Author name: Tejas

ಅರಂತೋಡು : ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್‌ನ ಮಹತ್ವಕಾಂಕ್ಷಿ ಯೋಜನೆಯಲ್ಲೊಂದಾದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವು ಚಂದನಾ ಯುವತಿ ಮಂಡಲ (ರಿ) ಅಡ್ತಲೆ -ಅರಂತೋಡು ಇವರ ಸಹಯೋಗದೊಂದಿಗೆ ಮೇ. ೩೧ ರಂದು ನಡೆಯಿತು. ಇದು ಆರಂತೋಡು ಗ್ರಾಮ ಪಂಚಾಯತ್ ನ ನಿರಂತರ ೮೪ನೇ ತಿಂಗಳ ಕಾರ್ಯಕ್ರಮವಾಗಿದ್ದು, ಸ್ವಚ್ಛತಾ ಕಾರ್ಯಕ್ರಮದಲ್ಲಿ ಚಂದನಾ ಯುವತಿ ಮಂಡಲ (ರಿ) ಅಡ್ತಲೆ -ಆರಂತೋಡು ಇದರ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು,ನಿಕಟ ಪೂರ್ವ ಪಂಚಾಯತ್‌ ಅಧ್ಯಕ್ಷರು ಪಂಚಾಯತ್ ಸದಸ್ಯರು,ಪಂಚಾಯತ್ ಸಿಬ್ಬಂದಿಗಳು, ಸ್ವಚ್ಛತಾ ಘಟಕ ಸಿಬ್ಬಂದಿಗಳು ಹಾಗೂ ಆರಂತೋಡು ಪೇಟೆಯ ನಿವಾಸಿಗಳು […]

ಅರಂತೋಡು : ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಕ್ರಮ Read More »

ಇಂಜಿನಿಯರಿಂಗ್ ಕೋರ್ಸ್‌ಗಳ ಆಯ್ಕೆ: ಸೀಮಿತವಾಗದಿರಲಿ ಭವಿಷ್ಯದ ಹಾದಿ!

​ಇತ್ತೀಚಿನ ದಿನಗಳಲ್ಲಿ ಪಿಯುಸಿ ವಿದ್ಯಾರ್ಥಿಗಳನ್ನು “ಮುಂದೆ ನೀವು ಯಾವ ಕೋರ್ಸ್ ಆಯ್ಕೆ ಮಾಡುತ್ತೀರಿ?” ಎಂದು ಪ್ರಶ್ನಿಸಿದಾಗ ಅವರಿಂದ ಬಹುತೇಕ ಬರುವಂತಹ ಒಂದೇ ಉತ್ತರ ‘ಇಂಜಿನಿಯರಿಂಗ್’ ಎಂಬುದಾಗಿವಾಗಿರುತ್ತದೆ. ಆದರೆ ಅವರಲ್ಲಿ ನಿಖರವಾಗಿ ಯಾವ ಇಂಜಿನಿಯರಿಂಗ್ ವಿಭಾಗ ಎಂದು ಕೇಳಿದರೆ, ಅವರಲ್ಲಿ ಬಹುತೇಕರಿಂದ ಬರುವ ಉತ್ತರ ಕಂಪ್ಯೂಟರ್ ಸೈನ್ಸ್ ಎಂಬುದಾಗಿವಾಗಿರುತ್ತದೆ. ​ಹಾಗಾದರೆ ಇಂಜಿನಿಯರಿಂಗ್ ಕೋರ್ಸ್‌ನಲ್ಲಿ ಕೇವಲ ಈ ಒಂದು ವಿಭಾಗ ಮಾತ್ರ ಇದೆಯೇ? ಖಂಡಿತವಾಗಿಯೂ ಇಲ್ಲ. ಇಂಜಿನಿಯರಿಂಗ್ ಕೋರ್ಸ್‌ನಲ್ಲಿ ಹಲವು ಅದ್ಭುತ ವಿಭಾಗಗಳಿವೆ. ಆದರೆ ಸಾಮಾನ್ಯವಾಗಿ ಎಲ್ಲರೂ ತಿಳಿದುಕೊಂಡಿರುವುದು ಕಂಪ್ಯೂಟರ್

ಇಂಜಿನಿಯರಿಂಗ್ ಕೋರ್ಸ್‌ಗಳ ಆಯ್ಕೆ: ಸೀಮಿತವಾಗದಿರಲಿ ಭವಿಷ್ಯದ ಹಾದಿ! Read More »

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಜವಾನ ಚಂದ್ರಶೇಖರ ಎನ್ ಸೇವಾ ನಿವೃತ್ತಿ

