ಕ್ರೈಂ

ನಾಳೆ (ಜ.30)ಭೀಕರ ಅಪಘಾತಲ್ಲಿ ಸಾವನ್ನಪ್ಪಿದ ಬಿಸಿಲು ಮನೆಯ  ಸುಂದರ ಗೌಡರ ಅಂತ್ಯ ಸಂಸ್ಕಾರ

ಕೊಡಗು ಸಂಪಾಜೆಯ ಮುಖ್ಯರಸ್ತೆಯಲ್ಲಿ ಕಾರೊಂದು ರಾಂಗ್ ಸೈಡಲ್ಲಿ ಬಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ  ಪರಿಣಾಮವಾಗಿ ಕೊಯನಾಡಿನ ಚಿಟ್ಟಿಕಾನ ಬಿಸಿಲುಮನೆಯ ರಿಕ್ಷಾ ಚಾಲಕ  ಹಾಗೂ ಕೊಡಗು ಸಂಪಾಜೆ ಗ್ರಾಮ ಪಂಚಾಯತ್  ಮಾಜಿ ಉಪಾಧ್ಯಕ್ಷ  ಸುಂದರ(62) ರವರು ಗಂಭೀರ ಗಾಯಗೊಂಡು  ಸ್ಥಳದಲ್ಲೆ ಕೊನೆಯುಸಿರೆಳೆದಿದ್ದು  ಅವರ ಅಂತ್ಯ ಸಂಸ್ಕಾರ ಮಗ ಭಾರತೀಯ ಭೂಸೇನೆಯ ಸೈನಿಕ ದೇವಿ ಪ್ರಸಾದ್ ಆಗಮಿಸಿದ ಬಳಿಕ ಮೃತರ ಮನೆಯಲ್ಲಿ ಗೌಡ ಸಂಪ್ರದಾಯದ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಮಗ ದೇವಿಪ್ರಸಾದ್ ಅಪ್ಪನ‌ ಸಾವಿನ ಸುದ್ದಿ […]

ನಾಳೆ (ಜ.30)ಭೀಕರ ಅಪಘಾತಲ್ಲಿ ಸಾವನ್ನಪ್ಪಿದ ಬಿಸಿಲು ಮನೆಯ  ಸುಂದರ ಗೌಡರ ಅಂತ್ಯ ಸಂಸ್ಕಾರ Read More »

ರಿಕ್ಷಾ ಕಾರು ಅಪಘಾತ,ರಿಕ್ಷಾ ಚಾಲಕ ಮೃತ್ಯು

ಕೊಡಗು ಸಂಪಾಜೆ ಪೆಟ್ರೋಲ್ ಬಂಕಿನ ಸಮೀಪದಲ್ಲಿ ರಿಕ್ಷಾ ಕಾರು ಅಪಘಾತವಾಗಿ ರಿಕ್ಷಾಕ್ಕೆ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾದ ಸಂಧರ್ಭ ಟಿಪ್ಪರ್ ಲಾರಿ ಹತ್ತಿ ರಿಕ್ಷಾ ಚಾಲಕ ಸುಂದರ ರವರು ಮೃತಪಟ್ಟ ಘಟನೆ ಜ.29ರಂದು ವರದಿಯಾಗಿದೆ.ರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ರಿಕ್ಷಾ ಕಾರು ಅಪಘಾತ,ರಿಕ್ಷಾ ಚಾಲಕ ಮೃತ್ಯು Read More »

ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್’ ಸೇರಿ 6 ಮಂದಿ ದುರ್ಮರಣ

ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್’ ಸೇರಿ 6 ಮಂದಿ ದುರ್ಮರಣ Read More »

ತಂದೆಯಿಂದಲೇ ಮಗನ ಮೇಲೆ ಗುಂಡು ಹಾರಿಸಿ ಕೊಲೆ !

