ಕ್ರೈಂ

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಗಂಡನಿಗೆ ಅಪಹಾಸ್ಯ ಮಾಡಿದ ಹಿನ್ನಲೆ,ಪತಿ ಆತ್ಮ ಹತ್ಯೆ

ನಿಮ್ಮ ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಅಪಹಾಸ್ಯ ಮಾಡಿದ್ದರಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ವ್ಯಕ್ತಿ.ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಲಾರಿ ಚಾಲಕನಾಗಿದ್ದ ಪರಶಿವಮೂರ್ತಿ ಎರಡು ವರ್ಷದ ಹಿಂದೆ ಮಮತಾ ಅವರನ್ನು ಮದುವೆಯಾಗಿದ್ದರು. ಮದುವೆ ಬಳಿಕ ಪರಶಿವಮೂರ್ತಿ ಕೂದಲು ಸಂಪೂರ್ಣ ಉದುರಿತ್ತು. ಹೊರಗಡೆ ಹೋದರೆ ನನೆಗೆ ನಾಚಿಕೆಯಾಗುತ್ತೆಂದು ಮಮತಾ ಅಪಹಾಸ್ಯ […]

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಗಂಡನಿಗೆ ಅಪಹಾಸ್ಯ ಮಾಡಿದ ಹಿನ್ನಲೆ,ಪತಿ ಆತ್ಮ ಹತ್ಯೆ Read More »

ಅರಂತೋಡು : ಬೈಕ್ ಬೈಕ್ ಡಿಕ್ಕಿ ಸವಾರರಿಗೆ ಗಾಯ,ಓರ್ವನ ಹೆಬ್ಬೆರುಳು ತುಂಡಾಗಿ ರಸ್ತೆಗೆ ಬಿತ್ತು.

ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ರಸ್ತೆ ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಯಾಗಿ ಡಿಕ್ಕಿ ಹೊಡೆದು ಮೂರು ಬೈಕ್ ಸವಾರರು ಗಾಯ ಗೊಂಡು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ..ಒಬ್ಬ ಸವಾರ ನ ಕಾಲಿನ ಹೆಬ್ಬೆರಳು ತುಂಡು ಆಗಿ ರಸ್ತೆಯಲ್ಲಿ ಬಿದ್ದು ಕೊಂಡಿತು .ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

ಅರಂತೋಡು : ಬೈಕ್ ಬೈಕ್ ಡಿಕ್ಕಿ ಸವಾರರಿಗೆ ಗಾಯ,ಓರ್ವನ ಹೆಬ್ಬೆರುಳು ತುಂಡಾಗಿ ರಸ್ತೆಗೆ ಬಿತ್ತು. Read More »

ಕಾರ್ ಹಾಗೂ ಲಾರಿ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಿದ್ದಾಪುರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕಾರ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಅಪಘಾತದಲ್ಲಿ ಕಾರ್ ನಲ್ಲಿದ 3 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಅಂಕಲಿ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಕಾರ್ ಹಾಗೂ ಲಾರಿ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು Read More »

ಎಡಮಂಗಲ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಕಡಬ ತಾಲೂಕಿನ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ವಿಶ್ವನಾಥ ಎಂಬವರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ.ವಿಶ್ವನಾಥರು ಸ್ಥಳೀಯ ನಿವಾಸಿಯಾಗಿದ್ದು ರೈಲ್ವೆ ಟ್ರ್ಯಾಕ್ ಮೊಬೈಲ್ ಹಿಡಿದುಕೊಂಡು ಕುಳಿತ್ತಿದ್ದರು.ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಗುದ್ದಿಕೊಂಡು ಹೋದುದರಿಂದ ವಿಶ್ವನಾಥರು ಮೃತಪಟ್ಟರೆಂದು ಹೇಳಲಾಗುತ್ತಿದೆ.

ಎಡಮಂಗಲ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಮಹಿಳೆಯನ್ನು ಸೊಂಡಿಲಿನಿಂದ ಎಸೆದು ಕೊಂದು ಹಾಕಿದ ಕಾಡಾನೆ

ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೋಗೋಡು ಸುಶೀಲಮ್ಮ (60) ಮೃತರು.ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುಶೀಲಮ್ಮಮೇಲೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಮಹಿಳೆ ಸಾವಿನಿಂದಾಗಿ ಆಕ್ರೋಶಗೊಂಡ ಗ್ರಾಮಸ್ಥರು ಬೇಲೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಚೀಕನಹಳ್ಳಿಯಲ್ಲಿ ರಸ್ತೆ ತಡೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಜಿಲ್ಲೆಯಲ್ಲಿ ಜನವರಿಯಿಂದ 5 ಮಂದಿ ಕಾಡಾನೆ ದಾಳಿಗೆ ಬಲಿಯಾಗಿದ್ದು ಈ ಪೈಕಿ

ಮಹಿಳೆಯನ್ನು ಸೊಂಡಿಲಿನಿಂದ ಎಸೆದು ಕೊಂದು ಹಾಕಿದ ಕಾಡಾನೆ Read More »

