ಕ್ರೈಂ

ಗೀಸರ್ ನ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವು

ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಜೂ 7ರಂದು ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರು ಮೂಲದ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ. ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೆ ಅಲ್ಲಿ ಉಳಿದುಕೊಂಡಿದ್ದರು.ಬೆಳಿಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ.ಬಾತ್ ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ.ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಗೀಸರ್ ನ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವು Read More »

ಸುಳ್ಯ : ಇಲಿ ಪಾಷಾಣ ಸೇವಿಸಿದ ಯುವಕ ಸಾವು!

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಟ್ಪಿಪಳ್ಳದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಜೂ.6ರಂದು ವರದಿಯಾಗಿದೆ.ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿದ ಯುವಕನನ್ನು‌ ಜಟ್ಟಿಪಳ್ಳ ನಿವಾಸಿ ದಿ.ಭಾಸ್ಕರ ಅವರ ಮಗ ಉಮೇಶ(32 ವರ್ಷ) ಎಂದು ತಿಳಿದು‌ ಬಂದಿದೆ.ಒಂದು ವಾರದ ಅವರು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಾಗ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ವೈದ್ಯರು ಚಿಕಿತ್ಸೆ ಫಲಕಾರಿಯಾಗುವುದು ಅಸಾಧ್ಯ ಎಂದು ತಿಳಿಸಿದ ಕಾರಣ ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮ್ರತರು ತಾಯಿ,ಓರ್ವ ಸಹೋದರ,ಸಹೋದರಿಯನ್ನು ಅಗಲಿದ್ದಾರೆ.

ಸುಳ್ಯ : ಇಲಿ ಪಾಷಾಣ ಸೇವಿಸಿದ ಯುವಕ ಸಾವು! Read More »

ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು!

ಕೊಡಗು ಜಿಲ್ಲೆಯ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಕಾಡಾನೆ ದಾಳಿಯಿಂದ ಸಾವನ್ಜಪ್ಪಿದ ಘಟನೆ ವರದಿಯಾಗಿದೆ.ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದೆ.ಆನೆ ದಾಳಿಯಿಂದ ಓಡಿ ಹೋಗಿ ಇಬ್ಬರು ಕಾಫಿ ತೋಟದ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ.ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು! Read More »

ಮೊಬೈಲ್ ಬಳಸದಂತೆ ಮಗನಿಗೆ ಬುದ್ದಿ ಮಾತು ಹೇಳಿದ ತಾಯಿ,ಮಗ ನಿಗೂಡವಾಗಿ ನಾಪತ್ತೆ

ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿಂದ ವರದಿಯಾಗಿದೆ.ನಾಪತ್ತೆಯಾದ ಬಾಲಕ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ.ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಲ್ಮಾ ಅವರು ತಮ್ಮ ಪತಿ ಹಾಗೂ ಮಗ ಸೈಯದ್

ಮೊಬೈಲ್ ಬಳಸದಂತೆ ಮಗನಿಗೆ ಬುದ್ದಿ ಮಾತು ಹೇಳಿದ ತಾಯಿ,ಮಗ ನಿಗೂಡವಾಗಿ ನಾಪತ್ತೆ Read More »

ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ

ಹಾಸನದಲ್ಲಿ ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣವೊಂದು ವರದಿಯಾಗಿದೆ‌. ಪದವಿ ಓದುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್‌ ಕೊಡುವುದಾಗಿ ಕರೆದೊಯ್ದು, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್‌ನಿಂದ ಜಿಗಿದಿದ್ದು, ಗಂಭೀರ ಗಾಯಗೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಇಬ್ಬರು ಸ್ನೇಹಿತರನ್ನೂ ಹುಡುಕುತ್ತಿದ್ದಾರೆ. ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ Read More »

ಸವಣೂರು : ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ತೋಟವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಅಡ್ಡೆಗೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿದ್ದಾರೆ. ಉಪ ನಿರೀಕ್ಷಕ ಸಂತೋಷ್ ಬಿ. ಪಿ. ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ, ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದಾಗ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸವಣೂರು : ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ Read More »

ಸುಳ್ಯದ ವ್ಯಕ್ತಿ ಅಪಘಾತದಲ್ಲಿ ಸಾವು

ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 25ರಂದು ನಡೆದಿದೆ.ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆ ವೇಳೆಗೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ

ಸುಳ್ಯದ ವ್ಯಕ್ತಿ ಅಪಘಾತದಲ್ಲಿ ಸಾವು Read More »

ಪುತ್ತೂರು : ಕಾರಿ‌ನೊಳಗೆ ನುಗ್ಗಿದ ಹಾವು,ಹೆಚ್ಚಿದ ಆತಂಕ

ಪುತ್ತೂರಿನಲ್ಲಿ ಇಲಿಯೊಂದನ್ನು ಹಿಡಿಯಲು ಕಾರಿನೊಳಗೆ ನುಗ್ಗಿದ ಹಾವು, ನಂತರ ಹೊರಬರಲಾಗದೆ ಸಿಲುಕಿಕೊಂಡ ಘಟನೆ ನಡೆದಿದೆ. ನಗರದ ನಿವಾಸಿಯೊಬ್ಬರ ಕಾರಿನ ಅಡಿಭಾಗಕ್ಕೆ ನುಗ್ಗಿದ ಹಾವು, ಇಲಿಯನ್ನು ಹಿಡಿದ ಬಳಿಕ ರಂಧ್ರದಿಂದ ಹೊರಬರಲು ಸಾಧ್ಯವಾಗದೆ ಪರದಾಡಿದೆ. ಕಾರು ಪೇಟೆಗೆ ಬಂದಾಗ ಸ್ಥಳೀಯರು ಇದನ್ನು ಗಮನಿಸಿ, ಹಾವನ್ನು ಹೊರತೆಗೆಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಈ ಘಟನೆ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

ಪುತ್ತೂರು : ಕಾರಿ‌ನೊಳಗೆ ನುಗ್ಗಿದ ಹಾವು,ಹೆಚ್ಚಿದ ಆತಂಕ Read More »

ಹವ್ಯಾಸಿ ಚೆಂಡೆ ಮದ್ದಳೆ ವಾದಕ ಸುಕುಮಾರ ಅಡ್ಯಡ್ಕ ನಿಧನ

ಹವ್ಯಾಸಿ ಯಕ್ಷಗಾನದ ಚೆಂಡೆ ಮತ್ತು ಮದ್ದಳೆ ವಾದಕಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಅಡ್ಯಡ್ಕ ದಿ. ಗುರುವ ಮೊಗೇರರವರ ಪುತ್ರ ಸುಕುಮಾರ ಅಡ್ಯಡ್ಕ(48ವರ್ಷ) ಮೇ. 22 ರಂದು ತನ್ನ ಮನೆಯಲ್ಲಿ ಅನಾರೋಗ್ಯದಿಂದ ನಿಧನರಾದರು.ಪತ್ನಿ ಲಲಿತ, ಪುತ್ರ ಗ್ರೀಷ್ಮರಾಜ್, ಸಹೋದರರು, ಸಹೋದರಿ ಹಾಗೂ ಬಂಧುಮಿತ್ರರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

ಹವ್ಯಾಸಿ ಚೆಂಡೆ ಮದ್ದಳೆ ವಾದಕ ಸುಕುಮಾರ ಅಡ್ಯಡ್ಕ ನಿಧನ Read More »

ಕಣಜದ ಹುಳ ಕಡಿದು ಪೆರಾಜೆಯ ವ್ಯಕ್ತಿ ಸಾವು

ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ಜಗದೀಶ್ ಎಂಬುವವರು ಕಣಜದ ಹುಳು ಕಡಿದು ಸಾವನ್ನಪ್ಪಿದ ಘಟನೆ ಮೇ 19ರಂದು ವರದಿಯಾಗಿದೆ.ತಮ್ಮ ತೋಟದಲ್ಲಿ ಕಳೆ ಕಟಾವು ಯಂತ್ರದಲ್ಲಿ ಕಾಡು ಕಡಿಯುತ್ತಿದ್ದ ಸಂದರ್ಭ ಕಣಜದ ಹುಳದ ಗುಂಪು ಕಚ್ಚಿ ಗಂಭೀರ ಗಾಯಗೊಂಡ ಬಳಿಕ ಸ್ಥಳೀಯರು ಇವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಣಜದ ಹುಳ ಕಡಿದು ಪೆರಾಜೆಯ ವ್ಯಕ್ತಿ ಸಾವು Read More »

error: Content is protected !!
Scroll to Top