ಕಡಬ ತಾಲೂಕಿನ ರಾಮಕುಂಜದಲ್ಲಿ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ತಂದೆಯೇ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು.ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಬಾಲಕ. ರಾಮಕುಂಜ ಗ್ರಾಮದ ಪಾದೆ ನಿವಾಸಿ ತಂದೆ ವಸಂತ ಪೂಜಾರಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ವಸಂತ ಪೂಜಾರಿ ವಿರುದ್ಧ ಆತನ ಪತ್ನಿ ಜಯಶ್ರೀ

ತಂದೆಯಿಂದಲೇ ಮಗನ ಮೇಲೆ ಗುಂಡು ಹಾರಿಸಿ ಕೊಲೆ ! Read More »

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಮಹಿಳೆ ವಿಮಾಣ ನಿಲ್ದಾಣದಲ್ಲಿ ಸಾವು

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಸುಳ್ಯ ತತ್ವತಾಲೂಕಿನ ಅರಂತೋಡಿನ ಮಹಿಳೆ ಹೃದಯಘಾತಕ್ಕೊಳಗಾಗಿ ಜ 24 ರಂದು ರಾತ್ರಿ ಸೌದಿ ಅರೇಬಿಯಾದ ಜಿದ್ದಾ ವಿಮಾನ ನಿಲ್ದಾಣದಲ್ಲಿ ನಿಧನರಾಗಿದ್ದಾರೆ15 ದಿನಗಳ ಹಿಂದೆ ಐದು ಮಂದಿ ಸದಸ್ಯರೊಂದಿಗೆ ಪವಿತ್ರ ಉಮ್ರಾ ಯಾತ್ರೆ ಮಾಡಲು ಸೌದಿ ಅರೇಬಿಯಾ ಕ್ಕೆ ಹೋಗಿದ್ದರು. ಯಾತ್ರೆ ಮುಗಿಸಿ ಬರುವ ಸಂದರ್ಭಜಿದ್ದಾ ಏರ್ಪೋಟಿ್ರನಲ್ಲಿ ಇವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಮೃತರು ಪುತ್ರ ಇರ್ಶಾನ್ ಹಾಗೂ

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಮಹಿಳೆ ವಿಮಾಣ ನಿಲ್ದಾಣದಲ್ಲಿ ಸಾವು Read More »

ತಂದೆಗೆ ಗಂಭೀರವಾಗಿ ಚೂರಿಯಿಂದ ಇರಿದು ತಾನು ಶೂಟೌಟ್ ಮಾಡಿಕೊಂಡ ಬಾಲಕ

ಬಾಲಕನೋರ್ವ ತಂದೆಗೆ ಚೂರಿಯಿಂದ ಇರಿದು ಬಳಿಕ ತಾನು ಶೂಟೌಟ್ ಮಾಡಿಕೊಂಡ ಘಟನೆ ರಾಮಕುಂಜ ಇಲ್ಲಿನ ಪಾದೆ ಎಂಬಲ್ಲಿ ಇಂದು ನಡೆದಿದೆ.ಘಟನೆಯಿಂದ ಗಂಭೀರ ಗಾಯಗೊಂಡಿರುವ ವಸಂತ ಅಮೀನ್ ಅವರನ್ನು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಜ.24ರಂದು ಸಂಜೆ ಘಟನೆ ನಡೆದಿದೆ.ಕೇರಳ ಮೂಲದವರಾಗಿರುವ ವಸಂತ ಅಮೀನ್ ಅವರು ರಾಮಕುಂಜ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿ ತಂದೆ,ಮಗ ಜೊತೆಯಾಗಿ ವಾಸವಿದ್ದರು.ಮಂಗಳೂರು ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯಾಗಿದ್ದ ಮೋಕ್ಷ ಅವರು ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎನ್ನುವುದು ಪೊಲೀಸ್ ತನಿಖೆಯಿಂದಷ್ಟೆ

