Author name: Tejas

ಬಳ್ಳಾರಿ ಜೈಲಿನಲ್ಲಿರುವ ಶಿಕ್ಷಾ ಬಂಧಿಯೋರ್ವ ಪಿ.ಯು.ಸಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ!

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಳ್ಳಾರಿ ಜೈಲಿನಲ್ಲಿರುವ ಶಿಕ್ಷಾ ಬಂಧಿಯೋರ್ವ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾದ ಘಟನೆ ವರದಿಯಾಗಿದೆ.ಜೀವಾವಧಿ ಶಿಕ್ಷೆಗೊಳಗಾಗಿರುವ ಅಶೋಕ್ ಕುಮಾರ್ ಎಂಬ ಶಿಕ್ಷಾ ಬಂಧಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆದು 600 ಅಂಕಗಳಿಗೆ 481 ಅಂಕಗಳನ್ನು ಪಡೆದು ಶೇಕಡಾ 81% ರಷ್ಟು ಫಲಿತಾಂಶದೊಂದಿಗೆ ಪಾಸಾಗಿದ್ದಾನೆ.ಜೈಲಿನಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದ ಬಂಧಿ ಅಶೋಕ್ ಕುಮಾರ್ ಕನ್ನಡದಲ್ಲಿ 82, ಇಂಗ್ಲಿಷ್ ನಲ್ಲಿ 69, ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84, ಸಮಾಜಶಾಸ್ತ್ರದಲ್ಲಿ 77 ಮತ್ತು ರಾಜ್ಯಶಾಸ್ತ್ರದಲ್ಲಿ […]

ಬಳ್ಳಾರಿ ಜೈಲಿನಲ್ಲಿರುವ ಶಿಕ್ಷಾ ಬಂಧಿಯೋರ್ವ ಪಿ.ಯು.ಸಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ! Read More »

ಕಾಂಗ್ರೆಸ್ ಮುಖಂಡ ಪಿ.ಎಸ್ ಗಂಗಾಧರ ಅವರ ತೋಟಕ್ಕೆ ಕಾಡಾನೆ ದಾಳಿ

ಉಬರಡ್ಕ ಮಿತ್ತೂರು ಗ್ರಾಮದ ಪಟ್ರಕೋಡಿ ಪಿ. ಎಸ್. ಗಂಗಾಧರರವರ ಕೃಷಿ ತೋಟಕ್ಕೆ ಎಪ್ರಿಲ್ 9 ರ ರಾತ್ರಿ ಒಂಟಿ ಆನೆ ದಾಳಿ ನಡಿಸಿ ಕೃಷಿ ನಾಶ ಮಾಡಿದೆ.ಅಡಿಕೆ ಮರ ಬಾಳೆ ಇತರ ಬೆಳೆಗಳನ್ನು ನಾಶ ಮಾಡಿರುತ್ತದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಮುಖಂಡ ಪಿ.ಎಸ್ ಗಂಗಾಧರ ಅವರ ತೋಟಕ್ಕೆ ಕಾಡಾನೆ ದಾಳಿ Read More »

ಕಿರ್ಲಾಯದಲ್ಲಿ ಒಂಟಿ ಸಲಗದಿಂದ ಅಪಾರ ಬೆಳೆ ನಾಶ

ಏ.9ರಂದು ರಾತ್ರಿ ಅರಂತೋಡು ಗ್ರಾಮದ ಕಿರ್ಲಾಯ ಅನಂತ ಕೃಷ್ಣನವರ ತೋಟಕ್ಕೆ ಒಂಟಿ ಆನೆ ಬಂದು ಸುಮಾರು 50ರಿಂದ 60 ನೇಂದ್ರ ಬಾಳೆ ಗಿಡಗಳನ್ನು ನಾಶ ಮಾಡಿರುತ್ತದೆ .ಕಾಡಾನೆಗಳು ಮತ್ತೆ ಬಲ್ನಾಡು ಹೊಳೆ ದಾಟಿ ಪೂಮಲೆ ಪರಿಸರದ ಕಳುಬೈಲು ಕಾಡಿಗೆ ಬಂದಿರುತ್ತದೆ ಎಂದು ಅವರು ಮಾಹಿತಿ ಲಭ್ಯವಾಗಿದೆ. ಆದುದರಿಂದ ಈ ಭಾಗದ ಜನರು ಇದರ ಬಗ್ಗೆ ಜಾಗೃತರಾಗಿರಲು ತಿಳಿಸಲಾಗಿದೆ.

