Author name: Tejas

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನೌಫಲ್ ನ ಮೃತದೇಹವನ್ನು ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ Read More »

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಇಂದು ಸುಳ್ಯದ ಶಿವಕೃಪಾ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಅಶೋಕ್ ಎಡಮಲೆ ಅವರು ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಖ್ಯಾತ ವ್ಯಂಗ್ಯಾ ಚಿತ್ರಕಾರ, ಅಂಕಣಕಾರ ದಿನೇಶ್ ಕುಕ್ಕುಜಡ್ಕ ಅವರು ಭಾಗವಹಿಸಿ ಮಾತನಾಡುತ್ತ ಕನ್ನಡ ಭಾಷೆಯ ಬಳಕೆ ಪ್ರಮಾಣ 3.73 ಪ್ರಮಾಣದಲ್ಲಿದ್ದು ಕನ್ನಡ ಭಾಷೆ ಭವಿಷ್ಯದಲ್ಲಿ ಇನ್ನಷ್ಟು ಅಪಾಯದಲ್ಲಿ ಸಿಲುಕದಂತೆ ಕನ್ನಡಿಗರು ಜಾಗೃತಿಯಾಗುವ ಕಾಲ ಬಂದಿದೆ. ಇಂಗ್ಲಿಷ್ ಬಲ ಕೈಯಾದರೆ ಕನ್ನಡ ಎಡ ಗೈಯಾಗಬೇಕು, ಮನೆಯ ಮಾತೃ ಭಾಷೆ ಅಂತರಂಗದ ಬಾಷೆಯಾಗಬೇಕು.ಪ್ರಾಚೀನ

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ., ಮೀನಕುಮಾರಿ ಕೆ., ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ ಕೆ.ಇದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ನಿರೂಪಿಸಿ, ಆಶಾ ಶ್ರೀ ಟಿ ಪಿ ಸ್ವಾಗತಿಸಿದರು. ಯಜ್ಞ ಎಂ. ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಡಿ. ವಂದಿಸಿದರು. ಸಿಬ್ಬಂದಿ ಬೇಬಿ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ Read More »

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ

ಸಂಪಾಜೆ ಗ್ರಾಮದ ಪೆರುಂಗೊಡಿ ಹಾಗೂ ದರ್ಕಾಸ್ ಕೊಪ್ಪತಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ 65 ಲಕ್ಷ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಯೋಜನೆಯಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ತಲಾ 20ಲಕ್ಷದಂತೆ 2 ರಸ್ತೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಮುಖಾಂತರ 40ಲಕ್ಷ ಮಂಜೂರಾಗಿದ್ದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರು ಅಭಿವೃದ್ಧಿ ಕಾರ್ಯಕ್ಕೆ ರಾಜಕೀಯ ಸಲ್ಲದು, ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಅನುದಾನ ದೊರಕಿಸಿಕೊಟ್ಟ ಟಿ ಎಂ ಶಾಹಿದ್ ತೆಕ್ಕಿಲ್

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಶರಣ್ ಪಂಪ್ವೆಲ್ ಬಂಧನ

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಶರಣ್ ಪಂಪ್ವೆಲ್ ಅವರ ಆರ್ ಎಸ್ಎಸ್ ಮುಖಂಡರೊಬ್ಬರ ಪ್ರಚೋದರಕಾರಿ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣ ವಿಶ್ವ ಹಿಂದೂ ಪರಿಷತ್ ಖಾತೆಯಲ್ಲಿ ಈ ವಿಡಿಯೋ ಹರಿದಾಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣಾ‌ ಪೊಲೀಸರು ಅವರನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಶರಣ್ ಪಂಪ್ವೆಲ್ ಬಂಧನ Read More »

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ ಗಪೂರ್ ಅರಂತೋಡು ಮಸೀದಿಗೆ ಭೇಟಿ,ಜಮಾಅತ್ ವತಿಯಿಂದ ಸನ್ಮಾನ

ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಪೂರ್ ರವರು ಒ. 31 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜಮಾಅತ್ ವತಿಯಿಂದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸನ್ಮಾನಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಅಧ್ಯಕ್ಷತೆ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಪೈಝಿ ದುವಾ ನೆರವೇರಿಸಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮೊಹಮ್ಮದ್,

