ಕ್ರೈಂ

ದೇವರಿಗೆ ವಾಮಚಾರ ಮಾಡಿದ ಕಿಡಿಗೇಡಿಗಳು

ತುಮಕೂರು: ಮನುಷ್ಯರಿಗೆ ವಾಮಚಾರ ಮಾಡುವ ಸುದ್ದಿಗಳು ಆಗಾಗ ವರದಿಯಾಗುತ್ತಿರುತ್ತವೆ.ಆದರೆ ದೇವರಿಗೆ ವಾಮಾಚಾರ ಮಾಡಿದಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಟ್ನಾ ಗ್ರಾಮದಲ್ಲಿ ಮಾ. 11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ.ಹಟ್ನಾ ಗ್ರಾಮ ಸೇರಿದಂತೆ 32 ಗ್ರಾಮಗಳ ಗ್ರಾಮ ದೇವತೆ ಕೆಂಪಮ್ಮ ದೇವಿಗೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಇಂದು (ಮಾ. 12ರ ಬುಧವಾರ) ಮುಂಜಾನೆ ಪೂಜೆ ಸಲ್ಲಿಸಲು ದೇವಸ್ಥಾನದಕ್ಕೆ ಅರ್ಚಕರು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ವಾಮಾಚಾರಕ್ಕೆ […]

ದೇವರಿಗೆ ವಾಮಚಾರ ಮಾಡಿದ ಕಿಡಿಗೇಡಿಗಳು Read More »

ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಊರವರು

ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ಬುಧವಾರ ವರದಿಯಾಗಿದೆ.ಕನಕಮಜಲು ಗ್ರಾಮದ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು ತಕ್ಷಣ ಅವರು ಮನೆಯವರಿಗೆ ಹಾಗೂ ಕನಕಮಜಲಿನ ಸ್ಥಳೀಯರಿಗೆ ಈ ವಿಷಯ ತಿಳಿದರುಅಂಗಡಿಯೆದುರು ಜನ ಸೇರಿ ಅಂಗಡಿಯ ಎದುರುನಿಂತಿದ್ದ ಹಾಗೂ ಅಂಗಡಿಯೊಳಗೆ ಕಳವು ನಡೆಸುತ್ತಿದ್ದ ಕಳ್ಳನನ್ನು ಹಿಡಿದುಕೊಂಡರು.ವಿಚಾರಿಸಿದಾಗಬಂಟ್ವಾಳದ

ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಊರವರು Read More »

ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವು

ಕರ್ತವ್ಯ ನಿರತರಾಗಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಮಾರ್ಚ್ 11 ರಂದು ಗುರುವಾಯನಕೆರೆಯಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗಫೂ‌ರ್ (59) ಮೃತ ವ್ಯಕ್ತಿ.ಮೃತ ಗಫೂ‌ರ್ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.

ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವು Read More »

ಕುಮಾರಧಾರ ನದಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ

ಉಪ್ಪಿನಂಗಡಿ ಕುಮಾರಧಾರ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಮಾ.11 ರಂದು ನಡೆದಿದೆ.ಕಡಬ ತಾಲೂಕಿನ ಗೋಳಿತೊಟ್ಟು ನಿವಾಸಿ ರವಿಚಂದ್ರ ಅವರ ಪುತ್ರ ಗಗನ್ ಮೃತ ಯುವಕ ಎಂದು ಗುರುತಿಸಲಾಗಿದೆ.ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗಗನ್ ನಿನ್ನೆ ಬಾಡಿಗೆ ಎಂದು ಮನೆಯಿಂದ ಹೋಗಿದ್ದು, ಇಂದು ಮೃತದೇಹ ಉಪ್ಪಿನಂಗಡಿ ನದಿಯಲ್ಲಿ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕುಮಾರಧಾರ ನದಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ Read More »

ಮೋರಿಗೆ ಕಾರು ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯ

ಸಂಪಾಜೆ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ 10 ರಂದು ತಡ ರಾತ್ರಿ ಸುಮಾರು 1.45 ಗಂಟೆ ಸಮಯಕ್ಕೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮೋರಿಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ವರದಿಯಾಗಿದೆ. .ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತಿದ್ದ ಕಾರು ಮೂಲತಃ ಮಂಡ್ಯ ಮೂಲದವರಾಗಿದ್ದು ಚಾಲಕ ಅರುಣ್ ಸೇರಿದಂತೆ ಕಾರಿನಲ್ಲಿದ್ದ ಅವರ ಪತ್ನಿ ಹೇಮಾವತಿ, ಮಗ ಲಿಖಿತ್ ಮಗಳು ಲಾಸ್ಯ ಪ್ರಯಾಣಿಸುತ್ರಿದ್ದರು.ಘಟನೆಯಿಂದ ಹೇಮಾವತಿ ಹಾಗೂ ಮಗ ಲಿಖಿತ್ ಗೆ ಗಾಯಾಗಳಾಗಿದ್ದು ಕಾರಿನ

ಮೋರಿಗೆ ಕಾರು ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯ Read More »

ಶಾಲಾ ಮಕ್ಕಳಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಅಗಲ್ಪಾಡಿ ಎಂಬಲ್ಲಿ ಅಟೋರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಅಟೋದಲ್ಲಿದ್ದ ಶಾಲಾ ಮಕ್ಕಳು ಗಾಯಗೊಂಡು ಎರಡೂ ವಾಹನಗಳು ಜಖಂಗೊಂಡ ಘಟನೆ ಮಾ.10ರಂದು ಬೆಳಿಗ್ಹೆ ಬೆಳ್ನಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅಟೋ ಬೆಳ್ಳಾರೆ ಕೆ.ಪಿ.ಎಸ್ ಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾರು ಸುಳ್ಯದ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳದೆಂದು ತಿಳಿದುಬಂದಿದೆ. ಅಟೋದಲ್ಲಿದ್ದ ಒಬ್ಬ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ.

