ಕ್ರೈಂ

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ; ಇರಾನ್‌ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್: ಪರಮಾಣು ಒಪ್ಪಂದಕ್ಕೆ  ಸಹಿ ಹಾಕದಿದ್ದರೆ ಮತ್ತು ಪರಮಾಣು ಕಾರ್ಯಕ್ರಮದ ಬಗ್ಗೆ ಅಮೆರಿಕದ ಜೊತೆ ಮಾತುಕತೆಗೆ ಒಪ್ಪದಿದ್ದರೆ ಇರಾನ್‌ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇಂದು ಬೆದರಿಕೆ ಹಾಕಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಯುಎಸ್ ಮತ್ತು ಇರಾನಿನ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದು ದೃಢಪಡಿಸಿದರು.ಈ ಬಗ್ಗೆ ಅಂತಿಮ ಎಚ್ಚರಿಕೆಯ ಸಂದೇಶ ರವಾನಿಸಿದ ಟ್ರಂಪ್, “ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ, ಬಾಂಬ್ ದಾಳಿ ನಡೆಸಬೇಕಾಗುತ್ತದೆ. ಅವರು ಹಿಂದೆಂದೂ […]

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ; ಇರಾನ್‌ಗೆ ಟ್ರಂಪ್ ಬೆದರಿಕೆ Read More »

ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ

ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ನಿವಾಸಿ ನಿಝಾಮುದ್ದೀನ್ (27ವ.) ಬಂಧಿತ ಆರೋಪಿ.ಮಾ.31ರಂದು ಬೆಳಿಗ್ಗೆ 9 ಗಂಟೆಗೆ ಉಪ್ಪಿನಂಗಡಿ ಠಾಣೆ ಪಿಎಸ್‌ಐ ಅವಿನಾಶ್‌ರವರು ಸಿಬ್ಬಂದಿಗಳೊಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಉಪ್ಪಿನಂಗಡಿ ಜಂಕ್ಷನ್‌ನಲ್ಲಿರುವ ಫೈ ಓವರ್ ಬಳಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಅಮಲು ಸೇವನೆ ಮಾಡಿ ನಶೆಯಲ್ಲಿದ್ದವರಂತೆ ಮಾತನಾಡುತ್ತಾ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಸಮರ್ಪಕ ಉತ್ತರವನ್ನು ನೀಡಲು

ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ Read More »

ಸುಳ್ಯದಿಂದ ಹೋಗುತ್ತಿದ್ದಾಗ ಪ್ರಸಿದ್ದ ಭಾಗವತ ಸತೀಶ ಆಚಾರ್ಯ ಬೈಕ್ ಅಪಘಾತದಲ್ಲಿ ಸಾವು

ಬೆಳ್ತಂಗಡಿ : ಪ್ರಸಿದ್ಧ ಭಾಗವತರಾದ ಸತೀಶ್ ಆಚಾರ್ಯ(40 ವ) ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.ಅವರು ಮಂಗಳದೇವಿ ಮೇಳದಲ್ಲಿ ಭಾಗತರಾಗಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರು.ಸತೀಶ್‌ ಆಚಾರ್ಯ ಅವರು ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಇಂದು ಮುಂಜಾನೆ 4 ಗಂಟೆಗೆ ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಸಮೀಪ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ

ಸುಳ್ಯದಿಂದ ಹೋಗುತ್ತಿದ್ದಾಗ ಪ್ರಸಿದ್ದ ಭಾಗವತ ಸತೀಶ ಆಚಾರ್ಯ ಬೈಕ್ ಅಪಘಾತದಲ್ಲಿ ಸಾವು Read More »

ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ

ಸುಳ್ಯ ತಾಲೂಕಿ ಅರಂತೋಡು ಕುಲ್ಚಾರ್ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸೇತುವೆಯ ತಡೆಗೋಡೆಗೆ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ನಡೆದಿದೆ‌. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾರಿನ ಮುಂಬಾಗ ಜಖಂಗೊಂಡಿದೆ.

ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ Read More »

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಥಳಿತ

ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ಬಿ ಸಿ ರೋಡ್ ನಲ್ಲಿ ನಡೆದಿದೆ. ನಾವೂರು ಗ್ರಾಮ ಪಂಚಾಯಿತಿ ಸದಸ್ಯ ಹಾಗೇ ರಿಕ್ಷಾ ಚಾಲಕನಾಗಿರುವ ಮೋನು ಎಂಬಾತನೆ ಕಿರುಕುಳ ನೀಡಿದಾತ.ಮಂಗಳೂರಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಪುತ್ತೂರಿನಿಂದ ಬಿ ಸಿ ರೋಡ್ ಬರುವ ವೇಳೆ ಮೋನು ಪಕ್ಕದ ಸೀಟಿನಲ್ಲಿ ಕೂತಿದ್ದ ಯುವತಿಗೆ

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಥಳಿತ Read More »

