ಕ್ರೈಂ

ಬಿಳಿಯಾರು : ಯುವಕ ಆತ್ಮಹತ್ಯೆ

ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್‌ (ಗಣೇಶ್‌) (25)ಎಂಬ ಯವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ವರದಿಯಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ,ತಾಯಿ ಹಾಗೂ ಸಹೋದರ ದಿನೇಶ ರನ್ನು ಅಗಲಿದ್ದಾರೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಳಿಯಾರು : ಯುವಕ ಆತ್ಮಹತ್ಯೆ Read More »

ಲೋ ಬಿಪಿ ಮಹಿಳೆ ಸಾವು

ಜಾಲ್ಸೂರು : ಕಡಿಮೆ ರಕ್ತದ ಒತ್ತಡದಿಂದ ಅಸೌಖ್ಯಕ್ಕೊಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜಾಲ್ಕೂರು ಗ್ರಾಮದ ಬೇರ್ಪಡ್ಕದಲ್ಲಿ ನ.13ರಂದು ವರದಿಯಾಗಿದೆ.ಬೇರ್ಪಡ್ಕದ ಬಾಲಕೃಷ್ಣ ನಾಯ್ಕ ಅವರ ಪತ್ನಿ ಗೀತ ಅವರು ಮೃತಪಟ್ಟ ಮಹಿಳೆ.ಅವರು ಸಮೀಪದ ಮನೆಯೊಂದಕ್ಕೆ ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ದಿಢೀರನೆ ಅಸೌಖ್ಯಕ್ಕೊಳಗಾಗಿ, ತಮ್ಮ ಮನೆಗೆ ಮಧ್ಯಾಹ್ನ ಬಂದಿದ್ದರು. ಆದರೆ ಮನೆಯಲ್ಲಿ ಅಸೌಖ್ಯದಿಂದಾಗಿ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅವರನ್ನು ಪರೀಕ್ಷಿಸಿದ ವೈದ್ಯರು ಲೋ ಬಿಪಿಯಿಂದಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಲೋ ಬಿಪಿ ಮಹಿಳೆ ಸಾವು Read More »

ಕಲ್ಲುಗುಂಡಿ : ಸಂಪತ್ ಕೊಲೆ ಪ್ರಕರಣದ ಎರಡನೇ ಆರೋಪಿಗೆ ಜಾಮೀನು ಮಂಜೂರು

ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಎರಡನೇ ಆರೋಪಿಗೆ ನ್ಯಾಯಾಲಯದ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದುಬಂದಿದೆ.2020 ರ ಅಕ್ಟೋಬರ್ 8ರಂದು ಕಲ್ಲುಗುಂಡಿಯ ಸಂಪತ್ ಎಂಬವರನ್ನು ಸುಳ್ಯದ ಶಾಂತಿನಗರ ಅವರ ಬಾಡಿಗೆ ಮನೆಯ ಸಮೀಪ 8 ಮಂದಿಯ ತಂಡ ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿತ್ತು. ಬಳಿಕ ಪೋಲೀಸರು ಎಲ್ಲ 8 ಮಂದಿ ಆರೋಪಿಗಳನ್ನು ಬಂದಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.ಬಳಿಕ ಆರೋಪಿಗಳು ಜೈಲಿನಲ್ಲಿದ್ದರು.ಅವರಲ್ಲಿ ಎರಡನೇ ಆರೋಪಿಯಾಗಿರುವ ಬಿಪಿನ್ ಎಂಬವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ

ಕಲ್ಲುಗುಂಡಿ : ಸಂಪತ್ ಕೊಲೆ ಪ್ರಕರಣದ ಎರಡನೇ ಆರೋಪಿಗೆ ಜಾಮೀನು ಮಂಜೂರು Read More »

ಕಲ್ಲುಗುಂಡಿ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯ

ಕಲ್ದುಗುಂಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಕಲ್ಲುಗುಂಡಿಯ ಕೂಲಿಶೆಡ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಕಳೆದ ತಡರಾತ್ರಿ ನಡೆದಿದೆಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಮತ್ತಿಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಲ್ಲುಗುಂಡಿ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯ Read More »

ವಿಷ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿದ ಯುವಕ ಸಾವು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ.12 ರಂದು ಮೃತ ಪಟ್ಟಿರುವುದಾಗಿ ವರದಿಯಾಗಿದೆ.ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಅಭಿಲಾಷ್ ಮೃತ ಪಟ್ಟ ಯುವಕ. ಸುಳ್ಯದ ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಮ್ಯಾನೇಜರ್ ಕಮ್ ಅಕೌಂಟ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಭಿಲಾಷ್ ರವರನ್ನು ಚಿಕಿತ್ಸೆ ಗಾಗಿಮಂಗಳೂರಿನ ಖಾಸಗಿ ಆಸ್ಪತ್ರೆಗೆ ನ.5 ರಂದು ದಾಖಲಿಸಲಾಗಿತ್ತು.

