Author name: Tejas

ಕನಕಮಜಲು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರಿಗೆ ಗಾಯ

ಸುಳ್ಯ ತಾಲೂಕಿನ ಕನಕಮಜಲು ಸಮೀಪ ಕಾರೊಂದು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೇ 8 ರಂದು ವರದಿಯಾಗಿದೆ.ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದು,ಘಟನೆಯಿಂದ ಕಾರಿನಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಸೇರಿ ನಾಲ್ವರಿಗೆ ಗಾಯಗಳಾಗಿವೆ.ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಲಾಗಿದೆ.ಕಾರಿನಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆಯುವಲ್ಲಿ ಸ್ಥಳೀಯರಾದ […]

ಕನಕಮಜಲು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರಿಗೆ ಗಾಯ Read More »

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ ಕಾರ್ಯಕ್ರಮ ಮೇ.9 ರಂದು ದೇಗುಲದ ಸಭಾಭವನದಲ್ಲಿ ನಡೆಯಿತು.ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ರವರು ನೇಮಿರಾಜ ಪಲ್ಲೋಡಿ ಮತ್ತು ಅವರ ಪತ್ನಿ ಶ್ರೀಮತಿ ಕವಿತಾ ನೇಮಿರಾಜ ಪಲ್ಲೋಡಿ ಅವರನ್ನು ಸನ್ಮಾನಿಸಿದರು. ವ್ಯವಸ್ಥಾಪನಾ ಸಮಿತಿಯ ಗೌರವ ಸಲಹೆಗಾರರಾದ ಪರಮೇಶ್ವರ ಬಿಳಿಮಲೆ,

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ Read More »

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗಕ್ಕೆ 05 ರ‍್ಯಾಂಕ್

ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು, ಇವರು ಮಾರ್ಚ್ 2026ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ. /ಎಂ.ಎಸ್ಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತ್ತರ ವಿಭಾಗದ 05 ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ರ‍್ಯಾಂಕ್‌ಗಳನ್ನು ತಮ್ಮದಾಗಿಸಿಕೊಂಡಿದ್ದು,ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ. ಜಿ. ರವರ ಮಾರ್ಗದರ್ಶನದಲ್ಲಿ ಡಾ. ಭಾಗ್ಯವತಿ ಎಸ್., ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.ರಸಶಾಸ್ತ್ರ ಬೈಷಜ್ಯ ಕಲ್ಪನಾ ವಿಭಾಗ ಮುಖ್ಯಸ್ಥರಾದ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗಕ್ಕೆ 05 ರ‍್ಯಾಂಕ್ Read More »

ತೊಡಿಕಾನ : ಅಕ್ರಮ ಮರಳು ಸಂಗ್ರಹ ಪತ್ತೆ,ಪೊಲೀಸ್ ದಾಳಿ

,ತೊಡಿಕಾನ ಗ್ರಾಮದ ಶೆಟ್ಟಿಯಡ್ಕ ಎಂಬಲ್ಲಿ ತೋಟ ಒಂದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ದಾಳಿ ನಡೆಸಿ ಸುಮಾರು 1.20 ಲಕ್ಷ ರೂಪಾಯಿ ಮೌಲ್ಯದ ಮರಳನ್ನು ವಸಪಡಿಸಿಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ.ಪೆರಾಜೆ ಗ್ರಾಮದ ಮನು ಹಾಗೂ ಚೆಂಬು ಗ್ರಾಮದ ಆ್ಯಂಟನಿ ಎಂಬವರ ಮೇಲೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೇ.8 ರಂದು ಮಧ್ಯಾಹ್ನ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂತೋಷ್ ಬಿ.ಪಿ. ರವರ ನೇತೃತ್ವದ ತಂಡ ದಾಳಿ

ತೊಡಿಕಾನ : ಅಕ್ರಮ ಮರಳು ಸಂಗ್ರಹ ಪತ್ತೆ,ಪೊಲೀಸ್ ದಾಳಿ Read More »

