ವಿದ್ಯಾರ್ಥಿನಿ ಆತ್ಮಹತ್ಯೆ, 6 ಉಪನ್ಯಾಸಕರು ವಜಾ
ಬೆಂಗಳೂರಿನ ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಉಪನ್ಯಾಸಕರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಹಾಗೂ ಸಹಪಾಠಿಗಳು ಆರೋಪಿಸಿದ್ದರು. ಯಶಸ್ವಿನಿ ಮೈಬಣ್ಣ ಹಾಗೂ ಬಟ್ಟೆ ಬಗ್ಗೆ ನಿಂದನೆ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಆರು ಉಪನ್ಯಾಸಕರನ್ನು ವಜಾಗೊಳಿಸಿದೆ. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ, 6 ಉಪನ್ಯಾಸಕರು ವಜಾ Read More »









