Author name: Tejas

ಅಂಬಟೆಡ್ಕ: ಎಂ.ವೆಂಕಪ್ಪ ಗೌಡ ಮಾಲಕತ್ವದ ಆರೋಹಿ ಎನ್ ಕ್ಲೇವ್ ಸಂಕೀರ್ಣ ಶುಭಾರಂಭ ಹಾಗೂ ಕಚೇರಿ ಉದ್ಘಾಟನೆ

ಸುಳ್ಯ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷರು, ಸುಳ್ಯದ ಹಿರಿಯ ನ್ಯಾಯವಾದಿಯಾಗಿರುವ ಎಂ.ವೆಂಕಪ್ಪ ಗೌಡ ಹಾಗೂ ಚಂಪಾ ವೆಂಕಪ್ಪ ಗೌಡರು ಸುಳ್ಯದ ಅಂಬಟೆಡ್ಕದಲ್ಲಿ ನೂತನವಾಗಿ ನಿರ್ಮಿಸಿದ ಆರೋಹಿ ಎನ್‌ಕ್ಲೇವ್ ಸಂಕೀರ್ಣದ ಶುಭಾರಂಭ ಹಾಗೂ ಗಾಂಧಿನಗರದಲ್ಲಿದ್ದ ಎಂ.ವೆಂಕಪ್ಪ ಗೌಡರ ನ್ಯಾಯವಾದಿ ಕಚೇರಿಯ ಸ್ಥಳಾಂತರಗೊಂಡಿದ್ದು ಅದರ ಉದ್ಘಾಟನಾ ಕಾರ್ಯಕ್ರಮ ನ.೮ರಂದು ನಡೆಯಿತು.ಎಂ.ವೆಂಕಪ್ಪ ಗೌಡರ ಸಹೋದರ ಪೆರ್ಗಡೆ ಗೌಡರು ಹಾಗೂ ಚಂಪಾ ವೆಂಕಪ್ಪ ಗೌಡರ ತಂದೆ ಪುಂಗವ ಗೌಡರು ನೂತನ ಸಂಕೀರ್ಣದ ಎದುರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.ನ್ಯಾಯವಾದಿ ಕಚೇರಿಯಲ್ಲಿ ಜಿಲ್ಲಾ […]

ಅಂಬಟೆಡ್ಕ: ಎಂ.ವೆಂಕಪ್ಪ ಗೌಡ ಮಾಲಕತ್ವದ ಆರೋಹಿ ಎನ್ ಕ್ಲೇವ್ ಸಂಕೀರ್ಣ ಶುಭಾರಂಭ ಹಾಗೂ ಕಚೇರಿ ಉದ್ಘಾಟನೆ Read More »

ತೊಡಿಕಾನ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ‌ ಸಂತೋಷ್ ಕುತ್ತಮೊಟ್ಟೆ ಆಯ್ಕೆ

ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.ಶಾಲೆಗೆ 75 ವರ್ಷ ತುಂಬಿದ್ದು ಇದರ ಅಮೃತ ಮಹೋತ್ಸವವನ್ನು ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವರ ಸಹಭಾಗಿತ್ವ ದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು ಇದರ ಪೂರ್ವಭಾವಿ ಸಭೆಯುಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಎ.ಬಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲು ನಿರ್ಧರಿಸಿ ಸಂತೋಷ್ ಕುತ್ತಮೊಟ್ಟೆಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಪೂರ್ಣ ಪ್ರಮಾಣದಲ್ಲಿ ಸಮಿತಿಯನ್ನು ಹಾಗೂ ಉಪ ಸಮಿತಿಗಳನ್ನು

ತೊಡಿಕಾನ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ‌ ಸಂತೋಷ್ ಕುತ್ತಮೊಟ್ಟೆ ಆಯ್ಕೆ Read More »

ತೊಡಿಕಾನ : ದೇವಳ ವಠಾರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಮನವಿ

ತೊಡಿಕಾನ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಮೊಬೈಲ್ ಪೋನ್ ಟವರ್ ನಿರ್ಮಾಣ ಮಾಡಲು‌ ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದ್ದಾರೆ.ದೇವಳದ ವಠಾರದ ದೊಡ್ಡಕುಮೇರಿ ಪರಿಶಿಷ್ಟ ಜಾತಿ ಕಾಲೋನಿ ಪಂಜಿಕೋಡಿ ಬಾಳೆಕಜೆ ಕುಂಟುಕಾಡು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇದ್ದು ಈ ಭಾಗದ ಜನರಿಗೆ ಅನುಕೂಲವಾಗುವಂತೆ ಹೊಸ ಮೊಬೈಲ್ ಟವರ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ

