ಕ್ರೈಂ

ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾವೋ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು […]

ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು Read More »

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪುತ್ತೂರು ತಾಲೂಕಿನ ಕಲ್ಲಾರೆಯ ಕಟ್ಟಡದ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಅವರು ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರು ಪುತ್ತೂರಿನ ಕಮ್ಯೂನಿಟಿ ಸೆಂಟರ್‌ನ ಸ್ಥಾಪಕ ಹನೀಫ್ ಪುತ್ತೂರು ಅವರ ಪುತ್ರಿ. ಕಲ್ಲಾರೆಯ ಫ್ಲ್ಯಾಟ್‌ವೊಂದರಲ್ಲಿ ವಾಸವಾಗಿದ್ದ ಅವರು ಮೂರು ದಿನಗಳ ಹಿಂದೆ ಮನೆಯ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

ಸಿಡಿಲು ಬಡಿದು ಬಾಲಕ ಸಾವು

ಪುತ್ತೂರು : ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ ಸಾವನ್ನಪ್ಪಿದ ಬಾಲಕ.ಆತನಿಗೆ 13 ವರ್ಷ ಪ್ರಾಯವಾಗಿತ್ತು.ಭಾನುವಾರ ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ್ದಾನೆ.ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಆತನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಮೃತಪಟ್ಟಿರುವುದಾಗಿ ವೈದರು ತಿಳಿಸಿದರು.ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ

ಸಿಡಿಲು ಬಡಿದು ಬಾಲಕ ಸಾವು Read More »

ನೆಲ್ಯಾಡಿ ಸಮೀಪ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕುಂಬ್ರ ನಿವಾಸಿ ಸಾವು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರುಮೃತಪಟ್ಟ ಘಟನೆ ವರದಿಯಾಗಿದೆ.ಮ್ರತ ವ್ಯಕ್ತಿ ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ .ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನೆಲ್ಯಾಡಿ ಸಮೀಪ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕುಂಬ್ರ ನಿವಾಸಿ ಸಾವು Read More »

ಕಲ್ಲುಗುಂಡಿಯಲ್ಲಿ ಕಾರು ಟಾಟಾ ಏಸ್ ಭೀಕರ ಅಪಘಾತ

ಸುಳ್ಯ: ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಬಂಗ್ಲಗುಂಡ್ಡೆ ಬಳಿಯಲ್ಲಿ ಕಾರಿಗೆ ಡಿಕ್ಕಿಯಾಗಿ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಲ್ಲುಗುಂಡಿಯಲ್ಲಿ ಕಾರು ಟಾಟಾ ಏಸ್ ಭೀಕರ ಅಪಘಾತ Read More »

ಮರದಲ್ಲಿ ಮೃತದೇಹ ಪತ್ತೆ

ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಹರಿಯುವ ನದಿಯಲ್ಲಿ ಅಡ್ಡವಾಗಿ ಬಿದ್ದಿರುವ ಮರದ ಕೊಂಬೆಯಲ್ಲಿ ಅಪರಿಚಿತ ಗಂಡಸಿನ ಕೊಳೆತ ಸ್ಥಿತಿಯಲ್ಲಿರುವ ಮೃತದೇಹವೊಂದು ಪತ್ತೆಯಾಗಿದೆ. ಮೃತ ದೇಹವನ್ನು ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಶೀತಲಿಕರಣ ಶವಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಗುರುತು/ವಾರಿಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂರ್ಕಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿಂದು ತಿಳಿಸಲಾಗಿದೆ.

