ಕ್ರೈಂ

ಆಟವಾಡುತ್ತಿದ್ದಾಗ ಯುವಕ ಕುಸಿದು ಬಿದ್ದು ಸಾವು

ಮಂಗಳೂರು ಅತ್ತಾವರ ಐವರಿ ಟವರ್‌ ನಿವಾಸಿಯಾಗಿದ್ದ ಶರೀಫ್‌ ಅವರ ಪುತ್ರ ಶಹೀಮ್‌ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಬುಧವಾರ ಸಂಭವಿಸಿದೆ.ಈತ ಬುಧವಾರ ಸಂಜೆ ಗೆಳೆಯರ ಜತೆ ಶಟ್ಲ್ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ. ಅಷ್ಟರಲ್ಲೇ ಮೃತಪಟ್ಟಿದ್ದರು. ಅಲೋಶಿಯಸ್‌ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದರು.

ಆಟವಾಡುತ್ತಿದ್ದಾಗ ಯುವಕ ಕುಸಿದು ಬಿದ್ದು ಸಾವು Read More »

ನಾಪತ್ತೆಯಾಗಿದ್ದ ತಾಯಿ ಮತ್ತು ಇಬ್ಬರು ಮಕ್ಕಳು ಪತ್ತೆ! ಎಲ್ಲಿ ಪತ್ತೆಯಾದರು ಇಲ್ಲಿದೆ ಮಾಹಿತಿ ನೋಡಿ

ಆಲೆಟ್ಟಿ ಗ್ರಾಮದಿಂದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳು ಅವರ ತಾಯಿ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿಯ ಕಟಪಾಡಿಯಲ್ಲಿರುವ ಮಹಿಳೆಯ ತಾಯಿ ಮನೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಹೇಳಲಾಗಿದೆ.

ನಾಪತ್ತೆಯಾಗಿದ್ದ ತಾಯಿ ಮತ್ತು ಇಬ್ಬರು ಮಕ್ಕಳು ಪತ್ತೆ! ಎಲ್ಲಿ ಪತ್ತೆಯಾದರು ಇಲ್ಲಿದೆ ಮಾಹಿತಿ ನೋಡಿ Read More »

ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯ

ಜಾಲ್ಲೂರು ಗ್ರಾಮದ ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಬುಧವಾರ ವರದಿಯಾಗಿದೆ.ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ ಹೇಳಲಾಗಿದೆ. ಈ ಹಿಂದೆ ಇಲ್ಲಿ ರಿಕ್ಷಾ ಹಾಗು ಲಾರಿ ಕೂಡ ಪಲ್ಟಿಯಾದ ಘಟನೆ ಸಂಭವಿಸಿತ್ತು. ಕೊಡಲೇ ಈ ಹಂಪ್ಸನ್ನು ತೆರಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯ Read More »

ಗುತ್ತಿಗಾರು : ದೈವಸ್ಥಾನದಿಂದ ಹುಂಡಿ ಕಳವು

ಗುತ್ತಿಗಾರಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದಿಂದ ಹುಂಡಿ ಕಳ್ಳತನವಾದ ಘಟನೆ ವರದಿವಾಗಿದೆ.ಸೋಮವಾರ ತಡರಾತ್ರಿ ಕಳ್ಳತನ ನಡೆದಿರುವುದಾಗಿ ತಿಳಿದು ಬಂದಿದೆ.ಗುತ್ತಿಗಾರಿನ ಗಣೇಶ್ ಅವರ ತರಕಾರಿ ಅಂಗಡಿ, ದೈವಸ್ಥಾನದ ಒಳಭಾಗದ ದೊಡ್ಡ ಹುಂಡಿ ಕಳ್ಳತನಕ್ಕೂ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುತ್ತಿಗಾರು : ದೈವಸ್ಥಾನದಿಂದ ಹುಂಡಿ ಕಳವು Read More »

ಮೊಬೈಲ್ ನಲ್ಲಿ ರೀಲ್ಸ್ ನೋಡುವ ವಿಚಾರ ಗಂಡ ಹೆಂಡತಿಗೆ ಜಗಳ,ಹೆಂಡತಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆ

ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಘಟನೆ ವರದಿಯಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (೨೭ವರ್ಷ)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ.ಪತಿ ರಾಜೇಂದ್ರ(೪೦) ಟೈಲ್ಸ್ ಕೆಲಸ ಮಾಡುವವರಾಗಿದ್ದು ಪರಿವಾರಕಾನ ದಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಮಕ್ಕಳು ವೈಷ್ಣವಿ(೮ ವರ್ಷ) ಸೆಂಟ್‌ ಜೋಸೆಪ್‌ ಶಾಲೆ ೨ನೇ ತರಗತಿ ವಿದ್ಯಾರ್ಥಿನಿ. ಇನ್ನೊಬ್ಬಾಕೆ ೨ ವರ್ಷ ಪ್ರಾಯದ ಅನುಷ್ಕಾ ಅಂಗನವಾಡಿಗೆ ಹೋಗುತ್ತಿದ್ದರು.ಕಳೆದ ಒಂದು ವಾರದ

