ಕ್ರೈಂ

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ರಿಕ್ಷಾ ಡ್ರೈವರ್ ಒಬ್ಬರು ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ.ಬೆಳ್ತಂಗಡಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ರೆಂಕೆದಗುತ್ತು ನಿವಾಸಿ ಬಶೀರ್‌ ಆತ್ಮಹತ್ಯೆ ಮಾಡಿಕೊಂಡವರು. ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯರಾಗಿರುವ ಬಶೀರ್‌ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಶೀರ್‌ ಅವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಹೊಟೇಲ್ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು

ಉಪ್ಪಿನಂಗಡಿಯಲ್ಲಿ ಹೊಟೇಲ್ ಕಾರ್ಮಿಕರೊಬ್ಬರು ಮಹಡಿಯಿಂದ ಬಿದ್ದು ಸಾವನ್ನಪ್ಪಿದ‌ ಘಟನೆ ವರದಿಯಾಗಿದೆ.ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೇಲೊಂದರಲ್ಲಿ ಕಾರ್ಮಿಕರಾಗಿದ್ದು, ನಸುಕಿನ ವೇಳೆ ಎದ್ದು ಕಾರಿಡಾರ್ ಬಳಿ ಬಂದಾಗ ಅಯತಪ್ಪಿ ಕೆಳಗಿನ ತೋಡಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟೇಲ್ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು

ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ‌ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಪ್ರಭಾಕರ್ ರವರು ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು Read More »

ಜೋಡುಪಾಲ ಬಳಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ

ಜೋಡುಪಾಲ ಬಳಿ ಚಲಿಸುತ್ತಿದ್ದ ಡಸ್ಟರ್ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಬೆಂಕಿಗೆ ಆಹುತಿಯಾದ ಘಟನೆ.ನ.4ರಂದು ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಜೋಡುಪಾಲ ಬಳಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ Read More »

ಸುಳ್ಯ ವಿಷ್ಣು ಸರ್ಕಲ್ ನಿವಾಸಿ ದೀಪಕ್ ನಿಧನ

ಸುಳ್ಯದ ವಿಷ್ಣು ಸರ್ಕಲ್ ನಿವಾಸಿ ಶ್ರೀನಿವಾಸ್ ರವರ ಪುತ್ರ ದೀಪಕ್ ರವರು ನ.2ರಂದು ಸಂಜೆ ಮಡಿಕೇರಿಯಲ್ಲಿ ಹೃದಯಾಘಾತದಿಂದ ನಿಧನರಾದರು.ಮೃತರು ಅವಿವಾಹಿತ ರಾಗಿದ್ದು ತಂದೆ ಶ್ರೀನಿವಾಸ್, ತಾಯಿ ಚಂದ್ರಿಕಾ, ಸಹೋದರ ಅನಿಲ್, ವಿನೋದ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಇಂದು ಸಂಜೆ ತನ್ನ ಕಾರಿನಲ್ಲಿ ಗೆಳೆಯನೊಂದಿಗೆ ಮಡಿಕೇರಿಗೆ ಹೋಗಿದ್ದರು. ಅಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ಸುಳ್ಯ ಶಾರದಾಂಬಾ ಸೇವಾ ಸಮಿತಿಯ ಸದಸ್ಯರಾಗಿ, ವಿಷ್ಣು ಸರ್ಕಲ್ ವೀರಕೇಸರಿ ಬಳಗದ ಪದಾಧಿಕಾರಿಯಾಗಿ ಉತ್ತಮ

ಸುಳ್ಯ ವಿಷ್ಣು ಸರ್ಕಲ್ ನಿವಾಸಿ ದೀಪಕ್ ನಿಧನ Read More »

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ

ಮೈಸೂರಿನಿಂದ ಹಿಂದಿರುಗುತ್ತಿದ್ದ ಮಿನಿ ಬಸ್ ಅ.2ರಂದು ಮುಂಜಾನೆ ಸುಳ್ಯ ತಾಲೂಕಿನ ಪರಿವಾರಕಾನ ಬಳಿ ಅಪಘಾತಗೊಂಡ ಘಟನೆ ವರದಿಯಾಗಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.ಅಪಘಾತದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ Read More »

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ

ಸುಳ್ಯ ತಾಲ್ಲೂಕು ಆಲೆಟ್ಟಿ ಗ್ರಾಮದ ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡ ವಿಧ್ಯಾರ್ಥಿ ತಂದೆ ಹಾಗೂ ತಾಯಿ ಇಬ್ಬರು ಕೂಡ ವಿಕಲಚೇತನರು ಎನ್ನಲಾಗಿದೆ.ಶಿಕ್ಷಕ ಮನುಕುಮಾರ್ ವಿಧ್ಯಾರ್ಥಿ ಮೇಲೆ ತೀವ್ರ ಹಲ್ಲೆ ನಡೆಸಿದ್ದು ವಿಧ್ಯಾರ್ಥಿ ಕೈ ಮುರಿತವಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪೋಷಕರು ಸುಳ್ಯ ಪೋಲಿಸ್ ಠಾಣೆ ಹಾಗೂ ಚೈಲ್ಡ್ ಕೇರ್ ಗೆ ದೂರು ನೀಡಿರುವುದಾಗಿ ತಿಳಿದುಬಂದಿದೆ.

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ Read More »

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನೌಫಲ್ ನ ಮೃತದೇಹವನ್ನು ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ Read More »

ಶರಣ್ ಪಂಪ್ವೆಲ್ ಬಂಧನ

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಶರಣ್ ಪಂಪ್ವೆಲ್ ಅವರ ಆರ್ ಎಸ್ಎಸ್ ಮುಖಂಡರೊಬ್ಬರ ಪ್ರಚೋದರಕಾರಿ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣ ವಿಶ್ವ ಹಿಂದೂ ಪರಿಷತ್ ಖಾತೆಯಲ್ಲಿ ಈ ವಿಡಿಯೋ ಹರಿದಾಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣಾ‌ ಪೊಲೀಸರು ಅವರನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಶರಣ್ ಪಂಪ್ವೆಲ್ ಬಂಧನ Read More »

ಭೀಕರ ಕಾರು ಅಪಘಾತದಲ್ಲಿ ಕುದ್ಮಾರಿನ‌ ಯುವಕ ಸಾವು

ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಕಡಬ ತಾಲೂಕಿನ ಸವಣೂರು ಸಮೀಪದ ಕುದ್ಮಾರು ನಿವಾಸಿ ಕಾರ್ತಿಕ್(23) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉದ್ಯೋಗದ ಸಂದರ್ಶನ ಮುಗಿಸಿ ಉದ್ಯೋಗಕ್ಕೆ ಆಯ್ಕೆಯಾಗಿ ಮಂಗಳೂರಿನಿಂದ ಸವಣೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಭೀಕರ ಕಾರು ಅಪಘಾತದಲ್ಲಿ ಕುದ್ಮಾರಿನ‌ ಯುವಕ ಸಾವು Read More »

error: Content is protected !!
Scroll to Top