ಗ್ಯಾಸ್ ಸಿಲಿಂಡರ್‌ ವಾಹನ ಪಲ್ಟಿ

ಸುಳ್ಯ – ಜಾಲ್ಲೂರುಮುಖ್ಯ ರಸ್ತೆಯಲ್ಲಿ ಬೈತಡ್ಕ ತಿರುವಿನಲ್ಲಿ ಗ್ಯಾಸ್ ಸಿಲಿಂಡ‌ರ್ ಸಾಗಾಟದ ವಾಹನ ಮಾ.14ರಂದು ತಡರಾತ್ರಿ ಪಲ್ಟಿಯಾದ ಘಟನೆ ವರದಿಯಾಗಿದೆ.ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿವಾಹನ ಪಲ್ಟಿಯಾಯಿತು. ಸುಳ್ಯದಿಂದ ಮಂಗಳೂರು ಕಡೆಗೆ ಹೋಗುವ ವಾಹನ ಇದಾಗಿದ್ದು, ಪಲ್ಟಿಯಾದ ಪರಿಣಾಮ ಗ್ಯಾಸ್‌ ಸಿಲಿಂಡ‌ರ್ ರಸ್ತೆಗೆ ಬಿದ್ದಿದ್ದವು.ಚಾಲಕನಿಗೆ ಗಾಯವಾಗಿದ್ದು ಆತ ಸುಳ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆನ್ನಲಾಗಿದೆ

ಗ್ಯಾಸ್ ಸಿಲಿಂಡರ್‌ ವಾಹನ ಪಲ್ಟಿ Read More »

ಜಟ್ಟಿಪಳ್ಳ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಮೂರು ವಿದ್ಯುತ್ ಕಂಬ ತಂಡು,ಜನರು ಪ್ರಾಣಾಪಾಯದಿಂದ ಪಾರು

ಸುಳ್ಜ ಜಟ್ಟಿಪಳ್ಳ ರಸ್ತೆಯಲ್ಲಿ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಮುರಿದ್ದು ಪವಾಡ ಸದೃಶ ವಾಗಿ ಜನರು ಪ್ರಾಣಾಪಾಯದಿಂದ ಪಾರಾದ ಘಟನೆ ಇದೀಗ ವರದಿಯಾಗಿದೆ‌.ಬ್ರಹತ್ ಗಾತ್ರದ ತೆಂಗಿನ ಮರ ಮುರಿದು ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.ಯಾವುದೇ ಅಪಾಯ ಸಂಭವಿಸಿಲ್ಲ.ಜಟ್ಟಿಪಳ್ಳ ರಸ್ತೆ ಬಂದ್ ಆಗಿದೆ.

ಜಟ್ಟಿಪಳ್ಳ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಮೂರು ವಿದ್ಯುತ್ ಕಂಬ ತಂಡು,ಜನರು ಪ್ರಾಣಾಪಾಯದಿಂದ ಪಾರು Read More »

ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ ಹೃದಯಾಘಾತದಿಂದ ನಿಧನ

ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ ಮಾ.11ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 30 ವರ್ಷ ಪ್ರಾಯವಾಗಿತ್ತು.ಹ್ರದಯಘಾತಕ್ಕೆ ಒಳಗಾದಅವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದರು.

ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ ಹೃದಯಾಘಾತದಿಂದ ನಿಧನ Read More »

ಅತ್ಯಾಚಾರಕ್ಕೆ ಯತ್ನಿಸಿದಾತನ ಬಂಧನ

ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಬರುತ್ತಿದ್ದ ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದಾತನನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ.ಆರೋಪಿ ಪವನ್ ಮಾರ್ಚ್ 8ರಂದು ಸಂಜೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಆರೋಪಿ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಂಡು ಸೈಕಲ್ ಅಲ್ಲೇ ಬಿಟ್ಟು, ಮನೆಗೆ ಓಡಿ ಹೋಗಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಎನ್ನಲಾಗಿದೆ. ಘಟನೆಯ ಬಳಿಕ

ಅತ್ಯಾಚಾರಕ್ಕೆ ಯತ್ನಿಸಿದಾತನ ಬಂಧನ Read More »

ಮದೆನಾಡು,ಜೋಡುಪಾಲದಲ್ಲಿ ಭೂಕಂಪ?

ಕೊಡಗು ಜಿಲ್ಲೆಯಲ್ಲಿ ಇಂದು ಭೂಮಿ ಕಂಪಿಸಿದ ಅನುಭವ ಆಗಿರುವ ಘಟನೆ ವರದಿಯಾಗಿದೆ. ಕೊಡಗು ಜಿಲ್ಲೆಯ ಮದೆನಾಡು ಜೋಡುಪಾಲ ಮತ್ತು ಮೊಣ್ಣಂಗೇರಿ ಭಾಗದಲ್ಲಿ ಬುಧವಾರ ಬೆಳಿಗ್ಗೆ 10.30 ಗಂಟೆ ಸುಮಾರಿಗೆ ಭೂಮಿ ಕಂಪಿಸಿದೆ‌ ಎಂದು ಸ್ಥಳೀಯರು ತಿಳಿಸಿದ್ದಾರೆ‌.ಭೂಮಿ ದೊಡ್ಡದಾಗಿ ಗುಡುಗಿ ನಡುಗಿದ ಅನುಭವ ಉಂಟಾಗಿದ್ದು ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಓಡಿ ಬಂದಿದ್ದಾರೆ.ಆದರೆ ರಿಕ್ಟರ್ ಮಾಪಕದಲ್ಲಿ ಭೂಕಂಪನದ ಬಗ್ಗೆ ದಾಖಲು ಆಗಿಲ್ಲ ಎಂದು ಹೇಳಲಾಗಿದೆ.

ಮದೆನಾಡು,ಜೋಡುಪಾಲದಲ್ಲಿ ಭೂಕಂಪ? Read More »

error: Content is protected !!
Scroll to Top