ಕ್ರೈಂ

ಹುಚ್ಚು ನಾಯಿ ಕಡಿತಗೊಳಗಾದ ಮಹಿಳೆ ಗಂಭೀರ

ಸುಳ್ಯ ತಾಲೂಕಿನ ಸಂಪಾಜೆ ಗ್ರಾನದ ಮಹಿಳೆಯೊಬ್ಬರು ಹುಚ್ಚು ನಾಯಿಯ ಕಡಿತಗೊಳಗಾಗಿ ರೇಬೀಸ್ ರೋಗಕ್ಕೆ ತುತ್ತಾಗಿರುವ ಘಟನೆ ವರದಿಯಾಗಿದೆ.ನೆಲ್ಲಿ ಕುಮೇರಿಯ ಮಹಿಳೆಗೆಯೊಬ್ಬರಿಗೆ ಇತ್ತೀಚೆಗೆ ಹುಚ್ಚು ನಾಯಿಯೊಂದು ಕಡಿದಿತ್ತು ಎನ್ನಲಾಗಿದೆ.ನಾಯಿ ಕಚ್ಚಿದ್ದನ್ನು ಮನೆಯಲ್ಲಿ ಯಾರಿಗೂ ತಿಳಿಸದೆ ಮಹಿಳೆ ಟಿಟಿ ಇಂಜೆಕ್ಷನ್ ಹಾಕಿಸಿಕೊಂಡಿದ್ದರು. ಆದರೆ 40 ದಿನದ ಬಳಿಕ ಅವರಲ್ಲಿ ರೇಬಿಸ್ ಲಕ್ಷಣ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಇದೀಗ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ‌ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹುಚ್ಚು ನಾಯಿ ಕಡಿತಗೊಳಗಾದ ಮಹಿಳೆ ಗಂಭೀರ Read More »

ಸಹಪಾಠಿಗಳ ಹಲ್ಲೆಯಿಂದ ವೃಷಣ ಕಳೆದುಕೊಂಡ ವಿದ್ಯಾರ್ಥಿ!

ಮೈಸೂರ : ನಗರದ ಜಯಲಕ್ಷ್ಮೀಪುರಂನಲ್ಲಿರುವ ಖಾಸಗಿ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಡೆದ raging ಮತ್ತು ಹಲ್ಲೆಯಿಂದ 8ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಒಂದು ವೃಷಣವನ್ನೇ ಕಳೆದುಕೊಂಡಿರುವ ಹೇಯ ಕ್ರತ್ಯ ವರದಿಯಾಗಿದೆ.ಸಹಪಾಠಿಗಳಿಂದ ನಿರಂತರವಾಗಿ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾಗುತ್ತಿದ್ದ ಬಾಲಕ ಶಿಕ್ಷಕರಿಗೆ ವಿಷಯ ತಿಳಿಸಿದ್ದ. ಇದೇ ಕೋಪದಿಂದ ಆತನ ಸಹಪಾಠಿಗಳಾದ ಮೂವರು ಅಕ್ಟೋಬ‌ರ್ 25ರಂದು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಬಾಲಕನ ಗುಪ್ತಾಂಗಕ್ಕೆ ಕಾಲಿನಿಂದ ಒದ್ದು ಗಂಭೀರ ಗಾಯಗೊಳಿಸಿದ್ದಾರೆ ಎನ್ನಲಾಗಿದೆ.ನೋವಿನಿಂದ ಬಳಲುತ್ತಿದ್ದ ಬಾಲಕ ಪೋಷಕರಿಗೆ ಘಟನೆ ತಿಳಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ

ಸಹಪಾಠಿಗಳ ಹಲ್ಲೆಯಿಂದ ವೃಷಣ ಕಳೆದುಕೊಂಡ ವಿದ್ಯಾರ್ಥಿ! Read More »