ಮಹಿಳೆ ಹಾಗೂ ಸಹೋದರನಿಗೆ ತಲ್ವಾರಿನಿಂದ ಹಲ್ಲೆಯತ್ನ

ಪುತ್ತೂರು; ಮಹಿಳೆ ಹಾಗೂ ಆಕೆಯ ಸಹೋದರನಿಗೆ ತಲ್ವಾರಿನಿಂದ ವ್ಯಕ್ತಿಯೊಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ನಡೆದಿದೆ.ಸಂಪ್ಯದ ಮೂಲೆ ನಿವಾಸಿ ರೇಖನಾಥ ರೈ ಹಾಗೂ ಅವರ ಅಕ್ಕ ಪುಷ್ಪಾವತಿ ರೈಯವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಹಸೈನಾರ್ ಎಂಬಾತ ಹಲ್ಲೆ ನಡೆಸಲು ಮುಂದಾಗಿರುವುದಾಗಿ ರೇಖನಾಥ ರೈಯವರು ತಿಳಿಸಿದ್ದಾರೆ. ಇವರ ಹಾಗಾ ಹಸೈನ‌ರ್ ಮಧ್ಯೆ ಜಾಗದ ತಕರಾರು ಕಳೆದ ಹಲವು ಸಮಯದಿಂದ ಇತ್ತು ಎನ್ನಲಾಗಿದೆ. ಅದು ವಿಕೋಪಕ್ಕೆ ಹೋಗಿ ತಲ್ವಾರಿನಿಂದ

ಮಹಿಳೆ ಹಾಗೂ ಸಹೋದರನಿಗೆ ತಲ್ವಾರಿನಿಂದ ಹಲ್ಲೆಯತ್ನ Read More »

ಪಿ.ಯು.ಸಿ ಲೈಂಗಿಕ ದೌಜನ್ಯ ಎಸಗಿದ ಆರೋಪಿಯ ಬಂಧನ

ಬೆಳಾಲು ಗ್ರಾಮದಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಒಳಗಾದ ಶಂಕರ ಗೌಡ(60) ಎಂಬವನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಪ್ರಕರಣ ದಾಖಲಾಗಿದೆ.ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವೃದ್ಧ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಆರೋಪಿಯನ್ನು ಮಾ.27 ರಂದು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಫೋಕ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ಜಾಮೀನು

ಪಿ.ಯು.ಸಿ ಲೈಂಗಿಕ ದೌಜನ್ಯ ಎಸಗಿದ ಆರೋಪಿಯ ಬಂಧನ Read More »

ಕಾಟಿಕೇರಿ : ಭೀಕರ ರಸ್ತೆ ಅಪಘಾತ-ಬೈಕ್‌ ಸವಾರ ಸ್ಥಳದಲ್ಲೇ ಸಾವು

ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಬೈಕ್ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್‌ (28)ಮೃತರ್ದುದೈವಿ.ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಯುವಕ ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್ ಎಫ್ ಕೊಡಗು ಸಂಪಾಜೆ

ಕಾಟಿಕೇರಿ : ಭೀಕರ ರಸ್ತೆ ಅಪಘಾತ-ಬೈಕ್‌ ಸವಾರ ಸ್ಥಳದಲ್ಲೇ ಸಾವು Read More »

ಲೈನ್ ಮ್ಯಾನ್ ಆಕಸ್ಮಿಕ ಸಾವು

ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ನಾರವಿ ತುಂಬೆ ಗುಡ್ಡೆ ನಿವಾಸಿ ಕಿಟ್ಟ ಯಾನೆ ಸುಧಾಕರ (45) ಅವರು ಮಾ.26 ರಂದು ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.ಮಾ.26 (ಇಂದು) ಸಂಜೆಯ ಸಮಯಕ್ಕೆ ಇವರ ಮೃತದೇಹ ಅಂಡಿಂಜೆ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು. ಕೈ ಯಲಿ ಒಂದು ಗಾಯದ ಗುರುತು ಪತ್ತೆಯಾಗಿದೆ. ಇವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.ಮೃತರು ಲೈನ್ ಮ್ಯಾನ್ 1998 ರಲ್ಲಿ ವೃತ್ತಿಯನ್ನು ಆರಂಭಿಸಿದ್ದು.

ಲೈನ್ ಮ್ಯಾನ್ ಆಕಸ್ಮಿಕ ಸಾವು Read More »

ಉಬರಡ್ಕ : ಮರವೇರಿ ಮಾವಿನ ಮಿಡಿ ಕೊಯ್ಯುವಾಗ ಗೆಲ್ಲು ತುಂಡಾಗಿ ವ್ಯಕ್ತಿ ಬಿದ್ದು ಸಾವು

ಸುಳ್ಯ: ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಬರಡ್ಕದಲ್ಲಿ ನಡೆದಿದೆ.ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತ ದುರ್ದೈವಿ. ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿಯವರ ಮಾ.೨೨ರಂದು ಕೆಲಸಕ್ಕೆ ಹೋಗಿದ್ದಲ್ಲಿ ಮಾವಿನ ಮರ ಹತ್ತಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದು ಇವರು ಕೂಡಾ ಕೆಳಕ್ಕೆ ಬಿದ್ದರು. ಪರಿಣಾಮ ಅವರ ಸೊಂಟಕ್ಕೆ ಹಾಗೂ ತಲೆಗೆ ಗಾಯವಾಗಿದೆ. ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ

ಉಬರಡ್ಕ : ಮರವೇರಿ ಮಾವಿನ ಮಿಡಿ ಕೊಯ್ಯುವಾಗ ಗೆಲ್ಲು ತುಂಡಾಗಿ ವ್ಯಕ್ತಿ ಬಿದ್ದು ಸಾವು Read More »

error: Content is protected !!
Scroll to Top