ಕ್ರೈಂ

ಅಕ್ರಮವಾಗಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ವಿಟ್ಲ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆಯವರು ಪತ್ತೆ ಹಚ್ಚಿ ವಸ್ತು ಸಹಿತ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಪಾರೂಕ್, ಮಹಮ್ಮದ್ ಹಸೈನರ, ಉಮ್ಮರ್ ಫಾರೂಕ್ ಅವರನ್ನು ಚಂದಳಿಕೆಯಲ್ಲಿ ಬಂಧಿಸಲಾಗಿದೆ.ಆರೋಪಿಗಳು ಕಳಂಜಿ ಮಲೆ ರಕ್ಷಿತಾರಣ್ಯದಲ್ಲಿ ಹಾಲು ಮಡ್ಡಿ ತೆಗೆವ ಅಕ್ರಮಬಾಗಿ ಹಾಲು ಮಡ್ಡಿ ತೆಗೆದು ಸಾಗಾಟ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. 11 ಕೆಜಿ ಹಾಲುಮಡ್ಡಿ. ಮೇಣ ತೆಗೆಯಲು ಬಳಸಿದ ಸಲಕರಣೆ, ರಿಕ್ಷಾವನ್ನು ಅರಣ್ಯ […]

ಅಕ್ರಮವಾಗಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ Read More »

ಹೆಚ್ಚುವರಿ ತರಗತಿಯಲ್ಲಿ ಶಿಕ್ಷಕಿಯ ಅಶ್ಲೀಲ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ವಿದ್ಯಾರ್ಥಿ !

ಆಗ್ರಾ: ಹಿಂದೆಲ್ಲ ಗುರುಗಳಿಗೆ ಸಮಾಜದಲ್ಲಿ ಉನ್ನತ ಗೌರವ ನೀಡಲಾಗುತ್ತಿತ್ತು.ಆದರೆ ಇಲ್ಲೊಂದು ಶಿಷ್ಯರ ತಂಡ ಶಿಕ್ಷಕಿಗೆ ಮಾಡಿದ್ದಾರು ಏನು ? ಇಂತಹ ಶಿಷ್ಯರಿದ್ದಾರೆ ಎಂದರೆ ನಿಮಗೆ ಅಚ್ಚರಿ ಆಗಬಹುದು.ಶಾಲಾ ಶಿಕ್ಷಕಿಯ ಅಶ್ಲೀಲ ವಿಡಿಯೋ ಬಳಸಿ ಆಕೆಯನ್ನು ಬ್ಯ್ಲಾಕ್ ಮೇಲ್‌ ಮಾಡಿದ್ದಾರೆ. ಬಳಿಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಈ ಆರೋಪದಡಿ ನಾಲ್ವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ.ಆಗ್ರಾದ ಶಿಕ್ಷಕಿ ಮಥುರಾದ ಶಾಲೆಯಲ್ಲಿ ಶಿಕ್ಷಕಿಯಾಗಿ ಪಾಠ ಮಾಡುತ್ತಿದ್ದರು.ಕಲಿಕೆಯಲ್ಲಿ ಹಿಂದಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಅವರು ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು.ವಿದ್ಯಾರ್ಥಿಯೊಬ್ಬ ಮತ್ತು ಶಿಕ್ಷಕಿ

ಹೆಚ್ಚುವರಿ ತರಗತಿಯಲ್ಲಿ ಶಿಕ್ಷಕಿಯ ಅಶ್ಲೀಲ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ವಿದ್ಯಾರ್ಥಿ ! Read More »

ಪೊಲೀಸರಿಂದ ತಪ್ಪಿಸಿಕೊಂಡ ಕಳ್ಳನ್ನು ಹಿಡಿಯಲು ಸಾರ್ವಜನಿಕರು ಸಹಕರಿಸಲು ಪೊಲೀಸರ ಮನವಿ

ಶನಿವಾರ ಸಂಜೆ ಸುಳ್ಯದ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆತಂದಿದ್ದಾಗ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿದ ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರನ್ನು ವಿನಂತಿಸಿಕೊಂಡಿದ್ದಾರೆ.ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ತಮಿಳುನಾಡಿನ ಈ ವ್ಯಕ್ತಿಯನ್ನು ಪೋಲೀಸರು ತಮಿಳುನಾಡಿನಲ್ಲಿ ಹಿಡಿದು ಸುಳ್ಯಕ್ಕೆ ತಂದಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಾಗಿರುವುದರಿಂದ ಸಂಜೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಒಬ್ಬರು ಪೋಲೀಸ್ ಕಾನ್ ಸ್ಟೇಬಲ್ ಚೀಟಿ ಮಾಡಿಸುತ್ತಿರುವಾಗ ತನ್ನನ್ನು

ಪೊಲೀಸರಿಂದ ತಪ್ಪಿಸಿಕೊಂಡ ಕಳ್ಳನ್ನು ಹಿಡಿಯಲು ಸಾರ್ವಜನಿಕರು ಸಹಕರಿಸಲು ಪೊಲೀಸರ ಮನವಿ Read More »

