ಕ್ರೈಂ

ಅಂಗವಾಡಿ ಕಾರ್ಯಕರ್ತೆ ಹರಿಣಿ ನಿಧನ

ಪೆರಾಜೆ ಗ್ರಾಮದ ಅಮೆಚೂರು ಅಂಗನವಾಡಿ ಕಾರ್ಯಕರ್ತೆಹರಿಣಿ ಶನಿವಾರ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 46 ವರ್ಷ ಪ್ರಾಯವಾಗಿತ್ತು.ಕಳೆದ 12 ವರ್ಷಗಳಿಂದ ಅಮೆಚೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಅವರು ಸೇವೆ ಸಲ್ಲಿಸಿದ್ದರು. ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು.ಮೃತರು ಪತಿ,ಪುತ್ರ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

ಅಂಗವಾಡಿ ಕಾರ್ಯಕರ್ತೆ ಹರಿಣಿ ನಿಧನ Read More »

ಪ್ರವಾಸಕ್ಕೆ ಬಂದಿದ್ದ ಬಸ್‌ ಪಲ್ಟಿ; ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಪ್ರವಾಸಕ್ಕೆ ಬಂದಿದ್ದ ಶಾಲಾ ವಾಹನವೊಂದು ಪಲ್ಟಿಯಾಗಿ ಸಂಭವಿಸಿದಂತಸಂಭವಿಸಿದ ಅಪಘಾತದಲ್ಲಿ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತಗಾಯಗೊಂಡಿರುವಂತಹ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟಪೋಸ್ಟ್ ಬಳಿ ನಡೆದಿದೆ. ಮುಂದಿನ ಟೈಯರ್ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮೈಸೂರಿನ ಗೋಪಾಲಸ್ವಾಮಿ ಪ್ರೌಢ ಶಾಲೆಯಪ್ರೌಢಶಾಲೆಯ 50 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು ಎಂಬುದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರವಾಸಕ್ಕೆ ಬಂದಿದ್ದ ಬಸ್‌ ಪಲ್ಟಿ; ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ! ಹೆಚ್ಚುತ್ತಿದೆ ಇಲ್ಲಿ ಕಳ್ಳತನ, ಕಳ್ಳತನದ ವೀಡಿಯೊ ಸಿ.ಸಿ ಕೆಮಾರದಲ್ಲಿ ಸೆರೆ!

ಸುಳ್ಯ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ ! ದಿನದಿಂದ ದಿನಕ್ಕೆ ಇಲ್ಲಿ ಕಳ್ಳತನ ಹೆಚ್ಚುತ್ತಿದ್ದು ಕಳ್ಳನೋರ್ವ ಪ್ರಯಾಣಿಕರೊಬ್ಬರ ಅಮೂಲ್ಯ ವಸ್ತುಗಳಿರುವ ಬ್ಯಾಗ್ ಮತ್ತು ಶೂ ಕದಿಯುತ್ತಿರುವ ದ್ರಶ್ಯ ಸಿ.ಸಿ ಕೆಮಾರದಲ್ಲಿ ಸೆರೆಯಾಗಿದೆ. ಪ್ರಯಾಣಿಕ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಮಲಗಿದ್ದರು.ಪ್ರಯಾಣಿಕ ನಿದ್ದಗೆ ಜಾರುತ್ತಿದ್ದಂತೆ ಕಳ್ಳ ಶೂ ಮತ್ತು ಬ್ಯಾಗನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾನೆ.ಬಸ್ ನಿಲ್ಧಾಣದಲ್ಲಿ ರಾತ್ರಿ ಪಾಳಿಯಲ್ಲಿ ವಾಚ್ ಮ್ಯಾನ್ ಇಲ್ಲದಿರುವುದೇ ಸರಣಿ ಕಳ್ಳತ‌ನಗಳು ನಡೆಯಲು ಕಾರಣವಾಗಿದೆ ಎಂದು ಪ್ರಯಾಣಿಕರು ಮಾಧ್ಯಮ ವರದಿಗಾರರೊಂದಿಗೆ ದೂರಿಕೊಂಡಿದ್ದಾರೆ.ಬಸ್

