ಕ್ರೈಂ

ಸಂಪಾಜೆ : ಮಾವನಿಂದ ಸೊಸೆಯ ಮೇಲೆ ಹಲ್ಲೆ

ಮಾವ ತನ್ನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಸೊಸೆ ದೂರು ನೀಡಿದ ಹಿನ್ನಲೆಯಲ್ಲಿ ಮಾವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.ದಿನಾಂಕ 02.02.2026 ರಂದು ರಾತ್ರಿ ಸುಮಾರು 7.30 ಗಂಟೆಗೆ ತಾನು ಸಂಪಾಜೆ ಕಲ್ಲುಗುಂಡಿಯಲ್ಲಿರುವ ತನ್ನ ಮನೆಯ ಕೋಣೆಯಲ್ಲಿ ಇರುವ ಸಂದರ್ಭದಲ್ಲಿ, ತನ್ನ ಮಾವ ಅಕ್ರಮವಾಗಿ ಕೊಠಡಿ ಪ್ರವೇಶಿಸಿ ತನ್ನ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಪರಚಿ ಕಚ್ಚಿ ಗಾಯಗೊಳಿಸಿ, ಜೀವ ಬೆದರಿಕೆ ಒಡ್ಡಿರುವುದಾಗಿ ಸಾಹಿತ್ಯ ರೈ ಎಂಬವರು ಬಂಟ್ವಾಳ ಪೋಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು […]

ಸಂಪಾಜೆ : ಮಾವನಿಂದ ಸೊಸೆಯ ಮೇಲೆ ಹಲ್ಲೆ Read More »

ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಮದಕ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಸುಳ್ಯ ಪೋಲಿಸರು ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿ ಬೈಕ್ ಹಾಗೂ ಕೋಳಿಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.ಸ್ಥಳದಲ್ಲಿದ್ದ 1 ಬೈಕ್ ಮತ್ತು 4 ಕೋಳಿಗಳನ್ನು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಉಬರಡ್ಕ ಮಿತ್ತೂರು ಗ್ರಾಮದಮದಕ ಕೆ.ಎಫ್.ಡಿ.ಸಿ.ರಬ್ಬರ್ ಪ್ಲಾಂಟೇಷನ್ ಒಳಗೆ ಕೋಳಿ ಅಂಕ ನಡೆಯುತ್ತಿದ್ದಾಗ ಸುಳ್ಯ ಕ್ರೈಂ ಎಸ್. ಐ. ಸರಸ್ವತಿ ಯವರ ತಂಡ ದಾಳಿ ನಡೆಸಿತ್ತು.

ಕೋಳಿ ಅಂಕಕ್ಕೆ ಪೊಲೀಸ್ ದಾಳಿ Read More »

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್

ಠಾಣೆಗೆ ಬಂದ ದೂರುದಾರರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಲೋಕಾಯುಕ್ತ ಪೊಲೀಸ್ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್ Read More »

ತೊಡಿಕಾನ : ಅಡಿಗಾರ ನೀಲಮ್ಮ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಅಡಿಗಾರ ದಿ‌.ರಾಮಣ್ಣ ಗೌಡರ ಧರ್ಮಪತ್ನಿ ನೀಲಮ್ಮ ಜ.29ರಂದು ತಮ್ಮ ಮನೆಯಲ್ಲಿ ನಿಧನರಾದರು.ಅವರಿಗೆ 87 ವರ್ಷ ಪ್ರಾಯವಾಗಿತ್ತು.ಮೃತರು ಮಗ ಜನಾರ್ದನ,ಮೂವರ ಹೆಣ್ಣು ಮಕ್ಕಳನ್ನು,ಸೊಸೆಯನ್ನು ಮೊಮ್ಮಕ್ಕಳನ್ನು ಅಗಲಿದ್ದಾರೆ.ಮೃತರ ಅಂತ್ಯಸಂಸ್ಕಾರ ಜ.30ರಂದು ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತೊಡಿಕಾನ : ಅಡಿಗಾರ ನೀಲಮ್ಮ ನಿಧನ Read More »