ಅರಂತೋಡು:ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಜವಾನ ಚಂದ್ರಶೇಖರ ಎನ್ ಅವರು ಮೇ 31, 2026 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಇವರು 01-09-1986 ರಂದು ಕರ್ತವ್ಯಕ್ಕೆ ಸೇರ್ಪಡೆಗೊಂಡು, 06-01-1998ರಿಂದ ಅನುದಾನಿತ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು, ಸುದೀರ್ಘ 39 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅರಂತೋಡು ಸಮೀಪದ ನೆಕ್ಕರೆ ಶಿವಪ್ಪ ಎನ್ ಹಾಗೂ ಪೂವಮ್ಮ ದಂಪತಿಗಳ ಪುತ್ರರಾದ ಇವರು, ಪತ್ನಿ ರತ್ನಾವತಿ (ರತ್ನ) ಗೃಹಿಣಿಯಾಗಿದ್ದಾರೆ. ಮಕ್ಕಳಾದ ದಕ್ಷತ್ ಎನ್ ಹಾಗೂ ತನುಶ್ರೀ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಸರಳತೆ, ಪ್ರಾಮಾಣಿಕತೆ ಮತ್ತು

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಜವಾನ ಚಂದ್ರಶೇಖರ ಎನ್ ಸೇವಾ ನಿವೃತ್ತಿ Read More »

ಜೂ.3ರಂದು ಮುಖ್ಯಮಂತ್ರಿ ಯಾಗಿ ಡಿ.ಕೆ.ಶಿ ಪ್ರಮಾಣ. ವಚನ ಸ್ವೀಕಾರ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿರ್ಧಾರವಾಗಿತ್ತು‌ಆದರೆ ಪ್ರಜಾಪ್ರಭುತ್ವದ ನಿಯಮದಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ಸಿಎಂ ಆಯ್ಕೆ ಅಧಿಕೃತವಾಗಿ ನಡೆದಿದೆ.ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್

ಜೂ.3ರಂದು ಮುಖ್ಯಮಂತ್ರಿ ಯಾಗಿ ಡಿ.ಕೆ.ಶಿ ಪ್ರಮಾಣ. ವಚನ ಸ್ವೀಕಾರ Read More »

ಜೂ.1 ರಂದು ಸ್ಟಾರ್ ಟೈಲ್ಸ್ ಸುಳ್ಯದಲ್ಲಿ ಶುಭಾರಂಭ

ಸ್ಟಾರ್ ಟೈಲ್ಸ್ ಗ್ರೂಪ್ ಆಫ್ ಕಂಪೆನಿಯ 4 ನೆಯ ನೂತನ ಶೋರೂಂ ಮತ್ತು ದಾಸ್ತನು ಮಳಿಗೆ ಜೂನ್ 1 ರಂದು ಶುಭಾರಂಭ ಗೊಳ್ಳಲಿದೆ.ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಟೈಲ್ಸ್‌ಗಳ ಅತ್ಯಪೂರ್ವ ಸಂಗ್ರಹದೊಂದಿಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರ ಪೆಟ್ರೋಲ್ ಪಂಪ್ ಬಳಿಯಲ್ಲಿರುವ ಎಂ ಕೆ ರೆಸ್ಸಿಡೆನ್ಸಿ ಕಟ್ಟಡದಲ್ಲಿ ಸುಮಾರು 9000 ಚದರಡಿಯ, ವಿಶಾಲ ಪಾರ್ಕಿಂಗ್ ಸೌಲಭ್ಯ ಹೊಂದಿರುವ,ನಗು ಮೊಗದ ಅನುಭವಿ ಸಿಬ್ಬಂದಿಗಳನ್ನು ಹೊಂದಿರುವಬ್ರಹತ್ ಟೈಲ್ಸ್ ಮಳಿಗೆಜೂ.1 ರ ಸಂಜೆ ಗಂಟೆ 4:00 ಕ್ಕೆ ಉದ್ಘಾಟನೆ ಗೊಳ್ಳಲಿದೆ

ಜೂ.1 ರಂದು ಸ್ಟಾರ್ ಟೈಲ್ಸ್ ಸುಳ್ಯದಲ್ಲಿ ಶುಭಾರಂಭ Read More »

