ಕ್ರೈಂ

ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ

ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಜು.22ರಂದು ರಾತ್ರಿ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡು ಮ್ರತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.ಗಾಯಾಳುವನ್ನು‌ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದರು.ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ […]

ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ Read More »

ಅರಂತೋಡು : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ

ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ನಡೆದಿದೆ.ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ ಎಂದು ಗುರುತಿಸಲಾಗಿದೆ.ಗಾಯಾಳುವನ್ನು‌ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ದಿದ್ದಾರೆ.

ಅರಂತೋಡು : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ Read More »

ಸಂಪಾಜೆ : ಕಾರು ಪಲ್ಟಿ ಹೊಡೆದು ಚಾಲಕನಿಗೆ ಗಾಯ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಜು.21 ರಂದು ಸಂಭವಿಸಿದೆ. ಕಲ್ಲುಗುಂಡಿಯಿಂದ ಕಡೆಪಾಲದ ಕಡೆಗೆ ಹೋಗುತ್ತಿದ್ದ ಕಾರು ಕಡೆಪಾಲದ ತಿರುವು ಬಳಿ ತಲುಪಿದಾಗ ಒಮ್ಮಿಂದೊಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಚರಂಡಿಗೆ ಪಲ್ಟಿಯಾಗಿದೆ. ಪರಿಣಾಮವಾಗಿ ಕಾರಿನ ಚಾಲಕ ಗುರುವ ಎಂಬವರಿಗೆ ತಲೆಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಕಲ್ಲುಗುಂಡಿಯ ತಾಜುದ್ದೀನ್ ಟರ್ಲಿ ಅಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯದ್ದು ಚಿಕಿತ್ಸೆ ಕೊಡಿಸಲಾಗಿದೆ.

ಸಂಪಾಜೆ : ಕಾರು ಪಲ್ಟಿ ಹೊಡೆದು ಚಾಲಕನಿಗೆ ಗಾಯ Read More »

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ, 85 ವರ್ಷದ ಚೆನ್ನಮ್ಮ ಅವರು ಜುಲೈ 18ರಂದು ನಿಧನರಾಗಿದ್ದಾರೆ.ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15ರಿಂದ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. 1954ರ ಮೇ 25ರಂದು ದೇವೇಗೌಡರೊಂದಿಗೆ ವಿವಾಹವಾಗಿದ್ದ ಚನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದಾಗ ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ Read More »

ಲಾವಣ್ಯ ಹತ್ಯೆ ಆರೋಪಿಯ ಬಂಧನ

ಬಿ.ಸಿ.ರೋಡ್ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣದಲ್ಲಿಜು.16 ಸಂಜೆ ಯುವತಿ ಲಾವಣ್ಯಳ‌ನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಅರೋಪಿ ಚೇತನ್ ವಿಷಪ್ರಾಷನ ಮಾಡಿದ್ದು, ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಂಟ್ವಾಳ ತಾಲೂಕಿನ ಉಳಿ ಗ್ರಾಮ ನಿವಾಸಿ ಲಾವಣ್ಯ (21) ಎಂಬಾಕೆಯನ್ನು ಬೆಳ್ತಂಗಡಿ ಒಡಿಲ್ನಾಳ ನಿವಾಸಿ, ಆಕೆಯ ದೂರದ ಸಂಬಂಧಿ ಚೇತನ್ ಎಂಬಾತ ತಲವಾರಿನಿಂದ ಕಡಿದು ಹತ್ಯೆ ಮಾಡಿದ್ದ.ಆದರೆ ಈ ವೇಳೆ ಆರೋಪಿ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವೀಡಲಾಗುತ್ತಿದೆ ಎಂದು ಎಸ್ ಪಿ

ಲಾವಣ್ಯ ಹತ್ಯೆ ಆರೋಪಿಯ ಬಂಧನ Read More »

ಬಂಟ್ವಾಳದಲ್ಲಿ ಯುವತಿಯ ಕೊಲೆ ಮಾಡಿರುವುದು ಹೇಯ ಮತ್ತು ಅವಮಾನೀಯ ಕೃತ್ಯ : ಶಾಸಕಿ ಭಾಗೀರಥಿ ಮುರುಳ್ಯ

ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಕೊಲೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಮುರುಳ್ಯ ತೀವ್ರವಾಗಿ ಖಂಡಿಸಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.​ಬಂಟ್ವಾಳದಲ್ಲಿ ಯುವತಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆಯು ಇಡೀ ಸಮಾಜವೇ ತಲೆತಗ್ಗಿಸುವಂತಹದ್ದಾಗಿದೆ. ಈ ಅಮಾನವೀಯ ಮತ್ತು ರಕ್ಕಸ ಕೃತ್ಯವನ್ನು ನಾನು ತೀವ್ರ ಪದಗಳಲ್ಲಿ ಖಂಡಿಸುತ್ತೇನೆ.​ನಾಗರಿಕ ಸಮಾಜದಲ್ಲಿ ಇಂತಹ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆ ನಡೆದಿರುವುದು ಮಹಿಳೆಯರ ಮತ್ತು ಯುವತಿಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕವನ್ನು

