Author name: Tejas

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್‌ಐಎ ಭೇಟಿ

ಸುಳ್ಯ ತಾಲೂಕಿನ‌ ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪೈಕಿ ಓರ್ವನಾಗಿರುವ ಉಪ್ಪಿನಂಗಡಿ 34ನೇ ನೆಕ್ಕಿಲಾಡಿಯ ಅಗ್ನಾಡಿ ಮನೆ ನಿವಾಸಿ ಕೆ.ಎ. ಮಸೂದ್‌ನ ಮನೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ರವಿವಾರ ಭೇಟಿ ನೀಡಿ, ಅಗಸ್ಟ್‌ 18ರ ಒಳಗಾಗಿ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ನ್ಯಾಯಾಲಯದ ಎರಡನೇ ಬಾರಿಯ ಆದೇಶ ಪ್ರತಿಯನ್ನು ಮನೆಯ ಮುಂಬಾಗಿಲಿಗೆ ಅಂಟಿಸಿದರು.ಈ ಸಂಬಂಧ ಧ್ವನಿ ವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಅಗಸ್ಟ್‌ ನಿಗದಿತ ಗಡುವಿನೊಳಗೆ ನ್ಯಾಯಾಲಯಕ್ಕೆ ಶರಣಾಗತ […]

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್‌ಐಎ ಭೇಟಿ Read More »

ಬೈಕ್ ಮೇಲೆ ಯುವಕ-ಯುವತಿಯ ರೊಮ್ಯಾನ್ಸ್

ಯುವಕನೊಬ್ಬ ಬೈಕ್ ಚಲಾಯಿಸುತ್ತಿದ್ದ ವೇಳೆ ತನ್ನ ಪ್ರೇಯಸಿಯನ್ನು‌ ಪೆಟ್ರೋಲ್ ಟ್ಯಾಂಕ್ ಮೇಲೆ ಹಿಮ್ಮುಖವಾಗಿ ಕುಳಿತು ಆತನಿಗೆ ಮುತ್ತಿಟ್ಟಿದ್ದಾಳೆ.ದೆಹಲಿಯ ಮಂಗೋಲ್‌ಪುರಿ ಹೊರ ವರ್ತುಲ ರಸ್ತೆಯ ಮೇಲ್ವೇತುವೆಯಲ್ಲಿ ಈ ರೊಮ್ಯಾನ್ಸ್ ನಡೆದಿದೆ.ಈ ರೋಮ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಬೈಕ್ ಮೇಲೆ ಯುವಕ-ಯುವತಿಯ ರೊಮ್ಯಾನ್ಸ್ Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಇಂದು (ಜುಲೈ 18) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು. ಇವರು ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುತ್ತಿದ್ದಾಗ ಕಂಪ್ಲಾಪುರ ಬಳಿ ಮುಂಜಾನೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು

ಸುಳ್ಯ ತಾಲೂಕಿನ‌ ಕನಕಮಜಲು‌ ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಕಳೆದ ರಾತ್ರಿ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ನಡೆದಿದೆ.ಯುರೇಶ್ ಬುಡ್ಲೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರ ಕುಟುಂಬ ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು.ಆ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ ಕಳ್ಳರು ಮನೆಯೊಳಗೆ ಜಾಲಾಡಿ, ಅಂದಾಜು ಮೂವತ್ತು ಪವನ್ ಗೂ ಅಧಿಕ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ.ಸುಳ್ಯ

ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು Read More »

ಯುವಕನಿಂದ ಮಹಿಳೆಗೆ ಪೋನ್ ಮಾಡಿ ಕಿರುಕುಳ : ಅಟ್ಟಾಡಿಸಿಕೊಂಡು ಹೊಡೆದ ಊರವರು

ಚಿಕ್ಕಮಗಳೂರಿನ ಕಟ್ಟೆಮನೆ ಗ್ರಾಮದಲ್ಲಿ ಡಿಶ್ ರಿಪೇರಿ ಮಾಡುವವನು ಮಹಿಳೆಯರಿಗೆ ತನ್ನ ಮೊಬೈಲ್ ನಂಬರ್ ಕೊಡುವ ವೇಳೆ ಏನಾದರೂ ಸಮಸ್ಯೆ ಇದ್ದರೆ ಕರೆ ಮಾಡಿ ಎಂದು ಹೇಳುತ್ತಿದ್ದ. ಆಮೇಲೆ ಮಹಿಳೆಯರಿಗೆ ಕಾಲ್ ಮಾಡಿ ಪೀಡಿಸುತ್ತಿದ್ದ. ಪದೇ ಪದೇ ತನಗೆ ಕರೆ ಮಾಡುವಂತೆ ಹೇಳಿ ಮಹಿಳೆಯರಿಗೆ ಪೀಡಿಸುತ್ತಿದ್ದವನಿಗೆ ಇಂದು ಊರಿನವರು ಅಟ್ಟಾಡಿಸಿಕೊಂಡು ಹೊಡೆದ ಘಟನೆ ನಡೆದಿದೆ.

