ಕ್ರೈಂ

ಮನೆ ದರೋಡೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ

ವಿಟ್ಲ; ಸಿಂಗಾರಿ ಬೀಡಿ ಮಾಲೀಕರ ಮನೆಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೇರಳದ ಕಣ್ಣೂರು ನಿವಾಸಿ ಅಬ್ದುಲ್ ನಾಸೀರ್(52) ಬಂಧಿತ ಆರೋಪಿ. ಆ ಮೂಲಕ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಂಧಿತ ಅಬ್ದುಲ್ ನಾಸೀರ್, ಸ್ಥಳೀಯ ಆರೋಪಿ ಸಿರಾಜುದ್ದೀನ್ ಹಾಗೂ ಪ್ರಧಾನ ಸೂತ್ರಧಾರಿ ಎಎಸ್‌ಐ ಮಧ್ಯೆ ಸಂಪರ್ಕ ಸೇತುವಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಂಗಾರಿ ಬೀಡಿ ಸಂಸ್ಥೆಯಲ್ಲಿ ಬೀಡಿ ಪ್ಯಾಕಿಂಗ್ ಕಾರ್ಯ ನಿರ್ವಹಿಸುತ್ತಿದ್ದ ಸಿರಾಜುದ್ದೀನ್ ತನ್ನ ಮಾಲೀಕನ ಮೇಲಿನ ಮನಸ್ತಾಪದಿಂದ ಕೆಲಸ […]

ಮನೆ ದರೋಡೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ Read More »

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರಿಗೆ ಗಾಯ

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ಇಂದು ನಡೆದಿದೆ.ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ.ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರಿಗೆ ಗಾಯ Read More »

ಸರಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ

ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ 2.66 ಲಕ್ಷ ರೂ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್‌ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು ವಂಚನೆಯ

ಸರಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ Read More »

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ ನಿವಾಸಿ ವೀರಭದ್ರ (29) ಮೃತ ಯುವಕ.ವೀರಭದ್ರ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕೆಲಸ ಮಾಡುತ್ತಿದ್ದರು.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು Read More »

ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು

ಬಂಟ್ವಾಳ ತಾಲೂಕಿನ ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಬಂದ ಕಾರೊಂದು ಢಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಳ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅವರು ರಾತ್ರಿ 9.50ರ ಸುಮಾರಿಗೆ ಪೆರಿಯಪಾದೆ ದೈವಸ್ಥಾನಕ್ಕೆ ಹೋಗಿ ಹರಕೆ ಸಲ್ಲಿಸಿ ವಾಪಸ್ಸು ತನ್ನ ಮನೆಗೆ ಸರಪಾಡಿ ಕಡೆಗೆ ತೆರಳುತ್ತಿರುವ ಸಂದರ್ಭ ಕಾರು ಚಾಲಕನಾದ ದಿನಕರ ಎಂಬಾತನು ತನ್ನ ಕಾರನ್ನು ದುಡುಕತನ ಹಾಗೂ ನಿರ್ಲಕ್ಷತನದಿಂದ ಚಾಲಯಿಸಿಕೊಂಡು ರಸ್ತೆಯ ತೀರ ಬಲ ಬದಿಗೆ

ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ನೆರೆ ಮನೆಯ ಕೋಳಿ ಕೂಗಿ ನಿದ್ರೆಗೆ ಭಂಗ,ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ನೆರೆ ಮನೆಯ ಕೋಳಿ ಮುಂಜಾನೆ 3 ಗಂಟೆಗೆ ಕೂಗಿ ತಮ್ಮ ನಿದ್ರೆಗೆ ಭಂಗ ತರುತ್ತಿದೆ ಎಂದು ಅದರ ವಿರುದ್ಧ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಕೇರಳದ ಪಥನಾಂತಿಟ್ಟ ಪ್ರದೇಶದ ಪಲ್ಲಿಕಲ್ ನಲ್ಲಿ ನಡೆದಿದೆ. ದೂರು ದಾಖಲಾದ ಬೆನ್ನಲ್ಲೇ ಆ ಊರಿನಲ್ಲಿ ಗಲಾಟೆ ಭುಗಿಲೆದ್ದಿದೆ. ರಾಧಾಕೃಷ್ಣ ಕುರುಪ್ ಎಂಬ ವೃದ್ಧನಿಗೆ ರಾತ್ರಿಯಲ್ಲಿ ಚೆನ್ನಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಬೆಳಗಿನ ಜಾವದಲ್ಲಿ ಇನ್ನೇನು ನಿದ್ರೆ ಹತ್ತುತ್ತಿದೆ ಎನ್ನುವಾಗ ದಿನವೂ ಬೆಳಗಿನ ಜಾವವೇ ಕೂಗಿ ತನ್ನ ಶಾಂತಿಯುತ ನಿದ್ರೆಗೆ

ನೆರೆ ಮನೆಯ ಕೋಳಿ ಕೂಗಿ ನಿದ್ರೆಗೆ ಭಂಗ,ಪೊಲೀಸ್ ಠಾಣೆಯಲ್ಲಿ ದೂರು ದಾಖಲು! Read More »

ಕಾಣಿಕೆ ಡಬ್ಬಿ ಒಡೆದು ಕಳ್ಳತನ

ಬೆಳ್ತಂಗಡಿ ತಾಲೂಕಿನ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಾಡ ಹಗಲೇ ನಡೆದಿದೆ.ಮಧ್ಯಾಹ್ನ 11ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ. ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಸುಮಾರು 3 ಸಾವಿರ ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2 ಸಾವಿರ

ಕಾಣಿಕೆ ಡಬ್ಬಿ ಒಡೆದು ಕಳ್ಳತನ Read More »

7ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ಫೆ.18ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ.ನಿನ್ನೆ ರಾತ್ರಿ ಮನೆಯ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

7ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ದೇವರಕೊಲ್ಲಿ : ಟಿ.ಟಿ ಲಾರಿ ನಡುವೆ ಭೀಕರ ಅಪಘಾತ

ಮಾಣಿ ಮೈಸೂರು ರಾಷ್ಟ್ರಿಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಟಿಟಿ ಹಾಗೂ ಲಾರಿ ನಡುವೆ ಫೆ.19ರಂದು ಬೆಳಿಗ್ಗೆಯ ಸಮಯ ಭೀಕರ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.ತಡರಾತ್ರಿ 2.30ಕ್ಕೆ ಅಪಘಾತ ಸಂಭವಿಸಿದೆ. ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ದೇವರಕೊಲ್ಲಿ : ಟಿ.ಟಿ ಲಾರಿ ನಡುವೆ ಭೀಕರ ಅಪಘಾತ Read More »

ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವು

ಕೊಪ್ಪಳ ತಾಲೂಕಿನ ಬಳೂಟಗಿ ಗ್ರಾಮದ ಅಂಗನವಾಡಿಯಲ್ಲಿ 5 ವರ್ಷದ ಬಾಲಕಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಬಾಲಕಿಯನ್ನು ಅಲಿಯಾ ಮಹ್ಮದ್ ರಿಯಾಜ್ (5) ಎನ್ನಲಾಗಿದೆ.ಬಾಲಕಿ ಮಧ್ಯಾಹ್ನದ ವೇಳೆ ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಬಾಲಕಿಯನ್ನು ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸುತ್ತಿದ್ದಾಗ, ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಮೃತಪಟ್ಟಿರುವುದಾಗಿ ವೈದ್ಯರ ತಪಾಸಣೆಯ ವೇಳೆ ತಿಳಿದು ಬಂದಿದೆ.

ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವು Read More »

error: Content is protected !!
Scroll to Top