ಶಾಲಾ ಮಕ್ಕಳಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ Read More »

ನಿವೃತ್ತ ಯೋಧ ಮೋಹನ ಕೆ. ಸಿ. ಹೃದಯಾಘಾತದಿಂದ ನಿಧನ

ಕೊಡಗು ಜಿಲ್ಲೆಯ ಪೆರಾಜೆ ಗ್ರಾಮದ ಅಮೆಚೂರ್ ಕೋಡಿಮನೆ ದಿ. ಚಂಗಪ್ಪರ ಪುತ್ರ ನಿವೃತ್ತ ಯೋಧ ಮೋಹನ ಕೆ. ಸಿ.ಯವರು ಹೃದಯಾಘಾತದಿಂದ ಮಾ. ೫ ರಂದು ನಿಧನರಾದರು.ಭಾರತೀಯ ಸೇನೆಯಲ್ಲಿ ೨೪ವರ್ಷ ಸೇವೆಗೈದು ಎರಡು ತಿಂಗಳ ಹಿಂದೆ ನಿವೃತ್ತಿಹೊಂದಿ ಮಡಿಕೇರಿಯ ಮನೆಯಲ್ಲಿ ವಾಸಿಸುತ್ತಿದ್ದರು. ಮಾ. ೫ರಂದು ಬೆಳಿಗ್ಗೆ ಸ್ನಾನ ಮಾಡಲೆಂದು ಹೋದಾಗ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾದರು. ಅದೇ ದಿನ ಸಂಜೆ ಅಮೆಚೂರು ಕೋಡಿಮನೆಗೆ ಮೃತದೇಹ ತಂದು ಅಂತ್ಯಕ್ರಿಯೆ ನಡೆಸಲಾಯಿತು.ಮೃತರು ಪತ್ನಿ ಟೈನಿ, ಇಬ್ಬರು ಪುತ್ರಿಯರಾದ ವಂಶಿ ಮತ್ತು ಲಿಶಿ

ನಿವೃತ್ತ ಯೋಧ ಮೋಹನ ಕೆ. ಸಿ. ಹೃದಯಾಘಾತದಿಂದ ನಿಧನ Read More »

ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್‌ ಸವಾರ.ಕೃಷ್ಣ ಭಟ್‌ ಅವರು ಪಂಜದಿಂದ ಪುತ್ತೂರಿಗೆ ಬೈಕ್‌ ನಲ್ಲಿ ಬೈಕ್‌ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ ಸವಾರ , ಬೈಕ್‌ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು ,

ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ಸುಳ್ಯದಲ್ಲಿ ಕಂಟೈನರ್ ಲಾರಿ ಪಲ್ಟಿ,ತಪ್ಪಿದ ಅನಾಹುತ

ಸುಳ್ಯ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ ಬಳಿ ಚಾಲಕನ ನಿಯಂತ್ರಣ ತಪ್ಪಿಪರಿಣಾಮ ಕಂಟೈನರ್ ಲಾರಿ ಪಲ್ಟಿಯಾಗಿ ರಸ್ತೆಯ ಪಕ್ಕದ ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಅಪ್ಪಳಿಸಿ ತಡೆಗೋಡೆ ಹಾನಿಯಾದ ಘಟನೆ ಇದೀಗ ವರದಿಯಾಗಿದೆ ಇಂದು ಬೆಳಗಿನ ಜಾವ 6.45 ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ರಸ್ತೆಯ ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಸ್ಕೂಟಿಯೊಂದು ಕಂಟೈನರ್ ಅಡಿಗೆ ಸಿಲುಕಿದೆ ಎನ್ನಲಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಪಾರಾಗಿದ್ದು. ಪಕ್ಕದ ನಂದಿನಿ ಸ್ಟಾಲ್ ಗೂ ಹಾನಿಯಾಗಿದೆ.ಕಂಟೈನರ್ ಚಾಲಕನ ನಿದ್ದೆ ಮಂಪರು

ಸುಳ್ಯದಲ್ಲಿ ಕಂಟೈನರ್ ಲಾರಿ ಪಲ್ಟಿ,ತಪ್ಪಿದ ಅನಾಹುತ Read More »

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ : ಅಪಾರ ಪ್ರಮಾಣದ ರಬ್ಬರ್ ನಾಶ

ಚೆಂಬು ಗ್ರಾಮದ ಊರುಬೈಲಿನಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿ ಸಂಪೂರ್ಣ ನಾಶವಾದ ಘಟನೆ ಬುಧವಾರ ರಾತ್ರಿ ನಡೆದಿದೆ.ಊರು ಬೈಲಿನ ಎಕ್ಕಡ್ಕ ಚರಿತ ಅವರ ಮನೆಯ ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ರಬ್ಬರ್ ಸೀಟುಗಳು ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಸ್ಥಳೀಯರು , ಸುಳ್ಯ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ : ಅಪಾರ ಪ್ರಮಾಣದ ರಬ್ಬರ್ ನಾಶ Read More »

error: Content is protected !!
Scroll to Top