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕಾರ

ಪಶ್ಚಿಮ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಶನಿವಾರ (ಮೇ 09) ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪರೇಡ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾರಿಂದ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಿರಿಯ ಎನ್ ಡಿಎ ನಾಯಕರು ಆಗಮಿಸಿದ್ದರು. ಹಲವಾರು ಕೇಂದ್ರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕಾರ Read More »

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಮೇ.6ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅರೆಭಾಷೆ ಸಾಂಸ್ಕೃತಿಕ ಸಂಭ್ರಮ -2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಉಮೇಶ್ ಕುಮಾ‌ರ್ ವೈ ವಹಿಸಿದ್ದರು.ಕಾರ್ಯಕ್ರಮದಲ್ಲಿ ಬಿ.ಸಿ. ರೋಡಿನ ವಕೀಲರಾದ ಅಶ್ವನಿ ಕುಮಾ‌ರ್ ರೈ, ಪುತ್ತೂರು ಒಕ್ಕಲಿಗರ

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ Read More »

ಕಡಬ : ನೀರಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವತಿಯರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ,ಓದಿ

ಕಡಬ : ಸ್ನಾನಕ್ಕೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನ‌ ಸೆಳತಕ್ಕೆ ಸಿಲುಕಿ ಮೃತಪಟ್ಟ ಘಟನೆ ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಅರ್ಪಿತಾ (15) ಮತ್ತು ಸುನೀತಾ (21) ಎಂದು ಗುರುತಿಸಲಾಗಿದೆ. ಈ ಕುರಿತು ಮೃತ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಗೆಳೆಯರ ಬಳಗವು

ಕಡಬ : ನೀರಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವತಿಯರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ,ಓದಿ Read More »

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.ಬಿಜೆಪಿ ವೀಕ್ಷಕರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ಸುವೇಂದುಅಧಿಕಾರಿ ಅವರನ್ನು ಮುಖ್ಯಮಂತ್ರಿಯಾಗಿ ಅಯ್ಕೆ ಮಾಡಲಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲೂ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.ಸುವೇಂದು ಅಧಿಕಾರಿ ಜೊತೆ ಸುಮಿತ್ ಭಟ್ಟಾಚಾರ್ಯ,

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ Read More »

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ದಿನಾಚರಣೆ

ಸುವರ್ಣ ಸಂಭ್ರಮದ ಹೊಸ್ತಿಲಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ದಿನಾಚರಣೆಯನ್ನು ಮೇ 8ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು “ಸ್ವಚ್ಛತೆ – ಆರೋಗ್ಯ- ರಕ್ಷಣೆ- ಬದುಕು” ಎಂಬ ಶೀರ್ಷಿಕೆಯಡಿಯಲ್ಲಿ  ಮಾಹಿತಿ ಹಾಗೂ ಗೌರವಾರ್ಪಣೆ ಕಾರ್ಯಕ್ರಮದೊಂದಿಗೆ ನಡೆಸಲಾಯಿತು.ಕಾಲೇಜಿನ ರಕ್ಷಣಾ ಹಾಗೂ ಸ್ವಚ್ಛತಾ   ಸಿಬ್ಬಂದಿಗಳಾದ ಭಾಗ್ಯನಂದ ಎಂ.ಆರ್, ಸೀತಾರಾಮ ರಾವ್ ಕೆ,

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ದಿನಾಚರಣೆ Read More »

ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಸಾವು

ಕಡಬ ತಾಲೂಕಿನ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಮೃತಪಟ್ಟ ಘಟನೆ ಮೇ.8ರಂದು ವರದಿಯಾಗಿದೆ.ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಘಟನೆ ನಡೆದಿದ್ದುಕುಟ್ರುಪ್ಪಾಡಿಯ ಅರ್ಪಿತಾ(15), ಸುನೀತಾ (21) ಮೃತರು ಎಂದು ಗರುತಿಸಲಾಗಿದೆ ಹೆಚ್ಚಿ ಮಾಹಿತಿ ತಿಳಿದು ಬರಬೇಕಾಗಿದೆ.

ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಸಾವು Read More »

error: Content is protected !!
Scroll to Top