Author name: Tejas

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ದಿನಾಂಕ 30.10.2025ನೇ ಗುರವಾರದಂದು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ “ಗ್ರಾಮ ಸ್ವರಾಜ್ ” ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಪ್ರಮುಖವಾಗಿ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲಿ ವ್ಯಾಪಕವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಶಾಶ್ವತ ಫ್ಲಕ್ಸ್ ಅಳವಡಿಸಿದ್ದು. ಆದರೆ ಕೆಲವರು ಪಂಚಾಯತ್ ಅನುಮತಿ ಪಡೆಯದೆ, ಪ್ಲೆಕ್ಸ್ ಅಳವಡಿಸಿದ ಸ್ಥಳದ ಮಾಹಿತಿ ನೀಡದಿರುವುದರಿಂದ ಪ್ರಯಾಣಿಕರಿಗೂ ಹಾಗೂ ವ್ಯಾಪಾರಸ್ಥರಿಗೂ ತೊಂದರೆಯಾಗುವುದರಿಂದ ಇದರ ಬಗ್ಗೆ ಕ್ರಮ ಕೈಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಾಮಾನ್ಯ ಸಭೆಯಲ್ಲಿ ನವಂಬರ್ […]

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಸ್ಕೂಟಿ ಸವಾರನ ಮೇಲೆ ಪ್ರಕರಣ ದಾಖಲು

ಅ.30ರಂದು ಬಿಸಿಲೆ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್‌ ಎನ್ ಜಿ ಸರ್ಕಲ್ನಂದ ಅಂಬ್ಯುಲೆನ್ಸ್ ಮುಂದಿನಿಂದ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡಚಣೆ ಉಂಟು

ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಸ್ಕೂಟಿ ಸವಾರನ ಮೇಲೆ ಪ್ರಕರಣ ದಾಖಲು Read More »

ಶುಭವಿವಾಹ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಬಾಳೆಕಜೆ ಜನಾರ್ಧನ ಮತ್ತು ಚಂದ್ರಕಲಾ ದಂಪತಿ ಪುತ್ರ ಶ್ರೀನಿಧಿಯವರ ವಿವಾಹವುಸುಳ್ಯ ತಾಲೂಕು ತೊಡಿಕಾನ ಗ್ರಾಮದ ಊರುಪಂಜ ಹಿರಣ್ಯ ಮತ್ತು ಹೊನ್ನಮ್ಮ ದಂಪತಿ ಪುತ್ರಿ ಯೋಗಿತಾರೊಂದಿಗೆ ಅ.30ರಂದು ತೊಡಿಕಾನ ಬಿ.ಎಸ್.ಗೌಡ ಸಭಾಭವನದಲ್ಲಿ ನಡೆಯಿತು.

ಶುಭವಿವಾಹ Read More »

ಸುಳ್ಯ : ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ಜಯಪ್ರಕಾಶ್ ರೈ ರಾಜಕೀಯ ನಿವೃತ್ತಿ ಘೋಷಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈಯವರು ರಾಜಕೀಯ ನಿವೃತ್ತಿ ಪ್ರಕಟಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಗೆ ಪತ್ರ ಬರೆದಿರುವ ಅವರು ಜಿಲ್ಲಾ ಉಪಾಧ್ಯಕ್ಷತೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿಯೂ, ಪ್ರಸ್ತುತ ರಾಜಕೀಯ ನಿವೃತ್ತಿ ಬಯಸಿರುವುದಾಗಿಯೂ ತಿಳಿಸಿದ್ದಾರೆ.

ಸುಳ್ಯ : ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ಜಯಪ್ರಕಾಶ್ ರೈ ರಾಜಕೀಯ ನಿವೃತ್ತಿ ಘೋಷಣೆ Read More »

ಮದುವೆ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಸಾವು

ಸಕಲೇಶಪುರ ತಾಲೂಕಿನ ವನಗೂರಿನಿಂದ ಮದುವೆಗೆಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ವ್ಯಾನ್ ಚಾಲಕ‌ ನಿಯಂತ್ರಣ ತಪ್ಪಿ ಬಿಸಿಲೆ ಘಾಟ್ ಸಮೀಪ 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಅ.30ರ ಗುರುವಾರ ಬೆಳಿಗ್ಗೆ ನಡೆದಿದ್ದು, ಈ ಪರಿಣಾಮ ಓರ್ವ ಮೃತಪಟ್ಟು, 6 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.ಶಿವರಾಜ್ ( 50) ಮೃತಪಟ್ಟವರು.ಈ ವಾಹನದಲ್ಲಿ ಒಟ್ಟು ಸುಮಾರು 30 ಮಂದಿಯಿದ್ದು, 20 ಮಂದಿ ಗಾಯಗೊಂಡಿದ್ದು, ಇದರಲ್ಲಿ 7 ಮಂದಿಗೆ ಗಂಭೀರ ಗಾಯಗಳಾಗಿತ್ತು. ಅವರಲ್ಲಿ ಶಿವರಾಜ್ ಎಂಬವರಿಗೆ ಚಿಕಿತ್ಸೆ

ಮದುವೆ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಸಾವು Read More »

