Author name: Tejas

ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನ ಸುಳ್ಯದಲ್ಲಿ ನ.20ರಂದು ಆ ರಂಭವಾಯಿತು.ಸರಕಾರದ ವತಿಯಿಂದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಮೂಲಕ ಹಮ್ಮಿಕೊಂಡಿರುವ ಪ್ರಚಾರ ಅಭಿಯಾನ ಬೆಂಗಳೂರಿನಿಂದ ಹೊರಟು ಕೊಡಗು ಜಿಲ್ಲೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಕ್ಕೆ ಆಗಮಿಸಿದೆ. ಮುಂದಿನ 5 ದಿನಗಳ ಕಾಲ ಯಾತ್ರೆಯುದಕ್ಷಿಣ ಕನ್ನಡ ಸಂಚಾರಿಸಲಿದೆ. ದ.ಕ.ಜಿಲ್ಲಾ ಮಟ್ಟದ ಅಭಿಯಾನಕ್ಕೆ ಸುಳ್ಯದಲ್ಲಿ ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್‌ […]

ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ Read More »

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು ಕೂಡ ಎಲ್ಲರ ಕುಂದು-ಕೊರತೆಗಳನ್ನು

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ Read More »

ಕನಕಮಜಲು : ಕಾರು ಅಪಘಾತ

ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ನ.20ರಂದು ಸಂಜೆ ಕನಕಮಜಲಿನಿಂದ ವರದಿಯಾಗಿದೆ. ಮೈಸೂರಿನಿಂದ ಕುಂದಾಪುರಕ್ಕೆ ಹೋಗುತಿದ್ದ ಕಾರು ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಪಕ್ಕದ ಜಾಗದಲ್ಲಿ ಹೊಂಡವೊಂದಕ್ಕೆ ಬಿತ್ತು.‌ ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

ಕನಕಮಜಲು : ಕಾರು ಅಪಘಾತ Read More »

ಮಹಿಷಾಸುರ ಪಾತ್ರ ನಿರ್ವಹಿಸಿದ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು

ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ.ಈಶ್ವರ ಗೌಡ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದರು. ದೇವಿ ಮಾಹಾತ್ಮ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದರು.ಈಶ್ವರ ಗೌಡ

ಮಹಿಷಾಸುರ ಪಾತ್ರ ನಿರ್ವಹಿಸಿದ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು Read More »

ಕೊಡಗು ಜಿಲ್ಲಾ ಸಮಸ್ತ ನಾಯಕರ ಮೊಹಲ್ಲಾ ಭೇಟಿ ಹಾಗೂ ಸಮಸ್ತ ಶತಮಾನೋತ್ಸವದ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ

ಸಮಸ್ತ ಶತಮಾನೋತ್ಸವ ಮಹಾ ಸಮ್ಮೇಳನದ ಪ್ರಚಾರದ ಅಂಗವಾಗಿ ನವಂಬರ್ 29 ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಲಿರುವ ಸಮಸ್ತ ಕೊಡಗು ಜಿಲ್ಲಾ ಸಮ್ಮೇಳನದ ಪ್ರಚಾರರ್ಥ ಹಮ್ಮಿಕೊಂಡ ಜಿಲ್ಲಾ ನಾಯಕರ ಮೊಹಲ್ಲಾ ಭೇಟಿ ನ.19 ರಂದು ಕೊಯಿನಾಡು ,ಸಂಪಾಜೆ,ಕಲ್ಲುಗುಂಡಿ, ಪೇರಡ್ಕ ,ಅರಂತೋಡು ,ಪೆರಾಜೆ, ಸುಳ್ಯ,ಮಂಡೆಕೋಲು,ಅಜ್ಜ ವಾರ,ಬೆಳ್ಳಾರೆ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಸರ್ವ ಜಮಾ ಆತ್ ಸದಸ್ಯರು ಅತ್ಯಂತ ಸಂತೋಷದಿಂದ ಅವರನ್ನು ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಸ್ತ ನಾಯಕರಾದ ಕೊಡಗು ಸಂಯುಕ್ತ ಖಾಝಿ ಶೈಖುನಾ ಅಬ್ದುಲ್ಲಾ ಫೈಝಿ