ಕಲ್ಲೆಂಬಿಯ ದೈವ ನರ್ತಕ ರಮೇಶ್ ಕಲ್ಲೆಂಬಿ ನಿಧನ

ಆಲೆಟ್ಟಿವ: ಆಲೆಟ್ಟಿ ಗ್ರಾಮದ ಕಲ್ಲೆಂಬಿಯ ನಿವಾಸಿ ದೈವ ನರ್ತಕ ದಿ.ಕುಕ್ಕ ರವರ ಪುತ್ರ ದೈವ ನರ್ತಕ ರಮೇಶ್ ಕಲ್ಲೆಂಬಿ ಯವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 35 ವರ್ಷ ಪ್ರಾಯವಾಗಿತ್ತು ಮೃತರು ಆಲೆಟ್ಟಿ ಭಾಗದಲ್ಲಿ ಕೆಲವು ಮನೆತನದ ತರವಾಡು ಮನೆಯ ನೇಮೋತ್ಸವದ ಸಂದರ್ಭದಲ್ಲಿ ಕಲ್ಲುರ್ಟಿ ಗುಳಿಗ ದೈವದ ನರ್ತನ ಸೇವೆ ಮಾಡಿಕೊಂಡು ಬರುತ್ತಿದ್ದರು. ಮೃತರು ಅವಿವಾಹಿತರಾಗಿದ್ದು ತಾಯಿ ಸರೋಜಿನಿ ಹಾಗೂ ಸಹೋದರಿಯರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

ಕಲ್ಲೆಂಬಿಯ ದೈವ ನರ್ತಕ ರಮೇಶ್ ಕಲ್ಲೆಂಬಿ ನಿಧನ Read More »

ಆಸ್ಪತ್ರೆಯಿಂದ ಕೈದಿ ಪರಾರಿ

ಸುಳ್ಯ : ಸುಳ್ಯ ತಾಲೂಕು ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ಶನಿವಾರ ವರದಿಯಾಗಿದೆ ಓರ್ವ ಕೈದಿಯನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೋಲಿಸರು ಕರೆ ತಂದಿದ್ದು ಈ ವೇಳೆ ಓರ್ವ ಪೋಲಿಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೋಲಿಸರು ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ‌ಯನ್ನು ನಿರೀಕ್ಷಿಸಲಾಗುತ್ತಿದೆ.

ಆಸ್ಪತ್ರೆಯಿಂದ ಕೈದಿ ಪರಾರಿ Read More »

ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕಡಬ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾ‌ರ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಅಪಘಾತದ ದಶ್ಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ವಿದ್ಯಾರ್ಥಿನಿಗೆ ಬಸ್ಸಲ್ಲಿ ಲೈಂಗಿಕ ದೌಜನ್ಯ ಎಸಗಿದ ಅನ್ಯ ಕೋಮಿನ ಯುವಕನಿಗೆ ಹಲ್ಲೆ ನಡೆಸಿದ ಆರೋಪಿಗಳಿಗೆ ಜಾಮೀನು ಮಂಜೂರು

ಸುಳ್ಯ : ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಲೈಂಗಿಕ ದೌಜನ್ಯ ಎಸಗಿದ್ದಾನೆ ಎನ್ನಲಾದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ, ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಹರೀಶ್ ಬೂಡುಪನ್ನೆ ಹಾಗೂ ಮಹೇಶ್ ಕಜೆ ವಾದಿಸಿದ್ದಾರೆ.

ವಿದ್ಯಾರ್ಥಿನಿಗೆ ಬಸ್ಸಲ್ಲಿ ಲೈಂಗಿಕ ದೌಜನ್ಯ ಎಸಗಿದ ಅನ್ಯ ಕೋಮಿನ ಯುವಕನಿಗೆ ಹಲ್ಲೆ ನಡೆಸಿದ ಆರೋಪಿಗಳಿಗೆ ಜಾಮೀನು ಮಂಜೂರು Read More »

ಸಹೋದರನಿಂದಲೇ ಗರ್ಭಿಣಿಯಾದ ತಂಗಿ

ಸಹೋದರನೇ ತಂಗಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ನೆನ್ನೆ ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ನಡೆದಿದೆ. ಹೌದು, ತಂಗಿಗೆ ಶ್ರೀರಕ್ಷೆಯಾಗಿರಬೇಕಿದ್ದ ಅಣ್ಣ ಈ ಕೃತ್ಯ ಎಸಗಿದ್ದಾನೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ.

ಸಹೋದರನಿಂದಲೇ ಗರ್ಭಿಣಿಯಾದ ತಂಗಿ Read More »

ಮುಂಜಾನೆ ಎಲ್ ಪಿ ಜಿ ಸಿಲಿಂಡರ್ ಸ್ಫೋಟ; 6 ಜನರ ಸ್ಥಿತಿ ಗಂಭೀರ

ಇಂದು ಮುಂಜಾನೆ ದಾವಣಗೆರೆಯಲ್ಲಿ ಸಿಲಿಂಡರ್‌ ಸ್ಪೋಟಗೊಂಡು, 6 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಸಿಲಿಂಡ‌ರ್ ಸ್ಫೋಟದ ತೀವ್ರತೆಗೆ ಮನೆ ಮೇಲ್ಟಾವಣಿ ಸಂಪೂರ್ಣವಾಗಿ ಕುಸಿತಗೊಂಡಿದೆ. ಬೆಳಿಗ್ಗೆ ಸಿಲಿಂಡ‌ರ್ ಆನ್ ಮಾಡಲು ಹೋದಾಗ ಏಕಾಏಕಿ ಸ್ಪೋಟವಾಗಿದೆ ಎನ್ನಲಾಗಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮುಂಜಾನೆ ಎಲ್ ಪಿ ಜಿ ಸಿಲಿಂಡರ್ ಸ್ಫೋಟ; 6 ಜನರ ಸ್ಥಿತಿ ಗಂಭೀರ Read More »

ಬಾಗಿಲಿನ ದಾರಂದ ಬಿದ್ದು ಮಗು ಸಾವು

ಬೆಳ್ತಂಗಡಿ : ತಲೆಯ ಮೇಲೆ ಭಾಗಿಲಿನ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.ಹಾರೀಸ್ ಮುಸ್ಲಿಯಾ‌ರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಪಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ

ಬಾಗಿಲಿನ ದಾರಂದ ಬಿದ್ದು ಮಗು ಸಾವು Read More »

error: Content is protected !!
Scroll to Top