ಮದುವೆ ವಾಹನ ಪಲ್ಟಿಯಾಗಿ ಹಲವು ಮಂದಿಗೆ ಗಾಯ

ಕುಕ್ಕೆಸುಬ್ರಹ್ಮಣ್ಯಕ್ಕೆ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ತಿರುವಿನಲ್ಲಿ ಅಪಘಾತವಾಗಿ ವ್ಯಾನ್‌ನಲ್ಲಿದ್ದವರಿಗೆ ಗಂಭೀರ ಗಾಯವಾದ ಘಟನೆ ಅ. 30ರಂದು ವರದಿಯಾಗಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರೆಂದು ತಿಳಿದು ಬಂದಿದೆ. ವ್ಯಾನ್‌ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ

ಮದುವೆ ವಾಹನ ಪಲ್ಟಿಯಾಗಿ ಹಲವು ಮಂದಿಗೆ ಗಾಯ Read More »

ಭವಿಷ್ಯದಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ, ನಶಿಸಿ ಹೋಗದಂತೆ ಕಾಪಾಡುವ ಜವಾಬ್ದಾರಿ ಸಮಸ್ತ ಕನ್ನಡಿಗರಲ್ಲಿರಲಿ!

ನಾವು ಕನ್ನಡ ರಾಜೋತ್ಸವ ಸಂಭ್ರಮದಲ್ಲಿದ್ದೆವೆ.ನ.1ರಂದು ಕರ್ನಾಟಕದಲ್ಲಿ ಕನ್ನಡ ರಾಜೋತ್ಸೋವ ಆಚರಿಸಲಾಗುತ್ತಿದೆ. ಕನ್ನಡ ಭಾಷಾವಾರು 5 ಪ್ರಾಂತ್ಯಗಳಾಗಿ ವಿಂಗಡಿಸಿದ ಮುಂಬೈ, ಹೈದರಾಬಾದ್, ಮದ್ರಾಸ್, ಕೊಡಗು, ನಿಜಾಮರ ಪ್ರಾಂತ್ಯವೆಂದು ಹಂಚಿಕೆಯಲ್ಲಿದ್ದ ಕನ್ನಡ ಭಾಷಿಗರ ಈ ಎಲ್ಲಾ ಪ್ರದೇಶಗಳನ್ನು ಒಂದೇ ಸೂರಿನಡಿಯಲ್ಲಿ ಒಗ್ಗೂಡಿಸಿ ನವಂಬರ್ 1 -1956 ರಂದು ಮೈಸೂರು ರಾಜ್ಯವೆಂದು ಹೆಸರಿಟ್ಟು ಸಂಭ್ರಮಿಸಿದ ಅವಿಸ್ಮರಣೀಯ ದಿನವನ್ನು ಕನ್ನಡ ರಾಜ್ಯೋತ್ಸವದ ಕನ್ನಡ ಹಬ್ಬವಾಗಿ ಅದ್ದೂರಿಯಾಗಿ ನಾಡಿನೆಲ್ಲೆಡೆ ಆಚರಿಸಲಾಗುತ್ತದೆ.ಕಪ್ಪು ಮಣ್ಣಿನ ನಾಡು ಕರುನಾಡು ಮೈಸೂರು ರಾಜ್ಯವಾಗಿ ಸ್ಥಾಪನೆಗೊಳ್ಳಲು ನಮ್ಮ ನಾಡಿನ ಹಿರಿಯರು ಸ್ವಾತಂತ್ರ್ಯ

ಭವಿಷ್ಯದಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ, ನಶಿಸಿ ಹೋಗದಂತೆ ಕಾಪಾಡುವ ಜವಾಬ್ದಾರಿ ಸಮಸ್ತ ಕನ್ನಡಿಗರಲ್ಲಿರಲಿ! Read More »

ಬಸ್ಸಲ್ಲಿ ಮಹಿಳೆ ಅಸ್ವಸ್ಥಗೊಂಡು‌ ಆಸ್ಪತ್ರೆಯಲ್ಲಿ ಸಾವು

ಬಸ್ಸಲ್ಲಿ ಮಹಿಳೆಯೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ನಂತರ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಮೃತಪಟ್ಟ ಘಟನೆ ಅ.29 ರಂದು ನಡೆದಿದೆ.ಸಂಪಾಜೆಯಿಂದ ಸುಳ್ಯ ಕಡೆಗೆ ಬರುತ್ತಿರುವ ಬಸ್ಸು ದೊಡ್ಡಡ್ಕ ಬಳಿ ಬರುತ್ತಿರುವಾಗ ಕೊಯನಾಡಿನ ಕಮಲ ಎಂಬವರು ಕುಸಿದು ಬಿದ್ದರು.ಬಳಿಕ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಯಿತು.ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾದರೆಂದು ತಿಳಿದು ಬಂದಿದೆ.ಮಕ್ಕಳಾದ ಜಯಶ್ರೀ, ಶೋಭಾ ಮತ್ತು ಹೇಮಂತ್ ಅಗಲಿದ್ದಾರೆ.

ಬಸ್ಸಲ್ಲಿ ಮಹಿಳೆ ಅಸ್ವಸ್ಥಗೊಂಡು‌ ಆಸ್ಪತ್ರೆಯಲ್ಲಿ ಸಾವು Read More »

ಸಂಸದ ಕ್ಯಾ. ಚೌಟ ಅ. 30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಸದ ಕ್ಯಾ. ಚೌಟ ಅ. 30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ Read More »

ನಾಳೆ ಪವರ್ ಕಟ್,ಯಾವ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲಾ ನೋಡಿ!

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಅ.30 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಟಾರು, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಾಧ್ಯಾಹ್ನ 5:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ಪವರ್ ಕಟ್,ಯಾವ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲಾ ನೋಡಿ! Read More »

error: Content is protected !!
Scroll to Top