ನಾಳೆ (ಜ.30)ಭೀಕರ ಅಪಘಾತಲ್ಲಿ ಸಾವನ್ನಪ್ಪಿದ ಬಿಸಿಲು ಮನೆಯ  ಸುಂದರ ಗೌಡರ ಅಂತ್ಯ ಸಂಸ್ಕಾರ

ಕೊಡಗು ಸಂಪಾಜೆಯ ಮುಖ್ಯರಸ್ತೆಯಲ್ಲಿ ಕಾರೊಂದು ರಾಂಗ್ ಸೈಡಲ್ಲಿ ಬಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ  ಪರಿಣಾಮವಾಗಿ ಕೊಯನಾಡಿನ ಚಿಟ್ಟಿಕಾನ ಬಿಸಿಲುಮನೆಯ ರಿಕ್ಷಾ ಚಾಲಕ  ಹಾಗೂ ಕೊಡಗು ಸಂಪಾಜೆ ಗ್ರಾಮ ಪಂಚಾಯತ್  ಮಾಜಿ ಉಪಾಧ್ಯಕ್ಷ  ಸುಂದರ(62) ರವರು ಗಂಭೀರ ಗಾಯಗೊಂಡು  ಸ್ಥಳದಲ್ಲೆ ಕೊನೆಯುಸಿರೆಳೆದಿದ್ದು  ಅವರ ಅಂತ್ಯ ಸಂಸ್ಕಾರ ಮಗ ಭಾರತೀಯ ಭೂಸೇನೆಯ ಸೈನಿಕ ದೇವಿ ಪ್ರಸಾದ್ ಆಗಮಿಸಿದ ಬಳಿಕ ಮೃತರ ಮನೆಯಲ್ಲಿ ಗೌಡ ಸಂಪ್ರದಾಯದ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಮಗ ದೇವಿಪ್ರಸಾದ್ ಅಪ್ಪನ‌ ಸಾವಿನ ಸುದ್ದಿ

ನಾಳೆ (ಜ.30)ಭೀಕರ ಅಪಘಾತಲ್ಲಿ ಸಾವನ್ನಪ್ಪಿದ ಬಿಸಿಲು ಮನೆಯ  ಸುಂದರ ಗೌಡರ ಅಂತ್ಯ ಸಂಸ್ಕಾರ Read More »

ರಿಕ್ಷಾ ಕಾರು ಅಪಘಾತ,ರಿಕ್ಷಾ ಚಾಲಕ ಮೃತ್ಯು

ಕೊಡಗು ಸಂಪಾಜೆ ಪೆಟ್ರೋಲ್ ಬಂಕಿನ ಸಮೀಪದಲ್ಲಿ ರಿಕ್ಷಾ ಕಾರು ಅಪಘಾತವಾಗಿ ರಿಕ್ಷಾಕ್ಕೆ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾದ ಸಂಧರ್ಭ ಟಿಪ್ಪರ್ ಲಾರಿ ಹತ್ತಿ ರಿಕ್ಷಾ ಚಾಲಕ ಸುಂದರ ರವರು ಮೃತಪಟ್ಟ ಘಟನೆ ಜ.29ರಂದು ವರದಿಯಾಗಿದೆ.ರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ರಿಕ್ಷಾ ಕಾರು ಅಪಘಾತ,ರಿಕ್ಷಾ ಚಾಲಕ ಮೃತ್ಯು Read More »

ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್’ ಸೇರಿ 6 ಮಂದಿ ದುರ್ಮರಣ

ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್’ ಸೇರಿ 6 ಮಂದಿ ದುರ್ಮರಣ Read More »

ತಂದೆಯಿಂದಲೇ ಮಗನ ಮೇಲೆ ಗುಂಡು ಹಾರಿಸಿ ಕೊಲೆ !