ತಂದೆಗೆ ಗಂಭೀರವಾಗಿ ಚೂರಿಯಿಂದ ಇರಿದು ತಾನು ಶೂಟೌಟ್ ಮಾಡಿಕೊಂಡ ಬಾಲಕ Read More »

ಅರಂಬೂರು : ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ

ಅರಂಬೂರಿನಲ್ಲಿ ಯುವಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆದಿದ್ದಾನೆ ಎನ್ನಲಾಗಿದ್ದು, ಆರೋಪಿಯ ವಿರುದ್ಧ ಸುಳ್ಯ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಪೊಲೀಸರು ಆರೋಪಿ ಅಬ್ದುಲ್‌ ಬಾಷಿತ್ (19) ಎಂಬಾತನ್ನು ಬಂಧಿಸಿ ಪೋಕ್ಸ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಅರಂಬೂರು : ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ Read More »

ಉಬರಡ್ಕ ಗ್ರಾಮ ಪಂಚಾಯತ್ ಸದಸ್ಯ ನಿಧನ

ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಬಳ್ಳಡ್ಕ ಅಸೌಖ್ಯದಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜ.20ರಂದು ನಿಧನರಾದರು.ಅವರಿಗೆ ಸುಮಾರು 36 ವರ್ಷ ವಯಸ್ಸಾಗಿತ್ತು.ಬಳ್ಳಡ್ಲ ದಿ.ದುಗ್ಗಪ್ಪ ಗೌಡ – ಶ್ ಇಂದಿರಾ ದಂಪತಿಯ ಪುತ್ರರಾಗಿದ್ದ ಅನಿಲ್ ಗ್ರಾ.ಪಂ. ಸದಸ್ಯರಾಗಿ ಜನ ಸೇವೆ ಮಾಡುತ್ತಿದ್ದರು. ಆದರೆ ಕಳೆದ ಕೆಲ ಸಮಯದಿಂದ ಅವರು ಅಸೌಖ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಮೃತರು ತಾಯಿ ಇಂದಿರಾ , ಪತ್ನಿಕಾವ್ಯ, ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಉಬರಡ್ಕ ಗ್ರಾಮ ಪಂಚಾಯತ್ ಸದಸ್ಯ ನಿಧನ Read More »

ದೇವರಕೊಲ್ಲಿ : ಕಾರು ಪಲ್ಟಿ ಹೊಡೆದು ಮಗು ಸೇರಿ ನಾಲ್ಕು ಮಂದಿಗೆ ಗಾಯ

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಜ.14ರಂದು ಬೆಳಿಗ್ಗೆ ವರದಿಯಾಗಿದೆ.ವೀರಾಜಪೇಟೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಒಮ್ನಿ ಕಾರು ದೇವರಕೊಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಗು ಸೇರಿ ನಾಲ್ಕು ಮಂದಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಆಂಬು ಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.

ದೇವರಕೊಲ್ಲಿ : ಕಾರು ಪಲ್ಟಿ ಹೊಡೆದು ಮಗು ಸೇರಿ ನಾಲ್ಕು ಮಂದಿಗೆ ಗಾಯ Read More »

ವಿದ್ಯಾರ್ಥಿನಿ ಆತ್ಮಹತ್ಯೆ, 6 ಉಪನ್ಯಾಸಕರು ವಜಾ

ಬೆಂಗಳೂರಿನ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಉಪನ್ಯಾಸಕರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಹಾಗೂ ಸಹಪಾಠಿಗಳು ಆರೋಪಿಸಿದ್ದರು. ಯಶಸ್ವಿನಿ ಮೈಬಣ್ಣ ಹಾಗೂ ಬಟ್ಟೆ ಬಗ್ಗೆ ನಿಂದನೆ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಆರು ಉಪನ್ಯಾಸಕರನ್ನು ವಜಾಗೊಳಿಸಿದೆ. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ, 6 ಉಪನ್ಯಾಸಕರು ವಜಾ Read More »

error: Content is protected !!
Scroll to Top