ಕಿರ್ಲಾಯದಲ್ಲಿ ಒಂಟಿ ಸಲಗದಿಂದ ಅಪಾರ ಬೆಳೆ ನಾಶ Read More »

ನಾಳೆ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಕೊನೆಯ ಹಂತದ ತಯಾರಿಗಾಗಿ ಸಮಾಲೋಚನಾ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಏ.20ರ ತನಕ ನಡೆಯಲಿದ್ದು ಕೊನೆ ಹಂತದ ತಯಾರಿಗಾಗಿ ಸಮಾಲೋಚಿಸಲು‌ ನಾಳೆ ದಿನಾಂಕ 10-04-2026 ನೇ ಶುಕ್ರವಾರ ಪೂ 10:00ಕ್ಕೆ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿ ಮತ್ತು ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳ ತುರ್ತು ಸಭೆ ದೇವಳದ ಅಕ್ಷಯ ಮಂದಿರದಲ್ಲಿ ಕರೆಯಲಾಗಿದೆ.ಸಭೆಯಲ್ಲಿ ಎಲ್ಲರೂ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಕೊಳಲುಮೂಲೆ,ಹಾಗೂ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.

ನಾಳೆ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಕೊನೆಯ ಹಂತದ ತಯಾರಿಗಾಗಿ ಸಮಾಲೋಚನಾ ಸಭೆ Read More »

ಚೈತನ್ಯ ಎಂ.ಎಸ್ 563 ಅಂಕದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಕ್ಕಡದ ಸೈಂಟ್ ಫ್ರಾನ್ಸಿಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಚೈತನ್ಯ ಎಂ.ಎಸ್ 563 ಅಂಕದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಇವರು ಕೊಕ್ಕಡದ ಶೇಖರ್ ಗೌಡ ಹಾಗೂ ಸುಜಾತ ದಂಪತಿಯ ಪುತ್ರಿ.

ಚೈತನ್ಯ ಎಂ.ಎಸ್ 563 ಅಂಕದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ Read More »

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ದ.ಕ ಜಿಲ್ಲೆ ದ್ವಿತೀಯ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾವಾರು ಫಲಿತಾಂಶದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬಾರಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇನ್ನು ಈ ಬಾರಿಯೂ ಕೂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ, ಯಾದಗಿರಿ ಕೊನೆ ಸ್ಥಾನದಲ್ಲಿದೆ. ಶೇ. 96.39 ಫಲಿತಾಂಶ ಪಡೆದು

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ದ.ಕ ಜಿಲ್ಲೆ ದ್ವಿತೀಯ Read More »

ಪಿಯುಸಿ ವಿಜ್ಞಾನ ವಿಭಾಗದಲ್ಲಿ‌ ಸಮನ್ಯು ಶೆಟ್ಟಿ ದ.ಕ ಜಿಲ್ಲೆಗೆ ಪ್ರಥಮ

ಮಂಗಳೂರಿನ ಎಕ್ಸ್ ಪರ್ಟ್ ಪಿ.ಯು. ಕಾಲೇಜಿನ ವಿಜ್ಞಾನ ವಿದ್ಯಾರ್ಥಿ, ಸುಳ್ಯದ ಸುದೇಶ್ ಶೆಟ್ಟಿ ಮತ್ತು ಶ್ರೀಮತಿ ಅಕ್ಷತಾ ಎಸ್‌. ಶೆಟ್ಟಿ ದಂಪತಿಯ ಪುತ್ರ ಸಮನ್ಯು ಎಸ್.ಶೆಟ್ಟಿ ವಿಜ್ಞಾನ ವಿಭಾಗದಲ್ಲಿ 598 ಅಂಕ ಗಳಿಸಿ ದ.ಕ. ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಪಿಯುಸಿ ವಿಜ್ಞಾನ ವಿಭಾಗದಲ್ಲಿ‌ ಸಮನ್ಯು ಶೆಟ್ಟಿ ದ.ಕ ಜಿಲ್ಲೆಗೆ ಪ್ರಥಮ Read More »