ಬಳ್ಪ : ಗಾರೆಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ

ಬಳ್ಪ : ಗಾರೆ ಕೆಲಸಕ್ಕೆಂದು ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಬಳ್ಪ ಗ್ರಾಮದಲ್ಲಿ ನಡೆದಿದೆ. ಸುಬ್ಬಪ್ಪ ಗೌಡ ಎಂಬವರ ಪುತ್ರ ಚನ್ನಕೇಶವ ಜೋಗಿ ಮನೆ (61) ನಾಪತ್ತೆಯಾದವರು. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.ಚೆನ್ನಕೇಶವ ಅವರು ಗಾರೆ ಕೆಲಸಕ್ಕೆಂದು ಹೋಗುತ್ತೆನೆಂದು ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ ಎಂದು ಮನೆಯವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಇವರು ಪತ್ತೆಯಾದಲ್ಲಿ ಸುಬ್ರಹ್ಮಣ್ಯ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ಬಳ್ಪ : ಗಾರೆಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ Read More »

ಬಾಲಕನ‌ ಶವ ನದಿಯಲ್ಲಿ ಪತ್ತೆ

ಉಡುಪಿ: ಪೆರ್ಡೂರು ಗ್ರಾಮದ ಅಲಂಗಾರು ನಿವಾಸಿ ಶ್ರೀಶಾನ್ ಶೆಟ್ಟಿ (15) ಎಂಬ ಬಾಲಕನ ಮೃತದೇಹವು ಸೋಮವಾರ ಪೆರ್ಡೂರು ಬಳಿಯ ಅಲಂಗಾರು ಹೊಳೆಬಾಗಿಲು ನದಿಯಲ್ಲಿ ಪತ್ತೆಯಾಗಿದೆ.ಶ್ರೀಶಾನ್ ಭಾನುವಾರ ತನ್ನ ಸ್ನೇಹಿತನೊಂದಿಗೆ ಸ್ನಾನ ಮಾಡಲು ನದಿಗೆ ಹೋಗಿದ್ದನು. ಸ್ನಾನ ಮಾಡುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನೆಯಿಂದ ಭಯಭೀತನಾದ ಅವನ ಸ್ನೇಹಿತನು ನಡೆದ ಸಂಗತಿಯನ್ನು ಬಹಿರಂಗಪಡಿಸಿರಲಿಲ್ಲ.ಸಂಬಂಧಿಕರು ಬಾಲಕನಿಗಾಗಿ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಲಿಲ್ಲ. ನಂತರ, ಪೊಲೀಸರು ಶ್ರೀಶಾನ್ ಸ್ನೇಹಿತನನ್ನು ವಿಚಾರಣೆಗೊಳಪಡಿಸಿದಾಗ ಘಟನೆಯ ಬಗ್ಗೆ ತಿಳಿದುಬಂದಿದೆ.ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನ‌ ಶವ ನದಿಯಲ್ಲಿ ಪತ್ತೆ Read More »

ತೊಡಿಕಾನ‌ : ಮರುವಳ ಸುಶೀಲ ಭಟ್ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ದಿ. ನಾರಾಯಣ ಭಟ್‌ರವರ ಪತ್ನಿ ಸುಶೀಲ ಭಟ್‌ರವರು ನ. ೭ರಂದು ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.ಮೃತರು ಪುತ್ರ ರಾಜೇಂದ್ರಪ್ರಸಾದ್, ಪುತ್ರಿಯರಾದ ವಿಜಯಕುಮಾರಿ, ಶಶಿಕಲಾ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ತೊಡಿಕಾನ‌ : ಮರುವಳ ಸುಶೀಲ ಭಟ್ ನಿಧನ Read More »

ಮುಳ್ಯ : ಮಿನಿಲಾರಿ ಪಲ್ಟಿಯಾಗಿ ಓರ್ವನಿಗೆ ಗಾಯ

ಅಜ್ಜಾವರ ಗ್ರಾಮದ ಮುಳ್ಯದಲ್ಲಿ ಇಂಟರ್ ಲಾಕ್ ಹೇರಿಕೊಂಡು ಹೋಗುತ್ತಿದ್ದ ಮಿನಿ ಲಾರಿಯೊಂದು ಪಲ್ಟಿಯಾಗಿ ಓರ್ವ ಗಾಯಗೊಂಡ ಘಟನೆ ನ.7ರಂದು ವರದಿಯಾಗಿದೆ.ಇತ್ರೀಚೆಗೆ ಕಾಂತಮಂಗಲ ಸಮೀಪ ಗುತ್ತಿಗಾರು ಗಟ್ಟಿಗಾರಿನ ವ್ಯಕ್ತಿಯೊಬ್ಬರು ಜಾಗ ಖರೀದಿಸಿ ಮನೆ ನಿರ್ಮಾಣ ಮಾಡಿದ್ದರು.ಮನೆಯ ಅಂಗಳಕ್ಕೆ ಇಂಟರ್ ಲಾಕ್ ಹಾಕಲು ಮಿನಿಲಾರಿಯಲ್ಲಿ ಇಂಟರ್ ಲಾಕ್ ಸಾಗಾಟ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಮುಳ್ಯ : ಮಿನಿಲಾರಿ ಪಲ್ಟಿಯಾಗಿ ಓರ್ವನಿಗೆ ಗಾಯ Read More »

ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಡಬ : ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ, 9ನೇ ತರಗತಿಯ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ.ಗಗನ್ ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು

ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಉಪ್ಪಿನಂಗಡಿ : ನೈತಿಕ ಪೊಲೀಸರಿಂದ ವಿದ್ಯಾರ್ಥಿಗೆ ಹಲ್ಲೆ

ವಿದ್ಯಾರ್ಥಿಯೊಬ್ಬ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ ಸಹಪಾಠಿ ವಿಧ್ಯಾರ್ಥಿ/ವಿದ್ಯಾರ್ಥಿನಿಯರೊಂದಿಗೆ ಆತನ ಮನೆಗೆ ಹೋಗಲು ನ.6ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ವಿಧ್ಯಾರ್ಥಿ/ವಿಧ್ಯಾರ್ಥಿನಿಯರನ್ನು ತಡೆದು ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಆ ಬಳಿಕ ಆರೋಪಿಗಳಾದ ಮುಸ್ತಾಫ ಮತ್ತು ಸಹಸವಾರ ಮುಸ್ತಾಫ ಪೆರಿಯಡ್ಕ ಎಂಬವರು ವಿದ್ಯಾರ್ಥಿಗಳ ಹೆಸರು, ಕಾಲೇಜು ಹಾಗೂ ಊರಿನ ಬಗ್ಗೆ ವಿಚಾರಿಸಿ, ವಿಭಿನ್ನ ಕೋಮುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ

ಉಪ್ಪಿನಂಗಡಿ : ನೈತಿಕ ಪೊಲೀಸರಿಂದ ವಿದ್ಯಾರ್ಥಿಗೆ ಹಲ್ಲೆ Read More »

ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ನೀಡಿದ ತಾಯಿಗೆ ರೂ.26,000 ದಂಡ

ಮಂಗಳೂರು : ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಫ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದ ಘಟನೆ ವರದಿಯಾಗಿದೆ.ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ಮೋ.ಸೈ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನವೆಂಬ‌ರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4 ನೇ ಜೆ.ಎಂ.ಎಫ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ಮೋ.ಸೈ ಚಲಾಯಿಸಲು

ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ನೀಡಿದ ತಾಯಿಗೆ ರೂ.26,000 ದಂಡ Read More »

ಚೆಂಬು : ನಗ ಹಾಗೂ ನಗದು ಕಳವು

ಚೆಂಬು ಗ್ರಾಮದ ವೀರಪ್ಪ ಗೌಡ ಪೂಜಾರಿಗದ್ದೆ ಎಂಬವರ ಮನೆಯಿಂದ ನ.5ರಂದು ಚಿನ್ನ ಹಾಗೂ ನಗದು ಕಳವಾಗಿರುವ ಘಟನೆ ವರದಿಯಾಗಿದೆ.ವೀರಪ್ಪ ಗೌಡರು ಬೆಳಗ್ಗೆ ಸುಳ್ಯಕ್ಕೆ ಬಂದಿದ್ದರು. ಅವರ ಪತ್ನಿ ಮನೆಗೆ ಬೀಗ ಹಾಕಿ ತೋಟಕ್ಕೆ ಹೋಗಿದ್ದರೆಂದು ತಿಳಿದುಬಂದಿದೆ. ಗುರುವಾರ ಬೆಳಿಗ್ಗೆ ಮನೆಯ ಕಪಾಟು ನೋಡಿದಾಗ ಕಪಾಟಿನಲ್ಲಿದ್ದ ಚಿನ್ನ ಹಾಗೂ ನಗದು ಕಾಣೆಯಾಗಿದೆ.

ಚೆಂಬು : ನಗ ಹಾಗೂ ನಗದು ಕಳವು Read More »

error: Content is protected !!
Scroll to Top