ಕಡಬ ತಾಲೂಕಿನ ರಾಮಕುಂಜದಲ್ಲಿ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ತಂದೆಯೇ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು.ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಬಾಲಕ. ರಾಮಕುಂಜ ಗ್ರಾಮದ ಪಾದೆ ನಿವಾಸಿ ತಂದೆ ವಸಂತ ಪೂಜಾರಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ವಸಂತ ಪೂಜಾರಿ ವಿರುದ್ಧ ಆತನ ಪತ್ನಿ ಜಯಶ್ರೀ

ತಂದೆಯಿಂದಲೇ ಮಗನ ಮೇಲೆ ಗುಂಡು ಹಾರಿಸಿ ಕೊಲೆ ! Read More »

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಮಹಿಳೆ ವಿಮಾಣ ನಿಲ್ದಾಣದಲ್ಲಿ ಸಾವು

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಸುಳ್ಯ ತತ್ವತಾಲೂಕಿನ ಅರಂತೋಡಿನ ಮಹಿಳೆ ಹೃದಯಘಾತಕ್ಕೊಳಗಾಗಿ ಜ 24 ರಂದು ರಾತ್ರಿ ಸೌದಿ ಅರೇಬಿಯಾದ ಜಿದ್ದಾ ವಿಮಾನ ನಿಲ್ದಾಣದಲ್ಲಿ ನಿಧನರಾಗಿದ್ದಾರೆ15 ದಿನಗಳ ಹಿಂದೆ ಐದು ಮಂದಿ ಸದಸ್ಯರೊಂದಿಗೆ ಪವಿತ್ರ ಉಮ್ರಾ ಯಾತ್ರೆ ಮಾಡಲು ಸೌದಿ ಅರೇಬಿಯಾ ಕ್ಕೆ ಹೋಗಿದ್ದರು. ಯಾತ್ರೆ ಮುಗಿಸಿ ಬರುವ ಸಂದರ್ಭಜಿದ್ದಾ ಏರ್ಪೋಟಿ್ರನಲ್ಲಿ ಇವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಮೃತರು ಪುತ್ರ ಇರ್ಶಾನ್ ಹಾಗೂ

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಮಹಿಳೆ ವಿಮಾಣ ನಿಲ್ದಾಣದಲ್ಲಿ ಸಾವು Read More »

ತಂದೆಗೆ ಗಂಭೀರವಾಗಿ ಚೂರಿಯಿಂದ ಇರಿದು ತಾನು ಶೂಟೌಟ್ ಮಾಡಿಕೊಂಡ ಬಾಲಕ

ಬಾಲಕನೋರ್ವ ತಂದೆಗೆ ಚೂರಿಯಿಂದ ಇರಿದು ಬಳಿಕ ತಾನು ಶೂಟೌಟ್ ಮಾಡಿಕೊಂಡ ಘಟನೆ ರಾಮಕುಂಜ ಇಲ್ಲಿನ ಪಾದೆ ಎಂಬಲ್ಲಿ ಇಂದು ನಡೆದಿದೆ.ಘಟನೆಯಿಂದ ಗಂಭೀರ ಗಾಯಗೊಂಡಿರುವ ವಸಂತ ಅಮೀನ್ ಅವರನ್ನು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಜ.24ರಂದು ಸಂಜೆ ಘಟನೆ ನಡೆದಿದೆ.ಕೇರಳ ಮೂಲದವರಾಗಿರುವ ವಸಂತ ಅಮೀನ್ ಅವರು ರಾಮಕುಂಜ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿ ತಂದೆ,ಮಗ ಜೊತೆಯಾಗಿ ವಾಸವಿದ್ದರು.ಮಂಗಳೂರು ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯಾಗಿದ್ದ ಮೋಕ್ಷ ಅವರು ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎನ್ನುವುದು ಪೊಲೀಸ್ ತನಿಖೆಯಿಂದಷ್ಟೆ

ತಂದೆಗೆ ಗಂಭೀರವಾಗಿ ಚೂರಿಯಿಂದ ಇರಿದು ತಾನು ಶೂಟೌಟ್ ಮಾಡಿಕೊಂಡ ಬಾಲಕ Read More »

error: Content is protected !!
Scroll to Top