ದ್ವಿತೀಯ ಪಿ ಯು ಸಿ ಫಲಿತಾಂಶ : ಹನಾ ಫಾತಿಮಾ ಅರಂತೋಡು ಡಿಸ್ಟಿಂಕ್ಷನ್

ಅರಂತೋಡು ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕೆ ಎಂ ಉಸ್ಮಾನ್ ಮತ್ತು ಅನೀಸ ದಂಪತಿಗಳ ಪುತ್ರಿ ಹನಾ ಫಾತಿಮಾ ದ್ವಿತೀಯ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ 555 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೆರ್ಗಡೆ ಹೊಂದಿದ್ದಾರೆ

ದ್ವಿತೀಯ ಪಿ ಯು ಸಿ ಫಲಿತಾಂಶ : ಹನಾ ಫಾತಿಮಾ ಅರಂತೋಡು ಡಿಸ್ಟಿಂಕ್ಷನ್ Read More »

ಕೆ.ಎಲ್ ಯಶ್ ಅವರಿಗೆ ದ್ವಿತೀಯ ಪಿ.ಯು.ಸಿಯಲ್ಲಿ ಶೇ. 96.67 ಅಂಕ

ಪೆರಾಜೆ ಗ್ರಾಮದ ಕೆ. ಎಲ್. ಯಶ್ ಅವರು ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದಲ್ಲಿ 96.67 ಶೇಕಡ ಅಂಕಗಳಿಸಿ ಉತ್ತಿರ್ಣರಾಗಿದ್ದಾರೆ. ಇವರು ರೇವಾ ಇಂಡಿ ಪೆಂಡೆಂಟ್ ಪಿಯು ಕಾಲೇಜು ಬೆಂಗಳೂರು ನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಪೆರಾಜೆ ಗ್ರಾಮದ ಮಾಜಿ ಸೈನಿಕ ಕೊಳಂಗಾಯ ಲೋಲಜಾಕ್ಷ ಅವರ ಪುತ್ರ.

ಕೆ.ಎಲ್ ಯಶ್ ಅವರಿಗೆ ದ್ವಿತೀಯ ಪಿ.ಯು.ಸಿಯಲ್ಲಿ ಶೇ. 96.67 ಅಂಕ Read More »

ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆ ಜಾಲ್ಸೂರಿಗೆ ಆಗಮನ

ಸುಳ್ಯ ಪದವು ಈಶ್ವರ ಮಂಗಳ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವವು ಎ.೯ ರಿಂದ ಎ.೧೨ ವರೆಗೆ ನಡೆಯಲಿದ್ದು ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಯು ಏ.8ರಂದು ಜಾಲ್ಸೂರಿಗೆ ಆಗಮಿಸಿತು.ಗೋಳಿಕಟ್ಟೆಯಿಂದ ಜಾಲ್ಸೂರು ಪೇಟೆಯವರೆಗೆ ಶ್ರೀ ವರಮಹಾಲಕ್ಷ್ಮಿ ಸ್ತ್ರೀಶಕ್ತಿ ಗೊಂಚಲು ಸಮಿತಿ ವತಿಯಿಂದ ಪೂರ್ಣಕುಂಭ ಸ್ವಾಗತಿಲಾಯಿತು.ಪೇಟೆಯಲ್ಲಿ ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಶ್ರೀರಾಮ ಹನುಮ ಜ್ಯೋತಿ ಹಸ್ತಾಂತರಿಸಲಾಯಿತು.ಭಜನಾ ಮಂದಿರದ ಗೌರವಾಧ್ಯಕ್ಷ ಮೋಹನ್ ನಂಗಾರು, ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಕನಕಮಜಲು ಸಹಕಾರಿ ಸಂಘದ

ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆ ಜಾಲ್ಸೂರಿಗೆ ಆಗಮನ Read More »

error: Content is protected !!
Scroll to Top