ಮೊಬೈಲ್ ನಲ್ಲಿ ರೀಲ್ಸ್ ನೋಡುವ ವಿಚಾರ ಗಂಡ ಹೆಂಡತಿಗೆ ಜಗಳ,ಹೆಂಡತಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆ Read More »

ನಾಲ್ಕು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳ ವಿರುದ್ದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಖಂಡನೆ

ಬೆಂಗಳೂರಿನಲ್ಲಿ ನಾಲ್ಕು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ರಾಕ್ಷಸಿ ಪ್ರವೃತ್ತಿ ಹೊಂದಿದವರು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಂದು ಹೇಳಿದ್ದಾರೆ.ಜಮೀರ್ ಅಹ್ಮದ ಅವರೇ ಇದು ನಿಮ್ಮ ಕ್ಷೇತದಲ್ಲಾಗಿರುವ ಘಟನೆ ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ. ಜಮೀರ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.ಹಸುಗಳ ಕೆಚ್ಚಲು ಕೊಯ್ದು ನೀಚರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.ಒಂದು ವೇಳೆ ಈ ಪ್ರಕರಣದಲ್ಲಿ ಬೇಜವಾಬ್ದಾರಿ ಪ್ರದರ್ಶಿಸಿದರೆ ರಾಜ್ಯಾದ್ಯಂತ ಶ್ರೀರಾಮಸೇನೆ ಜಮೀರ್

ನಾಲ್ಕು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳ ವಿರುದ್ದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಖಂಡನೆ Read More »

ಪಿಕಪ್ ಬೈಕ್ ಅಪಘಾತ ಬೈಕ್ ಸವಾರ ಗಂಭೀರ

ಸುಳ್ಯ ನಗರದ ಸೋಣಂಗೇರಿ-ಗುತ್ತಿಗಾರು ರಸ್ತೆಯ ಮಿತ್ತಮಜಲು ಬಳಿ ಬೈಕ್‌ -ಪಿಕಪ್ ಅಪಘಾತ ಸಂಭವಿಸಿದ ಘಟನೆ ಭಾನುವಾರ ಸಂಜೆ ವರದಿಯಾಗಿದೆ. ಸೋಣಂಗೇರಿ ಕಡೆಯಿಂದ ದುಗಲಡ್ಕ ಕಡೆಗೆ ಹೋಗುವ ಪಿಕಪ್‌ ಹಾಗೂ ದುಗಲಡ್ಕ ಕಡೆಯಿಂದ ಬರುತ್ತಿದ್ದ ಬೈಕ್‌ ಪರಸ್ಪರ ಡಿಕ್ಕಿ ಹೊಡೆದುಕೊಂಡಿದೆ.ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಪಿಕಪ್ ಬೈಕ್ ಅಪಘಾತ ಬೈಕ್ ಸವಾರ ಗಂಭೀರ Read More »

ಬೆಳ್ಳಾರೆಯಲ್ಲಿ ಇಬ್ಬರಿಂದ ರಾತ್ರಿ ಯುವಕನ ಬೈಕ್ ತಡೆದು ಹಲ್ಲೆ

ಬೆಳ್ಳಾರೆ ಪೇಟೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮೇಲೆ ರಾಡ್ ನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆದ್ದಾರೆ ಎಂದು ದೂರಲಾಗಿದೆ.ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.ಗಾಯಾಳು ಯುವಕನನ್ನು ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ಳಾರೆಯಲ್ಲಿ ಇಬ್ಬರಿಂದ ರಾತ್ರಿ ಯುವಕನ ಬೈಕ್ ತಡೆದು ಹಲ್ಲೆ Read More »

ಬಾಲಕೃಷ್ಣ ಮರೀಲ್ ನಿಧನ

ಸುಳ್ಯ : ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ (S 6) ಇದರ ಸ್ಥಾಪಕರು ಹಿರಿಯ ಮುತ್ಸದ್ದಿ ಸಂಘಟಕ, ಜನಪ್ರತಿನಿಧಿಯಾಗಿ ದುಡಿದ ಸಮಾಜಸೇವಕ ಶ್ರೀ ಬಾಲಕೃಷ್ಣ ಮರೀಲ್ ರವರು ಜ.11ರಂದು ನಿಧನರಾದರು.

ಬಾಲಕೃಷ್ಣ ಮರೀಲ್ ನಿಧನ Read More »

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು..!

ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ತ್ರಿಶಾಲ್ ಮೃತ ದುರ್ದೈವಿಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ ಆಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು..! Read More »

error: Content is protected !!
Scroll to Top