ಯುವಕನಿಂದ ಮಹಿಳೆಗೆ ಪೋನ್ ಮಾಡಿ ಕಿರುಕುಳ : ಅಟ್ಟಾಡಿಸಿಕೊಂಡು ಹೊಡೆದ ಊರವರು Read More »

ಭೂ ವಿವಾದ: ಭೀಕರವಾಗಿ ಚೂರಿಯಿಂದ ಇರಿದು ಕೊಂದ ಸಹೋದರ

ಮಡಿಕೇರಿ ತಾಲೂಕು ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಶುಕ್ರವಾರ ವರದಿಯಾಗಿದೆ.ಸತ್ತಾರ್, ರಫೀಕ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.ಸಂಪಾಜೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಭೂ ವಿವಾದ: ಭೀಕರವಾಗಿ ಚೂರಿಯಿಂದ ಇರಿದು ಕೊಂದ ಸಹೋದರ Read More »

ಜು.17ರಿಂದ ಅಗ್ನಿಪಥ್ ಸೇನಾ ನೇಮಕಾತಿ

ಉಡುಪಿ ಜಿಲ್ಲೆಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್‌ ಸೇನಾ ನೇಮ ಕಾತಿ ರ್ಯಾಲಿಯು ಜು. 17ರಿಂದ 25ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ರ್ಯಾಲಿ ಕುರಿತ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರ್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ

ಜು.17ರಿಂದ ಅಗ್ನಿಪಥ್ ಸೇನಾ ನೇಮಕಾತಿ Read More »

ತಾಯಿ ಎದುರೇ ಮಗಳನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪಾಪಿ

ಹರಿಯಾಣದ ಗುರುಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ.19 ವರ್ಷದ ಯುವತಿಯನ್ನು ರಾಜ್‌ಕುಮಾರ್ (23) ಎಂಬ ಯುವಕ ಆಕೆಯ ತಾಯಿಯ ಎದುರೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.ಆಕೆ ಜೊತೆ ನಿಶ್ಚಿತಾರ್ಥವಾಗಿ ಮದುವೆ ನಿಲ್ಲಿಸಿದ್ದರಿಂದ ಕೋಪಗೊಂಡಿದ್ದ ಆತ ಹುಡುಗಿ ಮನೆ ಬಳಿ ಬಂದಿದ್ದ. ಈ ವೇಳೆ ಗಲಾಟೆ ಮಾಡಿ ತಾಯಿ ಎದುರಲ್ಲೇ ಆಕೆಗೆ ಚಾಕು ಇರಿದಿದ್ದಾನೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಇತ್ತ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ನೀಡಲಾಗಿದೆ.

ತಾಯಿ ಎದುರೇ ಮಗಳನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪಾಪಿ Read More »

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಲು ಒತ್ತಾಯ

ವಿಧಾನಸೌಧದಲ್ಲಿ ಮುಸ್ಲಿಂ ಶಾಸಕರು ನಮಾಜ್ ಮಾಡಲು ಕೊಠಡಿ ವ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ ಫಾರೂಕ್ ಸಭಾಪತಿಗೆ ಮನವಿ ಮಾಡಿದ್ದಾರೆ. ಮುಸ್ಲಿಮರಿಗೆ ಐದು ಹೊತ್ತಿನ ನಮಾಜ್ ಕಡ್ಡಾಯವಾಗಿದೆ ಹಾಗಾಗಿ, ಕಲಾಪದ ವೇಳೆ ಶಾಸಕರು ನಮಾಜ್ ಮಾಡಲು ವ್ಯವಸ್ಥೆ ಮಾಡಿಕೊಂಡುವಂತೆ ಫಾರೂಕ್ ಒತ್ತಾಯಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್. ಕೆ ಪಾಟೀಲ್ ಈ ಬಗ್ಗೆ ಸಭಾಪತಿಗಳ ನೇತೃತ್ವದಲ್ಲಿ ಸಭೆ ನಡೆಸಿ ಅಲ್ಲಿ ತೀರ್ಮಾಣಕ್ಕೆ ಬರೋಣ ಎಂದಿದ್ದಾರೆ.

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಲು ಒತ್ತಾಯ Read More »

ಅನ್ನಭಾಗ್ಯ ಯೋಜನೆಯಲ್ಲಿ ಕೆಲವರಿಗೆ ಸಿಗಲ್ಲ ಅಕ್ಕಿ ಬದಲು ಹಣ

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಇಂದಿನಿಂದ 5 ಕೆ.ಜಿ ಅಕ್ಕಿಯ ಹಣ ವರ್ಗಾವಣೆಯಾಗಲಿದೆ. ಆದರೆ, ಕೆಲವೊಂದು ಕಾರಣಗಳಿಂದ ಎಲ್ಲರಿಗೆ ಹಣ ಸಿಗದೇ ಇರಬಹುದು. ಆ ಕಾರಣಗಳು ಈ ರೀತಿಯಿದೆ.1.ಪಡಿತರ ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರು ಇದ್ದರೆ, ಆ ಕುಟುಂಬದ ಮುಖ್ಯಸ್ಥರು ಯಾರೂ ಎಂಬುವುದು ಇತ್ಯರ್ಥವಾಗದೇ ಹಣ ಸಿಗುವುದಿಲ್ಲ. 2. ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದಲ್ಲಿ 3 ಅಥವಾ 3ಕ್ಕಿಂತ ಕಡಿಮೆ ಸದಸ್ಯರಿದ್ದರೆ ಹಣ ದೊರೆಯುವುದಿಲ್ಲ. ಕಾರಣ ಅವರು ಈಗಾಗಲೇ 30 ಕೆ.ಜಿ ಅಕ್ಕಿ ಪಡೆಯುತ್ತಿರುತ್ತಾರೆ. 3.

ಅನ್ನಭಾಗ್ಯ ಯೋಜನೆಯಲ್ಲಿ ಕೆಲವರಿಗೆ ಸಿಗಲ್ಲ ಅಕ್ಕಿ ಬದಲು ಹಣ Read More »

error: Content is protected !!
Scroll to Top