Author name: Tejas

ಸುಳ್ಯ : ಕುಕ್ಕರ್ ಬ್ಲಾಸ್ಟ್ ಮನೆಗೆ ಹಾನಿ,ಅಪಾಯದಿಂದ ಪಾರಾದ ಮನೆಯವರು!

ಸುಳ್ಯ : ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿ ಸಂದರ್ಭದಲ್ಲಿ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಘಟನೆ ವರದಿಯಾಗಿದೆ.ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದ ಪರಿಣಾಮ ಅಡುಗೆಮನೆಯ ಗೋಡೆ, ಟೈಲ್ಸ್‌, ಮೇಲ್ಚಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಳಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ ಇದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯ […]

ಸುಳ್ಯ : ಕುಕ್ಕರ್ ಬ್ಲಾಸ್ಟ್ ಮನೆಗೆ ಹಾನಿ,ಅಪಾಯದಿಂದ ಪಾರಾದ ಮನೆಯವರು! Read More »

ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ ೯೩ನೆ ಅಧಿವೇಶನ

ಧರ್ಮಸ್ಥಳ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ವಿಶ್ವವೇ ಒಂದು ಕುಟುಂಬ ಎಂದು ಭಾವಿಸುವ ವಿಶಾಲ ಮನೋಭಾವ ನಮ್ಮದಾಗಿದೆ. ನಮ್ಮ ಧರ್ಮವನ್ನು ಪ್ರೀತಿಸಿ ಅನುಷ್ಠಾನಗೊಳಿಸುವದರೊಂದಿಗೆ ಇತರರ ಧರ್ಮವನ್ನೂ ಗೌರವಿಸುವುದು ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಜೀವಾಳವಾಗಿದೆ. ಮಾನವ ಸೇವೆಯೇ ಶ್ರೇಷ್ಠ ಧರ್ಮ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಸಚಿವ ಡಾ. ಎಂ.ಬಿ. ಪಾಟೀಲ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ

ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ ೯೩ನೆ ಅಧಿವೇಶನ Read More »

ಸಾಹಿತ್ಯ ಎಂಬುದು ವ್ಯಕ್ತಿಗೆ, ಜನತೆಗೆ, ಸಮಾಜಕ್ಕೆ ಹಿತವಾಗಿರಬೇಕು : ಎ.ಕೆ ಹಿಮಕರ

ಸಾಹಿತ್ಯ ಎಂಬುದು ವ್ಯಕ್ತಿಗೆ, ಜನತೆಗೆ, ಸಮಾಜಕ್ಕೆ ಹಿತವಾಗಿರಬೇಕು. ತನ್ನ ಹಿತಕ್ಕಿಂತಲೂ ಸಮಾಜದ ಹಿತವೇ ಮುಖ್ಯ ಎನಿಸುವಂತಿರಬೇಕು. ಅದು ಭವಿಷ್ಯದ ಏಳಿಗೆಗೆ, ಅಭಿವೃದ್ಧಿಗೆ ಪೂರಕವಾಗಿರಬೇಕು ಎಂಬ ಅಭಿಪ್ರಾಯವಿದೆ ಎಂದು ಸಾಹಿತಿ ಎ.ಕೆ ಹಿಮಕರ ಹೇಳಿದರು ಅವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ

ಸಾಹಿತ್ಯ ಎಂಬುದು ವ್ಯಕ್ತಿಗೆ, ಜನತೆಗೆ, ಸಮಾಜಕ್ಕೆ ಹಿತವಾಗಿರಬೇಕು : ಎ.ಕೆ ಹಿಮಕರ Read More »

ಹೋರಿಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ

ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡುತ್ತಿದ್ದಾರೆಂಬ ಮಾಹಿತಿಯ ಮೇರೆಗೆ ಪೋಲೀಸರು ಐವತ್ತೊಕ್ಕು ಗ್ರಾಮದ ಕರಿಕ್ಕಳ ಶಾಲಾ ಬಳಿಯ ಗುಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾಗ ಆರೋಪಿಗಳು ಪರಾರಿಯಾದ ಘಟನೆ ವರದಿಯಾಗಿದೆ.ನಾಲ್ವರು ಸ್ಥಳದಲ್ಲಿದ್ದ ದುಷ್ಕರ್ಮಿಗಳು ಮಾಂಸ ಮತ್ತಿತರ ವಸ್ತುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಲು‌ ಯತ್ನಿಸಿದ್ದಾಗ ಬೆನ್ನಟ್ಟಿದ್ದ ಪೊಲೀಸರಿಗೆ ಒಬ್ಬ ಸಿಕ್ಕಿಬಿದ್ದಿರುವುದಾಗಿ ತಿಳಿದು ಬಂದಿದೆ.ಐವತ್ತೊಕ್ಲು ಗ್ರಾಮದ ನಿಡ್ವಾಳ ಮತ್ತು ಕರಿಕ್ಕಳ ಶಾಲಾ ಸಮೀಪದ ಗುಡ್ಡೆಯೊಂದರಲ್ಲಿ ನಾಲ್ವರು ದುಷ್ಕರ್ಮಿಗಳು ಹೋರಿಗಳನ್ನು ತಂದು ಕಟ್ಟಿ ಹಾಕಿ ಕಡಿದು ಮಾಂಸ ಮಾಡುತ್ತಿದ್ದರೆನ್ನಲಾಗಿದೆ. ಈ ಮಾಹಿತಿ ತಿಳಿದ

ಹೋರಿಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ Read More »

ಪಾದಯಾತ್ರೆಯಿಂದ ಅನನ್ಯ ಅನುಭವ: ತನ್ವೀರ್ ಅಹ್ಮದ್

ಉಜಿರೆ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು.ಅವರು ಮಂಗಳವಾರ ಪಾದಯಾತ್ರೆಯಲ್ಲಿ ಧರ್ಮಸ್ಥಳ ತಲುಪಿದಾಗ  ಅವರನ್ನು ಪ್ರವೇಶದ್ವಾರದಿಂದ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ಕರೆತರಲಾಯಿತು. ಬಳಿಕ ಅವರು ಹೆಗ್ಗಡೆಯವರೊಂದಿಗೆ ಪಾದಯಾತ್ರೆ ಬಗ್ಯೆ ತನ್ನ ಅನುಭವ ಹಂಚಿಕೊAಡರು.ದಾರಿಯುದ್ಧಕ್ಕೂ ಹೆಗ್ಗಡೆಯವರು ಹಾಗೂ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ ಜನರ

ಪಾದಯಾತ್ರೆಯಿಂದ ಅನನ್ಯ ಅನುಭವ: ತನ್ವೀರ್ ಅಹ್ಮದ್ Read More »

ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ

ಬೆಳ್ತಂಗಡಿ: ರಾಜ್ಯದ ಗ್ರಾಮಗಳ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಕುರಿತು ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಆ ವರದಿಯ ಮೂಲಕ ಅಗತ್ಯತೆ ಮನಗಂಡು ಆದ್ಯತೆ ಮೇರೆಗೆ ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಲಾಗಿದೆ.ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಸುಧಾರಣೆಗೆ ಅಗತ್ಯತೆ ಇರುವಲ್ಲಿ ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಸೋಮವಾರ ರಾಜ್ಯಸಭಾ

ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮ ಅಧ್ಯಕ್ಷರಾಗಿ ಯು. ಕೆ. ಜಿ ವಿದ್ಯಾರ್ಥಿನಿ ಆಯಿಷಾ ಶಜ್ನಾ ಹಾಗೂ ಅತಿಥಿಗಳಾಗಿ ಯು. ಕೆ. ಜಿ ವಿದ್ಯಾರ್ಥಿಗಳು ಮತ್ತು ಶಾಲಾ ಸಂಚಾಲಕಿ .ಗೀತಾಂಜಲಿ ಟಿ.ಜಿ ಉಪಸ್ತಿತರಿದ್ದರು.ಪುಟಾಣಿ ಮಕ್ಕಳು ಹಾಡು ಹೇಳಿ , ನೃತ್ಯ ಮಾಡಿ ಸಂತೋಷ ಪಟ್ಟರು. ಮಕ್ಕಳಿಗಾಗಿ ಶಿಕ್ಷಕರು ಕಾರ್ಯಕ್ರಮವನ್ನು ಆಯೋಜಿಸಿ ,ಹಾಡು ನೃತ್ಯದ ಮೂಲಕ ಮನರಂಜಿಸಿದರು. ರೂಪಾ ಸ್ವಾಗತಿಸಿ , ಶ್ರೀಮತಿ .ನಿರ್ಮಲ ಪ್ರಾರ್ಥಿಸಿ , ವಂದಿಸಿದರು. ಶ್ರೀಮತಿ. ಫಬಿದಾ ಕಾರ್ಯಕ್ರಮವನ್ನು ನಿರೂಪಿಸಿದರು.

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

ಬೇರೆ ಪಕ್ಷದಿಂದ ಬಂದವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ : ಜಿ.ಕೆ ಹಮೀದ್

ಬೇರೆ ಬೇರೆ ಪಕ್ಷದಿಂದ ಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರಿಗೆ ತೊಂದರೆ ಕೊಟ್ಟು ಕಡೆಗಣಿಸುತ್ತಿದ್ದಾರೆ. ಎಂದು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ ಹಮೀದ್ ಆರೋಪಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನ.18ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಂಪಾಜೆ ಗ್ರಾಮದಲ್ಲಿ ನಮಗೆ ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅವಕಾಶ ಮಾಡಿ ಕೊಡುತ್ತದೆ ಎಂಬ‌ ಆತ್ಮ ವಿಶ್ವಾಸ ನನಗಿದೆ.ನಾನು ಕೂಡ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತೇನೆ.ನಾವು ಅಭಿವೃದ್ಧಿಗೆ ಹೆಚ್ಚು ಗಮನ

ಬೇರೆ ಪಕ್ಷದಿಂದ ಬಂದವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ : ಜಿ.ಕೆ ಹಮೀದ್ Read More »

ಸುಳ್ಯ: ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು  ದ. ಕ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳಿಂದ ಸುಳ್ಯ ವಿಧಾನ  ಸಭಾ ಕ್ಷೇತ್ರ ಭೇಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನ. 17 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ  ನಡೆಯಿತು. ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಕಾಂಗ್ರೆಸ್ ನ ಆಶಯ, ಕರ್ತವ್ಯ ಮತ್ತು ಸಂಘಟನೆಯ ಉದ್ದೇಶದ ಕುರಿತು ವಿವರ ನೀಡಿದರು. ಕರ್ನಾಟಕ

ಸುಳ್ಯ: ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ Read More »

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ,ಸ್ವಾಗತ ಸಮಿತಿ ರಚನೆ

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಆಯೋಜಿಸುವ ಬಗ್ಗೆ ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಘ-ಸಂಸ್ಥೆಗಳ , ಸಾಹಿತ್ಯಾಭಿಮಾನಿಗಳ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮಾಲೋಚನಾ ಸಭೆ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲುರವರು ವಹಿಸಿ ಸಾಹಿತ್ಯ ಸಮ್ಮೇಳನದ ರೂಪು-ರೇಷೆಗಳ ಬಗ್ಗೆ ವಿವರಿಸಿದರು..ವೇದಿಕೆಯಲ್ಲಿ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು, ಅಮರಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ,ಸ್ವಾಗತ ಸಮಿತಿ ರಚನೆ Read More »

error: Content is protected !!
Scroll to Top