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ ಗಪೂರ್ ಅರಂತೋಡು ಮಸೀದಿಗೆ ಭೇಟಿ,ಜಮಾಅತ್ ವತಿಯಿಂದ ಸನ್ಮಾನ Read More »

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದಲ್ಲಿ ನ.1ರಿಂದ ಸಾಹಿತ್ಯ ಸಂಭ್ರಮ‌ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ -೨೦೨೫ ಕಾರ್ಯಕ್ರಮವು ದಿನಾಂಕ ೦೧.೧೧.೨೦೨೫ ರಿಂದ ೦೭.೧೧.೨೦೨೫ರ ವರೆಗೆ ವಿವಿಧ ಕಡೆಗಳಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ,ವಲಯ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಚಂದ್ರಾವತಿ ಬಡ್ಡಡ್ಕ ತಿಳಿಸಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದದಿನಾಂಕ ೦೧.೧೧.೨೦೨೫ ಶನಿವಾರ ಅಪರಾಹ್ನ ೨.೦೦ಗಂಟೆಗೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದಲ್ಲಿ ನ.1ರಿಂದ ಸಾಹಿತ್ಯ ಸಂಭ್ರಮ‌ ಕಾರ್ಯಕ್ರಮ Read More »

ಆರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ಉಳುವಾರು ಮರು ಆಯ್ಕೆ

ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರಂತೋಡು ರಬ್ಬರ್ ಉತ್ಪಾದಕರ ಸಂಘವನ್ನು ಕಳೆದೆರಡು ವರ್ಷಗಳಿಂದ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಮುನ್ನಡೆಸಿದ ಶಶಿಕುಮಾರ್ ಉಳುವಾರು, ಅಡ್ತಲೆಯವರು ಮುಂದಿನ ಅವಧಿಗೂ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿದ್ದಾರೆ. ಇವರೊಂದಿಗೆ ಆರಂತೋಡು ಗ್ರಾಮದಿಂದ ಯಶೋದರ ಪಿಂಗಾರ ತೋಟ, ಯು. ಎಂ. ಕಿಶೋರ್ ಕುಮಾರ್ ಉಳುವಾರು, ಮೋಹನ್ ಕುಮಾರ್ ಪಾರೆಮಜಲು, ತೊಡಿಕಾನ ಗ್ರಾಮದಿಂದ ಕೇಶವ ಕೊಳಲುಮೂಲೆ, ವೆಂಕಟ್ರಮಣ ಪೆತ್ತಾಜೆ ಮತ್ತು ಕಮಲಾಕ್ಷ ಕಾಟೂರು (ಪಡ್ಪು )ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಆರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ಉಳುವಾರು ಮರು ಆಯ್ಕೆ Read More »

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ದಿನಾಂಕ 30.10.2025ನೇ ಗುರವಾರದಂದು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ “ಗ್ರಾಮ ಸ್ವರಾಜ್ ” ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಪ್ರಮುಖವಾಗಿ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲಿ ವ್ಯಾಪಕವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಶಾಶ್ವತ ಫ್ಲಕ್ಸ್ ಅಳವಡಿಸಿದ್ದು. ಆದರೆ ಕೆಲವರು ಪಂಚಾಯತ್ ಅನುಮತಿ ಪಡೆಯದೆ, ಪ್ಲೆಕ್ಸ್ ಅಳವಡಿಸಿದ ಸ್ಥಳದ ಮಾಹಿತಿ ನೀಡದಿರುವುದರಿಂದ ಪ್ರಯಾಣಿಕರಿಗೂ ಹಾಗೂ ವ್ಯಾಪಾರಸ್ಥರಿಗೂ ತೊಂದರೆಯಾಗುವುದರಿಂದ ಇದರ ಬಗ್ಗೆ ಕ್ರಮ ಕೈಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಾಮಾನ್ಯ ಸಭೆಯಲ್ಲಿ ನವಂಬರ್

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

error: Content is protected !!
Scroll to Top