ಕ್ರೈಂ

ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

ಸುಳ್ಯ ಕೆ.ಎಸ್.ಆರ್‌.ಟಿ ಬಸ್ಸು ನಿಲ್ದಾಣದ ಹಿಂಭಾಗದಲ್ಲಿ ಕೆಳಗಡೆ ಪೇರಿಸಿದ ಇಟ್ಟಿದ್ದ ವಿದ್ಯುತ್ ಕಂಬದಲ್ಲಿ ವೃದ್ಧನೋರ್ವನ ಮಲಗಿದ ಸ್ಥಿತಿಯಲ್ಲೇ ಶವ ಪತ್ತೆಯಾದ ಘಟನೆ ಬುಧವಾರ ವರದಿಯಾಗಿದೆ. ಈ ಶವ ಕನಕಮಜಲಿನ‌ ವ್ಯಕ್ತಿಯ ಶವ ಎಂದು ಹೇಳಲಾಗುತ್ತಿದೆ.

ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ Read More »

ಅಜ್ಜಾವರ : ರಿಕ್ಷಾ ಸ್ಕೂಟಿ ಅಪಘಾತ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಇರಂತಮಜಲು ಎಂಬಲ್ಲಿ ಸ್ಕೂಟಿಗೆ ರಿಕ್ಷಾ ಢಿಕ್ಕಿಯಾದ ಪರಿಣಾಮ ಸವಾರರಿಬ್ಬರೂ ಗಾಯಗೊಂಡಿರುವ ಘಟನೆ ಸೋಮವಾರ ವರದಿಯಾಗಿದೆ.ಅಜ್ಜಾವರದ ತುದಿಯಡ್ಕದಲ್ಲಿ ಕಾರ್ಯಕ್ರಮ ಮುಗಿಸಿ, ಕಾಸರಗೋಡಿನ ಮಲ್ಲಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದ ಜನಾರ್ದನಾ ಇಂದಿರಾ ದಂಪತಿಗಳ ಸ್ಕೂಟಿಗೆ, ಸುಳ್ಯದ ಕಡೆ ಬರುತ್ತಿದ್ದ ಪೇರಾಲಿನ ಹರಿಪ್ರಸಾದ್ ಎಂಬವರ ರಿಕ್ಷಾ ಢಿಕ್ಕಿಯಾಯಿತು.ಈ ಅಪಘಾತದಿಂದ ರಿಕ್ಷಾ ಪಲ್ಟಿಯಾದರೆ, ಸ್ಕೂಟಿಯಲ್ಲಿದ್ದ ದಂಪತಿಗಳು ರಸ್ತೆಯ ಬದಿಗೆ ಎಸೆಯಲ್ಪಟ್ಟು ಗಾಯಗೊಂಡರು.ರಿಕ್ಷಾ ಸ್ಕೂಟಿ ಜಖಂಗೊಂಡಿದೆ.

ಅಜ್ಜಾವರ : ರಿಕ್ಷಾ ಸ್ಕೂಟಿ ಅಪಘಾತ Read More »

ಕಬಡ್ಡಿ ಆಟಗಾರ ಹೃದಯಾಘಾತಕ್ಕೆ ಬಲಿ

ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.ಪೆರ್ನೆ ನಿವಾಸಿ ವೆಲ್ಡಿಂಗ್‌ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಹಾಗೂ ಉತ್ತಮ ಕಬಡ್ಡಿ ಆಟಗಾರ ನವೀನ್ ಕುಮಾರ್ (27) ಮೃತ ಯುವಕ.

ಕಬಡ್ಡಿ ಆಟಗಾರ ಹೃದಯಾಘಾತಕ್ಕೆ ಬಲಿ Read More »

ಸುಳ್ಳು ಸುದ್ದಿ ಪ್ರಸಾರ ಮಾಡಿದ ಸುಳ್ಯದ ವೆಬ್ ನ್ಯೂಸ್ ಸಂಪಾದಕ,ವರದಿಗಾರನ ಮೇಲೆ ಪ್ರಕರಣ ದಾಖಲು

ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಸುಳ್ಯದ ವೆಬ್ ನ್ಯೂಸ್‌ ವೊಂದರ ವರದಿಗಾರ ಹಾಗೂ ಸಂಪಾದಕರ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಾ.20ರಂದು ರಾತ್ರಿ ಸಂಪಾಜೆ ಗ್ರಾಮದ ಕಲ್ಲುಗುಂಡಿ ಬಳಿ ಧನುಷ್ ಪಿ.ಎಸ್. ಎಂಬಾತನು ಕಲ್ಲುಗುಂಡಿ ಕಡೆಗೆ ಮಾರುತಿ ಆಮ್ಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದವರೊಂದಿಗೆ ಯಾವುದೋ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಇದನ್ನು ಸುಳ್ಯದ ವೆಬ್‌ಸೈಟೊಂದು, ‘ಹಿಂದೂ ಹುಡುಗಿಯರ ಜತೆ ಅನ್ಯ ಕೋಮಿನ ಯುವಕರು; ಸಂಪಾಜೆ ತನಕ ತಡರಾತ್ರಿ ಕಾರನ್ನು ಬೆನ್ನಟ್ಟಿದ ಯುವಕ’