ತೊಡಿಕಾನ : ದೇವಳ ವಠಾರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಮನವಿ Read More »

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟನೆ

ಸುಳ್ಯ : ರಾಜ್ಯದಲ್ಲಿ ವೇಟ್ ಲಿಫ್ಟಿಂಗ್ ಹಿರಿಯ ವೇಟ್ ಲಿಫ್ಟರ್‌ಗಳ ಶ್ರಮದಿಂದ ಬೆಳೆದು, ಪ್ರಗತಿ ಹಂತವನ್ನು ಕಾಣುತ್ತಿದೆ ಎಂದು ಮಾಜಿ ಅಂತರ್‌ರಾಷ್ಟ್ರೀಯ ವೇಟ್ ಲಿಫ್ಟರ್ ಅರ್ಥರ್ ಡಿಸೋಜಾ ಹೇಳಿದರು.ಕರ್ನಾಟಕ ರಾಜ್ಯ ವೇಟ್‌ಲಿಫ್ಟರ್ಸ್ ಸಂಸ್ಥೆ ಬೆಂಗಳೂರು ಮಾನ್ಯತೆಯೊಂದಿಗೆ ಸ್ಪೋಟ್ಸ್ ಎಂಡ್ ಆಟ್ಸ್ ಎಸೋಸಿಯೇಶನ್‌ಸುಳ್ಯ ವತಿಯಿಂದ ಸುಳ್ಯದ ಜೂನಿಯರ್‌ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟಿಸಿ ಅವರು ಮಾತನಾಡಿದರು. ವೇಟ್ ಲಿಫ್ಟಿಂಗ್‌ನಲ್ಲಿ ಗ್ರಾಮೀಣ ಭಾಗದವರು ಭಾಗವಹಿಸಬೇಕಿದೆ. ಪಟ್ಟಣದಲ್ಲಿ ಬೇರೆ ಬೇರೆ ಅವಕಾಶಗಳಿವೆ. ಆದ್ದರಿಂದ ವೇಟ್‌ಲಿಫ್ಟಿಂಗ್‌ನಲ್ಲಿ ಗ್ರಾಮೀಣರಿಗೆ ಭಾಗವಹಿಸಲು ಪೂರಕ

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟನೆ Read More »

ಸುಳ್ಯದಲ್ಲಿ ಭಾರೀ ಮಳೆ ಕೆಸರುಮಯವಾದ ರಸ್ತೆಗಳು

ಸುಳ್ಯ ನಗರದಲ್ಲಿ ನ.8ರಂದು ಸುರಿಯುತ್ತಿರುವ ಭಾರಿ ಮಳೆಯಿಂದ ಹಳೆಗೇಟು ಮುಖ್ಯ ರಸ್ತೆ ಕೆಸರುಮಯವಾಗಿದೆ.ಅಲ್ಲದೆ ಸುಳ್ಯದ ನಗರ ವ್ಯಾಪ್ತಿಯಲ್ಲಿ‌ ಕುಡಿಯುವ ನೀರಿನ‌ ಕಾಮಗಾರಿ ನಡೆಯುತ್ತಿದ್ದು ಇದರಿಂದ ರಸ್ತೆ ಚರಂಡಿಗಳು ಮೊದಲೇ ಹದಗೆಟ್ಟಿತ್ತು ಇದೀಗ ಮಳೆ ಸುರಿದ ಪರಿಣಾಮ ರಸ್ತೆಗಳು ಅಸ್ತವ್ಯಸ್ತಗೊಂಡಿದ್ದುಇಂದು ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳೆಗೇಟು ಪೆಟ್ರೋಲ್ ಪಂಪ್ ಸಮೀಪ ಕಾಮಗಾರಿ ನಡೆಯುತ್ತಿದ್ದ ಸ್ಥಳ ದಿಂದ ಕೆಸರು ಮಣ್ಣು ನೀರಿನೊಂದಿಗೆ ರಸ್ತೆಗೆ ಹರಿದು ಬಂದಿದೆ. ರಸ್ತೆ ಸಂಪೂರ್ಣ ಕೆಸರು ನೀರಿನಿಂದ ತುಂಬಿದ್ದು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸುಳ್ಯದಲ್ಲಿ ಭಾರೀ ಮಳೆ ಕೆಸರುಮಯವಾದ ರಸ್ತೆಗಳು Read More »