ಕೊಡಗು ಜಿಲ್ಲಾ ಸಮಸ್ತ ನಾಯಕರ ಮೊಹಲ್ಲಾ ಭೇಟಿ ಹಾಗೂ ಸಮಸ್ತ ಶತಮಾನೋತ್ಸವದ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ Read More »

ಮನೆಯೊಳಗೆ ನುಗ್ಗಿ ಮಹಿಳೆಗೆ ಕಚ್ಚಿ ಗಾಯಗೊಳಿಸಿದ ಮಂಗ

ಚಿಕ್ಕಮಗಳೂರಿನಲ್ಲಿ ಮಂಗವೊಂದು ಮನೆಯೊಳಗೆ ನುಗ್ಗಿ ಮಹಿಳೆಗೆ ಕಚ್ಚಿ ಗಾಯಗೊಳಿಸಿದೆ.ಮಂಗನ ದಾಳಿಯಿಂದಾಗಿ ಮಹಿಳೆಯ ಕೈ–ಮುಖಕ್ಕೆ ಭಾಗಕ್ಕೆ ಗಾಯವಾಗಿದೆ. ಚಿಕ್ಕಮಗಳೂರು ತಾಲೂಕಿನ ಶಾಂತವೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಪೂಜಾ ಎಂಬವರು ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ. ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮಂಗ ದಾಳಿ ನಡೆಸಿದೆ.ಮಂಗನ ದಾಳಿಯಿಂದ ಗಾಯಗೊಂಡ ಪೂಜಾ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಂಗಗಳ ಹಾವಳಿಯಿಂದ ಶಾಂತವೇರಿ ಗ್ರಾಮಸ್ಥರು ನರಕಯಾತನೆ ಅನುಭವಿಸುತ್ತಿದ್ದಾರೆ.

ಮನೆಯೊಳಗೆ ನುಗ್ಗಿ ಮಹಿಳೆಗೆ ಕಚ್ಚಿ ಗಾಯಗೊಳಿಸಿದ ಮಂಗ Read More »

ಬಿಹಾರದಲ್ಲಿ ಹೊಸ ಸರ್ಕಾರ : ಇಂದು 10ನೇ ಬಾರಿಗೆ `CM’ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ನವೆಂಬರ್ 20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಬೆಳಗ್ಗೆ 11ರಿಂದ 12ರವರೆಗೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. 243 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ 201 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದಿವೆ.

ಬಿಹಾರದಲ್ಲಿ ಹೊಸ ಸರ್ಕಾರ : ಇಂದು 10ನೇ ಬಾರಿಗೆ `CM’ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ Read More »

ಧರ್ಮಸ್ಥಳ ಲಕ್ಷದೀಪೋತ್ಸವ: ಭಕ್ತರಿಂದ ವೈವಿಧ್ಯಮಯ ಸೇವೆ

ಬೆಳ್ತಂಗಡಿ : ಧರ್ಮಸ್ಥಳ ಸ್ವಾಮಿಯ ಲಕ್ಷದೀಪೋತ್ಸವ ಅಂಗವಾಗಿ ಬೆಂಗಳೂರಿನ ರಾಮು ಮತ್ತು ರಮೇಶ ಅವರ ತಂಡದ ಹೂವಿನ ವ್ಯಾಪಾರಿಗಳು ವಿವಿಧ ಜಾತಿಯ ಹೂವುಗಳನ್ನು ತಂದು ದೇವಸ್ಥಾನವನ್ನು ಆಕರ್ಷಕವಾಗಿ ಅಲಂಕರಿಸಿದ್ದಾರೆ.*ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಭಕ್ತಾದಿಗಳು ಸುಮಾರು ೨೫ ತಂಡದವರು ಸೇರಿ ಬುಧವಾರ ರಾತ್ರಿ ಎಲ್ಲಾ ಭಕ್ತಾದಿಗಳಿಗೆ ಉಚಿತ ಊಟದ ವ್ಯವಸ್ಥೆ ಮಾಡಿದರು.ಮುದ್ದೆ-ಕಾಳುಸಾರು, ಪಲಾವ್, ಬಿಸಿಬೇಳೆಬಾತ್, ರೈಸ್‌ಬಾತ್, ಹೋಳಿಗೆ, ಮೈಸೂರುಪಾಕ್ ಹಾಗೂ  ಮೊದಲಾದವುಗಳೊಂದಿಗೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳಿಗೆ ಶುಚಿ-ರುಚಿಯಾದ ಊಟದ ವ್ಯವಸ್ಥೆ ಮಾಡಿದರು.