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ! ಹೆಚ್ಚುತ್ತಿದೆ ಇಲ್ಲಿ ಕಳ್ಳತನ, ಕಳ್ಳತನದ ವೀಡಿಯೊ ಸಿ.ಸಿ ಕೆಮಾರದಲ್ಲಿ ಸೆರೆ! Read More »

ಮನೆಯಲ್ಲಿ ಭಾರೀ ಬೆಂಕಿ ಅವಘಡ: ನಾಲ್ವರು ದುರ್ಮರಣ

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದ ಮನೆಯೊಂದರಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಘಟನೆಯಲ್ಲಿ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸುಟ್ಟ ಗಾಯಗಳಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ಮನೆಯಲ್ಲಿ ಭಾರೀ ಬೆಂಕಿ ಅವಘಡ: ನಾಲ್ವರು ದುರ್ಮರಣ Read More »

ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಿಡುಗಡೆಗೆ ಹೈ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಸಿ.ಟಿ.ರವಿ ಪ್ರಸಕ್ತ ಎಲ್ಲಿದ್ದಾರೊ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಆದೇಶ ಮಾಡಿದೆ.ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಬಾರೀ ಮುಖಭಂಗ ಆದಂತಾಗಿದೆ.

ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ Read More »

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ 6ನೇ ಆರೋಪಿ ಮಹಮ್ಮದ್ ಶರೀಫ್ ಬಂಧನ

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಬಿಜೆಪಿ ಜಿಲ್ಲಾ ಮುಖಂಡರಾಗಿದ್ದ ಪ್ರವೀಣ್ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಎನ್.ಐ.ಎ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಶರೀಫ್ ನನ್ನು ದೆಹಲಿ ವಿಮಾನದಲ್ಲಿ ಎನ್‌.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ 6ನೇ ಆರೋಪಿ ಮಹಮ್ಮದ್ ಶರೀಫ್ ಬಂಧನ Read More »

ಕೃತಕ ಗರ್ಭಧಾರಣೆ ಮಾಡಿಸಿಕೊಂಡ ಮಹಿಳೆ ನಿಧನ

ಕೃತಕ ಗರ್ಭಧಾರಣೆ ಮಾಡಿಸಿಕೊಂಡ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಡೆಕ್ಕಳ ದಿನೇಶ್ ಎಂಬವರ ಪತ್ನಿ ಶೀಲಾವತಿ (38) ಅಸೌಖ್ಯದಿಂದ ಡಿ. 18ರಂದು ಮಂಗಳೂರಿನಲ್ಲಿ ನಿಧನರಾದರು.ದಿನೇಶ್ ಎಡಮಂಗಲದಲ್ಲಿ ಅಟೋ ಚಾಲಕರಾಗಿದ್ದರು. ಮದುವೆಯಾಗಿ 17 ವರ್ಷ ಆಗಿತ್ತು. ಆದರೆ ಅವರಿಗೆ ಮಕ್ಕಳಾಗಿರಲಿಲ್ಲ. ಇದರಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ಸಲಹೆಯಂತೆ ಸುಮಾರು 3 ತಿಂಗಳ ಹಿಂದೆ ಕೃತಕ ಗರ್ಭಧಾರಣೆ ಮಾಡಿಸಿಕೊಂಡಿದ್ದರು.ವೈದ್ಯರ ಸೂಚನೆಯಂತೆ 20 ದಿವಸಗಳಿಗೊಮ್ಮೆ ತಪಾಸಣೆ ಮಾಡಿಸುತ್ತಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಶೀಲಾವತಿಯವರಿಗೆ ಅಸೌಖ್ಯಕ್ಕೆ ಒಳಗಾಗಿದ್ದರು. ಇದು ನಿನ್ನೆ