ಮರದಲ್ಲಿ ಮೃತದೇಹ ಪತ್ತೆ Read More »

ಅರಂತೋಡು ಭಾಸ್ಕರ ಗೌಡ ಉಳುವಾರು ನಿಧನ

ಅರಂತೋಡು ಗ್ರಾಮದ ಉಳುವಾರು ಯು. ಪಿ.ಭಾಸ್ಕರ ಗೌಡ ( 83 ವ)ರವರು ಅಲ್ಪಕಾಲ ಅಸೌಖ್ಯ ದಿಂದ ನ.17 ರಂದು ಮುಂಜಾನೆ ಸ್ವಗೃಹದಲ್ಲಿ ನಿಧನ ರಾದರು.ಮೃತರು ಪತ್ನಿ ಜಲಜಾಕ್ಷಿ, ಗಂಡು ಮಕ್ಕಳಾದ ಶಿವ ಶಂಕರ ,ಚಿದಂಬರ ಹೆಣ್ಣು ಮಗಳಾದ ಚಿತ್ರ ಹಾಗೂ ಅಪಾರ ಕುಟುಂಬ ಸ್ಥರನ್ನು ಅಗಲಿದ್ದಾರೆ.

ಅರಂತೋಡು ಭಾಸ್ಕರ ಗೌಡ ಉಳುವಾರು ನಿಧನ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಟನೆ ನಡೆಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಹಿತ ಹಲವರ ಮೇಲೆ ಪ್ರಕರಣ ದಾಖಲು

ಕಸ್ತೂರಿರಂಗನ್ ವರದಿ ವಿರೋಧಿಸಿ ಶುಕ್ರವಾರ ಮಧ್ಯಾಹ್ನ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ವೇಳೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿ ಗುಂಡ್ಯದಲ್ಲಿ ಅನುಮತಿ ಪಡೆಯದೆ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋ‌ರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಟನೆ ನಡೆಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಹಿತ ಹಲವರ ಮೇಲೆ ಪ್ರಕರಣ ದಾಖಲು Read More »

ಮೆಸ್ಕಾಂ ಇಂಜಿನಿಯರ್ ಪತ್ನಿ ಮೆದುಳಿನ ರಕ್ತ ಸ್ರಾವದಿಂದ ಸಾವು

ಮೆಸ್ಕಾಂ ಇಂಜಿನಿಯರ್ ಪೈಲಾರಿನ ಗುರುವ ಎಂಬವರ ಪತ್ನಿ ಜಯಂತಿಯವರು ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೆದುಳಿನ ರಕ್ತಸ್ರಾವದಿಂದ ನಿಧನರಾದರು.ಅವರಿಗೆ 33 ವರ್ಷ ವಯಸ್ಸಾಗಿತ್ತು.ಅವರು ಮಂಗಳೂರಿನಲ್ಲಿ ಗೌರವ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಗುರುವ ಮಂಗಳೂರಿನಲ್ಲಿ ಮೆಸ್ಕಾಂ ಇಂಜಿನಿಯರ್ ಆಗಿದ್ದು ಕುಟುಂಬ ಸಮೇತ ಅಲ್ಲಿ ವಾಸವಾಗಿದ್ದರು.

ಮೆಸ್ಕಾಂ ಇಂಜಿನಿಯರ್ ಪತ್ನಿ ಮೆದುಳಿನ ರಕ್ತ ಸ್ರಾವದಿಂದ ಸಾವು Read More »

ಕಾಲೇಜಿನಲ್ಲಿ ಉಪನ್ಯಾಸಕಿ ಕುಸಿದು ಬಿದ್ದು ಸಾವು

ಮಂಗಳೂರು: ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧ ವಾರ ಮೃತಪಟ್ಟಿದ್ದಾರೆ.ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತಪಟ್ಟವರು.ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ( ಫುಡ್ ಅಲರ್ಜಿ) ಅವರಿಗೆ ಇತ್ತು. ಇದರಿಂದಾಗಿ ಈ ಹಿಂದೆಯೂ

ಕಾಲೇಜಿನಲ್ಲಿ ಉಪನ್ಯಾಸಕಿ ಕುಸಿದು ಬಿದ್ದು ಸಾವು Read More »

error: Content is protected !!
Scroll to Top