ವಿಷ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿದ ಯುವಕ ಸಾವು Read More »

ಮಗು ಮೃತಪಟ್ಟ ಹಿನ್ನಲೆ, ಬಾಣಂತಿ ಆಸ್ಪತ್ರೆ ಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮ ಹತ್ಯೆ

ಮಂಗಳೂರು: ಬಾಣಂತಿ ಒಬ್ಬರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಗಳೂರಿನಲ್ಲಿ ನಡೆದಿದೆ.ತಕ್ಷಣ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಯವರು ತಿಳಿಸಿದ್ದಾರೆಮೃತಪಟ್ಟ ಬಾಣಂತಿ ಕಾರ್ಕಳದ ರಂಜಿತಾ (28) ಎಂ ತಿಳಿದು ಬಂದಿದೆ.ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದಾಗಿ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು

ಮಗು ಮೃತಪಟ್ಟ ಹಿನ್ನಲೆ, ಬಾಣಂತಿ ಆಸ್ಪತ್ರೆ ಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮ ಹತ್ಯೆ Read More »

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ: ಬೆಳ್ತಂಡಿ ತಾಲೂಕಿನ ಆಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾಣದೆ ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.ಇವರು ಚಲಾಯಿಸುತ್ತಿದ್ದ ಬೈಕ್ ನ 7ರಂದು ಅಪಘಾತ ವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಯುವ ವಕೀಲ ಅಸೌಖ್ಯದಿಂದ ನಿಧನ

ಪುತ್ತೂರು: ಪತ್ತೂರು ತಾಲೂಕಿನ ಕುಂಬ್ರ ನಿವಾಸಿ ನ್ಯಾಯವಾದಿ ಚಂದ್ರಕಾಂತ್ ಅಡೂರ್ (38) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಯುವ ವಕೀಲ ಅಸೌಖ್ಯದಿಂದ ನಿಧನ Read More »

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ನ.4ರಂದು ಆಲೆಟ್ಟಿ ಸುಳ್ಯ ರಸ್ತೆಯಲ್ಲಿ ಸಂಭವಿಸಿದಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋಪಾಲ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಂಗಳೂರಿನ ಖಾಸಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು .ಮೃತರು ಪತ್ನಿ ಜಯಂತಿ ಹಾಗೂ ಇಬ್ಬರು ಪುತ್ರಿಯರಾದ ಕು.ಶರಣ್ಯ ಮತ್ತು ಕು.ಭೂಮಿಕಾ ಮತ್ತು ಸಹೋದರರನ್ನು, ಸಹೋದರಿಯರನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಮೃತರು ಸುಳ್ಯದಲ್ಲಿ ಕಳೆದ 8 ವರ್ಷಗಳಿಂದ ಅಟೋ ಚಾಲಕರಾಗಿದ್ದರು.ಸುಳ್ಯ ಜೂನಿಯರ್ ಕಾಲೇಜ್ ಬಳಿಯಲ್ಲಿ ವಾಸವಾಗಿದ್ದರು.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಹಿಂದು ಯುವತಿ ಮುಸ್ಲಿಂ ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಹಿಂದು ಸಂಘಟನೆ

ಸೌತಡ್ಕದಲ್ಲಿ‌ ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಮುಸ್ಲಿಂ ಯುವಕ ಹಾಗೂ ಹಿಂದು ಯುವತಿಯನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.ಕೊಪ್ಪಳದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದರು.ಧರ್ಮಸ್ಥಳ

ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಹಿಂದು ಯುವತಿ ಮುಸ್ಲಿಂ ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಹಿಂದು ಸಂಘಟನೆ Read More »

error: Content is protected !!
Scroll to Top