ಕೃತಕ ಗರ್ಭಧಾರಣೆ ಮಾಡಿಸಿಕೊಂಡ ಮಹಿಳೆ ನಿಧನ Read More »

ಕೆ.ಎಸ್.ಆರ್.ಟಿ.ಸಿ‌ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕೆ ಎಸ್ ಆರ್ ಟಿಸಿ ಬಸ್ಸು ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಮುರ ಎಂಬಲ್ಲಿಂದ ಗುರುವಾರ ವರದಿಯಾಗಿದೆ.ಪುತ್ತೂರು ತಾಲೂಕು ಪಡ್ನೂರು ಗ್ರಾಮದ ಅಬ್ದುಲ್ ಕುಂಞ (65) ಮೃತಪಟ್ಟ ವ್ಯಕ್ತಿ‌ ಎಂದು ಗುರುತಿಸಲಾಗಿದೆ.ಅಬ್ದುಲ್ ಕುಂಞಯವರು ಮುರದ ಮೆಡಿಕಲ್ ಶಾಪ್ ಗೆ ಬಂದಿದ್ದು, ವಾಪಸ್ಸು ರಸ್ತೆ ದಾಟಿ ಕೆದಿಲ ರಸ್ತೆಯತ್ತ ಹೋಗುತ್ತಿರುವಾಗ ಅವರ ಬೈಕ್ ಗೆ ಬಸ್ಸು ಢಿಕ್ಕಿ ಹೊಡೆದಿದೆ. ಬಸ್ಸು ಮಾಣಿಯಿಂದ ಪುತ್ತೂರಿನತ್ತ ಹೋಗುತ್ತಿತ್ತು.ಗಾಯಾಳು ಸವಾರನನ್ನು ಸ್ಥಳೀಯರ ನೆರವಿನಿಂದ ತಕ್ಷಣ

ಕೆ.ಎಸ್.ಆರ್.ಟಿ.ಸಿ‌ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ಭೀಕರ ಅಪಘಾತದಲ್ಲಿ ಅಮರಮುಡ್ನೂರು ಗ್ರಾಮದ ಯುವಕ ಸಾವು

ಸೂರಿಕುಮೇರು ಎಂಬಲ್ಲಿ ನಿನ್ನೆ ತಡರಾತ್ರಿ ಬೈಕ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅಮರ ಮುಡ್ನೂರು ಗ್ರಾಮದ ಮರ್ಗಿಲಡ್ಕ ನಿವಾಸಿ ಪುನೀತ್( 30) ಮ್ರತಪಟ್ಟಿದ್ದಾರೆ.ಮಂಗಳೂರಿನಲ್ಲಿ ಕೋಸ್ಟಲ್ ಕೋಳಿ ಫಾರ್ಮ್ ನಲ್ಲಿ ಚಾಲಕರಾಗಿದ್ದ ಅವರು ಕೆಲಸ ಮುಗಿಸಿ ಮನೆಗೆ ಬೈಕ್ ನಲ್ಲಿ ಬರುತ್ತಿದ್ದಾಗ ಸೂರಿಕುಮೇರು ರಾಜ್ಯ ಹೆದ್ದಾರಿಯಲ್ಲಿ ಟೆಂಪೊ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಭೀಕರ ಅಪಘಾತದಲ್ಲಿ ಅಮರಮುಡ್ನೂರು ಗ್ರಾಮದ ಯುವಕ ಸಾವು Read More »

ಕಲ್ಲುಗುಂಡಿಯಲ್ಲಿ ಕಾರು ಪಲ್ಟಿ ಹೊಡೆದು ಜಖಂ

ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ಕಾರು ಪಲ್ಟಿಯಾದ ಘಟನೆ ಗುರುವಾರ ವರದಿಯಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.ಪ್ರಯಾಣಿಕರು ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.

ಕಲ್ಲುಗುಂಡಿಯಲ್ಲಿ ಕಾರು ಪಲ್ಟಿ ಹೊಡೆದು ಜಖಂ Read More »

error: Content is protected !!
Scroll to Top