂತ್ ಎಂ ಆರ್, ದೇವಳದ ವ್ಯವಸ್ಥಾಪನಾ ಮಾಜಿ […]

ಪಂಜ : ಶ್ರೀ ಪಂಚಲಿಂಗೇಶ್ಬರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್

ಬೆಳ್ಳಾರೆ : ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಜ.21ರಿಂದ 27ರ ನಡೆಯಲಿದೆ. ಈ ಉರೂಸ್ ಸಮಾರಂಭದಲ್ಲಿ ಸುಪ್ರಸಿದ್ಧ ವಿದ್ವಾಂಸರು, ಸಾದಾತುಗಳು, ಸೂಫಿವರ್ಯರು ಭಾಗವಹಿಸಲಿದ್ದಾರೆ ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಆಡಳಿತ ಸಮಿತಿ ಹಾಗೂ ಉರೂಸ್ ಸ್ವಾಗತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಉರೂಸ್ ಸ್ವಾಗತ ಸಮಿತಿ ಕಾರ್ಯದರ್ಶಿ ಯು.ಪಿ. ಬಶೀರ್ ಬೆಳ್ಳಾರೆ ಕಾರ್ಯಕ್ರಮದ ಮಾಹಿತಿ ನೀಡಿದರು. ಜ.21 ರಂದು ಪೂ.9ಕ್ಕೆ ಅಸ್ಸಯ್ಯದ್ ಝನುಲ್‌ ಅಭಿದೀನ್ ಜಿಫ್ರಿ

ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ Read More »

ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ

ಸುಳ್ಯ : ತಾವು ಪಡೆದ ಶಿಕ್ಷಣ ಬದುಕಿಗೆ ಸಾರ್ಥಕತೆಯನ್ನು ನೀಡವಂತಿರಬೇಕು. ಆ ಶಿಕ್ಷಣದ ಮೂಲಕ ಸಮಾಜಕ್ಕೆ ಕೊಡುಗೆ ಇದ್ದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ ಎಂದು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಅಂಹಾರ ಹೇಳಿದರು.ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾಜವನ್ನು ಮುನ್ನಡೆಸಲು ಶಿಕ್ಷಣವೇ ಆಧಾರ. ಹಿರಿಯರು ಸ್ಥಾಪಿಸಿದ ಆ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಜವಾಬ್ದಾರಿ

ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ Read More »

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ

ಸುಳ್ಯ : ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದು ಮಾಜಿ ಸಚಿವ ಹಾಗೂ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಹೇಳಿದ್ದಾರೆ. ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಊರಿನ ಜನರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆಯಿಂದ ಹಿರಿಯರು ಊರಿನಲ್ಲಿ ಶಾಲೆಗಳನ್ನು ಸ್ಥಾಪಿಸಿದ್ದಾರೆ.ಆ ಶಾಲೆಯಿಂದ ಶಿಕ್ಷಣ ಪಡೆದು

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ Read More »

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದು ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದುಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಅವರು ಮೂರು ದಿನಗಳ ಕಾಲ ನಡೆಯುವ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರಿ ಶಾಲೆ, ಅನುದಾನಿತ ಶಾಲೆ ಎಂಬ ತಾರತಮ್ಯ ಬದಲಾಗಬೇಕಾಗಿದೆ.

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ Read More »

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಸುಳ್ಯ: ಸುಳ್ಯ ತಾಲೂಕಿನ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.12,13,14 ರಂದು ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚೊಕ್ಕಾಡಿ ಎಜ್ಯುಕೇಶನ್‌ ಸೊಸೈಟಿಯ ಅಧ್ಯಕ್ಷರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಶಾಲೆಯಲ್ಲಿ ಗುಣಮಟ್ಟದ

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ Read More »

ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸೀಯೇಶನ್ ಇವರ ಸಹಭಾಗಿತ್ವದಲ್ಲಿ ಪುರುಷರ 62 ಕೆ.ಜಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ. 31 ರಂದು ಕೊಡಿಯಾಲ ಮೂವಪ್ಪೆ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಕ್ರೀಡಾಕೂಟದ ಬಗ್ಗೆ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌

ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ Read More »

ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನ್ಯೂ ಮಲ್ಲಿಕಾ ಸ್ಟಾಲ್ ಶುಭಾರಂಭ

ಸುಳ್ಯದ ಕೆ.ಎಸ್.ಆ‌ರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಬಾಲಕೃಷ್ಣ ಬಿ.ವಿ.ತೊಡಿಕಾನರವರ ಮಾಲಕತ್ವದ ನ್ಯೂ ಮಲ್ಲಿಕಾ ಸ್ಟಾಲ್ ಮತ್ತು ಜ್ಯೂಸ್ ಸೆಂಟರ್ ಹಾಗೂ ಶ್ರೀ ಮಲ್ಲಿಕಾ ಸ್ಟಾಲ್ ನ.22 ರಂದು ಶುಭಾರಂಭಗೊಂಡಿತು. ಬೆಳಿಗ್ಗೆ ಗಣಹೋಮ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆಯವರು ಪ್ರಥಮ ಗ್ರಾಹಕರಾಗಿದ್ದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿದ್ದು ಶುಭಹಾರೈಸಿದರು. ಇಲ್ಲಿ ಜ್ಯೂಸ್ ಹಾಗೂ ಎಲ್ಲಾ ಬಗೆಯ ಶುಚಿರುಚಿಯಾದ ಬೇಕರಿ ಐಟಂಗಳು ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನ್ಯೂ ಮಲ್ಲಿಕಾ ಸ್ಟಾಲ್ ಶುಭಾರಂಭ Read More »

ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಕುಟ್ಟಣಮೂಲೆ ಶಿವಪ್ಪ ನಾಯ್ಕ (65) ಎಂಬವರು ಮನೆ ಸಮೀಪದ ಮರವೊಂದಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮನೆಯವರು ಸುಳ್ಯಕ್ಕೆ ಬಂದಿದ್ದರು. ವಾಪಸ್‌ ಮನೆಗೆ ಹೋಗುವಾಗ ಶಿವಪ್ಪ ನಾಯ್ಕರು ಮನೆಯಲ್ಲಿರಲಿಲ್ಲ. ಬಳಿಕ ಮನೆ ಸಮೀಪ ನೇಣು ಹಾಕಿ ಮೃತಪಟ್ಟಿರುವುದು ಕಂಡು ಬಂತು. ಪೋಲೀಸರು ಸ್ಥಳಕ್ಕೆ ಬಂದುಮಹಜರು ನಡೆಸಿದರು.

ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ Read More »

ತಮ್ಮನಿಂದ ಅಣ್ಣನಿಗೆ ಗಾರೆ ಕೆಲಸ ಮಾಡುವ ಸಾಧನದಿಂದ ಹಲ್ಲೆ

ಅಣ್ಣ ಸ್ಥಿತಿ ಚಿಂತಾಜನಕ ಸುಳ್ಯ : ತಮ್ಮನೋರ್ವ ಅಣ್ಣನ ಮೇಲೆ ಗಾರೆ ಕೆಲಸ ಮಾಡುವ ಸಾಧನದಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ ವರದಿಯಾಗಿದೆ. ಎಂ.ಚೆಂಬು ಗ್ರಾಮದ ನಾಯರ್ ಗದ್ದೆ ದುರ್ಗಾಪ್ರಸಾದ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ತಮ್ಮ ನಾಯರ್ ಗದ್ದೆ ಪದ್ಮನಾಭ ಎಂಬುವವರಿಂದ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.ಗಂಭೀರ ಸ್ಥಿತಿಯಲ್ಲಿರುವ ದುರ್ಗಾ ಪ್ರಸಾದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮ್ಮನಿಂದ ಅಣ್ಣನಿಗೆ ಗಾರೆ ಕೆಲಸ ಮಾಡುವ ಸಾಧನದಿಂದ ಹಲ್ಲೆ Read More »

error: Content is protected !!
Scroll to Top