ಧರ್ಮಸ್ಥಳ ಲಕ್ಷದೀಪೋತ್ಸವ: ಭಕ್ತರಿಂದ ವೈವಿಧ್ಯಮಯ ಸೇವೆ Read More »

ಸ್ಕೂಟಿ ಅಪಘಾತದಲ್ಲಿ ಯುವತಿ ಸಾವು

ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಯುವತಿ ಮೃತಪಟ್ಟ ಘಟನೆ ಬಂಟ್ವಾಳದಿಂದ ವರದಿಯಾಗಿದೆ.ಬಂಟ್ವಾಳದ ಕಾವಳಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಕಡಬದ ಯುವತಿ ಮೃತಪಟ್ಟಿದ್ದಾರೆ.ಸ್ಕೂಟರ್ ಸವಾರೆ, ಕಡಬದ ಶ್ರೀ ದುರ್ಗಾ ಎಲೆಕ್ಟ್ರಿಕಲ್ ಮಾಲಕ ಕುಂತೂರು ನಿವಾಸಿ ಸುನಿಲ್ ಕೊಲತ್ತಾಯ ಎಂಬವರ ಪುತ್ರಿ ಅನನ್ಯಾ (21ವ) ಮೃತಪಟ್ಟವರು. ಸಹ ಸವಾರೆ, ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಇಬ್ಬರೂ ಮಂಗಳೂರು ಕಾಲೇಜೊಂದರ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ. ಪುಂಜಾಲಕಟ್ಟೆ

ಸ್ಕೂಟಿ ಅಪಘಾತದಲ್ಲಿ ಯುವತಿ ಸಾವು Read More »

ಬಹುತೇಕ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂಬ ಹೇಳಿಕೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆಯಾಚನೆ!

ಬೆಂಗಳೂರು‌ : ಬಹುತೇಕ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ.ಎಲ್ಲರೂ ಅಲ್ಲ ಕೆಲವು ಕಲಾವಿದರು ಸಲಿಂಗಿಗಳು ಹೌದು. ಆ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು. ಹಿಂದೆ ನವೆಂಬರ್ ನಲ್ಲಿ ಆರಂಭವಾದ ತಿರುಗಾಟ ಮೇ ಕೊನೆಯಲ್ಲಿ ಮುಕ್ತಾಯವಾಗುತ್ತಿತ್ತು. ಕಲಾವಿದರಿಗೆ ಮನೆಯ ಸಂಪರ್ಕ ಕಷ್ಟವಾಗುತ್ತಿತ್ತು. ಯಕ್ಷಗಾನ ಕಲೆ ಈಗ ಹಿಂದಿನಂತಿಲ್ಲ, ಕಲಾವಿದರಿಗೆ ಅನೇಕ ಸೌಲಭ್ಯಗಳಿವೆ. ಅನೇಕರು ಮಧ್ಯ ರಾತ್ರಿ ಪ್ರದರ್ಶನ ಮುಗಿಸಿ ಕಾರುಗಳಲ್ಲಿ ಮನೆಗೆ

ಬಹುತೇಕ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂಬ ಹೇಳಿಕೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆಯಾಚನೆ! Read More »

error: Content is protected !!
Scroll to Top