ಬಂಟ್ವಾಳದಲ್ಲಿ ಯುವತಿಯ ಕೊಲೆ ಮಾಡಿರುವುದು ಹೇಯ ಮತ್ತು ಅವಮಾನೀಯ ಕೃತ್ಯ : ಶಾಸಕಿ ಭಾಗೀರಥಿ ಮುರುಳ್ಯ Read More »

ಬಂಟ್ವಾಳ : ಲಾವಣ್ಯ ಗೌಡ ಯುವಕನ ಭೀಕರ ತಲವಾರು ದಾಳಿಗೆ ಬಲಿ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಕಾಸ್ತ್ರದಿಂದ ಯುವಕನೋರ್ವ ದಾಳಿ ನಡೆಸಿದ ಘಟನೆ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ವರದಿಯಾಗಿದೆ.ಮೃತರನ್ನು ಕಕ್ಕೆಪದವು ನಿವಾಸಿ ಬಾಳಪ್ಪ ಗೌಡರವರ ಮಗಳು ಲಾವಣ್ಯ ಗೌಡ (25) ಎಂದು ತಿಳಿದು ಬಂದಿದೆ.ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದು. ಕೆಲಸ ಮುಗಿಸಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಕ್ರತ್ಯ ಎಸಗಿದ್ದಾನೆ.ಮೇಲ್ನೋಟಕ್ಕೆ ಆರೋಪಿಯನ್ನು ಬೆಳ್ತಂಗಡಿ ಓಡಿಲ್ನಾಳ ಗ್ರಾಮದ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ

ಬಂಟ್ವಾಳ : ಲಾವಣ್ಯ ಗೌಡ ಯುವಕನ ಭೀಕರ ತಲವಾರು ದಾಳಿಗೆ ಬಲಿ Read More »

ತೊಡಿಕಾನ : ಕಣಜದ ಹುಳ ಕಡಿದು ವ್ಯಕ್ತಿ ಗಂಭೀರ

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕ್ರಷಿ ಕಾರ್ಮಿಕರೊಬ್ಬರಿಗೆ ಕಣಜದ ಹುಳ ಕಚ್ಚಿ ಗಂಭೀರ ಗಾಯವಾದ ಘಟನೆ ಜು.15ರಂದು ವರದಿಯಾಗಿದೆ.ತೊಡಿಕಾನ ದೊಡ್ಡಕುಮೇರಿ ನಿವಾಸಿ ಕೇಪು ಎಂಬುವರು ಕಣಜದ ಹುಳ ಕಡಿತಕೊಳಗಾದ ವ್ಯಕ್ತಿಯಾಗಿದ್ದಾರೆ‌.ಅವರು ಇಂದು ಮಧ್ಯಾಹ್ನ ತೋಟದಲ್ಲಿ ಕೆಲಸ ಕಾಡು ಕಡಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ತೊಡಿಕಾನ : ಕಣಜದ ಹುಳ ಕಡಿದು ವ್ಯಕ್ತಿ ಗಂಭೀರ Read More »

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88ವರ್ಷ) ವಿಧಿವಶರಾಗಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.ರಾಮಚಂದ್ರೇಗೌಡರ ನಿಧನಕ್ಕೆ ರಾಜ್ಯದ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಡಿ.ಕೆ. ಶಿವಕುಮಾ‌ರ್ ಅವರು ಸಾಮಾಜಿಕ ಜಾಲತಾಣದಲ್ಲಿ “ರಾಮಚಂದ್ರೇಗೌಡರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜ್ಯದ ಅಭಿವೃದ್ಧಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅವರು ನೀಡಿದ ಕೊಡುಗೆ ಅಪಾರ. ಅವರೊಬ್ಬ ಸರಳ

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ Read More »

ಅಡ್ತಲೆ ಕೃಷ್ಣವೇಣಿ ನಿಧನ

ಅರಂತೋಡು ಗ್ರಾಮದ ಅಡ್ತಲೆ ಕುಟುಂಬದ ದಿ. ನಾಗಪ್ಪ ಗೌಡರ ಪತ್ನಿ ಕೃಷ್ಣವೇಣಿ ( 77) ಜು.11ರಂದು ಸ್ಚಗ್ರಹದಲ್ಲಿ ನಿಧನರಾದರು. ಪುತ್ರ ಬಾಲಚಂದ್ರ, ಪುತ್ರಿ ವನಿತಾ, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂದುಗಳನ್ನು ಅಗಲಿದ್ದಾರೆ.

ಅಡ್ತಲೆ ಕೃಷ್ಣವೇಣಿ ನಿಧನ Read More »

error: Content is protected !!
Scroll to Top