ಪರಿವಾರಕಾನ : ತ್ಯಾಜ್ಯ ಎಸೆದವರಿಗೆ ದಂಡ

ಅಲೆಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಪರಿವಾರ ಕಾನದಲ್ಲಿ ತ್ಯಾಜ್ಯ ಎಸೆದವರಿಗೆ ಗ್ರಾಮ ಪಂಚಾಯತಿ ವತಿಯಿಂದ 3000 ರೂಪಾಯಿ ದಂಡನೆ ವಿಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಎಸೆದ ತ್ಯಾಜ್ಯಗಳನ್ನು ಪರಿಶೀಲಿಸಿದಾಗ ಲಭ್ಯವಾದ ವಿಳಾಸದಂತೆ ದಂಡಪಾವತಿಸುವಂತೆ ತಿಳಿಸಲಾಯಿತು. ಇದಕ್ಕೆ ಸಹಕರಿಸದಿದ್ದಾಗ ಸುಳ್ಳದ ಪೋಲೀಸ್ ಸಬ್ಇನ್ ಸ್ಪೆಕ್ಟರ್ ಸಂತೋಷ್ ಕುಮಾರ್ ರವರ ಸಹಕಾರದೊಂದಿಗೆ ದಂಡನೆಯನ್ನು ವಿಧಿಸಲಾಗಿದೆ. ಮತ್ತು ಈ ಕಾರ್ಯಾಚರಣೆಯು ನಿರಂತರವಾಗಿ ಮುಂದುವರಿಯಲಿದೆ ಎಂದು ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಯಪ್ರಕಾಶ್ ಎಂ ಆರ್ ಅವರು ತಿಳಿಸಿದ್ದಾರೆ

ಪರಿವಾರಕಾನ : ತ್ಯಾಜ್ಯ ಎಸೆದವರಿಗೆ ದಂಡ Read More »

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಇಂದು ಬಲಿ ಒಳಗಾಗುವ (ಪತ್ತನಾಜೆ) ಕಾರ್ಯಕ್ರಮ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನದೇವಳದಲ್ಲಿ ಇಂದು (ಮೇ30)ರಂದುರಾತ್ರಿ ಗಂಟೆ 7.00ರಿಂದಬಲಿ ಒಳಗಾಗುವ (ಪತ್ತನಾಜೆ)ಕಾರ್ಯಕ್ರಮ ಜರುಗಲಿರುವುದು.ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಮಲ್ಲಿಕಾರ್ಜುನ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಇಂದು ಬಲಿ ಒಳಗಾಗುವ (ಪತ್ತನಾಜೆ) ಕಾರ್ಯಕ್ರಮ Read More »

ಕರ್ನಾಟಕದಲ್ಲಿ ಮತ್ತೆ ಮಳೆ!

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಕರ್ನಾಟಕದಲ್ಲಿ ಮುಂದಿನ 3 ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 30ರಂದು ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಅಪಾಯಕಾರಿ ಹವಾಮಾನ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮೇ 30ರಂದು ಆರೆಂಜ್ ಅಲರ್ಟ್ ಇದ್ದು, ತೀವ್ರ ಸಿಡಿಲು, ಬಿರುಗಾಳಿ ಅಪ್ಪಳಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮತ್ತೆ ಮಳೆ! Read More »

ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಮತ್ತು ಶಾರದಾ ಕಲಾಸಿರಿ – 2026 ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ (ರಿ) ಪಂಜ, ಕೂತ್ಕುಂಜ ಗ್ರಾಮ ಇದರ ಆಶ್ರಯದಲ್ಲಿ ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಮತ್ತುಶಾರದಾ ಕಲಾಸಿರಿ – 2026 ಪ್ರಶಸ್ತಿ ಪ್ರದಾನ ಇಂದು ಮೇ. 28 ರಂದು ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ನಡೆಯಿತು.ಶಾರದಾಂಭ ಯಕ್ಷಗಾನ ಅಧ್ಯಯನ ಕೇಂದ್ರ ,ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ಪುತ್ಯ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಪುರುಷೋತ್ತಮ ಮಲ್ಕಜೆ ಉದ್ಘಾಟಿಸಿ ಶುಭ ಹಾರೈಸಿದರು.ಪಂಜ

ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಮತ್ತು ಶಾರದಾ ಕಲಾಸಿರಿ – 2026 ಪ್ರಶಸ್ತಿ ಪ್ರದಾನ ಕಾರ್ಯಕ್ರಮ Read More »

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ

ಮಂಗಳೂರು: ಮಂಗಳೂರು ನಗರದ ಕೆಲವು ಪ್ರಮುಖ ಸಿಟಿ ಬಸ್ ಮಾರ್ಗಗಳ ಬದಲಾವಣೆ ಮತ್ತು ವಿಸ್ತರಣೆಯ ಅಗತ್ಯತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದಿರುವ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಮುಂಬರುವ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಸಭೆಯಲ್ಲಿ ತುರ್ತಾಗಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಕೋರಿ ಅಪರ ಜಿಲ್ಲಾಧಿಕಾರಿಗಳು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದೆ. ಇದರೊಂದಿಗೆ, ಮಂಗಳೂರು ನಗರದ ಭೌಗೋಳಿಕ ಮತ್ತು ಜನಸಂಖ್ಯಾ

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ Read More »

error: Content is protected !!
Scroll to Top