ನ.16ಕ್ಕೆ ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಅದ್ದೂರಿ ಸಾಹಿತ್ಯ ಸಮ್ಮೇಳನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದುಪಂಜ ಹೋಬಳಿ ಸಾಹಿತ್ಯ ಘಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ,ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ,ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ನ.8ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆ ಪತ್ರಿಕಾಗೋಷ್ಠಿಯಲ್ಲಿ

ನ.16ಕ್ಕೆ ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಅದ್ದೂರಿ ಸಾಹಿತ್ಯ ಸಮ್ಮೇಳನ Read More »

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-2025 ಸಮಾರೋಪ ಮತ್ತು ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಭ್ರಮ -2025 ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮ ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗ್ಗಲಡ್ಕ ಇದರ ಸಹಯೋಗದೊಂದಿಗೆ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ನ.7 ರಂದು ಸಂಜೆ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ಸು‌ಳ್ಯ ನಗರ ಯೋಜನಾ ಪ್ರಾಧಿಕಾರದ

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-2025 ಸಮಾರೋಪ ಮತ್ತು ಸನ್ಮಾನ Read More »

2024ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ

ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು ಇದೇ ನವೆಂಬರ್ 30 ರಂದು ಬೆಂಗಳೂರಿನ ರವೀಂದ್ರ ಕಲಾಕೇತದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಹಸ್ತಾಂತರಿಸಲಾಗುವುದು. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಣೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ಸುಳ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತ‌ನಾಡಿದರು.2024 ನೇ ಸಾಲಿನ ಪ್ರಶಸ್ತಿಗೆ ಅರೆಭಾಷೆ ಸಾಹಿತಿ ಹಾಗೂ ನಿಘಂಟು ತಯಾರಕರು ಆಗಿರುವ ಕೆ.ಆರ್.

2024ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ Read More »

ಮಡಪ್ಪಾಡಿ : ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ಕಾರ್ಯಕ್ರಮ

ಸುಳ್ಯ, ಮಡಪ್ಪಾಡಿ – 06 ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಡಪ್ಪಾಡಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ3F ಆಯಿಲ್ ಪಾಮ್ ಪ್ರೈ. ಲಿ., ದ. ಕ., ಉಡುಪಿ ಸಹಯೋಗ ದಲ್ಲಿ ಯುವಕ ಮಂಡಲ ಸಭಾಭವನದಲ್ಲಿ ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ನೀಡಲಾಯಿತು.ರೈತರ ಬೇಡಿಕೆಯಂತೆ ಪ್ರಮುಖವಾಗಿ ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿಯನ್ನು ನೀಡಲಾಯಿತು.*ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಾಣಿ ಎಂ.ಸಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ

ಮಡಪ್ಪಾಡಿ : ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ಕಾರ್ಯಕ್ರಮ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 70 ನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ದಿನಾಂಕ 7/11/2025 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯೆ ಚಂದ್ರಾವತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ , ಕಥೆ ಹಾಗೂ ಹಾಡಿನ ಮೂಲಕ ಕನ್ನಡದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕಿ ಶ್ರೀಮತಿ.ಗೀತಾಂಜಲಿ ಟಿ.ಜಿ ಅವರು ವಹಿಸಿದ್ದರು.ಪುಟಾಣಿ ಮಕ್ಕಳು ಕನ್ನಡ ಗೀತೆ , ಕನ್ನಡ ಗಾದೆಮಾತುಗಳು , ಕನ್ನಡ ನುಡಿಮುತ್ತುಗಳನ್ನು ಹೇಳಿದರು ಹಾಗೂ ಕನ್ನಡದ ಕುರಿತು ಮಾತನಾಡಿದರು.ಪುಟಾಣಿಗಳಾದ ರಯಾನ್ ಸ್ವಾಗತಿಸಿ , ಶಜ್ನಾ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 70 ನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ Read More »

error: Content is protected !!
Scroll to Top