ಸುಳ್ಳು ಸುದ್ದಿ ಪ್ರಸಾರ ಮಾಡಿದ ಸುಳ್ಯದ ವೆಬ್ ನ್ಯೂಸ್ ಸಂಪಾದಕ,ವರದಿಗಾರನ ಮೇಲೆ ಪ್ರಕರಣ ದಾಖಲು Read More »

ಕಾಡಿನಲ್ಲಿ ಅನಾಥ ಮಗು ಪತ್ತೆ

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡೋಳುಕೆರೆ ಎಂಬಲ್ಲಿ ದಟ್ಟ ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಪತ್ತೆಯಾದ ಘಟನೆ ವರದಿಯಾಗಿದೆ.ಪ್ರಕರಣ ಶನಿವಾರ ಬೆಳಗ್ಗೆ ತಿಳಿದು ಬಂದಿದೆ.ಮಗುವಿನ ಅಳುವ ಶಬ್ದ ಕೇಳಿ ಸ್ಥಳೀಯರು ಆತಂಕಗೊಂಡು ಕಾಡಿಗೆ ಹೋದಾಗ ಅಲ್ಲಿ ಒಂಟಿಯಾಗಿ ಅಳುತ್ತಿದ್ದ ಆ ಮಗುವನ್ನು ಕಂಡು ಆಶ್ಚರ್ಯಚಕಿತರಾದರು. ಮುಂಡೊಟ್ಟು ರಸ್ತೆಯ ಬಳಿಯ ಕೊಡೋಳುಕೆರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸುತ್ತಮುತ್ತಲಿನ ನಿವಾಸಿಗಳಿಗೆ ಮತ್ತು ಆ ದಾರಿಯಲ್ಲಿ ಹಾದುಹೋಗುತ್ತಿದ್ದ ಒಬ್ಬ ಮಹಿಳೆಗೆ ಮಗುವಿನ ಧ್ವನಿ ಕೇಳಿಸಿತು.

ಕಾಡಿನಲ್ಲಿ ಅನಾಥ ಮಗು ಪತ್ತೆ Read More »

ಹುಚ್ಚು ನಾಯಿ ಕಡಿದು ಮಹಿಳೆ ಸಾವು

ಗೂನಡ್ಕ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ರಾಜರಾಮಪುರ ಎಂಬಲ್ಲಿ ಮಹಿಳೆಯೊಬ್ಬರು ಹುಚ್ಚು ನಾಯಿ ಕಡಿತಕೊಳಗಾಗಿ ನಿಧನ ಹೊಂದಿದ ಘಟನೆ ವರದಿಯಾಗಿದೆ.ಹುಚ್ಚು ನಾಯಿ ಕಡಿತಕೊಳಗಾಗಿ ಮ್ರತಪಟ್ಟ ಮಹಿಳೆಯನ್ನು ಬೇಬಿ(42)ಎಂದು ಗುರುತಿಸಲಾಗಿದೆ.ಅವರು ಒಂದು ತಿಂಗಳ ಹಿಂದೆ ಅರಂತೋಡು ಭಾಗಕ್ಕೆ ಕೂಲಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ನಾಯಿಯ ಮರಿಯೊಂದು ಕಚ್ಚಿತ್ತು.ಆದರೆ ಈ ವಿಷಯವನ್ನು ಅವರು ಮನೆಯವರಿಗೆ ಹೇಳಿರಲಿಲ್ಲ.ಅಲ್ಲದೆ ಚುಚ್ಚುಮದ್ದು ತೆಗೆದುಕೊಂಡಿರಲಿಲ್ಲ.ಕಳೆದ ಸೋಮವಾರ ರೋಗ ಉಲ್ಬನಗೊಂಡು ನೀರು ನೋಡುತ್ತಿದ್ದಾಗವ ಹೆದರುತ್ತಿದ್ದ ಅವರನ್ನು ಮನೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಬಳಿಕ ಅಲ್ಲಿಂದ

ಹುಚ್ಚು ನಾಯಿ ಕಡಿದು ಮಹಿಳೆ ಸಾವು Read More »

ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಸಾವು

ಬೆಳ್ತಂಗಡಿ ಯ ಜಾರಿಗೆ ಬೈಲು ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯ ಮಾವಿನ ಮರದ ಕೊಂಬೆ ಬಿದ್ದು ಬೈಕ್ಕಲ್ಲಿ ಬರುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾ 20 ಗುರುವಾರ ಸಂಜೆ 8 ಗಂಟೆಗೆ ನಡೆದಿದೆ.ಮೃತ ಯುವಕನನ್ನು ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ಸಂಜೀವ ಮುಗೇರ ಮತ್ತು ಲಲಿತಾ ದಂಪತಿಯ ಹಿರಿಯ ಪುತ್ರ ಪ್ರವೀಣ್.ಎಸ್.ಎಲ್ (25) ಗುರುತಿಸಲಾಗಿದೆ.ಮಂಗಳೂರಿನ ಎಚ್.ಡಿ.ಎಫ್..ಸಿ ಬ್ಯಾಂಕ್ ನಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತಿದ್ದ ಬೆಳಾಲಿನ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ

ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಸಾವು Read More »

ಹೆಲಿಕಾಪ್ಟರ್ ತೆಗೆದು ಕೊಡಲು ಶಾಸಕಿ ಭಾಗೀರಥಿ ರಾಜ್ಯ ಸರಕಾರಕ್ಕೆ ಒತ್ತಾಯ

ರಾಜ್ಯದಲ್ಲಿ ದಲಿತ ಸಮುದಾಯದ ಕಾಲನಿ ಅಭಿವೃದ್ಧಿ ಕುರಿತು ಸಮೀಕ್ಷೆ ನಡೆಸಲು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರಿಗೆ ಸರಕಾರ ಹೆಲಿಕಾಪ್ಟ‌ರ್ ಕೊಡಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.ಅವರು ಬುಧವಾರ ವಿಧಾನಸಭೆಯಲ್ಲಿ ಪ್ರಸ್ತುತ ಸಾಲಿನ ಆಯವ್ಯಯ ಅಂದಾಜುಗಳ ಮೇಲಿನ ಸಾಮಾನ್ಯ ಚರ್ಚೆಯಲ್ಲಿ ಮಾತನಾಡಿದರು. ಸುಳ್ಯ ತಾಲೂಕು ಸೇರಿದಂತೆ ರಾಜ್ಯದ ಬಹುತೇಕ ದಲಿತ ಸಮುದಾಯದ ಕಾಲನಿಗಳು ಅಭಿವೃದ್ಧಿ ಕಂಡಿಲ್ಲ. ಈ ಬಗ್ಗೆ ಸರಕಾರ ಸಮರ್ಪಕ ಸರ್ವೇ ನಡೆಸಬೇಕು. ಜೊತೆಗೆ, ಸಮೀಕ್ಷೆಗಾಗಿ ಮಹದೇವಪ್ಪ ಅವರಿಗೆ ಸರಕಾರವೇ ಹೆಲಿಕಾಪ್ಟ‌ರ್

ಹೆಲಿಕಾಪ್ಟರ್ ತೆಗೆದು ಕೊಡಲು ಶಾಸಕಿ ಭಾಗೀರಥಿ ರಾಜ್ಯ ಸರಕಾರಕ್ಕೆ ಒತ್ತಾಯ Read More »

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ.ನೆಲ್ಲೂರು ಕೆಮ್ರಾಜೆ ಗ್ರಾಮದ ಕೊಡಪಾಲ ಲಿಂಗಪ್ಪ ನಾಯ್ಕ ರವರ ಪತ್ನಿ ರೇವತಿ ಎಂಬವರೇ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡ ಮಹಿಳೆ.ವಿಷ ಸೇವಿಸಿದ ರೇವತಿಯವರನ್ನು ಮನೆಯವರು ಮತ್ತು ಸ್ಥಳೀಯರು ಸೇರಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಅಲ್ಲಿ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.ಮೃತರು ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕಾಲೇಜು ಹುಡುಗಿಯರಿಗೆ ಕಿರುಕುಳ ನೀಡಿದ ಯುವಕನಿಗೆ ಊರವರಿಂದ ಗೂಸ

ಪುತ್ತೂರು ನಗರದ ಕಲ್ಲಿಮಾರು ಎಂಬಲ್ಲಿದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಗೂಸ ನೀಡಿದ ಘಟನೆ ಮಾ.18 ರಂದು ಸಂಜೆ ವರದಿಯಾಗಿದೆ.ಹುಡುಗಿಯರಿಗೆ ಕಿರುಕುಳ ನೀಡಿದ ಗದಗ ಮೂಲದ ಲಿಂಗಪ್ಪ ಎಂಬವನನ್ನು ಊರವರೇ ಹಿಡಿದು ಗೂಸ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾಲೇಜು ಹುಡುಗಿಯರಿಗೆ ಕಿರುಕುಳ ನೀಡಿದ ಯುವಕನಿಗೆ ಊರವರಿಂದ ಗೂಸ Read More »

error: Content is protected !!
Scroll to Top